Homeಮುಖಪುಟಕನ್ವರ್ ಯಾತ್ರೆ ವಿವಾದ: ಯತಾಸ್ಥಿತಿ ಕಾಯ್ದುಕೊಳ್ಳುವಂತೆ ನೀಡಿದ್ದ ಮಧ್ಯಂತರ ತಡೆ ವಿಸ್ತರಿಸಿದ ಸುಪ್ರೀಂ

ಕನ್ವರ್ ಯಾತ್ರೆ ವಿವಾದ: ಯತಾಸ್ಥಿತಿ ಕಾಯ್ದುಕೊಳ್ಳುವಂತೆ ನೀಡಿದ್ದ ಮಧ್ಯಂತರ ತಡೆ ವಿಸ್ತರಿಸಿದ ಸುಪ್ರೀಂ

- Advertisement -
- Advertisement -

ಕನ್ವರ್ ಯಾತ್ರೆ ಮಾರ್ಗದಲ್ಲಿನ ಹೋಟೆಲ್ ಮಾಲೀಕರ ಹೆಸರು ಪ್ರದರ್ಶಿಸಬೇಕು ಎಂಬ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ನೀಡಿದ್ದ ನಿರ್ದೇಶನದ ಮಧ್ಯಂತರ ತಡೆಯನ್ನು ಸುಪ್ರೀಂ ಕೋರ್ಟ್ ಇಂದು ವಿಸ್ತರಿಸಿದೆ. “ಯಾರನ್ನೂ ಬಲವಂತವಾಗಿ ಹೆಸರು ಬಹಿರಂಗಪಡಿಸಲು ಸಾಧ್ಯವಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ನಾಮಫಲಕ ಪ್ರದರ್ಶನ ನಿರ್ದೇಶನವು, ಕನ್ವರ್ ಯಾತ್ರೆಯ ಮಾರ್ಗದಲ್ಲಿರುವ ಉಪಾಹಾರ ಗೃಹಗಳು ತಮ್ಮ ಸೈನ್‌ಬೋರ್ಡ್‌ನಲ್ಲಿ ಮಾಲೀಕರು ಮತ್ತು ಉದ್ಯೋಗಿಗಳ ಹೆಸರನ್ನು ಪ್ರದರ್ಶಿಸುವುದನ್ನು ಕಡ್ಡಾಯಗೊಳಿಸಿದೆ.

ಈ ಆದೇಶವು ಮುಸ್ಲಿಮರು ಮತ್ತು ತಳ ಸಮುದಾಯಕ್ಕೆ ಸೇರಿದವರ ವಿರುದ್ಧ ತಾರತಮ್ಯದಿಂದ ಕೂಡಿದೆ ಎಂದು ವಿರೋಧ ಪಕ್ಷದ ಇಂಡಿಯಾ ಬ್ಲಾಕ್ ಸದಸ್ಯರು ಸೇರಿದಂತೆ, ಎನ್‌ಡಿಎ ಮಿತ್ರಪಕ್ಷಗಳು ಕೂಡ ವಿರೋಧ ವ್ಯಕ್ತಪಡಿಸಿದ್ದವು. ಜುಲೈ 22 ರಂದು ಸುಪ್ರೀಂ ಕೋರ್ಟ್ ಸರ್ಕಾರದ ನಿರ್ದೇಶನಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿತು.

ಉತ್ತರ ಪ್ರದೇಶ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ತನ್ನ ನಿರ್ದೇಶನವನ್ನು ಸಮರ್ಥಿಸಿಕೊಂಡಿತು. ಯಾತ್ರೆಯ ಅವಧಿಯಲ್ಲಿ ಅವರು ಸೇವಿಸುವ ಆಹಾರದ ಬಗ್ಗೆ ಗ್ರಾಹಕರು/ಕನ್ವಾರಿಯಾ ಅವರ ಪಾರದರ್ಶಕತೆ ಮತ್ತು ತಿಳುವಳಿಕೆಯುಳ್ಳ ಆಯ್ಕೆಯನ್ನು ಖಚಿತಪಡಿಸಿಕೊಳ್ಳುವುದು, ಅವರ ಧಾರ್ಮಿಕ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು, ಭಕ್ತರ ನಂಬಿಕೆಗಳಿಗೆ ಘಾಸಿ ಆಗಬಾರದು ಎಂಬುದು ನಿರ್ದೇಶನ ಹಿಂದಿನ ಉದ್ದೇಶ” ಎಂದು ಹೇಳಿತ್ತು.

