Homeಮುಖಪುಟಕಾನ್ಶಿರಾಮ್ ಜಯಂತಿ: JNU ಬಾಪ್ಸಾ ಅಧ್ಯಕ್ಷನ ಮೇಲೆ ABVP ಕಾರ್ಯಕರ್ತರಿಂದ ಹಲ್ಲೆ ಆರೋಪ

ಕಾನ್ಶಿರಾಮ್ ಜಯಂತಿ: JNU ಬಾಪ್ಸಾ ಅಧ್ಯಕ್ಷನ ಮೇಲೆ ABVP ಕಾರ್ಯಕರ್ತರಿಂದ ಹಲ್ಲೆ ಆರೋಪ

- Advertisement -
- Advertisement -

ಕಾನ್ಶಿರಾಮ್ ಜಯಂತಿಯ ಮುನ್ನಾದಿನದಂದು (ಮಾರ್ಚ್ 14) ಪೋಸ್ಟರ್ ಅಂಟಿಸುತ್ತಿದ್ದ JNU ಬಾಪ್ಸಾ ಅಧ್ಯಕ್ಷ, ರಾಜಕೀಯ ಅಧ್ಯಯನ ಕೇಂದ್ರದ ಪಿ.ಎಚ್.ಡಿ ಸಂಶೋಧಕ ಓಂ ಪ್ರಕಾಶ್ ಮಹತೋ ಹಾಗೂ ಇತರ ಕಾರ್ಯಕರ್ತರ ಮೇಲೆ ಎಬಿವಿಪಿ ಕಾರ್ಯಕರ್ತರು ಜೆಎನ್‌ಯುನ ಗೋದಾವರಿ ಧಾಬಾದ ಬಳಿ ಹಲ್ಲೆ ನಡೆಸಿದ್ದಾರೆ ಎಂದು BAPSA ಆರೋಪಿಸಿದೆ.

ತಮ್ಮ ಅಧ್ಯಕ್ಷರ ಮೇಲಿನ ದಾಳಿಯನ್ನು ಖಂಡಿಸಿ ಬಾಪ್ಸಾ ಹೇಳಿಕೆ ಬಿಡುಗಡೆ ಮಾಡಿದ್ದು, ಜೆಎನ್‌ಯು ಆಡಳಿತ ಮತ್ತು ವಿದ್ಯಾರ್ಥಿ ಸಂಘಗಳು ಜೆಎನ್‌ಯು ಕ್ಯಾಂಪಸ್‌ನಲ್ಲಿ ಎಬಿವಿಪಿ ಗೂಂಡಾಗಿರಿಯ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.

ಕಾನ್ಶಿರಾಮ್‌ನಂತಹ ಸಮರ್ಥ ನಾಯಕ, ಜಾತಿ ವಿರೋಧಿ ಚಿಂತಕರ ಜಯಂತಿಯನ್ನು ಬಾಪ್ಸಾ ಆಚರಿಸುವುದಕ್ಕೆ ಪ್ರತಿಕ್ರಿಯೆಯಾಗಿ ಎಬಿವಿಪಿ ಹಿಂಸಾಚಾರ ನಡೆಸಿದೆ. ಬಾಪ್ಸಾ ಜಾತಿ ವಿರೋಧಿ ರಾಜಕಾರಣವನ್ನು ಪ್ರಬಲವಾಗಿ ಎತ್ತಿಹಿಡಿಯುತ್ತದೆ. ಅದು ಎಬಿವಿಪಿಯಂತಹ ಬ್ರಾಹ್ಮಣ್ಯ ಶಕ್ತಿಗಳಿಗೆ ಜೀರ್ಣಿಸಿಕೊಳ್ಳಲು ಸಾಧ್ಯವಾಗದ ಕಾರಣ ಹಿಂಸೆಗಿಳಿಯುತ್ತವೆ. ಇತ್ತೀಚಿನ ದಾಳಿಯು ಎಬಿವಿಪಿಯ ಮನುವಾದಿ ಮನಸ್ಥಿತಿಯನ್ನು ತೋರುತ್ತದೆ ಎಂದು ಹೇಳಿಕೆಯಲ್ಲಿ ಆರೋಪಿಸಲಾಗಿದೆ.

