Homeಮುಖಪುಟಕನ್ವರ್ ಯಾತ್ರೆಯಲ್ಲಿ ಮುಸ್ಲಿಂ ಕುಟುಂಬದ ಮೇಲೆ ಕನ್ವಾರಿಯಾಸ್ ಕ್ರೂರ ದಾಳಿ: 8 ಜನರ ವಿರುದ್ಧ FIR-ವೀಡಿಯೋ

ಕನ್ವರ್ ಯಾತ್ರೆಯಲ್ಲಿ ಮುಸ್ಲಿಂ ಕುಟುಂಬದ ಮೇಲೆ ಕನ್ವಾರಿಯಾಸ್ ಕ್ರೂರ ದಾಳಿ: 8 ಜನರ ವಿರುದ್ಧ FIR-ವೀಡಿಯೋ

- Advertisement -
- Advertisement -

ಹೊಸ ದೆಹಲಿ: ಉತ್ತರಾಖಂಡದ ಪುಣ್ಯಕ್ಷೇತ್ರ ಹರಿದ್ವಾರದ ಮಂಗ್ಲೌರ್ ಪಟ್ಟಣದಲ್ಲಿ, ಆಧ್ಯಾತ್ಮಿಕ ಕನ್ವರ್ ಯಾತ್ರೆಗೆ ಹೊರಟಿದ್ದ ‘ಕನ್ವಾರಿಯಾಸ್’ ಗುಂಪೊಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ಕುಟುಂಬದ ಮೇಲೆ ಶನಿವಾರ ಭೀಕರವಾಗಿ ಹಲ್ಲೆ ನಡೆಸಿದೆ. ಈ ಅಮಾನವೀಯ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಧಾರ್ಮಿಕ ಆಚರಣೆಗಳ ಹೆಸರಿನಲ್ಲಿ ಪ್ರದರ್ಶಿಸಲಾದ ದ್ವೇಷ ಮತ್ತು ಮುಸ್ಲಿಂ ವಿರೋಧಿ ದೌರ್ಜನ್ಯಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ವೈರಲ್ ಕ್ಲಿಪ್‌ನಲ್ಲಿ, ಹಲವಾರು ಕನ್ವಾರಿಯಾಸ್ ಮುಸ್ಲಿಂ ಕುಟುಂಬದ ಕಾರನ್ನು ಸುತ್ತುವರಿದು, ಹಿಂಸಾತ್ಮಕವಾಗಿ ವರ್ತಿಸುವುದು ಮತ್ತು ವಾಹನವನ್ನು ಧ್ವಂಸಗೊಳಿಸುವುದು ಸ್ಪಷ್ಟವಾಗಿ ಗೋಚರಿಸುತ್ತದೆ. ಶಾಂತಿಯುತ ಧಾರ್ಮಿಕ ಸಂದರ್ಭ ವಿಕೋಪಕ್ಕೆ ತಿರುಗಿ, ಮುಸ್ಲಿಂ ಕುಟುಂಬದ ಮಹಿಳೆಯರು ಮತ್ತು ಮಕ್ಕಳು ಸಹ ಗುಂಪಿನಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಪ್ರಾಣಭಯದಿಂದ ಓಡುತ್ತಿರುವುದು ಮನ ಕಲಕುವಂತಿತ್ತು.

@iamnarendranath ಎಂಬ ಬಳಕೆದಾರರು ಹಂಚಿಕೊಂಡ ಈ ವಿಡಿಯೋ, ‘ನಿಜವಾದ ಭಕ್ತಿ ಹೇಗಿರಬೇಕು?’ ಎಂಬ ಬಗ್ಗೆ ಕಠಿಣ ಪ್ರಶ್ನೆಗಳನ್ನು ಎತ್ತಿದೆ. ಸಣ್ಣ ರಸ್ತೆ ವಿವಾದವೇ ದಾಳಿಗೆ ಕಾರಣ ಎನ್ನಲಾಗಿದ್ದು, ಪರಿಸ್ಥಿತಿ ಕ್ಷಣಾರ್ಧದಲ್ಲಿ ಸಂಪೂರ್ಣ ಅರಾಜಕತೆಗೆ ತಿರುಗಿದೆ.

