Homeಮುಖಪುಟಕನ್ಯಾದಾನ್‌ ಅಲ್ಲ, ಕನ್ಯಾಮಾನ್‌ ಹೊಸ ಐಡಿಯಾ ಎಂದ ಜಾಹೀರಾತು ವಿರುದ್ಧ ಪ್ರತಿಭಟನೆ

ಕನ್ಯಾದಾನ್‌ ಅಲ್ಲ, ಕನ್ಯಾಮಾನ್‌ ಹೊಸ ಐಡಿಯಾ ಎಂದ ಜಾಹೀರಾತು ವಿರುದ್ಧ ಪ್ರತಿಭಟನೆ

- Advertisement -
- Advertisement -

ಬಾಲಿವುಡ್ ನಟಿ ಆಲಿಯಾ ಭಟ್ ಮುಖ್ಯಪಾತ್ರದಲ್ಲಿರುವ ಮಾನ್ಯವರ್ ಬಟ್ಟೆ ಬ್ರಾಂಡ್‌ನ ಕನ್ಯಾಮಾನ್ ಜಾಹೀರಾತು ಭಾರಿ ಪರ ವಿರೋಧ ಚರ್ಚೆಗೆ ಗ್ರಾಸವಾಗಿದೆ. ಕೆಲವರು ಭಾರತದ ಸಿನಿಮಾಗಳು, ಟಿವಿ ಶೋಗಳಿಗಿಂತ ಈ ಜಾಹೀರಾತು ಮುಂದುವರೆದಿದೆ ಎಂದಿದ್ದಾರೆ.

ಇನ್ನು ಕೆಲವರು ಹಿಂದೂ ಸಂಸ್ಕೃತತಿಯನ್ನು ಅರ್ತ ಮಾಡಿಕೊಳ್ಳದೇ ಅವಮಾನ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ನವಿ ಮುಂಬೈನ ಬಟ್ಟೆ ಬ್ರಾಂಡ್‌ನ ಶೋರೂಂನ ಹೊರ ಭಾಗದಲ್ಲಿ ಹಿಂದೂ ಧಾರ್ಮಿಕ ಸಂಘಟನೆಯೊಂದು ಪ್ರತಿಭಟನೆ ನಡೆಸಿದೆ.

ಹಿಂದೂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಆರೋಪಿಸಿದರುವ ಹಿಂದೂ ಜನಜಾಗೃತಿ ಸಮಿತಿಯ ಸದಸ್ಯರು, ನವಿ ಮುಂಬೈನ ವಾಶಿ ಪ್ರದೇಶದ ಮಳಿಗೆಯ ಹೊರಗೆ ಮಾನ್ಯವರ್ ಬಟ್ಟೆ ಬ್ರಾಂಡ್‌ನ ವೇದಾಂತ ಫ್ಯಾಶನ್ಸ್ ಲಿಮಿಟೆಡ್ ವಿರುದ್ಧ ಘೋಷಣೆಗಳನ್ನು ಕೂಗಿದರು.

ಇದನ್ನೂ ಓದಿ: ಭಾವುಕ ಅನುಭವ ನೀಡುವ ‘ಪುಕ್ಸಟ್ಟೆ ಲೈಫು, ಪುರ್‌ಸೊತ್ತೇ ಇಲ್ಲ’ ಸಿನಿಮಾ: ಪ್ರೀತಿ ನಾಗರಾಜ್

ಬಲಪಂಥೀಯ ಸಂಘಟನೆಯ ವಕ್ತಾರ ಡಾ.ಉದಯ್ ಧುರಿ ಅವರು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಕಂಪನಿಯ ಜಾಹೀರಾತಿನಲ್ಲಿ ಹಿಂದೂ ವಿವಾಹ ಸಮಾರಂಭಗಳಲ್ಲಿ ‘ಕನ್ಯಾದಾನ’ ಆಚರಣೆಯನ್ನು “ತಪ್ಪಾಗಿ ಚಿತ್ರಿಸಲಾಗಿದೆ” ಮತ್ತು ಆದ್ದರಿಂದ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದಿದ್ದಾರೆ.

ಮಾನ್ಯವರ್ ಬಟ್ಟೆ ಬ್ರಾಂಡ್‌ನ ವೇದಾಂತ ಫ್ಯಾಶನ್ಸ್ ಲಿಮಿಟೆಡ್ ಸಂಸ್ಥೆಯು ಬೇಷರತ್ ಕ್ಷಮೆ ಕೇಳಬೇಕು.  ಕ್ಷಣವೇ ಜಾಹೀರಾತನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿತ್ತು. ಸಂಸ್ಥೆಯು ಕ್ಷಮೆ ಯಾಚಿಸುವವರೆಗೆ ಮತ್ತು ಜಾಹೀರಾತನ್ನು ಹಿಂಪಡೆಯುವವರೆಗೂ ಬಟ್ಟೆ ಬ್ರಾಂಡ್ ಅನ್ನು ಬಹಿಷ್ಕರಿಸುವಂತೆ ಜನರಲ್ಲಿ ಮನವಿ ಮಾಡಿದೆ.

