Homeಮುಖಪುಟಕನ್ಯಾದಾನ್‌ ಅಲ್ಲ, ಕನ್ಯಾಮಾನ್‌ ಹೊಸ ಐಡಿಯಾ ಎಂದ ಜಾಹೀರಾತು ವಿರುದ್ಧ ಪ್ರತಿಭಟನೆ

ಕನ್ಯಾದಾನ್‌ ಅಲ್ಲ, ಕನ್ಯಾಮಾನ್‌ ಹೊಸ ಐಡಿಯಾ ಎಂದ ಜಾಹೀರಾತು ವಿರುದ್ಧ ಪ್ರತಿಭಟನೆ

- Advertisement -
- Advertisement -

ಬಾಲಿವುಡ್ ನಟಿ ಆಲಿಯಾ ಭಟ್ ಮುಖ್ಯಪಾತ್ರದಲ್ಲಿರುವ ಮಾನ್ಯವರ್ ಬಟ್ಟೆ ಬ್ರಾಂಡ್‌ನ ಕನ್ಯಾಮಾನ್ ಜಾಹೀರಾತು ಭಾರಿ ಪರ ವಿರೋಧ ಚರ್ಚೆಗೆ ಗ್ರಾಸವಾಗಿದೆ. ಕೆಲವರು ಭಾರತದ ಸಿನಿಮಾಗಳು, ಟಿವಿ ಶೋಗಳಿಗಿಂತ ಈ ಜಾಹೀರಾತು ಮುಂದುವರೆದಿದೆ ಎಂದಿದ್ದಾರೆ.

ಇನ್ನು ಕೆಲವರು ಹಿಂದೂ ಸಂಸ್ಕೃತತಿಯನ್ನು ಅರ್ತ ಮಾಡಿಕೊಳ್ಳದೇ ಅವಮಾನ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ನವಿ ಮುಂಬೈನ ಬಟ್ಟೆ ಬ್ರಾಂಡ್‌ನ ಶೋರೂಂನ ಹೊರ ಭಾಗದಲ್ಲಿ ಹಿಂದೂ ಧಾರ್ಮಿಕ ಸಂಘಟನೆಯೊಂದು ಪ್ರತಿಭಟನೆ ನಡೆಸಿದೆ.

ಹಿಂದೂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಆರೋಪಿಸಿದರುವ ಹಿಂದೂ ಜನಜಾಗೃತಿ ಸಮಿತಿಯ ಸದಸ್ಯರು, ನವಿ ಮುಂಬೈನ ವಾಶಿ ಪ್ರದೇಶದ ಮಳಿಗೆಯ ಹೊರಗೆ ಮಾನ್ಯವರ್ ಬಟ್ಟೆ ಬ್ರಾಂಡ್‌ನ ವೇದಾಂತ ಫ್ಯಾಶನ್ಸ್ ಲಿಮಿಟೆಡ್ ವಿರುದ್ಧ ಘೋಷಣೆಗಳನ್ನು ಕೂಗಿದರು.

ಇದನ್ನೂ ಓದಿ: ಭಾವುಕ ಅನುಭವ ನೀಡುವ ‘ಪುಕ್ಸಟ್ಟೆ ಲೈಫು, ಪುರ್‌ಸೊತ್ತೇ ಇಲ್ಲ’ ಸಿನಿಮಾ: ಪ್ರೀತಿ ನಾಗರಾಜ್

ಬಲಪಂಥೀಯ ಸಂಘಟನೆಯ ವಕ್ತಾರ ಡಾ.ಉದಯ್ ಧುರಿ ಅವರು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಕಂಪನಿಯ ಜಾಹೀರಾತಿನಲ್ಲಿ ಹಿಂದೂ ವಿವಾಹ ಸಮಾರಂಭಗಳಲ್ಲಿ ‘ಕನ್ಯಾದಾನ’ ಆಚರಣೆಯನ್ನು “ತಪ್ಪಾಗಿ ಚಿತ್ರಿಸಲಾಗಿದೆ” ಮತ್ತು ಆದ್ದರಿಂದ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದಿದ್ದಾರೆ.

ಮಾನ್ಯವರ್ ಬಟ್ಟೆ ಬ್ರಾಂಡ್‌ನ ವೇದಾಂತ ಫ್ಯಾಶನ್ಸ್ ಲಿಮಿಟೆಡ್ ಸಂಸ್ಥೆಯು ಬೇಷರತ್ ಕ್ಷಮೆ ಕೇಳಬೇಕು.  ಕ್ಷಣವೇ ಜಾಹೀರಾತನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿತ್ತು. ಸಂಸ್ಥೆಯು ಕ್ಷಮೆ ಯಾಚಿಸುವವರೆಗೆ ಮತ್ತು ಜಾಹೀರಾತನ್ನು ಹಿಂಪಡೆಯುವವರೆಗೂ ಬಟ್ಟೆ ಬ್ರಾಂಡ್ ಅನ್ನು ಬಹಿಷ್ಕರಿಸುವಂತೆ ಜನರಲ್ಲಿ ಮನವಿ ಮಾಡಿದೆ.

