Homeಅಂಕಣಗಳುರಂಜಿಸಿ ವಂಚಿಸುವ ಕಾಂತಾರ

ರಂಜಿಸಿ ವಂಚಿಸುವ ಕಾಂತಾರ

- Advertisement -
- Advertisement -

ಚಂಡಮಾರುತ, ಭೂಕಂಪ, ಪ್ರವಾಹ ಇತ್ಯಾದಿ ನೈಸರ್ಗಿಕ ದುರಂತಗಳಂತೆಯೇ ಬಿಜೆಪಿ ಸರಕಾರದಲ್ಲಿ ನಡೆದ ನೋಟುಬ್ಯಾನು, ಜಿಎಸ್‌ಟಿ, ಕೃಷಿಕಾಯ್ದೆಗಳಿಂದಾಗಿರಬಹುದಾದ ಅನಾಹುತಗಳನ್ನು ದಾಖಲಿಸುವ ಬದಲು, ಮಾಧ್ಯಮದವರು ಚೀನಾದಲ್ಲಿ ಏನಾಗಿದೆ ಆಫ್ಘಾನಿನ ಕತೆಯೇನು, ಪಾಕಿಸ್ತಾನ ಉಳಿಯುವುದೆ, ಶ್ರೀಲಂಕಾದಲ್ಲಿ ಅರಮನೆಗೇ ನುಗ್ಗಿ ಆಹಾರ ಹೊತ್ತುಕೊಂಡು ಹೋಗುತ್ತಿದ್ದಾರೆ ಎಂಬಿತ್ಯಾದಿಯಾಗಿ ಹುಡುಕುತ್ತಾ ಕುಳಿತಿರಬೇಕಾದರೆ ಹಸಿವಿನ ವಿಷಯದಲ್ಲಿ ನಮ್ಮ ಸುತ್ತಮುತ್ತಲ ದೇಶಗಳನ್ನ ಭಾರತ ಹಿಂದಿಕ್ಕಿದೆಯಂತಲ್ಲಾ. ಈ ಬಗ್ಗೆ ಮಾಧ್ಯಮದವರನ್ನ ಕೇಳಿದರೆ, ಅದೆಲ್ಲಾ ಕಾಂಗ್ರೆಸ್ಸಿಗರು ಹರಡುತ್ತಿರುವ ಸುಳ್ಳು ಸುದ್ದಿ; ಈಗ ನಮ್ಮನ್ನೇ ನೋಡಿ, ದಿನಬೆಳಗಾಯ್ತೆಂದರೆ ಯಾರಾದರೂ ಕಾಫಿ, ತಿಂಡಿ ಕೊಡಿಸುವವರು ಸಿಗುತ್ತಾರ ಎಂದು ಹುಡುಕುತ್ತಿದ್ದೆವು. ಮಧ್ಯಾಹ್ನದ ಊಟಕ್ಕೂ ಅದೇ ಸ್ಥಿತಿಯಿತ್ತು. ಸಾಯಂಕಾಲಕ್ಕೆ ಯಾರಾದರೂ ಪಾರ್ಟಿಗೆ ಕರೆಯುತ್ತಿದ್ದರು. ಈಗ ನಾವೇ ಕರೆಯುತ್ತೇವೆ. ಅಲ್ಲದೆ ಅವರವರ ಮನೆಯವರೆಗೂ ಬಿಟ್ಟುಕೊಡುವ ವಾಹನವೂ ನಮ್ಮಲ್ಲಿದೆ. ನಾವೇ ಹೀಗೆ ಸುಧಾರಿಸುತ್ತಿರಬೇಕಾದರೆ, ಇನ್ನು ನಮ್ಮ ದೇಶದ ಜನ ಹಸಿದು ಮಲಗುತ್ತಾರೆಂಬುದು ಹಸಿಸುಳ್ಳು ಎಂದು ಮಾರಿಕೊಂಡ ಮಾಧ್ಯಮದವರು ಬೊಮ್ಮಾಯಿ ಕೊಟ್ಟ ಗಿಫ್ಟನ್ನು ಜೋಪಾನವಾಗಿ ಮನೆಗೆ ತೆಗೆದುಕೊಂಡು ಹೋದರಂತಲ್ಲಾ, ಥೂತ್ತೇರಿ.