1.41 ನಿಮಿಷಗಳ ಜಾಹೀರಾತಿನಲ್ಲಿ, ಆಲಿಯಾ ಭಟ್, ‘ಮಂಟಪ’ದಲ್ಲಿ ಕುಳಿತುಕೊಂಡು ತಾನು ಮನೆಯಲ್ಲಿ ಹೇಗೆ ಬೆಳೆದೆ, ಮನೆಯವರ ಪ್ರೀತಿ ಹೇಗಿತ್ತು ಎನ್ನುತ್ತಾ…ತಾನು ಬೆಳೆಯುತ್ತಲೇ ಹೇಗೆ ಬೇರೆ ಮನೆಯ ಹೆಣ್ಣು, ಬೇರೆಯವರ ಆಸ್ತಿ, ಬೇರೆ ಮನೆಗೆ ಹಾರಿ ಹೋಗುವ, ಅಲ್ಲಿ ಅನ್ನಾಹಾರ ತಿನ್ನುವ ಚಿಡಿಯಾ (ಪಕ್ಷಿ) ಎಂಬುದನ್ನು ನೆನಪಿಸುತ್ತಿದ್ದರು ಎಂಬುದನ್ನು ಹೇಳುತ್ತಾರೆ.

Alia Bhatt faces severe backlash on latest Manyavar ad

ಜೊತೆಗೆ ಇಷ್ಟು ಪ್ರೀತಿಸುತ್ತಿದ್ದವರು ಕೂಡ ನಾನು ಬೇರೆ ಮನೆಯ ಆಸ್ತಿಯಲ್ಲ ಎಂಬುದನ್ನು ಹೇಳಲಿಲ್ಲ. ಯಾಕೆ ಯಾವಗಲೂ ಕನ್ಯಾದಾನ್ ಆಗುತ್ತದೆ…? ನಾನು ದಾನ ಮಾಡುವ ವಸ್ತುವೇ ಎಂದು ಪ್ರಶ್ನಿಸುತ್ತಾರೆ. ಬಳಿಕ ಆಚರಣೆಯಲ್ಲಿ ವರನ ಕಡೆಯವರು ಕನ್ಯಾದಾನ್ ತೆಗೆದುಕೊಳ್ಳುವ ಬದಲು ತಮ್ಮ ಮಗನನ್ನು ದಾನ ನೀಡುವ ರೀತಿ ಚಿತ್ರಿಸಿದ್ದಾರೆ. ಇಲ್ಲಿ ಆಲಿಯಾ ಭಟ್ ಕನ್ಯಾದಾನ್ ಅಲ್ಲ…ಕನ್ಯಾಮಾನ್…ಹೊಸ ಐಡಿಯಾ ಎನ್ನುತ್ತಾರೆ.

ಇತ್ತ ಬಾಲಿವುಡ್ ನಟಿ ಕಂಗನಾ ರಣಾವತ್ ಕೂಡ ಆಲಿಯಾ ಬಟ್ ಜಾಹೀರಾತಿಗೆ ಕಟುವಾಗಿ ಟೀಕಿಸಿದ್ದರು. ‘ಎಲ್ಲಾ ಬ್ರಾಂಡ್‌ಗಳಿಗೆ ವಿನಂತಿ … ನಿಮ್ಮ ವಸ್ತುಗಳನ್ನು ಮಾರಾಟ ಮಾಡಲು ಧರ್ಮವನ್ನು ಬಳಸುವುದನ್ನು ನಿಲ್ಲಿಸಿ, ಅಲ್ಪಸಂಖ್ಯಾತರು ಮತ್ತು ಹಿಂದೂ ದ್ವೇಷಿಗಳನ್ನು ಮೆಚ್ಚಿಸಲು ಪ್ರಯತ್ನಿಸುವ ಹಿಂದೂಫೋಬಿಕ್ ಜಾಹೀರಾತುಗಳನ್ನು ನಿಲ್ಲಿಸಿ. ದಾನದ ಅರ್ಥ ತಿಳಿದುಕೊಳ್ಳಿ’ ಎಂದಿದ್ದಾರೆ.

ಈ ಜಾಹೀರಾತಿಗೆ ಮೆಚ್ಚುಗೆ , ವಿಮರ್ಶೆ, ಕಟು ವಿಮರ್ಶೆ ಕೂಡ ವ್ಯಕ್ತವಾಗಿದೆ. ಹಿಂದೂ ಸಂಪ್ರದಾಯವನ್ನು ಬಾಲಿವುಡ್ ಮತ್ತು ಜಾಹೀರಾತು ಕಂಪನಿ ಸರಿಯಾಗಿ ಅರ್ಥಮಾಡಿಕೊಂಡಿಲ್ಲ. ಕನ್ಯಾದಾನ ಎಂದರೆ ಹೆಣ್ಣನ್ನು ದಾನವಾಗಿ ನೀಡುವುದಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟೀಕಿಸಲಾಗಿದೆ.


ಇದನ್ನೂ ಓದಿ: ಕನ್ನಡದ ಮೊದಲ ಲೆಸ್ಬಿಯನ್ ಚಿತ್ರ ’ನಾನು ಲೇಡಿಸ್’ ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವಕ್ಕೆ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....