ದಲಿತ ಕ್ಯಾಮರಾ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಬಾಪ್ಸಾ ಅಧ್ಯಕ್ಷ ಓಂ ಪ್ರಕಾಶ್ ಮಹತೋ ಮಾತನಾಡಿ, ‘ನಾವು ನಮ್ಮ ಐಕಾನ್‌ಗಳಾದ ಕಾನ್ಶಿರಾಮ್, ಫುಲೆ, ಅಂಬೇಡ್ಕರ್ ಅವರನ್ನು ಆಚರಿಸಿದರೆ ಅವರು ನಮ್ಮನ್ನು ಹೊಡೆಯಲು ಮತ್ತು ನಮ್ಮ ಕಾರ್ಯಕ್ರಮಗಳನ್ನು ಅಡ್ಡಿಪಡಿಸಲು ಬರುತ್ತಾರೆ. ಆದರೆ ಅವರ ಬೆದರಿಕೆಗೆ ನಾವು ಬಗ್ಗುವುದಿಲ್ಲ. ನಾಳೆಯ ಕಾನ್ಶಿರಾಮ್ ಜಯಂತಿಯನ್ನು ಸಬರಮತಿ ಧಾಬಾದಲ್ಲಿ ತಪ್ಪದೆ ಆಚರಿಸಲಾಗುವುದು’ ಎಂದಿದ್ದಾರೆ.

ಇಂತಹ ದಾಳಿಗೆ ವಿಶ್ವವಿದ್ಯಾಲಯ ಆಡಳಿತ ಬೆಂಬಲ ನೀಡುತ್ತಿದೆ ಎಂದು ಬಾಪ್ಸಾ ಆರೋಪಿಸಿದೆ. ಎಬಿವಿಪಿ ಪುನರಾವರ್ತಿತ ಹಿಂಸಾಚಾರದ ಹೊರತಾಗಿಯೂ ಅವರ ಮೇಲೆ ಯಾವುದೇ ವಿಚಾರಣೆ, ದಂಡ ಮತ್ತು ಶಿಕ್ಷೆ ನೀಡಿಲ್ಲ. ಪದೇ ಪದೇ ವಿದ್ಯಾರ್ಥಿಗಳಿಗೆ ಕಿರುಕುಳ ನೀಡುವ ಎಬಿವಿಪಿ ವಿರುದ್ಧ ಕ್ರಮ ತೆಗೆದುಕೊಳ್ಳಲು ಆಡಳಿತ ಮಂಡಳಿ ನಿರಾಕರಿಸುತ್ತಿದೆ ಎಂದು ಅದು ಅಸಮಾಧಾನ ವ್ಯಕ್ತಪಡಿಸಿದೆ.

ಇಲ್ಲಿಯವರೆಗೆ ಇಂತಹ ಕೃತ್ಯಗಳಿಗಾಗಿ ಎಬಿವಿಪಿ ಗೂಂಡಾಗಳ ವಿರುದ್ಧ ಅನೇಕ ಎಫ್‌ಐಆರ್ ದಾಖಲಿಸಲಾಗಿದೆ ಆದರೆ ಪೊಲೀಸರು ಯಾವುದೇ ಕಠಿಣ ಕ್ರಮ ಕೈಗೊಂಡಿಲ್ಲ ಎಂದು ಬಾಪ್ಸಾ ಆರೋಪಿಸಿದೆ.

ಅಂಚಿನಲ್ಲಿರುವ ಹಿನ್ನೆಲೆಯಿಂದ ಬರುವ ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣವನ್ನು ಶಾಂತಿಯಿಂದ ಮತ್ತು ಯಾವುದೇ ಬೆದರಿಕೆಯಿಲ್ಲದೆ ಮುಂದುವರಿಸಲು ಅವಕಾಶ ನೀಡುವಂತೆ ಆಡಳಿತವು ಅಪರಾಧಿಗಳನ್ನು ಕ್ಯಾಂಪಸ್‌ನ ಗಡಿಯಿಂದ ಹೊರಗಾಕಬೇಕು ಮತ್ತು ಎಬಿವಿಪಿಯ ಖಾಸಗಿ ಸೇನೆಯಂತೆ ಕಾರ್ಯನಿರ್ವಹಿಸುತ್ತಿರುವ ಭದ್ರತಾ ಸಿಬ್ಬಂದಿಗಳನ್ನು ವಜಾಮಾಡಬೇಕೆಂದು ಬಾಪ್ಸಾ ಆಗ್ರಹಿಸಿದೆ.


ಇದನ್ನೂ ಓದಿ: ಕೇರಳ: ನಾನು ಬಿಜೆಪಿಯ ಕಾರ್ಯಕರ್ತನೂ ಅಲ್ಲ & ಸ್ಪರ್ಧಿಸುವುದಿಲ್ಲ- ಬಿಜೆಪಿ ಟಿಕೆಟ್ ಘೋಷಿಸಲಾಗಿದ್ದ ವ್ಯಕ್ತಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...