Homeಮುಖಪುಟಕಾಂತಾರ: ಟ್ಯೂನ್‌ ಕದ್ದ ಆರೋಪ; ಕಾನೂನು ಕ್ರಮಕ್ಕೆ ಮುಂದಾದ ಕೇರಳ ಸಂಸ್ಥೆ

ಕಾಂತಾರ: ಟ್ಯೂನ್‌ ಕದ್ದ ಆರೋಪ; ಕಾನೂನು ಕ್ರಮಕ್ಕೆ ಮುಂದಾದ ಕೇರಳ ಸಂಸ್ಥೆ

- Advertisement -
- Advertisement -

‘ಕಾಂತಾರ’ ಸಿನಿಮಾದಲ್ಲಿನ ‘ವರಹ ರೂಪಂ’ ಹಾಡಿಗೂ ಮಲಯಾಳಂನ ‘ನವರಸಂ’ ಆಲ್ಬಮ್‌ಗೂ ಸಾಮ್ಯತೆಗಳು ಕಂಡು ಬಂದಿದ್ದು, ಕಾಂತಾರ ಚಿತ್ರತಂಡವು ಟ್ಯೂನ್‌ ಕದ್ದಿರುವ ಆರೋಪಕ್ಕೆ ಗುರಿಯಾಗಿದೆ.

ಈ ಕುರಿತು ಚರ್ಚೆಯಾಗುತ್ತಿರುವ ಬೆನ್ನಲ್ಲೇ ಕೇರಳದ ಜನಪ್ರಿಯ ಸಂಗೀತ ಬ್ಯಾಂಡ್ ‘ಥೈಕ್ಕುಡಂ ಬ್ರಿಡ್ಜ್’ ಕಾನೂನು ಕ್ರಮ ಜರುಗಿಸಲು ನಿರ್ಧರಿಸಿದೆ. ‘ಕಾಂತಾರ’ ಚಿತ್ರದ ‘ವರಹ ರೂಪಂ’ ಹಾಡಿಗೆ ಆಕ್ಷೇಪ ಎತ್ತಿದ್ದು, ಕೃತಿಚೌರ್ಯದ ಆರೋಪ ಮಾಡಿದೆ.

‘ಕಾಂತಾರ’ ಚಿತ್ರತಂಡದಿಂದ ಹಕ್ಕುಸ್ವಾಮ್ಯ ಉಲ್ಲಂಘನೆಯಾಗಿದೆ ಎಂದಿರುವ ‘ಥೈಕ್ಕುಡಮ್ ಬ್ರಿಡ್ಜ್’ ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದೆ.

“ತೈಕ್ಕುಡಂ ಬ್ರಿಡ್ಜ್‌’ಗೂ ‘ಕಾಂತಾರ’ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ. ಇದನ್ನು ನಮ್ಮ ಕೇಳುಗರು ತಿಳಿದುಕೊಳ್ಳಬೇಕು. ನಮ್ಮ ‘ನವರಸಂ’ ಮತ್ತು ಕಾಂತಾರದ ‘ವರಾಹ ರೂಪಂ’ ಹಾಡಿನ ನಡುವೆ ಸ್ಪಷ್ಟ ಹೋಲಿಕೆಗಳು ಕಂಡು ಬಂದಿವೆ. ಆದ್ದರಿಂದ ಇದು ಹಕ್ಕುಸ್ವಾಮ್ಯ ಕಾನೂನುಗಳ ಉಲ್ಲಂಘನೆಯಾಗಿದೆ” ಎಂದು ‘ಥೈಕ್ಕುಡಮ್ ಬ್ರಿಡ್ಜ್‌’ ತಿಳಿಸಿದೆ.

“ನಮ್ಮ ದೃಷ್ಟಿಕೋದಲ್ಲಿ ‘ಸ್ಫೂರ್ತಿ’ ಮತ್ತು ‘ಚೌರ್ಯ’ ಎರಡೂ ವಿಭಿನ್ನ ಮತ್ತು ನಿರ್ವಿವಾದ. ಆದ್ದರಿಂದ ನಾವು ಇದಕ್ಕೆ ಕಾರಣವಾದ ತಂಡದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಬಯಸುತ್ತೇವೆ” ಎಂದು ಎಚ್ಚರಿಸಿದೆ.