******

ಒಂದಲ್ಲಾ ಒಂದು ದಿನ ಶುದ್ಧ ಸಾಹಿತ್ಯದ ಕಡೆಗೆ ಸಾಹಿತಿ ತಿರುಗಲೇಬೇಕೆಂದು ನಮ್ಮ ಸಂತೆಶಿವರದ ಭೈರಪ್ಪ ಹಾಸನಕ್ಕೆ ಬಂದು ಭೈರಿಗೆ ಹಿಡಿದು ಹೋಗಿದ್ದಾರಲ್ಲಾ! ಸದರಿ ಸಾಹಿತಿಗೆ ಈ ಜ್ಞಾನೋದಯ ತಡವಾಗಿ ಸಂಭವಿಸಿದೆ. ಭೈರಪ್ಪನವರು ಧರ್ಮಶ್ರೀ, ದಾಟು, ಆವರಣ ಇತ್ಯಾದಿ ಶುದ್ಧವಲ್ಲದ ಸಾಹಿತ್ಯ ರಚಿಸಿದ ಮೇಲೆ ಕಡೆಗೂ ಶುದ್ಧ ಸಾಹಿತ್ಯದ ಬಗ್ಗೆ ಹಲುಬಿದ್ದಾರೆ. ಪರಂಪರೆಯ ಹಾಳುಗುಡಿಯಲ್ಲೇ ಕುಳಿತು ರಿಮ್ಮುಗಟ್ಟಲೆ ಬರೆದ ಭೈರಪ್ಪನವರಿಗೆ ಆಧುನಿಕತೆ ಚಿಂತನೆಯ ಸಾಹಿತಿಗಳನ್ನು ಕಂಡರಾಗುವುದಿಲ್ಲ. ಅವರೆಲ್ಲಾ ವಿಜೃಂಭಿಸುತ್ತಿದ್ದ ಕಾಲದಲ್ಲಿ ಕೀಳರಿಮೆಯಿಂದ ಹಿಂದೂ ಧರ್ಮದ ಕಗ್ಗ ಹೊಸೆಯುತ್ತಿದ್ದ ಭೈರಣ್ಣ ಅವರೆಲ್ಲಾ ಕಾಲವಾದ ನಂತರ ಅವರ ಸಾಹಿತ್ಯವನ್ನು ಅಣಕಿಸುತ್ತಿದ್ದಾರೆ. ಸುದೈವದಿಂದ ಅವರೆಲ್ಲಾ ಭೈರಪ್ಪನ ಸಾಹಿತ್ಯ ಅಂದರೆ ಏನು ಎಂದು ದಾಖಲಿಸಿ ಹೋಗಿದ್ದಾರೆ. ಅವು ನೆನಪಿಗೆ ಬಂದಾಗಲೆಲ್ಲಾ ಆಧುನಿಕ ಸಾಹಿತಿಗಳು ಮತ್ತು ಕವಿಗಳನ್ನ ಟೀಕಿಸುತ್ತಲೇ ಬರುತ್ತಿದ್ದಾರಲ್ಲಾ, ಥೂತ್ತೇರಿ.

