Homeಮುಖಪುಟಕನ್ಯಾದಾನ್‌ ಅಲ್ಲ, ಕನ್ಯಾಮಾನ್‌ ಹೊಸ ಐಡಿಯಾ ಎಂದ ಜಾಹೀರಾತು ವಿರುದ್ಧ ಪ್ರತಿಭಟನೆ

ಕನ್ಯಾದಾನ್‌ ಅಲ್ಲ, ಕನ್ಯಾಮಾನ್‌ ಹೊಸ ಐಡಿಯಾ ಎಂದ ಜಾಹೀರಾತು ವಿರುದ್ಧ ಪ್ರತಿಭಟನೆ

- Advertisement -
- Advertisement -

ಬಾಲಿವುಡ್ ನಟಿ ಆಲಿಯಾ ಭಟ್ ಮುಖ್ಯಪಾತ್ರದಲ್ಲಿರುವ ಮಾನ್ಯವರ್ ಬಟ್ಟೆ ಬ್ರಾಂಡ್‌ನ ಕನ್ಯಾಮಾನ್ ಜಾಹೀರಾತು ಭಾರಿ ಪರ ವಿರೋಧ ಚರ್ಚೆಗೆ ಗ್ರಾಸವಾಗಿದೆ. ಕೆಲವರು ಭಾರತದ ಸಿನಿಮಾಗಳು, ಟಿವಿ ಶೋಗಳಿಗಿಂತ ಈ ಜಾಹೀರಾತು ಮುಂದುವರೆದಿದೆ ಎಂದಿದ್ದಾರೆ.

ಇನ್ನು ಕೆಲವರು ಹಿಂದೂ ಸಂಸ್ಕೃತತಿಯನ್ನು ಅರ್ತ ಮಾಡಿಕೊಳ್ಳದೇ ಅವಮಾನ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ನವಿ ಮುಂಬೈನ ಬಟ್ಟೆ ಬ್ರಾಂಡ್‌ನ ಶೋರೂಂನ ಹೊರ ಭಾಗದಲ್ಲಿ ಹಿಂದೂ ಧಾರ್ಮಿಕ ಸಂಘಟನೆಯೊಂದು ಪ್ರತಿಭಟನೆ ನಡೆಸಿದೆ.

ಹಿಂದೂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಆರೋಪಿಸಿದರುವ ಹಿಂದೂ ಜನಜಾಗೃತಿ ಸಮಿತಿಯ ಸದಸ್ಯರು, ನವಿ ಮುಂಬೈನ ವಾಶಿ ಪ್ರದೇಶದ ಮಳಿಗೆಯ ಹೊರಗೆ ಮಾನ್ಯವರ್ ಬಟ್ಟೆ ಬ್ರಾಂಡ್‌ನ ವೇದಾಂತ ಫ್ಯಾಶನ್ಸ್ ಲಿಮಿಟೆಡ್ ವಿರುದ್ಧ ಘೋಷಣೆಗಳನ್ನು ಕೂಗಿದರು.

ಇದನ್ನೂ ಓದಿ: ಭಾವುಕ ಅನುಭವ ನೀಡುವ ‘ಪುಕ್ಸಟ್ಟೆ ಲೈಫು, ಪುರ್‌ಸೊತ್ತೇ ಇಲ್ಲ’ ಸಿನಿಮಾ: ಪ್ರೀತಿ ನಾಗರಾಜ್

ಬಲಪಂಥೀಯ ಸಂಘಟನೆಯ ವಕ್ತಾರ ಡಾ.ಉದಯ್ ಧುರಿ ಅವರು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಕಂಪನಿಯ ಜಾಹೀರಾತಿನಲ್ಲಿ ಹಿಂದೂ ವಿವಾಹ ಸಮಾರಂಭಗಳಲ್ಲಿ ‘ಕನ್ಯಾದಾನ’ ಆಚರಣೆಯನ್ನು “ತಪ್ಪಾಗಿ ಚಿತ್ರಿಸಲಾಗಿದೆ” ಮತ್ತು ಆದ್ದರಿಂದ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದಿದ್ದಾರೆ.

ಮಾನ್ಯವರ್ ಬಟ್ಟೆ ಬ್ರಾಂಡ್‌ನ ವೇದಾಂತ ಫ್ಯಾಶನ್ಸ್ ಲಿಮಿಟೆಡ್ ಸಂಸ್ಥೆಯು ಬೇಷರತ್ ಕ್ಷಮೆ ಕೇಳಬೇಕು.  ಕ್ಷಣವೇ ಜಾಹೀರಾತನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿತ್ತು. ಸಂಸ್ಥೆಯು ಕ್ಷಮೆ ಯಾಚಿಸುವವರೆಗೆ ಮತ್ತು ಜಾಹೀರಾತನ್ನು ಹಿಂಪಡೆಯುವವರೆಗೂ ಬಟ್ಟೆ ಬ್ರಾಂಡ್ ಅನ್ನು ಬಹಿಷ್ಕರಿಸುವಂತೆ ಜನರಲ್ಲಿ ಮನವಿ ಮಾಡಿದೆ.

