Homeಮುಖಪುಟಕಾನ್ಶಿರಾಮ್ ಜಯಂತಿ: JNU ಬಾಪ್ಸಾ ಅಧ್ಯಕ್ಷನ ಮೇಲೆ ABVP ಕಾರ್ಯಕರ್ತರಿಂದ ಹಲ್ಲೆ ಆರೋಪ

ಕಾನ್ಶಿರಾಮ್ ಜಯಂತಿ: JNU ಬಾಪ್ಸಾ ಅಧ್ಯಕ್ಷನ ಮೇಲೆ ABVP ಕಾರ್ಯಕರ್ತರಿಂದ ಹಲ್ಲೆ ಆರೋಪ

- Advertisement -
- Advertisement -

ಕಾನ್ಶಿರಾಮ್ ಜಯಂತಿಯ ಮುನ್ನಾದಿನದಂದು (ಮಾರ್ಚ್ 14) ಪೋಸ್ಟರ್ ಅಂಟಿಸುತ್ತಿದ್ದ JNU ಬಾಪ್ಸಾ ಅಧ್ಯಕ್ಷ, ರಾಜಕೀಯ ಅಧ್ಯಯನ ಕೇಂದ್ರದ ಪಿ.ಎಚ್.ಡಿ ಸಂಶೋಧಕ ಓಂ ಪ್ರಕಾಶ್ ಮಹತೋ ಹಾಗೂ ಇತರ ಕಾರ್ಯಕರ್ತರ ಮೇಲೆ ಎಬಿವಿಪಿ ಕಾರ್ಯಕರ್ತರು ಜೆಎನ್‌ಯುನ ಗೋದಾವರಿ ಧಾಬಾದ ಬಳಿ ಹಲ್ಲೆ ನಡೆಸಿದ್ದಾರೆ ಎಂದು BAPSA ಆರೋಪಿಸಿದೆ.

ತಮ್ಮ ಅಧ್ಯಕ್ಷರ ಮೇಲಿನ ದಾಳಿಯನ್ನು ಖಂಡಿಸಿ ಬಾಪ್ಸಾ ಹೇಳಿಕೆ ಬಿಡುಗಡೆ ಮಾಡಿದ್ದು, ಜೆಎನ್‌ಯು ಆಡಳಿತ ಮತ್ತು ವಿದ್ಯಾರ್ಥಿ ಸಂಘಗಳು ಜೆಎನ್‌ಯು ಕ್ಯಾಂಪಸ್‌ನಲ್ಲಿ ಎಬಿವಿಪಿ ಗೂಂಡಾಗಿರಿಯ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.

ಕಾನ್ಶಿರಾಮ್‌ನಂತಹ ಸಮರ್ಥ ನಾಯಕ, ಜಾತಿ ವಿರೋಧಿ ಚಿಂತಕರ ಜಯಂತಿಯನ್ನು ಬಾಪ್ಸಾ ಆಚರಿಸುವುದಕ್ಕೆ ಪ್ರತಿಕ್ರಿಯೆಯಾಗಿ ಎಬಿವಿಪಿ ಹಿಂಸಾಚಾರ ನಡೆಸಿದೆ. ಬಾಪ್ಸಾ ಜಾತಿ ವಿರೋಧಿ ರಾಜಕಾರಣವನ್ನು ಪ್ರಬಲವಾಗಿ ಎತ್ತಿಹಿಡಿಯುತ್ತದೆ. ಅದು ಎಬಿವಿಪಿಯಂತಹ ಬ್ರಾಹ್ಮಣ್ಯ ಶಕ್ತಿಗಳಿಗೆ ಜೀರ್ಣಿಸಿಕೊಳ್ಳಲು ಸಾಧ್ಯವಾಗದ ಕಾರಣ ಹಿಂಸೆಗಿಳಿಯುತ್ತವೆ. ಇತ್ತೀಚಿನ ದಾಳಿಯು ಎಬಿವಿಪಿಯ ಮನುವಾದಿ ಮನಸ್ಥಿತಿಯನ್ನು ತೋರುತ್ತದೆ ಎಂದು ಹೇಳಿಕೆಯಲ್ಲಿ ಆರೋಪಿಸಲಾಗಿದೆ.