ಇದನ್ನೂ ಓದಿ: ಸಿನಿಮಾ, ಮಿಥ್ ಮತ್ತು ರಾಜಕೀಯ; ಕಾಂತಾರ ಮತ್ತದರ ಯಶಸ್ಸಿನ ಸುತ್ತ…

******

ಭೈರಪ್ಪನವರ ಬರವಣಿಗೆಯ ಬೆಲೆ ಕಟ್ಟಿದ ಯು.ಆರ್ ಅನಂತಮೂರ್ತಿಯವರು ಭೈರಪ್ಪ ರಂಜಿಸಿ ವಂಚಿಸುವ ಲೇಖಕ ಎಂದು ಸಾಕ್ಷಿಸಮೇತ ತೋರಿ ಹೋಗಿದ್ದರು. ಈ ವ್ಯಾಖ್ಯಾನ ಕಾಂತಾರ ಎಂಬ ಕಂತೆ ಪುರಾಣದ ಸಿನಿಮಾ ನೋಡುವಾಗ ಜ್ಞಾಪಕಕ್ಕೆ ಬಂತಲ್ಲಾ. ಕಾಂತಾರದ ನಿರ್ದೇಶಕ ಜಗ್ಗೇಶ್ ಚೇಷ್ಟೆಗಳನ್ನು ಅನುಕರಿಸಿ ಮೇಲೆ ಬಂದವರು. ಹಾಗೆಯೇ ಜನ ಹಗುರವಾಗಿ ನಗುವ ದೃಶ್ಯಗಳನ್ನು ತೆಗೆದು ತೋರಿದವರು. ಹೀಗೆ ತೋರುತ್ತ ಬಂದ ಆತನೊಳಗೆ ಅಮಾನುಷತೆ ಅಡಗಿರುವುದು ಅವರಿಗೇ ಗೊತ್ತಿಲ್ಲ. ಉಬ್ಬುಹಲ್ಲಿರುವ ಪಾತ್ರವೊಂದನ್ನು ಸೃಷ್ಠಿ ಮಾಡಿ ಆಡಿಕೊಳ್ಳುವ ಈತ ಜನರನ್ನು ನಗಿಸುವ ಬರದಲ್ಲಿ ಎಂತಹ ಹೀನ ಕೆಲಸ ಮಾಡುತ್ತೇನೆಂದು ಗ್ರಹಿಸಿದಂತೆ ಕಾಣುವುದಿಲ್ಲ. ಹಾಗೇ ನೋಡಿದರೆ ದಕ್ಷಿಣ ಕನ್ನಡದ ಯಕ್ಷಗಾನ ಯಕ್ಕುಟ್ಟಿ ಹೋಗಿ ಬಹಳ ದಿನಗಳಾಗಿವೆ. ಕಪ್ಪು ಬಣ್ಣ ಬಳಿದ ಪಾತ್ರ ತಂದು ನಿಲ್ಲಿಸಿಕೊಂಡು ಆಡಿಕೊಳ್ಳುವುದು, ಸಾಬರನ್ನ ಅಣಕಿಸುವುದು ಅದ್ಭುತ ಕಲೆಯಾದ ಯಕ್ಷಗಾನದೊಳಕ್ಕೆ ತಂದು ಬಹಳ ದಿನಗಳಾಗಿವೆ. ಮನುಷ್ಯನ ಆಕಾರವನ್ನ ಆಡಿಕೊಳ್ಳುವುದು, ಪುರೋಹಿತರ ಶ್ರೇಷ್ಠತೆ ಮೆರೆಯುವುದು ಇವೆಲ್ಲಾ ಸಾಮಾನ್ಯ ಸಂಗತಿಗಳಾಗಿವೆ. ಇಂತಹ ಸಮಯದಲ್ಲಿ ಭೂತ, ಕೋಲ, ಪಂಜುರ್ಲಿ ಎಂದುಕೊಂಡು ಮನಸ್ಸಿನ ವಿಕಾರಗಳನ್ನು ಮೆರೆಸುತ್ತ, ಅವುಗಳನ್ನು ದೈವೀಕರಿಸಿ ನಿಂದಿಸಿದವರು ರಕ್ತ ಕಾರಿಕೊಂಡು ಸಾಯುತ್ತಾರೆಂದು ನಂಬಿಸಲು ಹೊರಟಿರುವುದು ಒಂದು ಸಮೂಹದ ತಲೆ ಯಕ್ಕುಟ್ಟಿ ಹೋಗಿರುವುದರ ಸೂಚನೆಯಂತಲ್ಲಾ, ಥೂತ್ತೇರಿ.

******

ಗುಜರಾತಿನ ಮೋರ್ಬಿ ಜಿಲ್ಲೆಯ ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ತೂಗು ಸೇತುವೆ ಕುಸಿದುಬಿದ್ದು 135 ಜನ ಸಾವಿಗೀಡಾಗಿದ್ದಾರೆ. ಸೇತುವೆ ಕುಸಿಯುವುದು, ಜನರ ಆಕ್ರಂದನ, ಅಸಹಾಯಕರಾಗಿ ಅಸುನೀಗುವುದು ಇವೆಲ್ಲಾ ಬದುಕಿರುವವರನ್ನ ಕಾಡುವ ಸಂಗತಿಗಳು. ಈ ಸೇತುವೆ ದುರಸ್ತಿಗೊಂಡು ಉದ್ಘಾಟನೆಗೊಂಡ ನಾಲ್ಕೇ ದಿನದಲ್ಲಿ ಕುಸಿದುಬಿದ್ದು 135 ಜನ ಸತ್ತಿದ್ದಾರೆ. ಜನ ಸತ್ತಿದ್ದಕ್ಕೆ ಮೋದಿ ಸರ್ಕಾರ ಇಲ್ಲಿಯವರೆಗೆ ತಮ್ಮ ತವರು ರಾಜ್ಯದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿಲ್ಲ. ಕ್ರಮವಂತೂ ದೂರವೇ ಹೋಯ್ತು. ಹಿಂದೆ ಅವರ ಮುಖ್ಯಮಂತ್ರಿ ಅಧಿಕಾರಾವಧಿಯಲ್ಲಿ ಗುಜರಾತಿನಲ್ಲಿ ಮೂರ್ನಾಕು ದಿನದಲ್ಲಿ ಮೂರು ಸಾವಿರ ಜನ ಸತ್ತಾಗ ಅದು ಅವರನ್ನು ಕಾಡಲಿಲ್ಲ. ರೈತ ಹೋರಾಟದ ಸಮಯದಲ್ಲಿ ದೆಹಲಿ ಗಡಿಯಲ್ಲಿ ಏಳುನೂರ ಐವತ್ತು ಜನ ರೈತರು ಅಸುನೀಗಿದಾಗ ಮಾತನಾಡಲಿಲ್ಲ. ಪ್ರಧಾನಿಯವರ ಈ ವಿಲಕ್ಷಣ ನಡೆಗೆ ಏನು ಹೇಳುವುದೆಂಬುದೇ ಸಮಸ್ಯೆಯಾಗಿದೆಯಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...