Homeಮುಖಪುಟಕನ್ವರ್ ಯಾತ್ರೆ 2024: ಹೋಟೆಲ್ ಹೊರಗೆ ಹೆಸರು-ಸಂಪರ್ಕ ಸಂಖ್ಯೆ ಪ್ರದರ್ಶಿಸುವಂತೆ ಉಜ್ಜಯಿನಿ ಮುನ್ಸಿಪಲ್ ಕಾರ್ಪೊರೇಶನ್ ನಿರ್ದೇಶನ

ಕನ್ವರ್ ಯಾತ್ರೆ 2024: ಹೋಟೆಲ್ ಹೊರಗೆ ಹೆಸರು-ಸಂಪರ್ಕ ಸಂಖ್ಯೆ ಪ್ರದರ್ಶಿಸುವಂತೆ ಉಜ್ಜಯಿನಿ ಮುನ್ಸಿಪಲ್ ಕಾರ್ಪೊರೇಶನ್ ನಿರ್ದೇಶನ

- Advertisement -
- Advertisement -

ಭಾರತೀಯ ಜನತಾ ಪಕ್ಷ (ಬಿಜೆಪಿ) ಆಡಳಿತದ ಉಜ್ಜಯಿನಿ ಮುನ್ಸಿಪಲ್ ಕಾರ್ಪೊರೇಶನ್ ಆಡಳಿತವು, ಕನ್ವರ್ ಯಾತ್ರಾ 2024 ಮಾರ್ಗದಲ್ಲಿನ ಅಂಗಡಿ ಮಾಲೀಕರಿಗೆ ತಮ್ಮ ಹೆಸರು ಮತ್ತು ಮೊಬೈಲ್ ಸಂಖ್ಯೆಗಳನ್ನು ಪುರಾತನ ನಗರದಲ್ಲಿರುವ ತಮ್ಮ ಸಂಸ್ಥೆಗಳ ಹೊರಗೆ ಪ್ರದರ್ಶಿಸುವಂತೆ ಸೂಚಿಸಿದೆ. ಉತ್ತರ ಪ್ರದೇಶದ ಬಿಜೆಪಿ ಸರ್ಕಾರವು ಇದೇ ರೀತಿಯ ಆದೇಶ ನೀಡಿದ ನಂತರ ಈ ನಿರ್ದೇಶನ ಬಂದಿದೆ.

ಕಾರ್ಪೊರೇಷನ್ ಆದೇಶವನ್ನು ಮೊದಲ ಬಾರಿಗೆ ಉಲ್ಲಂಘಿಸಿದರೆ  ₹2,000 ದಂಡ ಮತ್ತು ಎರಡನೇ ಬಾರಿಗೆ ಈ ಆದೇಶವನ್ನು ಉಲ್ಲಂಘಿಸಿದರೆ ₹5,000 ದಂಡ ಪಾವತಿಸಬೇಕಾಗುತ್ತದೆ ಎಂದು ಉಜ್ಜಯಿನಿ ಮೇಯರ್ ಮುಖೇಶ್ ತತ್ವಾಲ್ ಶನಿವಾರ (ಜುಲೈ 20) ತಿಳಿಸಿದ್ದಾರೆ. ಈ ಆದೇಶವು ಸುರಕ್ಷತೆ ಮತ್ತು ಪಾರದರ್ಶಕತೆಯನ್ನು ಖಾತ್ರಿಪಡಿಸುವ ಗುರಿಯನ್ನು ಹೊಂದಿದೆ ಮತ್ತು ಮುಸ್ಲಿಂ ಅಂಗಡಿ ಮಾಲೀಕರನ್ನು ಗುರಿಯಾಗಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಮೇಯರ್ ಹೇಳಿದ್ದಾರೆ.

ಸೆಪ್ಟೆಂಬರ್ 26, 2002 ರಂದು ಅಂಗಡಿಯವರು ತಮ್ಮ ಹೆಸರನ್ನು ಪ್ರದರ್ಶಿಸಲು ಉಜ್ಜಯಿನಿಯ ಮೇಯರ್-ಇನ್-ಕೌನ್ಸಿಲ್ ಪ್ರಸ್ತಾವನೆಯನ್ನು ಅನುಮೋದಿಸಿದ್ದಾರೆ, ನಂತರ, ಕಾರ್ಪೊರೇಷನ್ ಹೌಸ್ ಅದನ್ನು ಆಕ್ಷೇಪಣೆಗಳು ಮತ್ತು ಔಪಚಾರಿಕತೆಗಳಿಗಾಗಿ ರಾಜ್ಯ ಸರ್ಕಾರಕ್ಕೆ ಕಳುಹಿಸಿದ್ದಾರೆ ಎಂದು ತತ್ವಾಲ್ ಹೇಳಿದರು.