ಸಾಮಾಜಿಕ ಜಾಲತಾಣ ಬಳಕೆದಾರರು ಈ ಹಿಂಸಾತ್ಮಕ ನಡವಳಿಕೆಯನ್ನು ತೀವ್ರವಾಗಿ ಖಂಡಿಸಿದ್ದು, ಇಂತಹ ಕೃತ್ಯಗಳು “ಶಿವ ಭಕ್ತಿ”ಯ ನಿಜವಾದ ಅರ್ಥವನ್ನು ನಾಶಪಡಿಸುತ್ತವೆ ಎಂದು ತೀವ್ರವಾಗಿ ಟೀಕಿಸಿದ್ದಾರೆ. ಯಾತ್ರೆಯ ಸಮಯದಲ್ಲಿ ಕನ್ವಾರಿಯಾಸ್ ಅನುಭವಿಸುವ ಸವಲತ್ತುಗಳು ಸಾರ್ವಜನಿಕ ಸುರಕ್ಷತೆಯನ್ನು ಕಡೆಗಣಿಸುವ ಹಂತಕ್ಕೆ ತಲುಪಿವೆಯೇ ಎಂಬ ಪ್ರಶ್ನೆಯೂ ಮೂಡಿದೆ.

ಆನ್‌ಲೈನ್‌ನಲ್ಲಿ ವ್ಯಾಪಕ ಆಕ್ರೋಶದ ನಂತರ, ಹರಿದ್ವಾರ ಪೊಲೀಸರು ಘಟನೆ ಕುರಿತು ಪ್ರತಿಕ್ರಿಯಿಸಿ, “ಮಂಗ್ಲೌರ್ ಪ್ರದೇಶದಲ್ಲಿ ಕನ್ವರ್ ಯಾತ್ರೆಯ ಸಮಯದಲ್ಲಿ, ಒಂದು ಕಾರು ಕಾಣಿಸಿಕೊಂಡಾಗ, ಕನ್ವಾರಿಯಾಸ್ ಕೋಪಗೊಂಡು ವಾಹನವನ್ನು ಹಾನಿಗೊಳಿಸಲು ಪ್ರಯತ್ನಿಸಿದ್ದಾರೆ. ಕಾರು ಹಾನಿ ಮತ್ತು ಹಲ್ಲೆ ನಡೆಸಿದ ಬಗ್ಗೆ ಬಂದ ದೂರಿನ ಮೇರೆಗೆ, ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಕಾರು ಮಾಲೀಕ ನಾಜಿಮ್ ಸಲ್ಲಿಸಿದ ದೂರಿನ ಆಧಾರದ ಮೇಲೆ ಹರಿದ್ವಾರ ಪೊಲೀಸರು ಎಂಟು ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಈ ಘಟನೆ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ವ್ಯಾಪಕ ಒತ್ತಾಯ ಕೇಳಿಬಂದಿದೆ. ಧಾರ್ಮಿಕ ಭಕ್ತಿ ಮತ್ತು ಸಾರ್ವಜನಿಕ ಸುರಕ್ಷತೆಯ ನಡುವೆ ಎಲ್ಲಿ ಗೆರೆ ಎಳೆಯಬೇಕು ಎಂಬ ಕುರಿತು ಈ ಘಟನೆ ಗಂಭೀರ ಚಿಂತನೆಗೆ ಹಚ್ಚಿದೆ.

ಜುಲೈ 9ರ ರಾಷ್ಟ್ರವ್ಯಾಪಿ ಮುಷ್ಕರ; ಬ್ಯಾಂಕ್ ಕಾರ್ಮಿಕ ಸಂಘಗಳು ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...