Homeಮುಖಪುಟಕನ್ವರ್ ಯಾತ್ರೆ 2024: ಹೋಟೆಲ್ ಹೊರಗೆ ಹೆಸರು-ಸಂಪರ್ಕ ಸಂಖ್ಯೆ ಪ್ರದರ್ಶಿಸುವಂತೆ ಉಜ್ಜಯಿನಿ ಮುನ್ಸಿಪಲ್ ಕಾರ್ಪೊರೇಶನ್ ನಿರ್ದೇಶನ

ಕನ್ವರ್ ಯಾತ್ರೆ 2024: ಹೋಟೆಲ್ ಹೊರಗೆ ಹೆಸರು-ಸಂಪರ್ಕ ಸಂಖ್ಯೆ ಪ್ರದರ್ಶಿಸುವಂತೆ ಉಜ್ಜಯಿನಿ ಮುನ್ಸಿಪಲ್ ಕಾರ್ಪೊರೇಶನ್ ನಿರ್ದೇಶನ

- Advertisement -
- Advertisement -

ಭಾರತೀಯ ಜನತಾ ಪಕ್ಷ (ಬಿಜೆಪಿ) ಆಡಳಿತದ ಉಜ್ಜಯಿನಿ ಮುನ್ಸಿಪಲ್ ಕಾರ್ಪೊರೇಶನ್ ಆಡಳಿತವು, ಕನ್ವರ್ ಯಾತ್ರಾ 2024 ಮಾರ್ಗದಲ್ಲಿನ ಅಂಗಡಿ ಮಾಲೀಕರಿಗೆ ತಮ್ಮ ಹೆಸರು ಮತ್ತು ಮೊಬೈಲ್ ಸಂಖ್ಯೆಗಳನ್ನು ಪುರಾತನ ನಗರದಲ್ಲಿರುವ ತಮ್ಮ ಸಂಸ್ಥೆಗಳ ಹೊರಗೆ ಪ್ರದರ್ಶಿಸುವಂತೆ ಸೂಚಿಸಿದೆ. ಉತ್ತರ ಪ್ರದೇಶದ ಬಿಜೆಪಿ ಸರ್ಕಾರವು ಇದೇ ರೀತಿಯ ಆದೇಶ ನೀಡಿದ ನಂತರ ಈ ನಿರ್ದೇಶನ ಬಂದಿದೆ.

ಕಾರ್ಪೊರೇಷನ್ ಆದೇಶವನ್ನು ಮೊದಲ ಬಾರಿಗೆ ಉಲ್ಲಂಘಿಸಿದರೆ  ₹2,000 ದಂಡ ಮತ್ತು ಎರಡನೇ ಬಾರಿಗೆ ಈ ಆದೇಶವನ್ನು ಉಲ್ಲಂಘಿಸಿದರೆ ₹5,000 ದಂಡ ಪಾವತಿಸಬೇಕಾಗುತ್ತದೆ ಎಂದು ಉಜ್ಜಯಿನಿ ಮೇಯರ್ ಮುಖೇಶ್ ತತ್ವಾಲ್ ಶನಿವಾರ (ಜುಲೈ 20) ತಿಳಿಸಿದ್ದಾರೆ. ಈ ಆದೇಶವು ಸುರಕ್ಷತೆ ಮತ್ತು ಪಾರದರ್ಶಕತೆಯನ್ನು ಖಾತ್ರಿಪಡಿಸುವ ಗುರಿಯನ್ನು ಹೊಂದಿದೆ ಮತ್ತು ಮುಸ್ಲಿಂ ಅಂಗಡಿ ಮಾಲೀಕರನ್ನು ಗುರಿಯಾಗಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಮೇಯರ್ ಹೇಳಿದ್ದಾರೆ.

ಸೆಪ್ಟೆಂಬರ್ 26, 2002 ರಂದು ಅಂಗಡಿಯವರು ತಮ್ಮ ಹೆಸರನ್ನು ಪ್ರದರ್ಶಿಸಲು ಉಜ್ಜಯಿನಿಯ ಮೇಯರ್-ಇನ್-ಕೌನ್ಸಿಲ್ ಪ್ರಸ್ತಾವನೆಯನ್ನು ಅನುಮೋದಿಸಿದ್ದಾರೆ, ನಂತರ, ಕಾರ್ಪೊರೇಷನ್ ಹೌಸ್ ಅದನ್ನು ಆಕ್ಷೇಪಣೆಗಳು ಮತ್ತು ಔಪಚಾರಿಕತೆಗಳಿಗಾಗಿ ರಾಜ್ಯ ಸರ್ಕಾರಕ್ಕೆ ಕಳುಹಿಸಿದ್ದಾರೆ ಎಂದು ತತ್ವಾಲ್ ಹೇಳಿದರು.

