Homeಮುಖಪುಟಕನ್ವರ್ ಯಾತ್ರೆಯಲ್ಲಿ ಮುಸ್ಲಿಂ ಕುಟುಂಬದ ಮೇಲೆ ಕನ್ವಾರಿಯಾಸ್ ಕ್ರೂರ ದಾಳಿ: 8 ಜನರ ವಿರುದ್ಧ FIR-ವೀಡಿಯೋ

ಕನ್ವರ್ ಯಾತ್ರೆಯಲ್ಲಿ ಮುಸ್ಲಿಂ ಕುಟುಂಬದ ಮೇಲೆ ಕನ್ವಾರಿಯಾಸ್ ಕ್ರೂರ ದಾಳಿ: 8 ಜನರ ವಿರುದ್ಧ FIR-ವೀಡಿಯೋ

- Advertisement -
- Advertisement -

ಹೊಸ ದೆಹಲಿ: ಉತ್ತರಾಖಂಡದ ಪುಣ್ಯಕ್ಷೇತ್ರ ಹರಿದ್ವಾರದ ಮಂಗ್ಲೌರ್ ಪಟ್ಟಣದಲ್ಲಿ, ಆಧ್ಯಾತ್ಮಿಕ ಕನ್ವರ್ ಯಾತ್ರೆಗೆ ಹೊರಟಿದ್ದ ‘ಕನ್ವಾರಿಯಾಸ್’ ಗುಂಪೊಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ಕುಟುಂಬದ ಮೇಲೆ ಶನಿವಾರ ಭೀಕರವಾಗಿ ಹಲ್ಲೆ ನಡೆಸಿದೆ. ಈ ಅಮಾನವೀಯ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಧಾರ್ಮಿಕ ಆಚರಣೆಗಳ ಹೆಸರಿನಲ್ಲಿ ಪ್ರದರ್ಶಿಸಲಾದ ದ್ವೇಷ ಮತ್ತು ಮುಸ್ಲಿಂ ವಿರೋಧಿ ದೌರ್ಜನ್ಯಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ವೈರಲ್ ಕ್ಲಿಪ್‌ನಲ್ಲಿ, ಹಲವಾರು ಕನ್ವಾರಿಯಾಸ್ ಮುಸ್ಲಿಂ ಕುಟುಂಬದ ಕಾರನ್ನು ಸುತ್ತುವರಿದು, ಹಿಂಸಾತ್ಮಕವಾಗಿ ವರ್ತಿಸುವುದು ಮತ್ತು ವಾಹನವನ್ನು ಧ್ವಂಸಗೊಳಿಸುವುದು ಸ್ಪಷ್ಟವಾಗಿ ಗೋಚರಿಸುತ್ತದೆ. ಶಾಂತಿಯುತ ಧಾರ್ಮಿಕ ಸಂದರ್ಭ ವಿಕೋಪಕ್ಕೆ ತಿರುಗಿ, ಮುಸ್ಲಿಂ ಕುಟುಂಬದ ಮಹಿಳೆಯರು ಮತ್ತು ಮಕ್ಕಳು ಸಹ ಗುಂಪಿನಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಪ್ರಾಣಭಯದಿಂದ ಓಡುತ್ತಿರುವುದು ಮನ ಕಲಕುವಂತಿತ್ತು.

@iamnarendranath ಎಂಬ ಬಳಕೆದಾರರು ಹಂಚಿಕೊಂಡ ಈ ವಿಡಿಯೋ, ‘ನಿಜವಾದ ಭಕ್ತಿ ಹೇಗಿರಬೇಕು?’ ಎಂಬ ಬಗ್ಗೆ ಕಠಿಣ ಪ್ರಶ್ನೆಗಳನ್ನು ಎತ್ತಿದೆ. ಸಣ್ಣ ರಸ್ತೆ ವಿವಾದವೇ ದಾಳಿಗೆ ಕಾರಣ ಎನ್ನಲಾಗಿದ್ದು, ಪರಿಸ್ಥಿತಿ ಕ್ಷಣಾರ್ಧದಲ್ಲಿ ಸಂಪೂರ್ಣ ಅರಾಜಕತೆಗೆ ತಿರುಗಿದೆ.

