Homeಮುಖಪುಟಕನ್ಯಾದಾನ್‌ ಅಲ್ಲ, ಕನ್ಯಾಮಾನ್‌ ಹೊಸ ಐಡಿಯಾ ಎಂದ ಜಾಹೀರಾತು ವಿರುದ್ಧ ಪ್ರತಿಭಟನೆ

ಕನ್ಯಾದಾನ್‌ ಅಲ್ಲ, ಕನ್ಯಾಮಾನ್‌ ಹೊಸ ಐಡಿಯಾ ಎಂದ ಜಾಹೀರಾತು ವಿರುದ್ಧ ಪ್ರತಿಭಟನೆ

- Advertisement -
- Advertisement -

ಬಾಲಿವುಡ್ ನಟಿ ಆಲಿಯಾ ಭಟ್ ಮುಖ್ಯಪಾತ್ರದಲ್ಲಿರುವ ಮಾನ್ಯವರ್ ಬಟ್ಟೆ ಬ್ರಾಂಡ್‌ನ ಕನ್ಯಾಮಾನ್ ಜಾಹೀರಾತು ಭಾರಿ ಪರ ವಿರೋಧ ಚರ್ಚೆಗೆ ಗ್ರಾಸವಾಗಿದೆ. ಕೆಲವರು ಭಾರತದ ಸಿನಿಮಾಗಳು, ಟಿವಿ ಶೋಗಳಿಗಿಂತ ಈ ಜಾಹೀರಾತು ಮುಂದುವರೆದಿದೆ ಎಂದಿದ್ದಾರೆ.

ಇನ್ನು ಕೆಲವರು ಹಿಂದೂ ಸಂಸ್ಕೃತತಿಯನ್ನು ಅರ್ತ ಮಾಡಿಕೊಳ್ಳದೇ ಅವಮಾನ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ನವಿ ಮುಂಬೈನ ಬಟ್ಟೆ ಬ್ರಾಂಡ್‌ನ ಶೋರೂಂನ ಹೊರ ಭಾಗದಲ್ಲಿ ಹಿಂದೂ ಧಾರ್ಮಿಕ ಸಂಘಟನೆಯೊಂದು ಪ್ರತಿಭಟನೆ ನಡೆಸಿದೆ.

ಹಿಂದೂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಆರೋಪಿಸಿದರುವ ಹಿಂದೂ ಜನಜಾಗೃತಿ ಸಮಿತಿಯ ಸದಸ್ಯರು, ನವಿ ಮುಂಬೈನ ವಾಶಿ ಪ್ರದೇಶದ ಮಳಿಗೆಯ ಹೊರಗೆ ಮಾನ್ಯವರ್ ಬಟ್ಟೆ ಬ್ರಾಂಡ್‌ನ ವೇದಾಂತ ಫ್ಯಾಶನ್ಸ್ ಲಿಮಿಟೆಡ್ ವಿರುದ್ಧ ಘೋಷಣೆಗಳನ್ನು ಕೂಗಿದರು.

ಇದನ್ನೂ ಓದಿ: ಭಾವುಕ ಅನುಭವ ನೀಡುವ ‘ಪುಕ್ಸಟ್ಟೆ ಲೈಫು, ಪುರ್‌ಸೊತ್ತೇ ಇಲ್ಲ’ ಸಿನಿಮಾ: ಪ್ರೀತಿ ನಾಗರಾಜ್

ಬಲಪಂಥೀಯ ಸಂಘಟನೆಯ ವಕ್ತಾರ ಡಾ.ಉದಯ್ ಧುರಿ ಅವರು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಕಂಪನಿಯ ಜಾಹೀರಾತಿನಲ್ಲಿ ಹಿಂದೂ ವಿವಾಹ ಸಮಾರಂಭಗಳಲ್ಲಿ ‘ಕನ್ಯಾದಾನ’ ಆಚರಣೆಯನ್ನು “ತಪ್ಪಾಗಿ ಚಿತ್ರಿಸಲಾಗಿದೆ” ಮತ್ತು ಆದ್ದರಿಂದ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದಿದ್ದಾರೆ.

ಮಾನ್ಯವರ್ ಬಟ್ಟೆ ಬ್ರಾಂಡ್‌ನ ವೇದಾಂತ ಫ್ಯಾಶನ್ಸ್ ಲಿಮಿಟೆಡ್ ಸಂಸ್ಥೆಯು ಬೇಷರತ್ ಕ್ಷಮೆ ಕೇಳಬೇಕು.  ಕ್ಷಣವೇ ಜಾಹೀರಾತನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿತ್ತು. ಸಂಸ್ಥೆಯು ಕ್ಷಮೆ ಯಾಚಿಸುವವರೆಗೆ ಮತ್ತು ಜಾಹೀರಾತನ್ನು ಹಿಂಪಡೆಯುವವರೆಗೂ ಬಟ್ಟೆ ಬ್ರಾಂಡ್ ಅನ್ನು ಬಹಿಷ್ಕರಿಸುವಂತೆ ಜನರಲ್ಲಿ ಮನವಿ ಮಾಡಿದೆ.

