Homeಮುಖಪುಟಕಾನ್ಶಿರಾಮ್ ಜಯಂತಿ: JNU ಬಾಪ್ಸಾ ಅಧ್ಯಕ್ಷನ ಮೇಲೆ ABVP ಕಾರ್ಯಕರ್ತರಿಂದ ಹಲ್ಲೆ ಆರೋಪ

ಕಾನ್ಶಿರಾಮ್ ಜಯಂತಿ: JNU ಬಾಪ್ಸಾ ಅಧ್ಯಕ್ಷನ ಮೇಲೆ ABVP ಕಾರ್ಯಕರ್ತರಿಂದ ಹಲ್ಲೆ ಆರೋಪ

- Advertisement -
- Advertisement -

ಕಾನ್ಶಿರಾಮ್ ಜಯಂತಿಯ ಮುನ್ನಾದಿನದಂದು (ಮಾರ್ಚ್ 14) ಪೋಸ್ಟರ್ ಅಂಟಿಸುತ್ತಿದ್ದ JNU ಬಾಪ್ಸಾ ಅಧ್ಯಕ್ಷ, ರಾಜಕೀಯ ಅಧ್ಯಯನ ಕೇಂದ್ರದ ಪಿ.ಎಚ್.ಡಿ ಸಂಶೋಧಕ ಓಂ ಪ್ರಕಾಶ್ ಮಹತೋ ಹಾಗೂ ಇತರ ಕಾರ್ಯಕರ್ತರ ಮೇಲೆ ಎಬಿವಿಪಿ ಕಾರ್ಯಕರ್ತರು ಜೆಎನ್‌ಯುನ ಗೋದಾವರಿ ಧಾಬಾದ ಬಳಿ ಹಲ್ಲೆ ನಡೆಸಿದ್ದಾರೆ ಎಂದು BAPSA ಆರೋಪಿಸಿದೆ.

ತಮ್ಮ ಅಧ್ಯಕ್ಷರ ಮೇಲಿನ ದಾಳಿಯನ್ನು ಖಂಡಿಸಿ ಬಾಪ್ಸಾ ಹೇಳಿಕೆ ಬಿಡುಗಡೆ ಮಾಡಿದ್ದು, ಜೆಎನ್‌ಯು ಆಡಳಿತ ಮತ್ತು ವಿದ್ಯಾರ್ಥಿ ಸಂಘಗಳು ಜೆಎನ್‌ಯು ಕ್ಯಾಂಪಸ್‌ನಲ್ಲಿ ಎಬಿವಿಪಿ ಗೂಂಡಾಗಿರಿಯ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.

ಕಾನ್ಶಿರಾಮ್‌ನಂತಹ ಸಮರ್ಥ ನಾಯಕ, ಜಾತಿ ವಿರೋಧಿ ಚಿಂತಕರ ಜಯಂತಿಯನ್ನು ಬಾಪ್ಸಾ ಆಚರಿಸುವುದಕ್ಕೆ ಪ್ರತಿಕ್ರಿಯೆಯಾಗಿ ಎಬಿವಿಪಿ ಹಿಂಸಾಚಾರ ನಡೆಸಿದೆ. ಬಾಪ್ಸಾ ಜಾತಿ ವಿರೋಧಿ ರಾಜಕಾರಣವನ್ನು ಪ್ರಬಲವಾಗಿ ಎತ್ತಿಹಿಡಿಯುತ್ತದೆ. ಅದು ಎಬಿವಿಪಿಯಂತಹ ಬ್ರಾಹ್ಮಣ್ಯ ಶಕ್ತಿಗಳಿಗೆ ಜೀರ್ಣಿಸಿಕೊಳ್ಳಲು ಸಾಧ್ಯವಾಗದ ಕಾರಣ ಹಿಂಸೆಗಿಳಿಯುತ್ತವೆ. ಇತ್ತೀಚಿನ ದಾಳಿಯು ಎಬಿವಿಪಿಯ ಮನುವಾದಿ ಮನಸ್ಥಿತಿಯನ್ನು ತೋರುತ್ತದೆ ಎಂದು ಹೇಳಿಕೆಯಲ್ಲಿ ಆರೋಪಿಸಲಾಗಿದೆ.

