Homeಮುಖಪುಟಕನ್ವರ್ ಯಾತ್ರೆ 2024: ಹೋಟೆಲ್ ಹೊರಗೆ ಹೆಸರು-ಸಂಪರ್ಕ ಸಂಖ್ಯೆ ಪ್ರದರ್ಶಿಸುವಂತೆ ಉಜ್ಜಯಿನಿ ಮುನ್ಸಿಪಲ್ ಕಾರ್ಪೊರೇಶನ್ ನಿರ್ದೇಶನ

ಕನ್ವರ್ ಯಾತ್ರೆ 2024: ಹೋಟೆಲ್ ಹೊರಗೆ ಹೆಸರು-ಸಂಪರ್ಕ ಸಂಖ್ಯೆ ಪ್ರದರ್ಶಿಸುವಂತೆ ಉಜ್ಜಯಿನಿ ಮುನ್ಸಿಪಲ್ ಕಾರ್ಪೊರೇಶನ್ ನಿರ್ದೇಶನ

- Advertisement -
- Advertisement -

ಭಾರತೀಯ ಜನತಾ ಪಕ್ಷ (ಬಿಜೆಪಿ) ಆಡಳಿತದ ಉಜ್ಜಯಿನಿ ಮುನ್ಸಿಪಲ್ ಕಾರ್ಪೊರೇಶನ್ ಆಡಳಿತವು, ಕನ್ವರ್ ಯಾತ್ರಾ 2024 ಮಾರ್ಗದಲ್ಲಿನ ಅಂಗಡಿ ಮಾಲೀಕರಿಗೆ ತಮ್ಮ ಹೆಸರು ಮತ್ತು ಮೊಬೈಲ್ ಸಂಖ್ಯೆಗಳನ್ನು ಪುರಾತನ ನಗರದಲ್ಲಿರುವ ತಮ್ಮ ಸಂಸ್ಥೆಗಳ ಹೊರಗೆ ಪ್ರದರ್ಶಿಸುವಂತೆ ಸೂಚಿಸಿದೆ. ಉತ್ತರ ಪ್ರದೇಶದ ಬಿಜೆಪಿ ಸರ್ಕಾರವು ಇದೇ ರೀತಿಯ ಆದೇಶ ನೀಡಿದ ನಂತರ ಈ ನಿರ್ದೇಶನ ಬಂದಿದೆ.

ಕಾರ್ಪೊರೇಷನ್ ಆದೇಶವನ್ನು ಮೊದಲ ಬಾರಿಗೆ ಉಲ್ಲಂಘಿಸಿದರೆ  ₹2,000 ದಂಡ ಮತ್ತು ಎರಡನೇ ಬಾರಿಗೆ ಈ ಆದೇಶವನ್ನು ಉಲ್ಲಂಘಿಸಿದರೆ ₹5,000 ದಂಡ ಪಾವತಿಸಬೇಕಾಗುತ್ತದೆ ಎಂದು ಉಜ್ಜಯಿನಿ ಮೇಯರ್ ಮುಖೇಶ್ ತತ್ವಾಲ್ ಶನಿವಾರ (ಜುಲೈ 20) ತಿಳಿಸಿದ್ದಾರೆ. ಈ ಆದೇಶವು ಸುರಕ್ಷತೆ ಮತ್ತು ಪಾರದರ್ಶಕತೆಯನ್ನು ಖಾತ್ರಿಪಡಿಸುವ ಗುರಿಯನ್ನು ಹೊಂದಿದೆ ಮತ್ತು ಮುಸ್ಲಿಂ ಅಂಗಡಿ ಮಾಲೀಕರನ್ನು ಗುರಿಯಾಗಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಮೇಯರ್ ಹೇಳಿದ್ದಾರೆ.

ಸೆಪ್ಟೆಂಬರ್ 26, 2002 ರಂದು ಅಂಗಡಿಯವರು ತಮ್ಮ ಹೆಸರನ್ನು ಪ್ರದರ್ಶಿಸಲು ಉಜ್ಜಯಿನಿಯ ಮೇಯರ್-ಇನ್-ಕೌನ್ಸಿಲ್ ಪ್ರಸ್ತಾವನೆಯನ್ನು ಅನುಮೋದಿಸಿದ್ದಾರೆ, ನಂತರ, ಕಾರ್ಪೊರೇಷನ್ ಹೌಸ್ ಅದನ್ನು ಆಕ್ಷೇಪಣೆಗಳು ಮತ್ತು ಔಪಚಾರಿಕತೆಗಳಿಗಾಗಿ ರಾಜ್ಯ ಸರ್ಕಾರಕ್ಕೆ ಕಳುಹಿಸಿದ್ದಾರೆ ಎಂದು ತತ್ವಾಲ್ ಹೇಳಿದರು.