1.41 ನಿಮಿಷಗಳ ಜಾಹೀರಾತಿನಲ್ಲಿ, ಆಲಿಯಾ ಭಟ್, ‘ಮಂಟಪ’ದಲ್ಲಿ ಕುಳಿತುಕೊಂಡು ತಾನು ಮನೆಯಲ್ಲಿ ಹೇಗೆ ಬೆಳೆದೆ, ಮನೆಯವರ ಪ್ರೀತಿ ಹೇಗಿತ್ತು ಎನ್ನುತ್ತಾ…ತಾನು ಬೆಳೆಯುತ್ತಲೇ ಹೇಗೆ ಬೇರೆ ಮನೆಯ ಹೆಣ್ಣು, ಬೇರೆಯವರ ಆಸ್ತಿ, ಬೇರೆ ಮನೆಗೆ ಹಾರಿ ಹೋಗುವ, ಅಲ್ಲಿ ಅನ್ನಾಹಾರ ತಿನ್ನುವ ಚಿಡಿಯಾ (ಪಕ್ಷಿ) ಎಂಬುದನ್ನು ನೆನಪಿಸುತ್ತಿದ್ದರು ಎಂಬುದನ್ನು ಹೇಳುತ್ತಾರೆ.

Alia Bhatt faces severe backlash on latest Manyavar ad

ಜೊತೆಗೆ ಇಷ್ಟು ಪ್ರೀತಿಸುತ್ತಿದ್ದವರು ಕೂಡ ನಾನು ಬೇರೆ ಮನೆಯ ಆಸ್ತಿಯಲ್ಲ ಎಂಬುದನ್ನು ಹೇಳಲಿಲ್ಲ. ಯಾಕೆ ಯಾವಗಲೂ ಕನ್ಯಾದಾನ್ ಆಗುತ್ತದೆ…? ನಾನು ದಾನ ಮಾಡುವ ವಸ್ತುವೇ ಎಂದು ಪ್ರಶ್ನಿಸುತ್ತಾರೆ. ಬಳಿಕ ಆಚರಣೆಯಲ್ಲಿ ವರನ ಕಡೆಯವರು ಕನ್ಯಾದಾನ್ ತೆಗೆದುಕೊಳ್ಳುವ ಬದಲು ತಮ್ಮ ಮಗನನ್ನು ದಾನ ನೀಡುವ ರೀತಿ ಚಿತ್ರಿಸಿದ್ದಾರೆ. ಇಲ್ಲಿ ಆಲಿಯಾ ಭಟ್ ಕನ್ಯಾದಾನ್ ಅಲ್ಲ…ಕನ್ಯಾಮಾನ್…ಹೊಸ ಐಡಿಯಾ ಎನ್ನುತ್ತಾರೆ.

ಇತ್ತ ಬಾಲಿವುಡ್ ನಟಿ ಕಂಗನಾ ರಣಾವತ್ ಕೂಡ ಆಲಿಯಾ ಬಟ್ ಜಾಹೀರಾತಿಗೆ ಕಟುವಾಗಿ ಟೀಕಿಸಿದ್ದರು. ‘ಎಲ್ಲಾ ಬ್ರಾಂಡ್‌ಗಳಿಗೆ ವಿನಂತಿ … ನಿಮ್ಮ ವಸ್ತುಗಳನ್ನು ಮಾರಾಟ ಮಾಡಲು ಧರ್ಮವನ್ನು ಬಳಸುವುದನ್ನು ನಿಲ್ಲಿಸಿ, ಅಲ್ಪಸಂಖ್ಯಾತರು ಮತ್ತು ಹಿಂದೂ ದ್ವೇಷಿಗಳನ್ನು ಮೆಚ್ಚಿಸಲು ಪ್ರಯತ್ನಿಸುವ ಹಿಂದೂಫೋಬಿಕ್ ಜಾಹೀರಾತುಗಳನ್ನು ನಿಲ್ಲಿಸಿ. ದಾನದ ಅರ್ಥ ತಿಳಿದುಕೊಳ್ಳಿ’ ಎಂದಿದ್ದಾರೆ.

ಈ ಜಾಹೀರಾತಿಗೆ ಮೆಚ್ಚುಗೆ , ವಿಮರ್ಶೆ, ಕಟು ವಿಮರ್ಶೆ ಕೂಡ ವ್ಯಕ್ತವಾಗಿದೆ. ಹಿಂದೂ ಸಂಪ್ರದಾಯವನ್ನು ಬಾಲಿವುಡ್ ಮತ್ತು ಜಾಹೀರಾತು ಕಂಪನಿ ಸರಿಯಾಗಿ ಅರ್ಥಮಾಡಿಕೊಂಡಿಲ್ಲ. ಕನ್ಯಾದಾನ ಎಂದರೆ ಹೆಣ್ಣನ್ನು ದಾನವಾಗಿ ನೀಡುವುದಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟೀಕಿಸಲಾಗಿದೆ.


ಇದನ್ನೂ ಓದಿ: ಕನ್ನಡದ ಮೊದಲ ಲೆಸ್ಬಿಯನ್ ಚಿತ್ರ ’ನಾನು ಲೇಡಿಸ್’ ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವಕ್ಕೆ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...