ಸರ್ಕಾರವು “ಆಹಾರ ಮತ್ತು ಸುರಕ್ಷತಾ ಮಾನದಂಡಗಳ (ಆಹಾರ ವ್ಯವಹಾರಗಳ ಪರವಾನಗಿ ಮತ್ತು ನೋಂದಣಿ (ನಿಯಮಗಳು), 2011” ಪ್ರಸ್ತಾಪಿಸಿ ಗಮನ ಸೆಳೆಯುವ ಮೂಲಕ ನ್ಯಾಯಾಲಯದ ಮುಂದೆ ಅಫಿಡವಿಟ್ ಸಲ್ಲಿಸಿತು. ಎಲ್ಲ ಸಣ್ಣ ಆಹಾರ ವ್ಯವಹಾರಗಳ ನೋಂದಣಿ ಅಗತ್ಯವಿದೆ ಮತ್ತು ಮಾಲೀಕರ ಫೋಟೋ ಐಡಿ, ನೋಂದಣಿ ಪ್ರಮಾಣಪತ್ರವನ್ನು ಬಹಿರಂಗಪಡಿಸುವುದು ಕಡ್ಡಾಯವಾಗಿ ಎಂದು ಹೇಳಿದೆ.

ತನ್ನ ಅಫಿಡವಿಟ್‌ನಲ್ಲಿ, ಯುಪಿ ಸರ್ಕಾರವು ತನ್ನ ನಿರ್ದೇಶನವನ್ನು ವಿರೋಧಿಸುವ ಅರ್ಜಿಗಳನ್ನು ಪ್ರಶ್ನಿಸಿದೆ.

“ಕನ್ವಾರಿಯಾಗಳು ಕಟ್ಟುನಿಟ್ಟಾದ ಸಸ್ಯಾಹಾರಿ, ಸಾತ್ವಿಕ ಆಹಾರವನ್ನು ಅನುಸರಿಸುತ್ತಾರೆ, ಈರುಳ್ಳಿ, ಬೆಳ್ಳುಳ್ಳಿ ಮತ್ತು ಇತರ ಎಲ್ಲ ತಾಮಸಿಕ ಆಹಾರಗಳನ್ನು ತ್ಯಜಿಸುತ್ತಾರೆ; ಸಾತ್ವಿಕ್ ಆಹಾರ ಎಂದರೆ ಈರುಳ್ಳಿ ಮತ್ತು ಬೆಳ್ಳುಳ್ಳಿ ಇಲ್ಲದೆ ಆಹಾರವನ್ನು ತಯಾರಿಸುವುದು ಎಂದರ್ಥವಲ್ಲ. ಆದರೆ, ಉಪವಾಸ ಸಮಾರಂಭಗಳನ್ನು ಕೈಗೊಳ್ಳುವಾಗ ಇತರ ಹಬ್ಬಗಳಲ್ಲಿ ಫಲಹಾರದಂತೆಯೇ ಆಹಾರವನ್ನು ತಯಾರಿಸುವ ವಿಧಾನವೂ ಆಗಿದೆ” ಎಂದು ಯುಪಿ ಸರ್ಕಾರ ಹೇಳಿದೆ.

ಇದನ್ನೂ ಓದಿ; ಮಸೂದೆಗಳಿಗೆ ಒಪ್ಪಿಗೆ ನೀಡುವಲ್ಲಿ ರಾಜ್ಯಪಾಲರಿಂದ ವಿಳಂಬ; ಕೇಂದ್ರ-ರಾಜ್ಯ ಸರ್ಕಾರಗಳಿಗೆ ಸುಪ್ರೀಂನಿಂದ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...