“ಎಲ್ಲಾ ವಿಧಿವಿಧಾನಗಳು ಈಗಾಗಲೇ ಪೂರ್ಣಗೊಂಡಿವೆ. ಆರಂಭದಲ್ಲಿ ನಾಮಫಲಕಗಳು ಒಂದೇ ಗಾತ್ರ ಮತ್ತು ಬಣ್ಣದಲ್ಲಿ ಇರಬೇಕಾಗಿದ್ದರಿಂದ ಅನುಷ್ಠಾನವು ವಿಳಂಬವಾಯಿತು. ಈಗ ನಾವು ಈ ನಿಯಮಗಳನ್ನು ಸಡಿಲಿಸಿದ್ದೇವೆ. ಅಂಗಡಿಕಾರರ ಹೆಸರುಗಳು ಮತ್ತು ಮೊಬೈಲ್ ಸಂಖ್ಯೆಗಳನ್ನು ಪ್ರದರ್ಶಿಸಿದರೆ ಸಾಕು” ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ಕ್ರಮವು ‘ಮಧ್ಯಪ್ರದೇಶ ಶಾಪ್ ಎಸ್ಟಾಬ್ಲಿಷ್‌ಮೆಂಟ್ ಆಕ್ಟ್ ಅಥವಾ ಗುಮಾಸ್ತಾ ಪರವಾನಗಿಗೆ’ಮಸಂಬಂಧಿಸಿದೆ ಎನ್ನಲಾಗಿದ್ದು, ಇದು ಗ್ರಾಹಕರ ಸುರಕ್ಷತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಅವರು ಒತ್ತಿ ಹೇಳಿದರು.

“ಉಜ್ಜಯಿನಿ ಧಾರ್ಮಿಕ ಮತ್ತು ಪವಿತ್ರ ನಗರವಾಗಿದೆ. ಜನರು ಧಾರ್ಮಿಕ ಆಸ್ಥೆ (ನಂಬಿಕೆ)ಯೊಂದಿಗೆ ಇಲ್ಲಿಗೆ ಬರುತ್ತಾರೆ. ಅವರು ಯಾರ ಸೇವೆಯನ್ನು ಪಡೆಯುತ್ತಿದ್ದಾರೆಂದು ಅವರು ತಿಳಿದುಕೊಳ್ಳುವ ಹಕ್ಕನ್ನು ಹೊಂದಿರುತ್ತಾರೆ. ಗ್ರಾಹಕರು ಅತೃಪ್ತರಾಗಿದ್ದರೆ ಅಥವಾ ಮೋಸ ಹೋದರೆ, ಪರಿಹಾರ ಪಡೆಯಲು ಅವರು ಅಂಗಡಿಯ ಮಾಲೀಕರ ವಿವರಗಳನ್ನು ತಿಳಿದುಕೊಳ್ಳುವುದು ಸಹಾಯ ಮಾಡುತ್ತದೆ” ಎಂದು ಮೇಯರ್ ಹೇಳಿದರು.

ಕುಂಭಮೇಳ

ಉಜ್ಜಯಿನಿಯು 2028 ರಲ್ಲಿ ಸಿಂಹಸ್ಥ (ಕುಂಭ) ಮೇಳವನ್ನು ಆಯೋಜಿಸಲಿದೆ, ಇದು ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಮಹತ್ವದ ಧಾರ್ಮಿಕ ಜಾತ್ರೆಯಾಗಿದೆ. ಈ ಕ್ರಮವು ಉತ್ತರ ಪ್ರದೇಶದಲ್ಲಿ ಇತ್ತೀಚಿನ ನಿರ್ದೇಶನವನ್ನು ಪ್ರತಿಬಿಂಬಿಸುತ್ತದೆ. ಅಲ್ಲಿ ಕನ್ವರ್ ಯಾತ್ರಾ ಮಾರ್ಗದಲ್ಲಿರುವ ಎಲ್ಲಾ ತಿನಿಸುಗಳ ಮಾರಾಟಗಾರರ ಮಾಲೀಕರ ಹೆಸರನ್ನು ಪ್ರದರ್ಶಿಸಲು ಕೇಳಲಾಯಿತು.

ಉತ್ತರ ಪ್ರದೇಶ ಸರ್ಕಾರವು ಶುಕ್ರವಾರ (ಜುಲೈ 19) ರಾಜ್ಯಾದ್ಯಂತ ಈ ಆದೇಶವನ್ನು ವಿಸ್ತರಿಸಿದೆ. ಆದರೆ, ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ತಮ್ಮ ರಾಜ್ಯದಲ್ಲಿ ಈಗಾಗಲೇ ಇದೇ ರೀತಿಯ ಸೂಚನೆಗಳು ಜಾರಿಯಲ್ಲಿವೆ ಎಂದು ಹೇಳಿದರು. ಈ ಆದೇಶವು ವಿರೋಧ ಪಕ್ಷಗಳು ಮತ್ತು ಆಡಳಿತ ಮೈತ್ರಿಕೂಟದ ಕೆಲವು ಸದಸ್ಯರಿಂದ ಟೀಕೆಗಳನ್ನು ಎದುರಿಸಿದೆ, ಇದು ಮುಸ್ಲಿಂ ವ್ಯಾಪಾರಿಗಳನ್ನು ಗುರಿಯಾಗಿಸುತ್ತದೆ ಎಂದು ವಾದಿಸುತ್ತಾರೆ.

ಇದನ್ನೂ ಓದಿ; ಮೂಡಾ ಹಗರಣ ಆರೋಪ : ಸಿಎಂ ಸಿದ್ದರಾಮಯ್ಯ ಸೇರಿ ಆರು ಮಂದಿ ವಿರುದ್ಧ ಲೋಕಾಯುಕ್ತಕ್ಕೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...