ಸಾಮಾಜಿಕ ಜಾಲತಾಣ ಬಳಕೆದಾರರು ಈ ಹಿಂಸಾತ್ಮಕ ನಡವಳಿಕೆಯನ್ನು ತೀವ್ರವಾಗಿ ಖಂಡಿಸಿದ್ದು, ಇಂತಹ ಕೃತ್ಯಗಳು “ಶಿವ ಭಕ್ತಿ”ಯ ನಿಜವಾದ ಅರ್ಥವನ್ನು ನಾಶಪಡಿಸುತ್ತವೆ ಎಂದು ತೀವ್ರವಾಗಿ ಟೀಕಿಸಿದ್ದಾರೆ. ಯಾತ್ರೆಯ ಸಮಯದಲ್ಲಿ ಕನ್ವಾರಿಯಾಸ್ ಅನುಭವಿಸುವ ಸವಲತ್ತುಗಳು ಸಾರ್ವಜನಿಕ ಸುರಕ್ಷತೆಯನ್ನು ಕಡೆಗಣಿಸುವ ಹಂತಕ್ಕೆ ತಲುಪಿವೆಯೇ ಎಂಬ ಪ್ರಶ್ನೆಯೂ ಮೂಡಿದೆ.

ಆನ್‌ಲೈನ್‌ನಲ್ಲಿ ವ್ಯಾಪಕ ಆಕ್ರೋಶದ ನಂತರ, ಹರಿದ್ವಾರ ಪೊಲೀಸರು ಘಟನೆ ಕುರಿತು ಪ್ರತಿಕ್ರಿಯಿಸಿ, “ಮಂಗ್ಲೌರ್ ಪ್ರದೇಶದಲ್ಲಿ ಕನ್ವರ್ ಯಾತ್ರೆಯ ಸಮಯದಲ್ಲಿ, ಒಂದು ಕಾರು ಕಾಣಿಸಿಕೊಂಡಾಗ, ಕನ್ವಾರಿಯಾಸ್ ಕೋಪಗೊಂಡು ವಾಹನವನ್ನು ಹಾನಿಗೊಳಿಸಲು ಪ್ರಯತ್ನಿಸಿದ್ದಾರೆ. ಕಾರು ಹಾನಿ ಮತ್ತು ಹಲ್ಲೆ ನಡೆಸಿದ ಬಗ್ಗೆ ಬಂದ ದೂರಿನ ಮೇರೆಗೆ, ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಕಾರು ಮಾಲೀಕ ನಾಜಿಮ್ ಸಲ್ಲಿಸಿದ ದೂರಿನ ಆಧಾರದ ಮೇಲೆ ಹರಿದ್ವಾರ ಪೊಲೀಸರು ಎಂಟು ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಈ ಘಟನೆ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ವ್ಯಾಪಕ ಒತ್ತಾಯ ಕೇಳಿಬಂದಿದೆ. ಧಾರ್ಮಿಕ ಭಕ್ತಿ ಮತ್ತು ಸಾರ್ವಜನಿಕ ಸುರಕ್ಷತೆಯ ನಡುವೆ ಎಲ್ಲಿ ಗೆರೆ ಎಳೆಯಬೇಕು ಎಂಬ ಕುರಿತು ಈ ಘಟನೆ ಗಂಭೀರ ಚಿಂತನೆಗೆ ಹಚ್ಚಿದೆ.

ಜುಲೈ 9ರ ರಾಷ್ಟ್ರವ್ಯಾಪಿ ಮುಷ್ಕರ; ಬ್ಯಾಂಕ್ ಕಾರ್ಮಿಕ ಸಂಘಗಳು ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...