Homeಮುಖಪುಟಕಾಂತಾರ: ಟ್ಯೂನ್‌ ಕದ್ದ ಆರೋಪ; ಕಾನೂನು ಕ್ರಮಕ್ಕೆ ಮುಂದಾದ ಕೇರಳ ಸಂಸ್ಥೆ

ಕಾಂತಾರ: ಟ್ಯೂನ್‌ ಕದ್ದ ಆರೋಪ; ಕಾನೂನು ಕ್ರಮಕ್ಕೆ ಮುಂದಾದ ಕೇರಳ ಸಂಸ್ಥೆ

- Advertisement -
- Advertisement -

‘ಕಾಂತಾರ’ ಸಿನಿಮಾದಲ್ಲಿನ ‘ವರಹ ರೂಪಂ’ ಹಾಡಿಗೂ ಮಲಯಾಳಂನ ‘ನವರಸಂ’ ಆಲ್ಬಮ್‌ಗೂ ಸಾಮ್ಯತೆಗಳು ಕಂಡು ಬಂದಿದ್ದು, ಕಾಂತಾರ ಚಿತ್ರತಂಡವು ಟ್ಯೂನ್‌ ಕದ್ದಿರುವ ಆರೋಪಕ್ಕೆ ಗುರಿಯಾಗಿದೆ.

ಈ ಕುರಿತು ಚರ್ಚೆಯಾಗುತ್ತಿರುವ ಬೆನ್ನಲ್ಲೇ ಕೇರಳದ ಜನಪ್ರಿಯ ಸಂಗೀತ ಬ್ಯಾಂಡ್ ‘ಥೈಕ್ಕುಡಂ ಬ್ರಿಡ್ಜ್’ ಕಾನೂನು ಕ್ರಮ ಜರುಗಿಸಲು ನಿರ್ಧರಿಸಿದೆ. ‘ಕಾಂತಾರ’ ಚಿತ್ರದ ‘ವರಹ ರೂಪಂ’ ಹಾಡಿಗೆ ಆಕ್ಷೇಪ ಎತ್ತಿದ್ದು, ಕೃತಿಚೌರ್ಯದ ಆರೋಪ ಮಾಡಿದೆ.

‘ಕಾಂತಾರ’ ಚಿತ್ರತಂಡದಿಂದ ಹಕ್ಕುಸ್ವಾಮ್ಯ ಉಲ್ಲಂಘನೆಯಾಗಿದೆ ಎಂದಿರುವ ‘ಥೈಕ್ಕುಡಮ್ ಬ್ರಿಡ್ಜ್’ ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದೆ.

“ತೈಕ್ಕುಡಂ ಬ್ರಿಡ್ಜ್‌’ಗೂ ‘ಕಾಂತಾರ’ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ. ಇದನ್ನು ನಮ್ಮ ಕೇಳುಗರು ತಿಳಿದುಕೊಳ್ಳಬೇಕು. ನಮ್ಮ ‘ನವರಸಂ’ ಮತ್ತು ಕಾಂತಾರದ ‘ವರಾಹ ರೂಪಂ’ ಹಾಡಿನ ನಡುವೆ ಸ್ಪಷ್ಟ ಹೋಲಿಕೆಗಳು ಕಂಡು ಬಂದಿವೆ. ಆದ್ದರಿಂದ ಇದು ಹಕ್ಕುಸ್ವಾಮ್ಯ ಕಾನೂನುಗಳ ಉಲ್ಲಂಘನೆಯಾಗಿದೆ” ಎಂದು ‘ಥೈಕ್ಕುಡಮ್ ಬ್ರಿಡ್ಜ್‌’ ತಿಳಿಸಿದೆ.

“ನಮ್ಮ ದೃಷ್ಟಿಕೋದಲ್ಲಿ ‘ಸ್ಫೂರ್ತಿ’ ಮತ್ತು ‘ಚೌರ್ಯ’ ಎರಡೂ ವಿಭಿನ್ನ ಮತ್ತು ನಿರ್ವಿವಾದ. ಆದ್ದರಿಂದ ನಾವು ಇದಕ್ಕೆ ಕಾರಣವಾದ ತಂಡದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಬಯಸುತ್ತೇವೆ” ಎಂದು ಎಚ್ಚರಿಸಿದೆ.