 

View this post on Instagram

 

A post shared by Thaikkudam Bridge (@thaikkudambridge)

“ಈ ವಿಷಯದಲ್ಲಿ ನಾವು ನಮ್ಮ ಕೇಳುಗರ ಬೆಂಬಲವನ್ನು ಅಪೇಕ್ಷಿಸುತ್ತೇವೆ. ಈ ಬಗ್ಗೆ ಪ್ರಚಾರ ಮಾಡಲು ನಿಮ್ಮನ್ನು ನಾವು ಕೋರುತ್ತೇವೆ. ಅಲ್ಲದೆ, ಸಂಗೀತದ ಹಕ್ಕುಸ್ವಾಮ್ಯವನ್ನು ರಕ್ಷಿಸುವ ಬಗ್ಗೆ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಸಹ ಕಲಾವಿದರನ್ನು ನಾವು ವಿನಂತಿಸುತ್ತೇವೆ” ಎಂದು ತಿಳಿಸಿದೆ.

ರಿಷಬ್ ಶೆಟ್ಟಿ ನಿರ್ದೇಶಿಸಿ ಅಭಿನಯಿಸಿರುವ ‘ಕಾಂತಾರ’ ಸಿನಿಮಾ ಅಭೂತಪೂರ್ವ ಯಶಸ್ಸು ಪಡೆದಿದ್ದು, ಅಜನೀಶ್ ಬಿ.ಲೋಕನಾಥ್ ಸಂಗೀತ ನಿರ್ದೇಶಿಸಿದ್ದಾರೆ. ‘ವರಹ ರೂಪಂ’ ಹಾಗೂ ‘ಸಿಂಗಾರ ಸಿರಿಯೇ’ ಹಾಡಿನ ಟ್ಯೂನ್‌ಗಳ ಮೇಲೆ ಕೃತಿಚೌರ್ಯದ ಆಕ್ಷೇಪಗಳನ್ನು ಪ್ರೇಕ್ಷಕರು ಮಾಡಿದ್ದರು.

‘ಸಿಂಗಾರ ಸಿರಿಯೇ’ ಹಾಡಿಗೂ ‘ಅಜಯ್‌- ಅತುಲ್‌’ ಅವರ ‘ಅಪ್ಸರ ಆಲಿ’ ಹಾಡಿಗೂ ಸಾಮ್ಯತೆಯನ್ನು ಪ್ರೇಕ್ಷಕರು ಗುರುತಿಸಿದ್ದರು.

ಇದನ್ನೂ ಓದಿರಿ: ‘ಕಾಂತಾರ’ ದೈವಕ್ಕೂ ‘ಕರ್ಣನ್‌’ ದೈವಕ್ಕೂ ಎಷ್ಟೊಂದು ವ್ಯತ್ಯಾಸ!

ಈ ಕುರಿತು ಇತ್ತೀಚೆಗೆ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ್ದ ಸಂಗೀತ ನಿರ್ದೇಶಕ ಅಜನೀಶ್‌ ಬಿ.ಲೋಕನಾಥ್, “ವರಹ ರೂಪಂ ಹಾಡು ರ್‍ಯಾಕ್‌ ಮ್ಯೂಸಿಕ್ ಶೈಲಿಯದ್ದಾಗಿದೆ. ಆದರೆ ರಾಗ ಸಂಯೋಜನೆ ಸಂಪೂರ್ಣ ಭಿನ್ನವಾಗಿದೆ. ಶೈಲಿ ಹಾಗೂ ರಾಗದ ಛಾಯೆ ಒಂದೇ ರೀತಿ ಇರುವುದರಿಂದ ‘ವರಹಾ ರೂಪಂ’ಗೂ ‘ನವರಸಂ’ಗೂ ಸಾಮ್ಯತೆ ಇದೆ ಅನಿಸುತ್ತದೆ. ಖಂಡಿತವಾಗಿಯೂ ನವರಸಂನಿಂದ ಸ್ಫೂರ್ತಿ ಇದೆ. ರಾಗ ಛಾಯೆ ಹಾಗೂ ಶೈಲಿ ಒಂದೇ ಆಗಿದ್ದರಿಂದ ಹೋಲಿಕೆ ಬರುತ್ತದೆ” ಎಂದಿದ್ದರು.

“ಸಿಂಗಾರ ಸಿರಿಯೇ ಹಾಡಿಗೂ ಅಪ್ಸರ ಅಲಿ ಹಾಡಿಗೂ ಸಂಬಂಧವಿಲ್ಲ. ಕೊರಸ್ ಬರುವ ಕಡೆ ಸಾಮ್ಯತೆ ಇದೆ ಎನಿಸುತ್ತದೆ” ಎಂದು ಸ್ಪಷ್ಪಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...