1.41 ನಿಮಿಷಗಳ ಜಾಹೀರಾತಿನಲ್ಲಿ, ಆಲಿಯಾ ಭಟ್, ‘ಮಂಟಪ’ದಲ್ಲಿ ಕುಳಿತುಕೊಂಡು ತಾನು ಮನೆಯಲ್ಲಿ ಹೇಗೆ ಬೆಳೆದೆ, ಮನೆಯವರ ಪ್ರೀತಿ ಹೇಗಿತ್ತು ಎನ್ನುತ್ತಾ…ತಾನು ಬೆಳೆಯುತ್ತಲೇ ಹೇಗೆ ಬೇರೆ ಮನೆಯ ಹೆಣ್ಣು, ಬೇರೆಯವರ ಆಸ್ತಿ, ಬೇರೆ ಮನೆಗೆ ಹಾರಿ ಹೋಗುವ, ಅಲ್ಲಿ ಅನ್ನಾಹಾರ ತಿನ್ನುವ ಚಿಡಿಯಾ (ಪಕ್ಷಿ) ಎಂಬುದನ್ನು ನೆನಪಿಸುತ್ತಿದ್ದರು ಎಂಬುದನ್ನು ಹೇಳುತ್ತಾರೆ.

Alia Bhatt faces severe backlash on latest Manyavar ad

ಜೊತೆಗೆ ಇಷ್ಟು ಪ್ರೀತಿಸುತ್ತಿದ್ದವರು ಕೂಡ ನಾನು ಬೇರೆ ಮನೆಯ ಆಸ್ತಿಯಲ್ಲ ಎಂಬುದನ್ನು ಹೇಳಲಿಲ್ಲ. ಯಾಕೆ ಯಾವಗಲೂ ಕನ್ಯಾದಾನ್ ಆಗುತ್ತದೆ…? ನಾನು ದಾನ ಮಾಡುವ ವಸ್ತುವೇ ಎಂದು ಪ್ರಶ್ನಿಸುತ್ತಾರೆ. ಬಳಿಕ ಆಚರಣೆಯಲ್ಲಿ ವರನ ಕಡೆಯವರು ಕನ್ಯಾದಾನ್ ತೆಗೆದುಕೊಳ್ಳುವ ಬದಲು ತಮ್ಮ ಮಗನನ್ನು ದಾನ ನೀಡುವ ರೀತಿ ಚಿತ್ರಿಸಿದ್ದಾರೆ. ಇಲ್ಲಿ ಆಲಿಯಾ ಭಟ್ ಕನ್ಯಾದಾನ್ ಅಲ್ಲ…ಕನ್ಯಾಮಾನ್…ಹೊಸ ಐಡಿಯಾ ಎನ್ನುತ್ತಾರೆ.

ಇತ್ತ ಬಾಲಿವುಡ್ ನಟಿ ಕಂಗನಾ ರಣಾವತ್ ಕೂಡ ಆಲಿಯಾ ಬಟ್ ಜಾಹೀರಾತಿಗೆ ಕಟುವಾಗಿ ಟೀಕಿಸಿದ್ದರು. ‘ಎಲ್ಲಾ ಬ್ರಾಂಡ್‌ಗಳಿಗೆ ವಿನಂತಿ … ನಿಮ್ಮ ವಸ್ತುಗಳನ್ನು ಮಾರಾಟ ಮಾಡಲು ಧರ್ಮವನ್ನು ಬಳಸುವುದನ್ನು ನಿಲ್ಲಿಸಿ, ಅಲ್ಪಸಂಖ್ಯಾತರು ಮತ್ತು ಹಿಂದೂ ದ್ವೇಷಿಗಳನ್ನು ಮೆಚ್ಚಿಸಲು ಪ್ರಯತ್ನಿಸುವ ಹಿಂದೂಫೋಬಿಕ್ ಜಾಹೀರಾತುಗಳನ್ನು ನಿಲ್ಲಿಸಿ. ದಾನದ ಅರ್ಥ ತಿಳಿದುಕೊಳ್ಳಿ’ ಎಂದಿದ್ದಾರೆ.

