Homeಮುಖಪುಟಕಾಂತಾರ: ಟ್ಯೂನ್‌ ಕದ್ದ ಆರೋಪ; ಕಾನೂನು ಕ್ರಮಕ್ಕೆ ಮುಂದಾದ ಕೇರಳ ಸಂಸ್ಥೆ

ಕಾಂತಾರ: ಟ್ಯೂನ್‌ ಕದ್ದ ಆರೋಪ; ಕಾನೂನು ಕ್ರಮಕ್ಕೆ ಮುಂದಾದ ಕೇರಳ ಸಂಸ್ಥೆ

- Advertisement -
- Advertisement -

‘ಕಾಂತಾರ’ ಸಿನಿಮಾದಲ್ಲಿನ ‘ವರಹ ರೂಪಂ’ ಹಾಡಿಗೂ ಮಲಯಾಳಂನ ‘ನವರಸಂ’ ಆಲ್ಬಮ್‌ಗೂ ಸಾಮ್ಯತೆಗಳು ಕಂಡು ಬಂದಿದ್ದು, ಕಾಂತಾರ ಚಿತ್ರತಂಡವು ಟ್ಯೂನ್‌ ಕದ್ದಿರುವ ಆರೋಪಕ್ಕೆ ಗುರಿಯಾಗಿದೆ.

ಈ ಕುರಿತು ಚರ್ಚೆಯಾಗುತ್ತಿರುವ ಬೆನ್ನಲ್ಲೇ ಕೇರಳದ ಜನಪ್ರಿಯ ಸಂಗೀತ ಬ್ಯಾಂಡ್ ‘ಥೈಕ್ಕುಡಂ ಬ್ರಿಡ್ಜ್’ ಕಾನೂನು ಕ್ರಮ ಜರುಗಿಸಲು ನಿರ್ಧರಿಸಿದೆ. ‘ಕಾಂತಾರ’ ಚಿತ್ರದ ‘ವರಹ ರೂಪಂ’ ಹಾಡಿಗೆ ಆಕ್ಷೇಪ ಎತ್ತಿದ್ದು, ಕೃತಿಚೌರ್ಯದ ಆರೋಪ ಮಾಡಿದೆ.

‘ಕಾಂತಾರ’ ಚಿತ್ರತಂಡದಿಂದ ಹಕ್ಕುಸ್ವಾಮ್ಯ ಉಲ್ಲಂಘನೆಯಾಗಿದೆ ಎಂದಿರುವ ‘ಥೈಕ್ಕುಡಮ್ ಬ್ರಿಡ್ಜ್’ ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದೆ.

“ತೈಕ್ಕುಡಂ ಬ್ರಿಡ್ಜ್‌’ಗೂ ‘ಕಾಂತಾರ’ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ. ಇದನ್ನು ನಮ್ಮ ಕೇಳುಗರು ತಿಳಿದುಕೊಳ್ಳಬೇಕು. ನಮ್ಮ ‘ನವರಸಂ’ ಮತ್ತು ಕಾಂತಾರದ ‘ವರಾಹ ರೂಪಂ’ ಹಾಡಿನ ನಡುವೆ ಸ್ಪಷ್ಟ ಹೋಲಿಕೆಗಳು ಕಂಡು ಬಂದಿವೆ. ಆದ್ದರಿಂದ ಇದು ಹಕ್ಕುಸ್ವಾಮ್ಯ ಕಾನೂನುಗಳ ಉಲ್ಲಂಘನೆಯಾಗಿದೆ” ಎಂದು ‘ಥೈಕ್ಕುಡಮ್ ಬ್ರಿಡ್ಜ್‌’ ತಿಳಿಸಿದೆ.

“ನಮ್ಮ ದೃಷ್ಟಿಕೋದಲ್ಲಿ ‘ಸ್ಫೂರ್ತಿ’ ಮತ್ತು ‘ಚೌರ್ಯ’ ಎರಡೂ ವಿಭಿನ್ನ ಮತ್ತು ನಿರ್ವಿವಾದ. ಆದ್ದರಿಂದ ನಾವು ಇದಕ್ಕೆ ಕಾರಣವಾದ ತಂಡದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಬಯಸುತ್ತೇವೆ” ಎಂದು ಎಚ್ಚರಿಸಿದೆ.

