Homeಅಂಕಣಗಳುರಂಜಿಸಿ ವಂಚಿಸುವ ಕಾಂತಾರ

ರಂಜಿಸಿ ವಂಚಿಸುವ ಕಾಂತಾರ

- Advertisement -
- Advertisement -

ಚಂಡಮಾರುತ, ಭೂಕಂಪ, ಪ್ರವಾಹ ಇತ್ಯಾದಿ ನೈಸರ್ಗಿಕ ದುರಂತಗಳಂತೆಯೇ ಬಿಜೆಪಿ ಸರಕಾರದಲ್ಲಿ ನಡೆದ ನೋಟುಬ್ಯಾನು, ಜಿಎಸ್‌ಟಿ, ಕೃಷಿಕಾಯ್ದೆಗಳಿಂದಾಗಿರಬಹುದಾದ ಅನಾಹುತಗಳನ್ನು ದಾಖಲಿಸುವ ಬದಲು, ಮಾಧ್ಯಮದವರು ಚೀನಾದಲ್ಲಿ ಏನಾಗಿದೆ ಆಫ್ಘಾನಿನ ಕತೆಯೇನು, ಪಾಕಿಸ್ತಾನ ಉಳಿಯುವುದೆ, ಶ್ರೀಲಂಕಾದಲ್ಲಿ ಅರಮನೆಗೇ ನುಗ್ಗಿ ಆಹಾರ ಹೊತ್ತುಕೊಂಡು ಹೋಗುತ್ತಿದ್ದಾರೆ ಎಂಬಿತ್ಯಾದಿಯಾಗಿ ಹುಡುಕುತ್ತಾ ಕುಳಿತಿರಬೇಕಾದರೆ ಹಸಿವಿನ ವಿಷಯದಲ್ಲಿ ನಮ್ಮ ಸುತ್ತಮುತ್ತಲ ದೇಶಗಳನ್ನ ಭಾರತ ಹಿಂದಿಕ್ಕಿದೆಯಂತಲ್ಲಾ. ಈ ಬಗ್ಗೆ ಮಾಧ್ಯಮದವರನ್ನ ಕೇಳಿದರೆ, ಅದೆಲ್ಲಾ ಕಾಂಗ್ರೆಸ್ಸಿಗರು ಹರಡುತ್ತಿರುವ ಸುಳ್ಳು ಸುದ್ದಿ; ಈಗ ನಮ್ಮನ್ನೇ ನೋಡಿ, ದಿನಬೆಳಗಾಯ್ತೆಂದರೆ ಯಾರಾದರೂ ಕಾಫಿ, ತಿಂಡಿ ಕೊಡಿಸುವವರು ಸಿಗುತ್ತಾರ ಎಂದು ಹುಡುಕುತ್ತಿದ್ದೆವು. ಮಧ್ಯಾಹ್ನದ ಊಟಕ್ಕೂ ಅದೇ ಸ್ಥಿತಿಯಿತ್ತು. ಸಾಯಂಕಾಲಕ್ಕೆ ಯಾರಾದರೂ ಪಾರ್ಟಿಗೆ ಕರೆಯುತ್ತಿದ್ದರು. ಈಗ ನಾವೇ ಕರೆಯುತ್ತೇವೆ. ಅಲ್ಲದೆ ಅವರವರ ಮನೆಯವರೆಗೂ ಬಿಟ್ಟುಕೊಡುವ ವಾಹನವೂ ನಮ್ಮಲ್ಲಿದೆ. ನಾವೇ ಹೀಗೆ ಸುಧಾರಿಸುತ್ತಿರಬೇಕಾದರೆ, ಇನ್ನು ನಮ್ಮ ದೇಶದ ಜನ ಹಸಿದು ಮಲಗುತ್ತಾರೆಂಬುದು ಹಸಿಸುಳ್ಳು ಎಂದು ಮಾರಿಕೊಂಡ ಮಾಧ್ಯಮದವರು ಬೊಮ್ಮಾಯಿ ಕೊಟ್ಟ ಗಿಫ್ಟನ್ನು ಜೋಪಾನವಾಗಿ ಮನೆಗೆ ತೆಗೆದುಕೊಂಡು ಹೋದರಂತಲ್ಲಾ, ಥೂತ್ತೇರಿ.

