Homeಮುಖಪುಟಕಾಂತಾರ: ಟ್ಯೂನ್‌ ಕದ್ದ ಆರೋಪ; ಕಾನೂನು ಕ್ರಮಕ್ಕೆ ಮುಂದಾದ ಕೇರಳ ಸಂಸ್ಥೆ

ಕಾಂತಾರ: ಟ್ಯೂನ್‌ ಕದ್ದ ಆರೋಪ; ಕಾನೂನು ಕ್ರಮಕ್ಕೆ ಮುಂದಾದ ಕೇರಳ ಸಂಸ್ಥೆ

- Advertisement -
- Advertisement -

‘ಕಾಂತಾರ’ ಸಿನಿಮಾದಲ್ಲಿನ ‘ವರಹ ರೂಪಂ’ ಹಾಡಿಗೂ ಮಲಯಾಳಂನ ‘ನವರಸಂ’ ಆಲ್ಬಮ್‌ಗೂ ಸಾಮ್ಯತೆಗಳು ಕಂಡು ಬಂದಿದ್ದು, ಕಾಂತಾರ ಚಿತ್ರತಂಡವು ಟ್ಯೂನ್‌ ಕದ್ದಿರುವ ಆರೋಪಕ್ಕೆ ಗುರಿಯಾಗಿದೆ.

ಈ ಕುರಿತು ಚರ್ಚೆಯಾಗುತ್ತಿರುವ ಬೆನ್ನಲ್ಲೇ ಕೇರಳದ ಜನಪ್ರಿಯ ಸಂಗೀತ ಬ್ಯಾಂಡ್ ‘ಥೈಕ್ಕುಡಂ ಬ್ರಿಡ್ಜ್’ ಕಾನೂನು ಕ್ರಮ ಜರುಗಿಸಲು ನಿರ್ಧರಿಸಿದೆ. ‘ಕಾಂತಾರ’ ಚಿತ್ರದ ‘ವರಹ ರೂಪಂ’ ಹಾಡಿಗೆ ಆಕ್ಷೇಪ ಎತ್ತಿದ್ದು, ಕೃತಿಚೌರ್ಯದ ಆರೋಪ ಮಾಡಿದೆ.

‘ಕಾಂತಾರ’ ಚಿತ್ರತಂಡದಿಂದ ಹಕ್ಕುಸ್ವಾಮ್ಯ ಉಲ್ಲಂಘನೆಯಾಗಿದೆ ಎಂದಿರುವ ‘ಥೈಕ್ಕುಡಮ್ ಬ್ರಿಡ್ಜ್’ ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದೆ.

“ತೈಕ್ಕುಡಂ ಬ್ರಿಡ್ಜ್‌’ಗೂ ‘ಕಾಂತಾರ’ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ. ಇದನ್ನು ನಮ್ಮ ಕೇಳುಗರು ತಿಳಿದುಕೊಳ್ಳಬೇಕು. ನಮ್ಮ ‘ನವರಸಂ’ ಮತ್ತು ಕಾಂತಾರದ ‘ವರಾಹ ರೂಪಂ’ ಹಾಡಿನ ನಡುವೆ ಸ್ಪಷ್ಟ ಹೋಲಿಕೆಗಳು ಕಂಡು ಬಂದಿವೆ. ಆದ್ದರಿಂದ ಇದು ಹಕ್ಕುಸ್ವಾಮ್ಯ ಕಾನೂನುಗಳ ಉಲ್ಲಂಘನೆಯಾಗಿದೆ” ಎಂದು ‘ಥೈಕ್ಕುಡಮ್ ಬ್ರಿಡ್ಜ್‌’ ತಿಳಿಸಿದೆ.

“ನಮ್ಮ ದೃಷ್ಟಿಕೋದಲ್ಲಿ ‘ಸ್ಫೂರ್ತಿ’ ಮತ್ತು ‘ಚೌರ್ಯ’ ಎರಡೂ ವಿಭಿನ್ನ ಮತ್ತು ನಿರ್ವಿವಾದ. ಆದ್ದರಿಂದ ನಾವು ಇದಕ್ಕೆ ಕಾರಣವಾದ ತಂಡದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಬಯಸುತ್ತೇವೆ” ಎಂದು ಎಚ್ಚರಿಸಿದೆ.