“ಎಲ್ಲಾ ವಿಧಿವಿಧಾನಗಳು ಈಗಾಗಲೇ ಪೂರ್ಣಗೊಂಡಿವೆ. ಆರಂಭದಲ್ಲಿ ನಾಮಫಲಕಗಳು ಒಂದೇ ಗಾತ್ರ ಮತ್ತು ಬಣ್ಣದಲ್ಲಿ ಇರಬೇಕಾಗಿದ್ದರಿಂದ ಅನುಷ್ಠಾನವು ವಿಳಂಬವಾಯಿತು. ಈಗ ನಾವು ಈ ನಿಯಮಗಳನ್ನು ಸಡಿಲಿಸಿದ್ದೇವೆ. ಅಂಗಡಿಕಾರರ ಹೆಸರುಗಳು ಮತ್ತು ಮೊಬೈಲ್ ಸಂಖ್ಯೆಗಳನ್ನು ಪ್ರದರ್ಶಿಸಿದರೆ ಸಾಕು” ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ಕ್ರಮವು ‘ಮಧ್ಯಪ್ರದೇಶ ಶಾಪ್ ಎಸ್ಟಾಬ್ಲಿಷ್‌ಮೆಂಟ್ ಆಕ್ಟ್ ಅಥವಾ ಗುಮಾಸ್ತಾ ಪರವಾನಗಿಗೆ’ಮಸಂಬಂಧಿಸಿದೆ ಎನ್ನಲಾಗಿದ್ದು, ಇದು ಗ್ರಾಹಕರ ಸುರಕ್ಷತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಅವರು ಒತ್ತಿ ಹೇಳಿದರು.

“ಉಜ್ಜಯಿನಿ ಧಾರ್ಮಿಕ ಮತ್ತು ಪವಿತ್ರ ನಗರವಾಗಿದೆ. ಜನರು ಧಾರ್ಮಿಕ ಆಸ್ಥೆ (ನಂಬಿಕೆ)ಯೊಂದಿಗೆ ಇಲ್ಲಿಗೆ ಬರುತ್ತಾರೆ. ಅವರು ಯಾರ ಸೇವೆಯನ್ನು ಪಡೆಯುತ್ತಿದ್ದಾರೆಂದು ಅವರು ತಿಳಿದುಕೊಳ್ಳುವ ಹಕ್ಕನ್ನು ಹೊಂದಿರುತ್ತಾರೆ. ಗ್ರಾಹಕರು ಅತೃಪ್ತರಾಗಿದ್ದರೆ ಅಥವಾ ಮೋಸ ಹೋದರೆ, ಪರಿಹಾರ ಪಡೆಯಲು ಅವರು ಅಂಗಡಿಯ ಮಾಲೀಕರ ವಿವರಗಳನ್ನು ತಿಳಿದುಕೊಳ್ಳುವುದು ಸಹಾಯ ಮಾಡುತ್ತದೆ” ಎಂದು ಮೇಯರ್ ಹೇಳಿದರು.

ಕುಂಭಮೇಳ

ಉಜ್ಜಯಿನಿಯು 2028 ರಲ್ಲಿ ಸಿಂಹಸ್ಥ (ಕುಂಭ) ಮೇಳವನ್ನು ಆಯೋಜಿಸಲಿದೆ, ಇದು ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಮಹತ್ವದ ಧಾರ್ಮಿಕ ಜಾತ್ರೆಯಾಗಿದೆ. ಈ ಕ್ರಮವು ಉತ್ತರ ಪ್ರದೇಶದಲ್ಲಿ ಇತ್ತೀಚಿನ ನಿರ್ದೇಶನವನ್ನು ಪ್ರತಿಬಿಂಬಿಸುತ್ತದೆ. ಅಲ್ಲಿ ಕನ್ವರ್ ಯಾತ್ರಾ ಮಾರ್ಗದಲ್ಲಿರುವ ಎಲ್ಲಾ ತಿನಿಸುಗಳ ಮಾರಾಟಗಾರರ ಮಾಲೀಕರ ಹೆಸರನ್ನು ಪ್ರದರ್ಶಿಸಲು ಕೇಳಲಾಯಿತು.

ಉತ್ತರ ಪ್ರದೇಶ ಸರ್ಕಾರವು ಶುಕ್ರವಾರ (ಜುಲೈ 19) ರಾಜ್ಯಾದ್ಯಂತ ಈ ಆದೇಶವನ್ನು ವಿಸ್ತರಿಸಿದೆ. ಆದರೆ, ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ತಮ್ಮ ರಾಜ್ಯದಲ್ಲಿ ಈಗಾಗಲೇ ಇದೇ ರೀತಿಯ ಸೂಚನೆಗಳು ಜಾರಿಯಲ್ಲಿವೆ ಎಂದು ಹೇಳಿದರು. ಈ ಆದೇಶವು ವಿರೋಧ ಪಕ್ಷಗಳು ಮತ್ತು ಆಡಳಿತ ಮೈತ್ರಿಕೂಟದ ಕೆಲವು ಸದಸ್ಯರಿಂದ ಟೀಕೆಗಳನ್ನು ಎದುರಿಸಿದೆ, ಇದು ಮುಸ್ಲಿಂ ವ್ಯಾಪಾರಿಗಳನ್ನು ಗುರಿಯಾಗಿಸುತ್ತದೆ ಎಂದು ವಾದಿಸುತ್ತಾರೆ.

ಇದನ್ನೂ ಓದಿ; ಮೂಡಾ ಹಗರಣ ಆರೋಪ : ಸಿಎಂ ಸಿದ್ದರಾಮಯ್ಯ ಸೇರಿ ಆರು ಮಂದಿ ವಿರುದ್ಧ ಲೋಕಾಯುಕ್ತಕ್ಕೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...