Homeಮುಖಪುಟಕಾನ್ಶಿರಾಮ್ ಜಯಂತಿ: JNU ಬಾಪ್ಸಾ ಅಧ್ಯಕ್ಷನ ಮೇಲೆ ABVP ಕಾರ್ಯಕರ್ತರಿಂದ ಹಲ್ಲೆ ಆರೋಪ

ಕಾನ್ಶಿರಾಮ್ ಜಯಂತಿ: JNU ಬಾಪ್ಸಾ ಅಧ್ಯಕ್ಷನ ಮೇಲೆ ABVP ಕಾರ್ಯಕರ್ತರಿಂದ ಹಲ್ಲೆ ಆರೋಪ

- Advertisement -
- Advertisement -

ಕಾನ್ಶಿರಾಮ್ ಜಯಂತಿಯ ಮುನ್ನಾದಿನದಂದು (ಮಾರ್ಚ್ 14) ಪೋಸ್ಟರ್ ಅಂಟಿಸುತ್ತಿದ್ದ JNU ಬಾಪ್ಸಾ ಅಧ್ಯಕ್ಷ, ರಾಜಕೀಯ ಅಧ್ಯಯನ ಕೇಂದ್ರದ ಪಿ.ಎಚ್.ಡಿ ಸಂಶೋಧಕ ಓಂ ಪ್ರಕಾಶ್ ಮಹತೋ ಹಾಗೂ ಇತರ ಕಾರ್ಯಕರ್ತರ ಮೇಲೆ ಎಬಿವಿಪಿ ಕಾರ್ಯಕರ್ತರು ಜೆಎನ್‌ಯುನ ಗೋದಾವರಿ ಧಾಬಾದ ಬಳಿ ಹಲ್ಲೆ ನಡೆಸಿದ್ದಾರೆ ಎಂದು BAPSA ಆರೋಪಿಸಿದೆ.

ತಮ್ಮ ಅಧ್ಯಕ್ಷರ ಮೇಲಿನ ದಾಳಿಯನ್ನು ಖಂಡಿಸಿ ಬಾಪ್ಸಾ ಹೇಳಿಕೆ ಬಿಡುಗಡೆ ಮಾಡಿದ್ದು, ಜೆಎನ್‌ಯು ಆಡಳಿತ ಮತ್ತು ವಿದ್ಯಾರ್ಥಿ ಸಂಘಗಳು ಜೆಎನ್‌ಯು ಕ್ಯಾಂಪಸ್‌ನಲ್ಲಿ ಎಬಿವಿಪಿ ಗೂಂಡಾಗಿರಿಯ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.

ಕಾನ್ಶಿರಾಮ್‌ನಂತಹ ಸಮರ್ಥ ನಾಯಕ, ಜಾತಿ ವಿರೋಧಿ ಚಿಂತಕರ ಜಯಂತಿಯನ್ನು ಬಾಪ್ಸಾ ಆಚರಿಸುವುದಕ್ಕೆ ಪ್ರತಿಕ್ರಿಯೆಯಾಗಿ ಎಬಿವಿಪಿ ಹಿಂಸಾಚಾರ ನಡೆಸಿದೆ. ಬಾಪ್ಸಾ ಜಾತಿ ವಿರೋಧಿ ರಾಜಕಾರಣವನ್ನು ಪ್ರಬಲವಾಗಿ ಎತ್ತಿಹಿಡಿಯುತ್ತದೆ. ಅದು ಎಬಿವಿಪಿಯಂತಹ ಬ್ರಾಹ್ಮಣ್ಯ ಶಕ್ತಿಗಳಿಗೆ ಜೀರ್ಣಿಸಿಕೊಳ್ಳಲು ಸಾಧ್ಯವಾಗದ ಕಾರಣ ಹಿಂಸೆಗಿಳಿಯುತ್ತವೆ. ಇತ್ತೀಚಿನ ದಾಳಿಯು ಎಬಿವಿಪಿಯ ಮನುವಾದಿ ಮನಸ್ಥಿತಿಯನ್ನು ತೋರುತ್ತದೆ ಎಂದು ಹೇಳಿಕೆಯಲ್ಲಿ ಆರೋಪಿಸಲಾಗಿದೆ.