1.41 ನಿಮಿಷಗಳ ಜಾಹೀರಾತಿನಲ್ಲಿ, ಆಲಿಯಾ ಭಟ್, ‘ಮಂಟಪ’ದಲ್ಲಿ ಕುಳಿತುಕೊಂಡು ತಾನು ಮನೆಯಲ್ಲಿ ಹೇಗೆ ಬೆಳೆದೆ, ಮನೆಯವರ ಪ್ರೀತಿ ಹೇಗಿತ್ತು ಎನ್ನುತ್ತಾ…ತಾನು ಬೆಳೆಯುತ್ತಲೇ ಹೇಗೆ ಬೇರೆ ಮನೆಯ ಹೆಣ್ಣು, ಬೇರೆಯವರ ಆಸ್ತಿ, ಬೇರೆ ಮನೆಗೆ ಹಾರಿ ಹೋಗುವ, ಅಲ್ಲಿ ಅನ್ನಾಹಾರ ತಿನ್ನುವ ಚಿಡಿಯಾ (ಪಕ್ಷಿ) ಎಂಬುದನ್ನು ನೆನಪಿಸುತ್ತಿದ್ದರು ಎಂಬುದನ್ನು ಹೇಳುತ್ತಾರೆ.

Alia Bhatt faces severe backlash on latest Manyavar ad

ಜೊತೆಗೆ ಇಷ್ಟು ಪ್ರೀತಿಸುತ್ತಿದ್ದವರು ಕೂಡ ನಾನು ಬೇರೆ ಮನೆಯ ಆಸ್ತಿಯಲ್ಲ ಎಂಬುದನ್ನು ಹೇಳಲಿಲ್ಲ. ಯಾಕೆ ಯಾವಗಲೂ ಕನ್ಯಾದಾನ್ ಆಗುತ್ತದೆ…? ನಾನು ದಾನ ಮಾಡುವ ವಸ್ತುವೇ ಎಂದು ಪ್ರಶ್ನಿಸುತ್ತಾರೆ. ಬಳಿಕ ಆಚರಣೆಯಲ್ಲಿ ವರನ ಕಡೆಯವರು ಕನ್ಯಾದಾನ್ ತೆಗೆದುಕೊಳ್ಳುವ ಬದಲು ತಮ್ಮ ಮಗನನ್ನು ದಾನ ನೀಡುವ ರೀತಿ ಚಿತ್ರಿಸಿದ್ದಾರೆ. ಇಲ್ಲಿ ಆಲಿಯಾ ಭಟ್ ಕನ್ಯಾದಾನ್ ಅಲ್ಲ…ಕನ್ಯಾಮಾನ್…ಹೊಸ ಐಡಿಯಾ ಎನ್ನುತ್ತಾರೆ.

ಇತ್ತ ಬಾಲಿವುಡ್ ನಟಿ ಕಂಗನಾ ರಣಾವತ್ ಕೂಡ ಆಲಿಯಾ ಬಟ್ ಜಾಹೀರಾತಿಗೆ ಕಟುವಾಗಿ ಟೀಕಿಸಿದ್ದರು. ‘ಎಲ್ಲಾ ಬ್ರಾಂಡ್‌ಗಳಿಗೆ ವಿನಂತಿ … ನಿಮ್ಮ ವಸ್ತುಗಳನ್ನು ಮಾರಾಟ ಮಾಡಲು ಧರ್ಮವನ್ನು ಬಳಸುವುದನ್ನು ನಿಲ್ಲಿಸಿ, ಅಲ್ಪಸಂಖ್ಯಾತರು ಮತ್ತು ಹಿಂದೂ ದ್ವೇಷಿಗಳನ್ನು ಮೆಚ್ಚಿಸಲು ಪ್ರಯತ್ನಿಸುವ ಹಿಂದೂಫೋಬಿಕ್ ಜಾಹೀರಾತುಗಳನ್ನು ನಿಲ್ಲಿಸಿ. ದಾನದ ಅರ್ಥ ತಿಳಿದುಕೊಳ್ಳಿ’ ಎಂದಿದ್ದಾರೆ.

ಈ ಜಾಹೀರಾತಿಗೆ ಮೆಚ್ಚುಗೆ , ವಿಮರ್ಶೆ, ಕಟು ವಿಮರ್ಶೆ ಕೂಡ ವ್ಯಕ್ತವಾಗಿದೆ. ಹಿಂದೂ ಸಂಪ್ರದಾಯವನ್ನು ಬಾಲಿವುಡ್ ಮತ್ತು ಜಾಹೀರಾತು ಕಂಪನಿ ಸರಿಯಾಗಿ ಅರ್ಥಮಾಡಿಕೊಂಡಿಲ್ಲ. ಕನ್ಯಾದಾನ ಎಂದರೆ ಹೆಣ್ಣನ್ನು ದಾನವಾಗಿ ನೀಡುವುದಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟೀಕಿಸಲಾಗಿದೆ.


ಇದನ್ನೂ ಓದಿ: ಕನ್ನಡದ ಮೊದಲ ಲೆಸ್ಬಿಯನ್ ಚಿತ್ರ ’ನಾನು ಲೇಡಿಸ್’ ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವಕ್ಕೆ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...