ಈ ಜಾಹೀರಾತಿಗೆ ಮೆಚ್ಚುಗೆ , ವಿಮರ್ಶೆ, ಕಟು ವಿಮರ್ಶೆ ಕೂಡ ವ್ಯಕ್ತವಾಗಿದೆ. ಹಿಂದೂ ಸಂಪ್ರದಾಯವನ್ನು ಬಾಲಿವುಡ್ ಮತ್ತು ಜಾಹೀರಾತು ಕಂಪನಿ ಸರಿಯಾಗಿ ಅರ್ಥಮಾಡಿಕೊಂಡಿಲ್ಲ. ಕನ್ಯಾದಾನ ಎಂದರೆ ಹೆಣ್ಣನ್ನು ದಾನವಾಗಿ ನೀಡುವುದಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟೀಕಿಸಲಾಗಿದೆ.


ಇದನ್ನೂ ಓದಿ: ಕನ್ನಡದ ಮೊದಲ ಲೆಸ್ಬಿಯನ್ ಚಿತ್ರ ’ನಾನು ಲೇಡಿಸ್’ ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವಕ್ಕೆ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...

ಮುಂಬೈ: 2 ದಿನಗಳಿಂದ ಹೊತ್ತಿ ಉರಿಯುತ್ತಿರುವ ಪೊವೈ ಬೆಟ್ಟಗಳು: ನಿವಾಸಿಗಳಿಂದ ಅಧಿಕಾರಿಗಳ ನಿಷ್ಕ್ರಿಯತೆಯ ಆರೋಪ 

ಮುಂಬೈನ ಪೊವೈ ಬೆಟ್ಟಗಳ ಪ್ರದೇಶದಲ್ಲಿ ಸಂಭವಿಸಿದ ಬೆಂಕಿ ಕಳೆದ ಎರಡು ದಿನಗಳಿಂದ ಉರಿಯುತ್ತಿದೆ ಎಂದು ವರದಿಯಾಗಿದೆ. ನಿವಾಸಿಗಳು ಬೆಂಕಿಯ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಮತ್ತು ನಾಗರಿಕ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆಯು ಸಿಕ್ಕಿಲ್ಲ...

‘ದಲಿತ ಕ್ರೈಸ್ತ’ರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು: ಮಾನವ ಹಕ್ಕುಗಳ ಕಾರ್ಯಕರ್ತ ವಿನ್ಸೆಂಟ್ ಕಥಿರ್

"ದಲಿತ ಕ್ರೈಸ್ತರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು, ಇದರಿಂದಾಗಿ ಜಾತಿ ಹಿಂಸಾಚಾರದ ಬಲಿಪಶುಗಳು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಪ್ರಕಾರ ಸರ್ಕಾರದಿಂದ ಪರಿಹಾರವನ್ನು ಪಡೆಯಬಹುದು" ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಹಾಗೂ...

ಪಶ್ಚಿಮ ಏಷ್ಯಾ ಬಿಕ್ಕಟ್ಟು : ಇರಾನ್ ವಿದೇಶಾಂಗ ಸಚಿವರ ಜೊತೆ ಜೈಶಂಕರ್ ಚರ್ಚೆ

ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಅವರೊಂದಿಗೆ ಮಂಗಳವಾರ (ಮಾ.10) ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಈ ವೇಳೆ ಪಶ್ಚಿಮ ಏಷ್ಯಾದ ಬೆಳವಣಿಗೆಗಳು...

ಪಾಕಿಸ್ತಾನದ ಐಎಸ್‌ಐ ಪರ ಬೇಹುಗಾರಿಕೆ ಆರೋಪ : ನೌಕಾಪಡೆಯ ಲ್ಯಾನ್ಸ್ ನಾಯಕ್ ಆದರ್ಶ್ ಕುಮಾರ್ ಬಂಧನ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ 24 ವರ್ಷದ ಭಾರತೀಯ ನೌಕಾಪಡೆಯ ಲ್ಯಾನ್ಸ್ ನಾಯಕ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮಂಗಳವಾರ (ಮಾ.10)...

ಅಮೆರಿಕದ ತೈಲ ಸಂಸ್ಕರಣಾ ಘಟಕಕ್ಕೆ ರಿಲಯನ್ಸ್ ಹೂಡಿಕೆ : ಟ್ರಂಪ್ ಘೋಷಣೆ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಹೂಡಿಕೆಯ ಸಹಾಯದಿಂದ 50 ವರ್ಷಗಳಲ್ಲಿ ಅಮೆರಿಕ ತನ್ನ ಮೊದಲ ಹೊಸ ತೈಲ ಸಂಸ್ಕರಣಾಗಾರವನ್ನು ಪಡೆಯಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. 'ಅಮೆರಿಕ ಫಸ್ಟ್ ರಿಫೈನಿಂಗ್ ಸಂಸ್ಥೆ'ಯು ಟೆಕ್ಸಾಸ್‌ನ...

ಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶ ಪ್ರಧಾನಿ ಮೋದಿಯವರ ಕೈಯಲ್ಲಿ ಭದ್ರವಾಗಿದೆ ಎಂದು ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿರುವಾಗಲೇ,...