Homeಮುಖಪುಟಕನ್ಯಾದಾನ್‌ ಅಲ್ಲ, ಕನ್ಯಾಮಾನ್‌ ಹೊಸ ಐಡಿಯಾ ಎಂದ ಜಾಹೀರಾತು ವಿರುದ್ಧ ಪ್ರತಿಭಟನೆ

ಕನ್ಯಾದಾನ್‌ ಅಲ್ಲ, ಕನ್ಯಾಮಾನ್‌ ಹೊಸ ಐಡಿಯಾ ಎಂದ ಜಾಹೀರಾತು ವಿರುದ್ಧ ಪ್ರತಿಭಟನೆ

- Advertisement -
- Advertisement -

ಬಾಲಿವುಡ್ ನಟಿ ಆಲಿಯಾ ಭಟ್ ಮುಖ್ಯಪಾತ್ರದಲ್ಲಿರುವ ಮಾನ್ಯವರ್ ಬಟ್ಟೆ ಬ್ರಾಂಡ್‌ನ ಕನ್ಯಾಮಾನ್ ಜಾಹೀರಾತು ಭಾರಿ ಪರ ವಿರೋಧ ಚರ್ಚೆಗೆ ಗ್ರಾಸವಾಗಿದೆ. ಕೆಲವರು ಭಾರತದ ಸಿನಿಮಾಗಳು, ಟಿವಿ ಶೋಗಳಿಗಿಂತ ಈ ಜಾಹೀರಾತು ಮುಂದುವರೆದಿದೆ ಎಂದಿದ್ದಾರೆ.

ಇನ್ನು ಕೆಲವರು ಹಿಂದೂ ಸಂಸ್ಕೃತತಿಯನ್ನು ಅರ್ತ ಮಾಡಿಕೊಳ್ಳದೇ ಅವಮಾನ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ನವಿ ಮುಂಬೈನ ಬಟ್ಟೆ ಬ್ರಾಂಡ್‌ನ ಶೋರೂಂನ ಹೊರ ಭಾಗದಲ್ಲಿ ಹಿಂದೂ ಧಾರ್ಮಿಕ ಸಂಘಟನೆಯೊಂದು ಪ್ರತಿಭಟನೆ ನಡೆಸಿದೆ.

ಹಿಂದೂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಆರೋಪಿಸಿದರುವ ಹಿಂದೂ ಜನಜಾಗೃತಿ ಸಮಿತಿಯ ಸದಸ್ಯರು, ನವಿ ಮುಂಬೈನ ವಾಶಿ ಪ್ರದೇಶದ ಮಳಿಗೆಯ ಹೊರಗೆ ಮಾನ್ಯವರ್ ಬಟ್ಟೆ ಬ್ರಾಂಡ್‌ನ ವೇದಾಂತ ಫ್ಯಾಶನ್ಸ್ ಲಿಮಿಟೆಡ್ ವಿರುದ್ಧ ಘೋಷಣೆಗಳನ್ನು ಕೂಗಿದರು.

ಇದನ್ನೂ ಓದಿ: ಭಾವುಕ ಅನುಭವ ನೀಡುವ ‘ಪುಕ್ಸಟ್ಟೆ ಲೈಫು, ಪುರ್‌ಸೊತ್ತೇ ಇಲ್ಲ’ ಸಿನಿಮಾ: ಪ್ರೀತಿ ನಾಗರಾಜ್

ಬಲಪಂಥೀಯ ಸಂಘಟನೆಯ ವಕ್ತಾರ ಡಾ.ಉದಯ್ ಧುರಿ ಅವರು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಕಂಪನಿಯ ಜಾಹೀರಾತಿನಲ್ಲಿ ಹಿಂದೂ ವಿವಾಹ ಸಮಾರಂಭಗಳಲ್ಲಿ ‘ಕನ್ಯಾದಾನ’ ಆಚರಣೆಯನ್ನು “ತಪ್ಪಾಗಿ ಚಿತ್ರಿಸಲಾಗಿದೆ” ಮತ್ತು ಆದ್ದರಿಂದ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದಿದ್ದಾರೆ.

ಮಾನ್ಯವರ್ ಬಟ್ಟೆ ಬ್ರಾಂಡ್‌ನ ವೇದಾಂತ ಫ್ಯಾಶನ್ಸ್ ಲಿಮಿಟೆಡ್ ಸಂಸ್ಥೆಯು ಬೇಷರತ್ ಕ್ಷಮೆ ಕೇಳಬೇಕು.  ಕ್ಷಣವೇ ಜಾಹೀರಾತನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿತ್ತು. ಸಂಸ್ಥೆಯು ಕ್ಷಮೆ ಯಾಚಿಸುವವರೆಗೆ ಮತ್ತು ಜಾಹೀರಾತನ್ನು ಹಿಂಪಡೆಯುವವರೆಗೂ ಬಟ್ಟೆ ಬ್ರಾಂಡ್ ಅನ್ನು ಬಹಿಷ್ಕರಿಸುವಂತೆ ಜನರಲ್ಲಿ ಮನವಿ ಮಾಡಿದೆ.