 

View this post on Instagram

 

A post shared by Thaikkudam Bridge (@thaikkudambridge)

“ಈ ವಿಷಯದಲ್ಲಿ ನಾವು ನಮ್ಮ ಕೇಳುಗರ ಬೆಂಬಲವನ್ನು ಅಪೇಕ್ಷಿಸುತ್ತೇವೆ. ಈ ಬಗ್ಗೆ ಪ್ರಚಾರ ಮಾಡಲು ನಿಮ್ಮನ್ನು ನಾವು ಕೋರುತ್ತೇವೆ. ಅಲ್ಲದೆ, ಸಂಗೀತದ ಹಕ್ಕುಸ್ವಾಮ್ಯವನ್ನು ರಕ್ಷಿಸುವ ಬಗ್ಗೆ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಸಹ ಕಲಾವಿದರನ್ನು ನಾವು ವಿನಂತಿಸುತ್ತೇವೆ” ಎಂದು ತಿಳಿಸಿದೆ.

ರಿಷಬ್ ಶೆಟ್ಟಿ ನಿರ್ದೇಶಿಸಿ ಅಭಿನಯಿಸಿರುವ ‘ಕಾಂತಾರ’ ಸಿನಿಮಾ ಅಭೂತಪೂರ್ವ ಯಶಸ್ಸು ಪಡೆದಿದ್ದು, ಅಜನೀಶ್ ಬಿ.ಲೋಕನಾಥ್ ಸಂಗೀತ ನಿರ್ದೇಶಿಸಿದ್ದಾರೆ. ‘ವರಹ ರೂಪಂ’ ಹಾಗೂ ‘ಸಿಂಗಾರ ಸಿರಿಯೇ’ ಹಾಡಿನ ಟ್ಯೂನ್‌ಗಳ ಮೇಲೆ ಕೃತಿಚೌರ್ಯದ ಆಕ್ಷೇಪಗಳನ್ನು ಪ್ರೇಕ್ಷಕರು ಮಾಡಿದ್ದರು.

‘ಸಿಂಗಾರ ಸಿರಿಯೇ’ ಹಾಡಿಗೂ ‘ಅಜಯ್‌- ಅತುಲ್‌’ ಅವರ ‘ಅಪ್ಸರ ಆಲಿ’ ಹಾಡಿಗೂ ಸಾಮ್ಯತೆಯನ್ನು ಪ್ರೇಕ್ಷಕರು ಗುರುತಿಸಿದ್ದರು.

ಇದನ್ನೂ ಓದಿರಿ: ‘ಕಾಂತಾರ’ ದೈವಕ್ಕೂ ‘ಕರ್ಣನ್‌’ ದೈವಕ್ಕೂ ಎಷ್ಟೊಂದು ವ್ಯತ್ಯಾಸ!

ಈ ಕುರಿತು ಇತ್ತೀಚೆಗೆ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ್ದ ಸಂಗೀತ ನಿರ್ದೇಶಕ ಅಜನೀಶ್‌ ಬಿ.ಲೋಕನಾಥ್, “ವರಹ ರೂಪಂ ಹಾಡು ರ್‍ಯಾಕ್‌ ಮ್ಯೂಸಿಕ್ ಶೈಲಿಯದ್ದಾಗಿದೆ. ಆದರೆ ರಾಗ ಸಂಯೋಜನೆ ಸಂಪೂರ್ಣ ಭಿನ್ನವಾಗಿದೆ. ಶೈಲಿ ಹಾಗೂ ರಾಗದ ಛಾಯೆ ಒಂದೇ ರೀತಿ ಇರುವುದರಿಂದ ‘ವರಹಾ ರೂಪಂ’ಗೂ ‘ನವರಸಂ’ಗೂ ಸಾಮ್ಯತೆ ಇದೆ ಅನಿಸುತ್ತದೆ. ಖಂಡಿತವಾಗಿಯೂ ನವರಸಂನಿಂದ ಸ್ಫೂರ್ತಿ ಇದೆ. ರಾಗ ಛಾಯೆ ಹಾಗೂ ಶೈಲಿ ಒಂದೇ ಆಗಿದ್ದರಿಂದ ಹೋಲಿಕೆ ಬರುತ್ತದೆ” ಎಂದಿದ್ದರು.

“ಸಿಂಗಾರ ಸಿರಿಯೇ ಹಾಡಿಗೂ ಅಪ್ಸರ ಅಲಿ ಹಾಡಿಗೂ ಸಂಬಂಧವಿಲ್ಲ. ಕೊರಸ್ ಬರುವ ಕಡೆ ಸಾಮ್ಯತೆ ಇದೆ ಎನಿಸುತ್ತದೆ” ಎಂದು ಸ್ಪಷ್ಪಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...