ದಲಿತ ಕ್ಯಾಮರಾ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಬಾಪ್ಸಾ ಅಧ್ಯಕ್ಷ ಓಂ ಪ್ರಕಾಶ್ ಮಹತೋ ಮಾತನಾಡಿ, ‘ನಾವು ನಮ್ಮ ಐಕಾನ್‌ಗಳಾದ ಕಾನ್ಶಿರಾಮ್, ಫುಲೆ, ಅಂಬೇಡ್ಕರ್ ಅವರನ್ನು ಆಚರಿಸಿದರೆ ಅವರು ನಮ್ಮನ್ನು ಹೊಡೆಯಲು ಮತ್ತು ನಮ್ಮ ಕಾರ್ಯಕ್ರಮಗಳನ್ನು ಅಡ್ಡಿಪಡಿಸಲು ಬರುತ್ತಾರೆ. ಆದರೆ ಅವರ ಬೆದರಿಕೆಗೆ ನಾವು ಬಗ್ಗುವುದಿಲ್ಲ. ನಾಳೆಯ ಕಾನ್ಶಿರಾಮ್ ಜಯಂತಿಯನ್ನು ಸಬರಮತಿ ಧಾಬಾದಲ್ಲಿ ತಪ್ಪದೆ ಆಚರಿಸಲಾಗುವುದು’ ಎಂದಿದ್ದಾರೆ.

ಇಂತಹ ದಾಳಿಗೆ ವಿಶ್ವವಿದ್ಯಾಲಯ ಆಡಳಿತ ಬೆಂಬಲ ನೀಡುತ್ತಿದೆ ಎಂದು ಬಾಪ್ಸಾ ಆರೋಪಿಸಿದೆ. ಎಬಿವಿಪಿ ಪುನರಾವರ್ತಿತ ಹಿಂಸಾಚಾರದ ಹೊರತಾಗಿಯೂ ಅವರ ಮೇಲೆ ಯಾವುದೇ ವಿಚಾರಣೆ, ದಂಡ ಮತ್ತು ಶಿಕ್ಷೆ ನೀಡಿಲ್ಲ. ಪದೇ ಪದೇ ವಿದ್ಯಾರ್ಥಿಗಳಿಗೆ ಕಿರುಕುಳ ನೀಡುವ ಎಬಿವಿಪಿ ವಿರುದ್ಧ ಕ್ರಮ ತೆಗೆದುಕೊಳ್ಳಲು ಆಡಳಿತ ಮಂಡಳಿ ನಿರಾಕರಿಸುತ್ತಿದೆ ಎಂದು ಅದು ಅಸಮಾಧಾನ ವ್ಯಕ್ತಪಡಿಸಿದೆ.

ಇಲ್ಲಿಯವರೆಗೆ ಇಂತಹ ಕೃತ್ಯಗಳಿಗಾಗಿ ಎಬಿವಿಪಿ ಗೂಂಡಾಗಳ ವಿರುದ್ಧ ಅನೇಕ ಎಫ್‌ಐಆರ್ ದಾಖಲಿಸಲಾಗಿದೆ ಆದರೆ ಪೊಲೀಸರು ಯಾವುದೇ ಕಠಿಣ ಕ್ರಮ ಕೈಗೊಂಡಿಲ್ಲ ಎಂದು ಬಾಪ್ಸಾ ಆರೋಪಿಸಿದೆ.

ಅಂಚಿನಲ್ಲಿರುವ ಹಿನ್ನೆಲೆಯಿಂದ ಬರುವ ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣವನ್ನು ಶಾಂತಿಯಿಂದ ಮತ್ತು ಯಾವುದೇ ಬೆದರಿಕೆಯಿಲ್ಲದೆ ಮುಂದುವರಿಸಲು ಅವಕಾಶ ನೀಡುವಂತೆ ಆಡಳಿತವು ಅಪರಾಧಿಗಳನ್ನು ಕ್ಯಾಂಪಸ್‌ನ ಗಡಿಯಿಂದ ಹೊರಗಾಕಬೇಕು ಮತ್ತು ಎಬಿವಿಪಿಯ ಖಾಸಗಿ ಸೇನೆಯಂತೆ ಕಾರ್ಯನಿರ್ವಹಿಸುತ್ತಿರುವ ಭದ್ರತಾ ಸಿಬ್ಬಂದಿಗಳನ್ನು ವಜಾಮಾಡಬೇಕೆಂದು ಬಾಪ್ಸಾ ಆಗ್ರಹಿಸಿದೆ.


ಇದನ್ನೂ ಓದಿ: ಕೇರಳ: ನಾನು ಬಿಜೆಪಿಯ ಕಾರ್ಯಕರ್ತನೂ ಅಲ್ಲ & ಸ್ಪರ್ಧಿಸುವುದಿಲ್ಲ- ಬಿಜೆಪಿ ಟಿಕೆಟ್ ಘೋಷಿಸಲಾಗಿದ್ದ ವ್ಯಕ್ತಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...