******

ಒಂದಲ್ಲಾ ಒಂದು ದಿನ ಶುದ್ಧ ಸಾಹಿತ್ಯದ ಕಡೆಗೆ ಸಾಹಿತಿ ತಿರುಗಲೇಬೇಕೆಂದು ನಮ್ಮ ಸಂತೆಶಿವರದ ಭೈರಪ್ಪ ಹಾಸನಕ್ಕೆ ಬಂದು ಭೈರಿಗೆ ಹಿಡಿದು ಹೋಗಿದ್ದಾರಲ್ಲಾ! ಸದರಿ ಸಾಹಿತಿಗೆ ಈ ಜ್ಞಾನೋದಯ ತಡವಾಗಿ ಸಂಭವಿಸಿದೆ. ಭೈರಪ್ಪನವರು ಧರ್ಮಶ್ರೀ, ದಾಟು, ಆವರಣ ಇತ್ಯಾದಿ ಶುದ್ಧವಲ್ಲದ ಸಾಹಿತ್ಯ ರಚಿಸಿದ ಮೇಲೆ ಕಡೆಗೂ ಶುದ್ಧ ಸಾಹಿತ್ಯದ ಬಗ್ಗೆ ಹಲುಬಿದ್ದಾರೆ. ಪರಂಪರೆಯ ಹಾಳುಗುಡಿಯಲ್ಲೇ ಕುಳಿತು ರಿಮ್ಮುಗಟ್ಟಲೆ ಬರೆದ ಭೈರಪ್ಪನವರಿಗೆ ಆಧುನಿಕತೆ ಚಿಂತನೆಯ ಸಾಹಿತಿಗಳನ್ನು ಕಂಡರಾಗುವುದಿಲ್ಲ. ಅವರೆಲ್ಲಾ ವಿಜೃಂಭಿಸುತ್ತಿದ್ದ ಕಾಲದಲ್ಲಿ ಕೀಳರಿಮೆಯಿಂದ ಹಿಂದೂ ಧರ್ಮದ ಕಗ್ಗ ಹೊಸೆಯುತ್ತಿದ್ದ ಭೈರಣ್ಣ ಅವರೆಲ್ಲಾ ಕಾಲವಾದ ನಂತರ ಅವರ ಸಾಹಿತ್ಯವನ್ನು ಅಣಕಿಸುತ್ತಿದ್ದಾರೆ. ಸುದೈವದಿಂದ ಅವರೆಲ್ಲಾ ಭೈರಪ್ಪನ ಸಾಹಿತ್ಯ ಅಂದರೆ ಏನು ಎಂದು ದಾಖಲಿಸಿ ಹೋಗಿದ್ದಾರೆ. ಅವು ನೆನಪಿಗೆ ಬಂದಾಗಲೆಲ್ಲಾ ಆಧುನಿಕ ಸಾಹಿತಿಗಳು ಮತ್ತು ಕವಿಗಳನ್ನ ಟೀಕಿಸುತ್ತಲೇ ಬರುತ್ತಿದ್ದಾರಲ್ಲಾ, ಥೂತ್ತೇರಿ.