“ಎಲ್ಲಾ ವಿಧಿವಿಧಾನಗಳು ಈಗಾಗಲೇ ಪೂರ್ಣಗೊಂಡಿವೆ. ಆರಂಭದಲ್ಲಿ ನಾಮಫಲಕಗಳು ಒಂದೇ ಗಾತ್ರ ಮತ್ತು ಬಣ್ಣದಲ್ಲಿ ಇರಬೇಕಾಗಿದ್ದರಿಂದ ಅನುಷ್ಠಾನವು ವಿಳಂಬವಾಯಿತು. ಈಗ ನಾವು ಈ ನಿಯಮಗಳನ್ನು ಸಡಿಲಿಸಿದ್ದೇವೆ. ಅಂಗಡಿಕಾರರ ಹೆಸರುಗಳು ಮತ್ತು ಮೊಬೈಲ್ ಸಂಖ್ಯೆಗಳನ್ನು ಪ್ರದರ್ಶಿಸಿದರೆ ಸಾಕು” ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ಕ್ರಮವು ‘ಮಧ್ಯಪ್ರದೇಶ ಶಾಪ್ ಎಸ್ಟಾಬ್ಲಿಷ್‌ಮೆಂಟ್ ಆಕ್ಟ್ ಅಥವಾ ಗುಮಾಸ್ತಾ ಪರವಾನಗಿಗೆ’ಮಸಂಬಂಧಿಸಿದೆ ಎನ್ನಲಾಗಿದ್ದು, ಇದು ಗ್ರಾಹಕರ ಸುರಕ್ಷತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಅವರು ಒತ್ತಿ ಹೇಳಿದರು.

“ಉಜ್ಜಯಿನಿ ಧಾರ್ಮಿಕ ಮತ್ತು ಪವಿತ್ರ ನಗರವಾಗಿದೆ. ಜನರು ಧಾರ್ಮಿಕ ಆಸ್ಥೆ (ನಂಬಿಕೆ)ಯೊಂದಿಗೆ ಇಲ್ಲಿಗೆ ಬರುತ್ತಾರೆ. ಅವರು ಯಾರ ಸೇವೆಯನ್ನು ಪಡೆಯುತ್ತಿದ್ದಾರೆಂದು ಅವರು ತಿಳಿದುಕೊಳ್ಳುವ ಹಕ್ಕನ್ನು ಹೊಂದಿರುತ್ತಾರೆ. ಗ್ರಾಹಕರು ಅತೃಪ್ತರಾಗಿದ್ದರೆ ಅಥವಾ ಮೋಸ ಹೋದರೆ, ಪರಿಹಾರ ಪಡೆಯಲು ಅವರು ಅಂಗಡಿಯ ಮಾಲೀಕರ ವಿವರಗಳನ್ನು ತಿಳಿದುಕೊಳ್ಳುವುದು ಸಹಾಯ ಮಾಡುತ್ತದೆ” ಎಂದು ಮೇಯರ್ ಹೇಳಿದರು.

ಕುಂಭಮೇಳ

ಉಜ್ಜಯಿನಿಯು 2028 ರಲ್ಲಿ ಸಿಂಹಸ್ಥ (ಕುಂಭ) ಮೇಳವನ್ನು ಆಯೋಜಿಸಲಿದೆ, ಇದು ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಮಹತ್ವದ ಧಾರ್ಮಿಕ ಜಾತ್ರೆಯಾಗಿದೆ. ಈ ಕ್ರಮವು ಉತ್ತರ ಪ್ರದೇಶದಲ್ಲಿ ಇತ್ತೀಚಿನ ನಿರ್ದೇಶನವನ್ನು ಪ್ರತಿಬಿಂಬಿಸುತ್ತದೆ. ಅಲ್ಲಿ ಕನ್ವರ್ ಯಾತ್ರಾ ಮಾರ್ಗದಲ್ಲಿರುವ ಎಲ್ಲಾ ತಿನಿಸುಗಳ ಮಾರಾಟಗಾರರ ಮಾಲೀಕರ ಹೆಸರನ್ನು ಪ್ರದರ್ಶಿಸಲು ಕೇಳಲಾಯಿತು.

ಉತ್ತರ ಪ್ರದೇಶ ಸರ್ಕಾರವು ಶುಕ್ರವಾರ (ಜುಲೈ 19) ರಾಜ್ಯಾದ್ಯಂತ ಈ ಆದೇಶವನ್ನು ವಿಸ್ತರಿಸಿದೆ. ಆದರೆ, ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ತಮ್ಮ ರಾಜ್ಯದಲ್ಲಿ ಈಗಾಗಲೇ ಇದೇ ರೀತಿಯ ಸೂಚನೆಗಳು ಜಾರಿಯಲ್ಲಿವೆ ಎಂದು ಹೇಳಿದರು. ಈ ಆದೇಶವು ವಿರೋಧ ಪಕ್ಷಗಳು ಮತ್ತು ಆಡಳಿತ ಮೈತ್ರಿಕೂಟದ ಕೆಲವು ಸದಸ್ಯರಿಂದ ಟೀಕೆಗಳನ್ನು ಎದುರಿಸಿದೆ, ಇದು ಮುಸ್ಲಿಂ ವ್ಯಾಪಾರಿಗಳನ್ನು ಗುರಿಯಾಗಿಸುತ್ತದೆ ಎಂದು ವಾದಿಸುತ್ತಾರೆ.

ಇದನ್ನೂ ಓದಿ; ಮೂಡಾ ಹಗರಣ ಆರೋಪ : ಸಿಎಂ ಸಿದ್ದರಾಮಯ್ಯ ಸೇರಿ ಆರು ಮಂದಿ ವಿರುದ್ಧ ಲೋಕಾಯುಕ್ತಕ್ಕೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...