Homeಕರೋನಾ ತಲ್ಲಣಕನ್ವರ್‌ ಯಾತ್ರೆಗೆ ಒಪ್ಪಿಗೆ ನೀಡಿದ ಯೋಗಿ ಸರ್ಕಾರ: ಜನರ ಜೀವನ, ಆರೋಗ್ಯ ಮುಖ್ಯ ಎಂದ ಸುಪ್ರೀಂ

ಕನ್ವರ್‌ ಯಾತ್ರೆಗೆ ಒಪ್ಪಿಗೆ ನೀಡಿದ ಯೋಗಿ ಸರ್ಕಾರ: ಜನರ ಜೀವನ, ಆರೋಗ್ಯ ಮುಖ್ಯ ಎಂದ ಸುಪ್ರೀಂ

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ಮಧ್ಯೆ ಕನ್ವರ್‌ ಯಾತ್ರೆಗೆ ಅವಕಾಶ ನೀಡಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಸೂಚನೆ ನೀಡಿದೆ. ಜನರ ಆರೋಗ್ಯ ಮತ್ತು ಜೀವಿಸುವ ಹಕ್ಕು ಪ್ರಮುಖವಾದದ್ದು ಎಂದು ಹೇಳಿದೆ.

“ಭಾರತದ ನಾಗರಿಕರ ಆರೋಗ್ಯ ಮತ್ತು ಜೀವಿಸುವ ಹಕ್ಕು ಅತ್ಯುನ್ನತವಾದದ್ದು. ಧಾರ್ಮಿಕ ಆಚರಣೆಗಳಾಗಿರಲಿ, ಬೇರೆ ಇತರ ಭಾವನಾತ್ಮಕ ವಿಚಾರಗಳೇ ಆಗಿರಲಿ ಅವು ಈ ಮೂಲಭೂತ ಮೂಲಭೂತ ಹಕ್ಕಿಗೆ ಅಧೀನವಾಗಿವೆ” ಎಂದು ನ್ಯಾಯಮೂರ್ತಿ ನಾರಿಮನ್ ಹೇಳಿದರು. ಪ್ರಕರಣದ ಮುಂದಿನ ವಿಚಾರಣೆಯನ್ನು ಸೋಮವಾರಕ್ಕೆ ನಿಗದಿಪಡಿಸಲಾಗಿದೆ.

ಮುಂದಿನ ವಿಚಾರಣೆಯೊಳಗೆ ಉತ್ತರ ಪ್ರದೇಶ ಸರ್ಕಾರ ತನ್ನ ನಿರ್ಧಾರದ ಬಗ್ಗೆ ನ್ಯಾಯಾಲಯಕ್ಕೆ ತಿಳಿಸುವಂತೆ ಹೇಳಿದೆ. ಇಲ್ಲದಿದ್ದರೇ, ಆದೇಶವನ್ನು ರವಾನಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ಉತ್ತರಾಖಂಡ: ಕೋವಿಡ್‌ ಹಿನ್ನಲೆಯಲ್ಲಿ ಕನ್ವರ್‌ ಯಾತ್ರೆ ರದ್ದುಗೊಳಿಸಿದ ಸರ್ಕಾರ

ಈ ವರ್ಷ ಜುಲೈ 25 ರಿಂದ ಆಗಸ್ಟ್ 6 ರವರೆಗೆ ಯಾತ್ರೆ ನಡೆಯಲಿದೆ ಎಂದು ಯುಪಿ ಕಾನೂನು ಸುವ್ಯವಸ್ಥೆ ಹೆಚ್ಚುವರಿ ಮಹಾನಿರ್ದೇಶಕ (ಎಡಿಜಿ)  ಪ್ರಶಾಂತ್ ಕುಮಾರ್ ಗುರುವಾರ ಹೇಳಿದ್ದಾರೆ.

’ಕನ್ವರ್‌ ಯಾತ್ರಾ ಮಾರ್ಗಗಳಲ್ಲಿ ಮಾಸ್ಕ್, ಸ್ಯಾನಿಟೈಜರ್‌ಗಳು, ಕೊರೊನಾ ಪರೀಕ್ಷಾ ಕಿಟ್‌ಗಳು, ಪಲ್ಸ್ ಆಕ್ಸಿಮೀಟರ್‌ಗಳು ಮತ್ತು ಥರ್ಮಾಮೀಟರ್‌ಗಳೊಂದಿಗೆ ಕೋವಿಡ್ ಕೇರ್ ಸೆಂಟರ್‌ಗಳನ್ನು‍ ಸ್ಥಾಪಿಸಲಾಗುವುದು. ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸಲಾಗುವುದು. ಅಗತ್ಯವಿದ್ದಲ್ಲಿ ಯಾತ್ರೆಗೆ ನೆಗೆಟಿವ್ ಆರ್‌ಟಿ-ಪಿಸಿಆರ್ ಪರೀಕ್ಷಾ ವರದಿಯನ್ನು ಕಡ್ಡಾಯಗೊಳಿಸಲಾಗುವುದದು’ ಎಂದು ‌ಉತ್ತರ ಪ್ರದೇಶದ ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತ, ಕುಂಭ ಮೇಳದ ಸಂದರ್ಭದಲ್ಲಿ ಘಟಿಸಿದ ಅಚಾತುರ್ಯವನ್ನು ಮತ್ತೆ ಮರುಕಳಿಸದಂತೆ ನೋಡಿಕೊಳ್ಳಲು ಉತ್ತರಾಖಂಡ ಸರ್ಕಾರ ಮುಂದಾಗಿದ್ದು, ಲಕ್ಷಾಂತರ ಜನರು ಸೇರುವ ಕನ್ವರ್‌ ಧಾರ್ಮಿಕ ಯಾತ್ರೆಯನ್ನು ನಿರ್ಬಂಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಉತ್ತರಾಖಂಡ ಸರ್ಕಾರ ನೆರೆಯ ರಾಜ್ಯಗಳೊಂದಿಗೆ ಸಮಾಲೋಚನೆಯನ್ನು ನಡೆಸಿ ಈ ನಿರ್ಧಾರವನ್ನು ಕೈಗೊಂಡಿದೆ. ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದ ಕುಂಭಮೇಳದಲ್ಲಿ ಘಟಿಸಿದ ದುರಂತ ಮತ್ತೆ ಘಟಿಸದಂತೆ ತಡೆಯಬೇಕು. ಕೋವಿಡ್‌ ಮೂರನೇ ಅಲೆ ಮುನ್ಸೂಚನೆ ನಡುವೆ ಧಾರ್ಮೀಕ ಯಾತ್ರೆಯನ್ನು ನಡೆಸುವುದು ಸುರಕ್ಷಿತವಲ್ಲ ಎಂದು ಹಿರಿಯ ಅಧಿಕಾರಿಗಳು ಮತ್ತು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ ಎಂದು ಸಿಎಂ ಪುಷ್ಕರ್‌ ಸಿಂಗ್ ಧಾಮಿ ಮಾಧ್ಯಮಗಳಿಗೆ ತಿಳಿಸಿದ್ದರು.


ಇದನ್ನೂ ಓದಿ: ಬೆಂಗಳೂರಿನಲ್ಲಿ ಉತ್ತರ ಪ್ರದೇಶದ ಜಾಹೀರಾತು: ಪೋಟೋ ಹಂಚಿಕೊಂಡ ವಕೀಲರಿಗೆ ಯುಪಿ ಪೊಲೀಸರ ಬೆದರಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...