Homeಮುಖಪುಟಕನ್ಯಾದಾನ್‌ ಅಲ್ಲ, ಕನ್ಯಾಮಾನ್‌ ಹೊಸ ಐಡಿಯಾ ಎಂದ ಜಾಹೀರಾತು ವಿರುದ್ಧ ಪ್ರತಿಭಟನೆ

ಕನ್ಯಾದಾನ್‌ ಅಲ್ಲ, ಕನ್ಯಾಮಾನ್‌ ಹೊಸ ಐಡಿಯಾ ಎಂದ ಜಾಹೀರಾತು ವಿರುದ್ಧ ಪ್ರತಿಭಟನೆ

- Advertisement -
- Advertisement -

ಬಾಲಿವುಡ್ ನಟಿ ಆಲಿಯಾ ಭಟ್ ಮುಖ್ಯಪಾತ್ರದಲ್ಲಿರುವ ಮಾನ್ಯವರ್ ಬಟ್ಟೆ ಬ್ರಾಂಡ್‌ನ ಕನ್ಯಾಮಾನ್ ಜಾಹೀರಾತು ಭಾರಿ ಪರ ವಿರೋಧ ಚರ್ಚೆಗೆ ಗ್ರಾಸವಾಗಿದೆ. ಕೆಲವರು ಭಾರತದ ಸಿನಿಮಾಗಳು, ಟಿವಿ ಶೋಗಳಿಗಿಂತ ಈ ಜಾಹೀರಾತು ಮುಂದುವರೆದಿದೆ ಎಂದಿದ್ದಾರೆ.

ಇನ್ನು ಕೆಲವರು ಹಿಂದೂ ಸಂಸ್ಕೃತತಿಯನ್ನು ಅರ್ತ ಮಾಡಿಕೊಳ್ಳದೇ ಅವಮಾನ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ನವಿ ಮುಂಬೈನ ಬಟ್ಟೆ ಬ್ರಾಂಡ್‌ನ ಶೋರೂಂನ ಹೊರ ಭಾಗದಲ್ಲಿ ಹಿಂದೂ ಧಾರ್ಮಿಕ ಸಂಘಟನೆಯೊಂದು ಪ್ರತಿಭಟನೆ ನಡೆಸಿದೆ.

ಹಿಂದೂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಆರೋಪಿಸಿದರುವ ಹಿಂದೂ ಜನಜಾಗೃತಿ ಸಮಿತಿಯ ಸದಸ್ಯರು, ನವಿ ಮುಂಬೈನ ವಾಶಿ ಪ್ರದೇಶದ ಮಳಿಗೆಯ ಹೊರಗೆ ಮಾನ್ಯವರ್ ಬಟ್ಟೆ ಬ್ರಾಂಡ್‌ನ ವೇದಾಂತ ಫ್ಯಾಶನ್ಸ್ ಲಿಮಿಟೆಡ್ ವಿರುದ್ಧ ಘೋಷಣೆಗಳನ್ನು ಕೂಗಿದರು.

ಇದನ್ನೂ ಓದಿ: ಭಾವುಕ ಅನುಭವ ನೀಡುವ ‘ಪುಕ್ಸಟ್ಟೆ ಲೈಫು, ಪುರ್‌ಸೊತ್ತೇ ಇಲ್ಲ’ ಸಿನಿಮಾ: ಪ್ರೀತಿ ನಾಗರಾಜ್

ಬಲಪಂಥೀಯ ಸಂಘಟನೆಯ ವಕ್ತಾರ ಡಾ.ಉದಯ್ ಧುರಿ ಅವರು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಕಂಪನಿಯ ಜಾಹೀರಾತಿನಲ್ಲಿ ಹಿಂದೂ ವಿವಾಹ ಸಮಾರಂಭಗಳಲ್ಲಿ ‘ಕನ್ಯಾದಾನ’ ಆಚರಣೆಯನ್ನು “ತಪ್ಪಾಗಿ ಚಿತ್ರಿಸಲಾಗಿದೆ” ಮತ್ತು ಆದ್ದರಿಂದ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದಿದ್ದಾರೆ.

ಮಾನ್ಯವರ್ ಬಟ್ಟೆ ಬ್ರಾಂಡ್‌ನ ವೇದಾಂತ ಫ್ಯಾಶನ್ಸ್ ಲಿಮಿಟೆಡ್ ಸಂಸ್ಥೆಯು ಬೇಷರತ್ ಕ್ಷಮೆ ಕೇಳಬೇಕು.  ಕ್ಷಣವೇ ಜಾಹೀರಾತನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿತ್ತು. ಸಂಸ್ಥೆಯು ಕ್ಷಮೆ ಯಾಚಿಸುವವರೆಗೆ ಮತ್ತು ಜಾಹೀರಾತನ್ನು ಹಿಂಪಡೆಯುವವರೆಗೂ ಬಟ್ಟೆ ಬ್ರಾಂಡ್ ಅನ್ನು ಬಹಿಷ್ಕರಿಸುವಂತೆ ಜನರಲ್ಲಿ ಮನವಿ ಮಾಡಿದೆ.