ದಲಿತ ಕ್ಯಾಮರಾ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಬಾಪ್ಸಾ ಅಧ್ಯಕ್ಷ ಓಂ ಪ್ರಕಾಶ್ ಮಹತೋ ಮಾತನಾಡಿ, ‘ನಾವು ನಮ್ಮ ಐಕಾನ್‌ಗಳಾದ ಕಾನ್ಶಿರಾಮ್, ಫುಲೆ, ಅಂಬೇಡ್ಕರ್ ಅವರನ್ನು ಆಚರಿಸಿದರೆ ಅವರು ನಮ್ಮನ್ನು ಹೊಡೆಯಲು ಮತ್ತು ನಮ್ಮ ಕಾರ್ಯಕ್ರಮಗಳನ್ನು ಅಡ್ಡಿಪಡಿಸಲು ಬರುತ್ತಾರೆ. ಆದರೆ ಅವರ ಬೆದರಿಕೆಗೆ ನಾವು ಬಗ್ಗುವುದಿಲ್ಲ. ನಾಳೆಯ ಕಾನ್ಶಿರಾಮ್ ಜಯಂತಿಯನ್ನು ಸಬರಮತಿ ಧಾಬಾದಲ್ಲಿ ತಪ್ಪದೆ ಆಚರಿಸಲಾಗುವುದು’ ಎಂದಿದ್ದಾರೆ.

ಇಂತಹ ದಾಳಿಗೆ ವಿಶ್ವವಿದ್ಯಾಲಯ ಆಡಳಿತ ಬೆಂಬಲ ನೀಡುತ್ತಿದೆ ಎಂದು ಬಾಪ್ಸಾ ಆರೋಪಿಸಿದೆ. ಎಬಿವಿಪಿ ಪುನರಾವರ್ತಿತ ಹಿಂಸಾಚಾರದ ಹೊರತಾಗಿಯೂ ಅವರ ಮೇಲೆ ಯಾವುದೇ ವಿಚಾರಣೆ, ದಂಡ ಮತ್ತು ಶಿಕ್ಷೆ ನೀಡಿಲ್ಲ. ಪದೇ ಪದೇ ವಿದ್ಯಾರ್ಥಿಗಳಿಗೆ ಕಿರುಕುಳ ನೀಡುವ ಎಬಿವಿಪಿ ವಿರುದ್ಧ ಕ್ರಮ ತೆಗೆದುಕೊಳ್ಳಲು ಆಡಳಿತ ಮಂಡಳಿ ನಿರಾಕರಿಸುತ್ತಿದೆ ಎಂದು ಅದು ಅಸಮಾಧಾನ ವ್ಯಕ್ತಪಡಿಸಿದೆ.

ಇಲ್ಲಿಯವರೆಗೆ ಇಂತಹ ಕೃತ್ಯಗಳಿಗಾಗಿ ಎಬಿವಿಪಿ ಗೂಂಡಾಗಳ ವಿರುದ್ಧ ಅನೇಕ ಎಫ್‌ಐಆರ್ ದಾಖಲಿಸಲಾಗಿದೆ ಆದರೆ ಪೊಲೀಸರು ಯಾವುದೇ ಕಠಿಣ ಕ್ರಮ ಕೈಗೊಂಡಿಲ್ಲ ಎಂದು ಬಾಪ್ಸಾ ಆರೋಪಿಸಿದೆ.

ಅಂಚಿನಲ್ಲಿರುವ ಹಿನ್ನೆಲೆಯಿಂದ ಬರುವ ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣವನ್ನು ಶಾಂತಿಯಿಂದ ಮತ್ತು ಯಾವುದೇ ಬೆದರಿಕೆಯಿಲ್ಲದೆ ಮುಂದುವರಿಸಲು ಅವಕಾಶ ನೀಡುವಂತೆ ಆಡಳಿತವು ಅಪರಾಧಿಗಳನ್ನು ಕ್ಯಾಂಪಸ್‌ನ ಗಡಿಯಿಂದ ಹೊರಗಾಕಬೇಕು ಮತ್ತು ಎಬಿವಿಪಿಯ ಖಾಸಗಿ ಸೇನೆಯಂತೆ ಕಾರ್ಯನಿರ್ವಹಿಸುತ್ತಿರುವ ಭದ್ರತಾ ಸಿಬ್ಬಂದಿಗಳನ್ನು ವಜಾಮಾಡಬೇಕೆಂದು ಬಾಪ್ಸಾ ಆಗ್ರಹಿಸಿದೆ.


ಇದನ್ನೂ ಓದಿ: ಕೇರಳ: ನಾನು ಬಿಜೆಪಿಯ ಕಾರ್ಯಕರ್ತನೂ ಅಲ್ಲ & ಸ್ಪರ್ಧಿಸುವುದಿಲ್ಲ- ಬಿಜೆಪಿ ಟಿಕೆಟ್ ಘೋಷಿಸಲಾಗಿದ್ದ ವ್ಯಕ್ತಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...