ಇದನ್ನೂ ಓದಿ: ಸಿನಿಮಾ, ಮಿಥ್ ಮತ್ತು ರಾಜಕೀಯ; ಕಾಂತಾರ ಮತ್ತದರ ಯಶಸ್ಸಿನ ಸುತ್ತ…

******

ಭೈರಪ್ಪನವರ ಬರವಣಿಗೆಯ ಬೆಲೆ ಕಟ್ಟಿದ ಯು.ಆರ್ ಅನಂತಮೂರ್ತಿಯವರು ಭೈರಪ್ಪ ರಂಜಿಸಿ ವಂಚಿಸುವ ಲೇಖಕ ಎಂದು ಸಾಕ್ಷಿಸಮೇತ ತೋರಿ ಹೋಗಿದ್ದರು. ಈ ವ್ಯಾಖ್ಯಾನ ಕಾಂತಾರ ಎಂಬ ಕಂತೆ ಪುರಾಣದ ಸಿನಿಮಾ ನೋಡುವಾಗ ಜ್ಞಾಪಕಕ್ಕೆ ಬಂತಲ್ಲಾ. ಕಾಂತಾರದ ನಿರ್ದೇಶಕ ಜಗ್ಗೇಶ್ ಚೇಷ್ಟೆಗಳನ್ನು ಅನುಕರಿಸಿ ಮೇಲೆ ಬಂದವರು. ಹಾಗೆಯೇ ಜನ ಹಗುರವಾಗಿ ನಗುವ ದೃಶ್ಯಗಳನ್ನು ತೆಗೆದು ತೋರಿದವರು. ಹೀಗೆ ತೋರುತ್ತ ಬಂದ ಆತನೊಳಗೆ ಅಮಾನುಷತೆ ಅಡಗಿರುವುದು ಅವರಿಗೇ ಗೊತ್ತಿಲ್ಲ. ಉಬ್ಬುಹಲ್ಲಿರುವ ಪಾತ್ರವೊಂದನ್ನು ಸೃಷ್ಠಿ ಮಾಡಿ ಆಡಿಕೊಳ್ಳುವ ಈತ ಜನರನ್ನು ನಗಿಸುವ ಬರದಲ್ಲಿ ಎಂತಹ ಹೀನ ಕೆಲಸ ಮಾಡುತ್ತೇನೆಂದು ಗ್ರಹಿಸಿದಂತೆ ಕಾಣುವುದಿಲ್ಲ. ಹಾಗೇ ನೋಡಿದರೆ ದಕ್ಷಿಣ ಕನ್ನಡದ ಯಕ್ಷಗಾನ ಯಕ್ಕುಟ್ಟಿ ಹೋಗಿ ಬಹಳ ದಿನಗಳಾಗಿವೆ. ಕಪ್ಪು ಬಣ್ಣ ಬಳಿದ ಪಾತ್ರ ತಂದು ನಿಲ್ಲಿಸಿಕೊಂಡು ಆಡಿಕೊಳ್ಳುವುದು, ಸಾಬರನ್ನ ಅಣಕಿಸುವುದು ಅದ್ಭುತ ಕಲೆಯಾದ ಯಕ್ಷಗಾನದೊಳಕ್ಕೆ ತಂದು ಬಹಳ ದಿನಗಳಾಗಿವೆ. ಮನುಷ್ಯನ ಆಕಾರವನ್ನ ಆಡಿಕೊಳ್ಳುವುದು, ಪುರೋಹಿತರ ಶ್ರೇಷ್ಠತೆ ಮೆರೆಯುವುದು ಇವೆಲ್ಲಾ ಸಾಮಾನ್ಯ ಸಂಗತಿಗಳಾಗಿವೆ. ಇಂತಹ ಸಮಯದಲ್ಲಿ ಭೂತ, ಕೋಲ, ಪಂಜುರ್ಲಿ ಎಂದುಕೊಂಡು ಮನಸ್ಸಿನ ವಿಕಾರಗಳನ್ನು ಮೆರೆಸುತ್ತ, ಅವುಗಳನ್ನು ದೈವೀಕರಿಸಿ ನಿಂದಿಸಿದವರು ರಕ್ತ ಕಾರಿಕೊಂಡು ಸಾಯುತ್ತಾರೆಂದು ನಂಬಿಸಲು ಹೊರಟಿರುವುದು ಒಂದು ಸಮೂಹದ ತಲೆ ಯಕ್ಕುಟ್ಟಿ ಹೋಗಿರುವುದರ ಸೂಚನೆಯಂತಲ್ಲಾ, ಥೂತ್ತೇರಿ.

******

ಗುಜರಾತಿನ ಮೋರ್ಬಿ ಜಿಲ್ಲೆಯ ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ತೂಗು ಸೇತುವೆ ಕುಸಿದುಬಿದ್ದು 135 ಜನ ಸಾವಿಗೀಡಾಗಿದ್ದಾರೆ. ಸೇತುವೆ ಕುಸಿಯುವುದು, ಜನರ ಆಕ್ರಂದನ, ಅಸಹಾಯಕರಾಗಿ ಅಸುನೀಗುವುದು ಇವೆಲ್ಲಾ ಬದುಕಿರುವವರನ್ನ ಕಾಡುವ ಸಂಗತಿಗಳು. ಈ ಸೇತುವೆ ದುರಸ್ತಿಗೊಂಡು ಉದ್ಘಾಟನೆಗೊಂಡ ನಾಲ್ಕೇ ದಿನದಲ್ಲಿ ಕುಸಿದುಬಿದ್ದು 135 ಜನ ಸತ್ತಿದ್ದಾರೆ. ಜನ ಸತ್ತಿದ್ದಕ್ಕೆ ಮೋದಿ ಸರ್ಕಾರ ಇಲ್ಲಿಯವರೆಗೆ ತಮ್ಮ ತವರು ರಾಜ್ಯದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿಲ್ಲ. ಕ್ರಮವಂತೂ ದೂರವೇ ಹೋಯ್ತು. ಹಿಂದೆ ಅವರ ಮುಖ್ಯಮಂತ್ರಿ ಅಧಿಕಾರಾವಧಿಯಲ್ಲಿ ಗುಜರಾತಿನಲ್ಲಿ ಮೂರ್ನಾಕು ದಿನದಲ್ಲಿ ಮೂರು ಸಾವಿರ ಜನ ಸತ್ತಾಗ ಅದು ಅವರನ್ನು ಕಾಡಲಿಲ್ಲ. ರೈತ ಹೋರಾಟದ ಸಮಯದಲ್ಲಿ ದೆಹಲಿ ಗಡಿಯಲ್ಲಿ ಏಳುನೂರ ಐವತ್ತು ಜನ ರೈತರು ಅಸುನೀಗಿದಾಗ ಮಾತನಾಡಲಿಲ್ಲ. ಪ್ರಧಾನಿಯವರ ಈ ವಿಲಕ್ಷಣ ನಡೆಗೆ ಏನು ಹೇಳುವುದೆಂಬುದೇ ಸಮಸ್ಯೆಯಾಗಿದೆಯಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...