ದಲಿತ ಕ್ಯಾಮರಾ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಬಾಪ್ಸಾ ಅಧ್ಯಕ್ಷ ಓಂ ಪ್ರಕಾಶ್ ಮಹತೋ ಮಾತನಾಡಿ, ‘ನಾವು ನಮ್ಮ ಐಕಾನ್‌ಗಳಾದ ಕಾನ್ಶಿರಾಮ್, ಫುಲೆ, ಅಂಬೇಡ್ಕರ್ ಅವರನ್ನು ಆಚರಿಸಿದರೆ ಅವರು ನಮ್ಮನ್ನು ಹೊಡೆಯಲು ಮತ್ತು ನಮ್ಮ ಕಾರ್ಯಕ್ರಮಗಳನ್ನು ಅಡ್ಡಿಪಡಿಸಲು ಬರುತ್ತಾರೆ. ಆದರೆ ಅವರ ಬೆದರಿಕೆಗೆ ನಾವು ಬಗ್ಗುವುದಿಲ್ಲ. ನಾಳೆಯ ಕಾನ್ಶಿರಾಮ್ ಜಯಂತಿಯನ್ನು ಸಬರಮತಿ ಧಾಬಾದಲ್ಲಿ ತಪ್ಪದೆ ಆಚರಿಸಲಾಗುವುದು’ ಎಂದಿದ್ದಾರೆ.

ಇಂತಹ ದಾಳಿಗೆ ವಿಶ್ವವಿದ್ಯಾಲಯ ಆಡಳಿತ ಬೆಂಬಲ ನೀಡುತ್ತಿದೆ ಎಂದು ಬಾಪ್ಸಾ ಆರೋಪಿಸಿದೆ. ಎಬಿವಿಪಿ ಪುನರಾವರ್ತಿತ ಹಿಂಸಾಚಾರದ ಹೊರತಾಗಿಯೂ ಅವರ ಮೇಲೆ ಯಾವುದೇ ವಿಚಾರಣೆ, ದಂಡ ಮತ್ತು ಶಿಕ್ಷೆ ನೀಡಿಲ್ಲ. ಪದೇ ಪದೇ ವಿದ್ಯಾರ್ಥಿಗಳಿಗೆ ಕಿರುಕುಳ ನೀಡುವ ಎಬಿವಿಪಿ ವಿರುದ್ಧ ಕ್ರಮ ತೆಗೆದುಕೊಳ್ಳಲು ಆಡಳಿತ ಮಂಡಳಿ ನಿರಾಕರಿಸುತ್ತಿದೆ ಎಂದು ಅದು ಅಸಮಾಧಾನ ವ್ಯಕ್ತಪಡಿಸಿದೆ.

ಇಲ್ಲಿಯವರೆಗೆ ಇಂತಹ ಕೃತ್ಯಗಳಿಗಾಗಿ ಎಬಿವಿಪಿ ಗೂಂಡಾಗಳ ವಿರುದ್ಧ ಅನೇಕ ಎಫ್‌ಐಆರ್ ದಾಖಲಿಸಲಾಗಿದೆ ಆದರೆ ಪೊಲೀಸರು ಯಾವುದೇ ಕಠಿಣ ಕ್ರಮ ಕೈಗೊಂಡಿಲ್ಲ ಎಂದು ಬಾಪ್ಸಾ ಆರೋಪಿಸಿದೆ.

ಅಂಚಿನಲ್ಲಿರುವ ಹಿನ್ನೆಲೆಯಿಂದ ಬರುವ ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣವನ್ನು ಶಾಂತಿಯಿಂದ ಮತ್ತು ಯಾವುದೇ ಬೆದರಿಕೆಯಿಲ್ಲದೆ ಮುಂದುವರಿಸಲು ಅವಕಾಶ ನೀಡುವಂತೆ ಆಡಳಿತವು ಅಪರಾಧಿಗಳನ್ನು ಕ್ಯಾಂಪಸ್‌ನ ಗಡಿಯಿಂದ ಹೊರಗಾಕಬೇಕು ಮತ್ತು ಎಬಿವಿಪಿಯ ಖಾಸಗಿ ಸೇನೆಯಂತೆ ಕಾರ್ಯನಿರ್ವಹಿಸುತ್ತಿರುವ ಭದ್ರತಾ ಸಿಬ್ಬಂದಿಗಳನ್ನು ವಜಾಮಾಡಬೇಕೆಂದು ಬಾಪ್ಸಾ ಆಗ್ರಹಿಸಿದೆ.


ಇದನ್ನೂ ಓದಿ: ಕೇರಳ: ನಾನು ಬಿಜೆಪಿಯ ಕಾರ್ಯಕರ್ತನೂ ಅಲ್ಲ & ಸ್ಪರ್ಧಿಸುವುದಿಲ್ಲ- ಬಿಜೆಪಿ ಟಿಕೆಟ್ ಘೋಷಿಸಲಾಗಿದ್ದ ವ್ಯಕ್ತಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...