1.41 ನಿಮಿಷಗಳ ಜಾಹೀರಾತಿನಲ್ಲಿ, ಆಲಿಯಾ ಭಟ್, ‘ಮಂಟಪ’ದಲ್ಲಿ ಕುಳಿತುಕೊಂಡು ತಾನು ಮನೆಯಲ್ಲಿ ಹೇಗೆ ಬೆಳೆದೆ, ಮನೆಯವರ ಪ್ರೀತಿ ಹೇಗಿತ್ತು ಎನ್ನುತ್ತಾ…ತಾನು ಬೆಳೆಯುತ್ತಲೇ ಹೇಗೆ ಬೇರೆ ಮನೆಯ ಹೆಣ್ಣು, ಬೇರೆಯವರ ಆಸ್ತಿ, ಬೇರೆ ಮನೆಗೆ ಹಾರಿ ಹೋಗುವ, ಅಲ್ಲಿ ಅನ್ನಾಹಾರ ತಿನ್ನುವ ಚಿಡಿಯಾ (ಪಕ್ಷಿ) ಎಂಬುದನ್ನು ನೆನಪಿಸುತ್ತಿದ್ದರು ಎಂಬುದನ್ನು ಹೇಳುತ್ತಾರೆ.

Alia Bhatt faces severe backlash on latest Manyavar ad

ಜೊತೆಗೆ ಇಷ್ಟು ಪ್ರೀತಿಸುತ್ತಿದ್ದವರು ಕೂಡ ನಾನು ಬೇರೆ ಮನೆಯ ಆಸ್ತಿಯಲ್ಲ ಎಂಬುದನ್ನು ಹೇಳಲಿಲ್ಲ. ಯಾಕೆ ಯಾವಗಲೂ ಕನ್ಯಾದಾನ್ ಆಗುತ್ತದೆ…? ನಾನು ದಾನ ಮಾಡುವ ವಸ್ತುವೇ ಎಂದು ಪ್ರಶ್ನಿಸುತ್ತಾರೆ. ಬಳಿಕ ಆಚರಣೆಯಲ್ಲಿ ವರನ ಕಡೆಯವರು ಕನ್ಯಾದಾನ್ ತೆಗೆದುಕೊಳ್ಳುವ ಬದಲು ತಮ್ಮ ಮಗನನ್ನು ದಾನ ನೀಡುವ ರೀತಿ ಚಿತ್ರಿಸಿದ್ದಾರೆ. ಇಲ್ಲಿ ಆಲಿಯಾ ಭಟ್ ಕನ್ಯಾದಾನ್ ಅಲ್ಲ…ಕನ್ಯಾಮಾನ್…ಹೊಸ ಐಡಿಯಾ ಎನ್ನುತ್ತಾರೆ.

ಇತ್ತ ಬಾಲಿವುಡ್ ನಟಿ ಕಂಗನಾ ರಣಾವತ್ ಕೂಡ ಆಲಿಯಾ ಬಟ್ ಜಾಹೀರಾತಿಗೆ ಕಟುವಾಗಿ ಟೀಕಿಸಿದ್ದರು. ‘ಎಲ್ಲಾ ಬ್ರಾಂಡ್‌ಗಳಿಗೆ ವಿನಂತಿ … ನಿಮ್ಮ ವಸ್ತುಗಳನ್ನು ಮಾರಾಟ ಮಾಡಲು ಧರ್ಮವನ್ನು ಬಳಸುವುದನ್ನು ನಿಲ್ಲಿಸಿ, ಅಲ್ಪಸಂಖ್ಯಾತರು ಮತ್ತು ಹಿಂದೂ ದ್ವೇಷಿಗಳನ್ನು ಮೆಚ್ಚಿಸಲು ಪ್ರಯತ್ನಿಸುವ ಹಿಂದೂಫೋಬಿಕ್ ಜಾಹೀರಾತುಗಳನ್ನು ನಿಲ್ಲಿಸಿ. ದಾನದ ಅರ್ಥ ತಿಳಿದುಕೊಳ್ಳಿ’ ಎಂದಿದ್ದಾರೆ.

ಈ ಜಾಹೀರಾತಿಗೆ ಮೆಚ್ಚುಗೆ , ವಿಮರ್ಶೆ, ಕಟು ವಿಮರ್ಶೆ ಕೂಡ ವ್ಯಕ್ತವಾಗಿದೆ. ಹಿಂದೂ ಸಂಪ್ರದಾಯವನ್ನು ಬಾಲಿವುಡ್ ಮತ್ತು ಜಾಹೀರಾತು ಕಂಪನಿ ಸರಿಯಾಗಿ ಅರ್ಥಮಾಡಿಕೊಂಡಿಲ್ಲ. ಕನ್ಯಾದಾನ ಎಂದರೆ ಹೆಣ್ಣನ್ನು ದಾನವಾಗಿ ನೀಡುವುದಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟೀಕಿಸಲಾಗಿದೆ.


ಇದನ್ನೂ ಓದಿ: ಕನ್ನಡದ ಮೊದಲ ಲೆಸ್ಬಿಯನ್ ಚಿತ್ರ ’ನಾನು ಲೇಡಿಸ್’ ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವಕ್ಕೆ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...