 

View this post on Instagram

 

A post shared by Thaikkudam Bridge (@thaikkudambridge)

“ಈ ವಿಷಯದಲ್ಲಿ ನಾವು ನಮ್ಮ ಕೇಳುಗರ ಬೆಂಬಲವನ್ನು ಅಪೇಕ್ಷಿಸುತ್ತೇವೆ. ಈ ಬಗ್ಗೆ ಪ್ರಚಾರ ಮಾಡಲು ನಿಮ್ಮನ್ನು ನಾವು ಕೋರುತ್ತೇವೆ. ಅಲ್ಲದೆ, ಸಂಗೀತದ ಹಕ್ಕುಸ್ವಾಮ್ಯವನ್ನು ರಕ್ಷಿಸುವ ಬಗ್ಗೆ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಸಹ ಕಲಾವಿದರನ್ನು ನಾವು ವಿನಂತಿಸುತ್ತೇವೆ” ಎಂದು ತಿಳಿಸಿದೆ.

ರಿಷಬ್ ಶೆಟ್ಟಿ ನಿರ್ದೇಶಿಸಿ ಅಭಿನಯಿಸಿರುವ ‘ಕಾಂತಾರ’ ಸಿನಿಮಾ ಅಭೂತಪೂರ್ವ ಯಶಸ್ಸು ಪಡೆದಿದ್ದು, ಅಜನೀಶ್ ಬಿ.ಲೋಕನಾಥ್ ಸಂಗೀತ ನಿರ್ದೇಶಿಸಿದ್ದಾರೆ. ‘ವರಹ ರೂಪಂ’ ಹಾಗೂ ‘ಸಿಂಗಾರ ಸಿರಿಯೇ’ ಹಾಡಿನ ಟ್ಯೂನ್‌ಗಳ ಮೇಲೆ ಕೃತಿಚೌರ್ಯದ ಆಕ್ಷೇಪಗಳನ್ನು ಪ್ರೇಕ್ಷಕರು ಮಾಡಿದ್ದರು.

‘ಸಿಂಗಾರ ಸಿರಿಯೇ’ ಹಾಡಿಗೂ ‘ಅಜಯ್‌- ಅತುಲ್‌’ ಅವರ ‘ಅಪ್ಸರ ಆಲಿ’ ಹಾಡಿಗೂ ಸಾಮ್ಯತೆಯನ್ನು ಪ್ರೇಕ್ಷಕರು ಗುರುತಿಸಿದ್ದರು.

ಇದನ್ನೂ ಓದಿರಿ: ‘ಕಾಂತಾರ’ ದೈವಕ್ಕೂ ‘ಕರ್ಣನ್‌’ ದೈವಕ್ಕೂ ಎಷ್ಟೊಂದು ವ್ಯತ್ಯಾಸ!

ಈ ಕುರಿತು ಇತ್ತೀಚೆಗೆ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ್ದ ಸಂಗೀತ ನಿರ್ದೇಶಕ ಅಜನೀಶ್‌ ಬಿ.ಲೋಕನಾಥ್, “ವರಹ ರೂಪಂ ಹಾಡು ರ್‍ಯಾಕ್‌ ಮ್ಯೂಸಿಕ್ ಶೈಲಿಯದ್ದಾಗಿದೆ. ಆದರೆ ರಾಗ ಸಂಯೋಜನೆ ಸಂಪೂರ್ಣ ಭಿನ್ನವಾಗಿದೆ. ಶೈಲಿ ಹಾಗೂ ರಾಗದ ಛಾಯೆ ಒಂದೇ ರೀತಿ ಇರುವುದರಿಂದ ‘ವರಹಾ ರೂಪಂ’ಗೂ ‘ನವರಸಂ’ಗೂ ಸಾಮ್ಯತೆ ಇದೆ ಅನಿಸುತ್ತದೆ. ಖಂಡಿತವಾಗಿಯೂ ನವರಸಂನಿಂದ ಸ್ಫೂರ್ತಿ ಇದೆ. ರಾಗ ಛಾಯೆ ಹಾಗೂ ಶೈಲಿ ಒಂದೇ ಆಗಿದ್ದರಿಂದ ಹೋಲಿಕೆ ಬರುತ್ತದೆ” ಎಂದಿದ್ದರು.

“ಸಿಂಗಾರ ಸಿರಿಯೇ ಹಾಡಿಗೂ ಅಪ್ಸರ ಅಲಿ ಹಾಡಿಗೂ ಸಂಬಂಧವಿಲ್ಲ. ಕೊರಸ್ ಬರುವ ಕಡೆ ಸಾಮ್ಯತೆ ಇದೆ ಎನಿಸುತ್ತದೆ” ಎಂದು ಸ್ಪಷ್ಪಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...