1.41 ನಿಮಿಷಗಳ ಜಾಹೀರಾತಿನಲ್ಲಿ, ಆಲಿಯಾ ಭಟ್, ‘ಮಂಟಪ’ದಲ್ಲಿ ಕುಳಿತುಕೊಂಡು ತಾನು ಮನೆಯಲ್ಲಿ ಹೇಗೆ ಬೆಳೆದೆ, ಮನೆಯವರ ಪ್ರೀತಿ ಹೇಗಿತ್ತು ಎನ್ನುತ್ತಾ…ತಾನು ಬೆಳೆಯುತ್ತಲೇ ಹೇಗೆ ಬೇರೆ ಮನೆಯ ಹೆಣ್ಣು, ಬೇರೆಯವರ ಆಸ್ತಿ, ಬೇರೆ ಮನೆಗೆ ಹಾರಿ ಹೋಗುವ, ಅಲ್ಲಿ ಅನ್ನಾಹಾರ ತಿನ್ನುವ ಚಿಡಿಯಾ (ಪಕ್ಷಿ) ಎಂಬುದನ್ನು ನೆನಪಿಸುತ್ತಿದ್ದರು ಎಂಬುದನ್ನು ಹೇಳುತ್ತಾರೆ.

Alia Bhatt faces severe backlash on latest Manyavar ad

ಜೊತೆಗೆ ಇಷ್ಟು ಪ್ರೀತಿಸುತ್ತಿದ್ದವರು ಕೂಡ ನಾನು ಬೇರೆ ಮನೆಯ ಆಸ್ತಿಯಲ್ಲ ಎಂಬುದನ್ನು ಹೇಳಲಿಲ್ಲ. ಯಾಕೆ ಯಾವಗಲೂ ಕನ್ಯಾದಾನ್ ಆಗುತ್ತದೆ…? ನಾನು ದಾನ ಮಾಡುವ ವಸ್ತುವೇ ಎಂದು ಪ್ರಶ್ನಿಸುತ್ತಾರೆ. ಬಳಿಕ ಆಚರಣೆಯಲ್ಲಿ ವರನ ಕಡೆಯವರು ಕನ್ಯಾದಾನ್ ತೆಗೆದುಕೊಳ್ಳುವ ಬದಲು ತಮ್ಮ ಮಗನನ್ನು ದಾನ ನೀಡುವ ರೀತಿ ಚಿತ್ರಿಸಿದ್ದಾರೆ. ಇಲ್ಲಿ ಆಲಿಯಾ ಭಟ್ ಕನ್ಯಾದಾನ್ ಅಲ್ಲ…ಕನ್ಯಾಮಾನ್…ಹೊಸ ಐಡಿಯಾ ಎನ್ನುತ್ತಾರೆ.

ಇತ್ತ ಬಾಲಿವುಡ್ ನಟಿ ಕಂಗನಾ ರಣಾವತ್ ಕೂಡ ಆಲಿಯಾ ಬಟ್ ಜಾಹೀರಾತಿಗೆ ಕಟುವಾಗಿ ಟೀಕಿಸಿದ್ದರು. ‘ಎಲ್ಲಾ ಬ್ರಾಂಡ್‌ಗಳಿಗೆ ವಿನಂತಿ … ನಿಮ್ಮ ವಸ್ತುಗಳನ್ನು ಮಾರಾಟ ಮಾಡಲು ಧರ್ಮವನ್ನು ಬಳಸುವುದನ್ನು ನಿಲ್ಲಿಸಿ, ಅಲ್ಪಸಂಖ್ಯಾತರು ಮತ್ತು ಹಿಂದೂ ದ್ವೇಷಿಗಳನ್ನು ಮೆಚ್ಚಿಸಲು ಪ್ರಯತ್ನಿಸುವ ಹಿಂದೂಫೋಬಿಕ್ ಜಾಹೀರಾತುಗಳನ್ನು ನಿಲ್ಲಿಸಿ. ದಾನದ ಅರ್ಥ ತಿಳಿದುಕೊಳ್ಳಿ’ ಎಂದಿದ್ದಾರೆ.

ಈ ಜಾಹೀರಾತಿಗೆ ಮೆಚ್ಚುಗೆ , ವಿಮರ್ಶೆ, ಕಟು ವಿಮರ್ಶೆ ಕೂಡ ವ್ಯಕ್ತವಾಗಿದೆ. ಹಿಂದೂ ಸಂಪ್ರದಾಯವನ್ನು ಬಾಲಿವುಡ್ ಮತ್ತು ಜಾಹೀರಾತು ಕಂಪನಿ ಸರಿಯಾಗಿ ಅರ್ಥಮಾಡಿಕೊಂಡಿಲ್ಲ. ಕನ್ಯಾದಾನ ಎಂದರೆ ಹೆಣ್ಣನ್ನು ದಾನವಾಗಿ ನೀಡುವುದಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟೀಕಿಸಲಾಗಿದೆ.


ಇದನ್ನೂ ಓದಿ: ಕನ್ನಡದ ಮೊದಲ ಲೆಸ್ಬಿಯನ್ ಚಿತ್ರ ’ನಾನು ಲೇಡಿಸ್’ ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವಕ್ಕೆ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...