 

View this post on Instagram

 

A post shared by Thaikkudam Bridge (@thaikkudambridge)

“ಈ ವಿಷಯದಲ್ಲಿ ನಾವು ನಮ್ಮ ಕೇಳುಗರ ಬೆಂಬಲವನ್ನು ಅಪೇಕ್ಷಿಸುತ್ತೇವೆ. ಈ ಬಗ್ಗೆ ಪ್ರಚಾರ ಮಾಡಲು ನಿಮ್ಮನ್ನು ನಾವು ಕೋರುತ್ತೇವೆ. ಅಲ್ಲದೆ, ಸಂಗೀತದ ಹಕ್ಕುಸ್ವಾಮ್ಯವನ್ನು ರಕ್ಷಿಸುವ ಬಗ್ಗೆ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಸಹ ಕಲಾವಿದರನ್ನು ನಾವು ವಿನಂತಿಸುತ್ತೇವೆ” ಎಂದು ತಿಳಿಸಿದೆ.

ರಿಷಬ್ ಶೆಟ್ಟಿ ನಿರ್ದೇಶಿಸಿ ಅಭಿನಯಿಸಿರುವ ‘ಕಾಂತಾರ’ ಸಿನಿಮಾ ಅಭೂತಪೂರ್ವ ಯಶಸ್ಸು ಪಡೆದಿದ್ದು, ಅಜನೀಶ್ ಬಿ.ಲೋಕನಾಥ್ ಸಂಗೀತ ನಿರ್ದೇಶಿಸಿದ್ದಾರೆ. ‘ವರಹ ರೂಪಂ’ ಹಾಗೂ ‘ಸಿಂಗಾರ ಸಿರಿಯೇ’ ಹಾಡಿನ ಟ್ಯೂನ್‌ಗಳ ಮೇಲೆ ಕೃತಿಚೌರ್ಯದ ಆಕ್ಷೇಪಗಳನ್ನು ಪ್ರೇಕ್ಷಕರು ಮಾಡಿದ್ದರು.

‘ಸಿಂಗಾರ ಸಿರಿಯೇ’ ಹಾಡಿಗೂ ‘ಅಜಯ್‌- ಅತುಲ್‌’ ಅವರ ‘ಅಪ್ಸರ ಆಲಿ’ ಹಾಡಿಗೂ ಸಾಮ್ಯತೆಯನ್ನು ಪ್ರೇಕ್ಷಕರು ಗುರುತಿಸಿದ್ದರು.

ಇದನ್ನೂ ಓದಿರಿ: ‘ಕಾಂತಾರ’ ದೈವಕ್ಕೂ ‘ಕರ್ಣನ್‌’ ದೈವಕ್ಕೂ ಎಷ್ಟೊಂದು ವ್ಯತ್ಯಾಸ!

ಈ ಕುರಿತು ಇತ್ತೀಚೆಗೆ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ್ದ ಸಂಗೀತ ನಿರ್ದೇಶಕ ಅಜನೀಶ್‌ ಬಿ.ಲೋಕನಾಥ್, “ವರಹ ರೂಪಂ ಹಾಡು ರ್‍ಯಾಕ್‌ ಮ್ಯೂಸಿಕ್ ಶೈಲಿಯದ್ದಾಗಿದೆ. ಆದರೆ ರಾಗ ಸಂಯೋಜನೆ ಸಂಪೂರ್ಣ ಭಿನ್ನವಾಗಿದೆ. ಶೈಲಿ ಹಾಗೂ ರಾಗದ ಛಾಯೆ ಒಂದೇ ರೀತಿ ಇರುವುದರಿಂದ ‘ವರಹಾ ರೂಪಂ’ಗೂ ‘ನವರಸಂ’ಗೂ ಸಾಮ್ಯತೆ ಇದೆ ಅನಿಸುತ್ತದೆ. ಖಂಡಿತವಾಗಿಯೂ ನವರಸಂನಿಂದ ಸ್ಫೂರ್ತಿ ಇದೆ. ರಾಗ ಛಾಯೆ ಹಾಗೂ ಶೈಲಿ ಒಂದೇ ಆಗಿದ್ದರಿಂದ ಹೋಲಿಕೆ ಬರುತ್ತದೆ” ಎಂದಿದ್ದರು.

“ಸಿಂಗಾರ ಸಿರಿಯೇ ಹಾಡಿಗೂ ಅಪ್ಸರ ಅಲಿ ಹಾಡಿಗೂ ಸಂಬಂಧವಿಲ್ಲ. ಕೊರಸ್ ಬರುವ ಕಡೆ ಸಾಮ್ಯತೆ ಇದೆ ಎನಿಸುತ್ತದೆ” ಎಂದು ಸ್ಪಷ್ಪಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...