Homeಮುಖಪುಟಕನ್ಯಾದಾನ್‌ ಅಲ್ಲ, ಕನ್ಯಾಮಾನ್‌ ಹೊಸ ಐಡಿಯಾ ಎಂದ ಜಾಹೀರಾತು ವಿರುದ್ಧ ಪ್ರತಿಭಟನೆ

ಕನ್ಯಾದಾನ್‌ ಅಲ್ಲ, ಕನ್ಯಾಮಾನ್‌ ಹೊಸ ಐಡಿಯಾ ಎಂದ ಜಾಹೀರಾತು ವಿರುದ್ಧ ಪ್ರತಿಭಟನೆ

- Advertisement -
- Advertisement -

ಬಾಲಿವುಡ್ ನಟಿ ಆಲಿಯಾ ಭಟ್ ಮುಖ್ಯಪಾತ್ರದಲ್ಲಿರುವ ಮಾನ್ಯವರ್ ಬಟ್ಟೆ ಬ್ರಾಂಡ್‌ನ ಕನ್ಯಾಮಾನ್ ಜಾಹೀರಾತು ಭಾರಿ ಪರ ವಿರೋಧ ಚರ್ಚೆಗೆ ಗ್ರಾಸವಾಗಿದೆ. ಕೆಲವರು ಭಾರತದ ಸಿನಿಮಾಗಳು, ಟಿವಿ ಶೋಗಳಿಗಿಂತ ಈ ಜಾಹೀರಾತು ಮುಂದುವರೆದಿದೆ ಎಂದಿದ್ದಾರೆ.

ಇನ್ನು ಕೆಲವರು ಹಿಂದೂ ಸಂಸ್ಕೃತತಿಯನ್ನು ಅರ್ತ ಮಾಡಿಕೊಳ್ಳದೇ ಅವಮಾನ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ನವಿ ಮುಂಬೈನ ಬಟ್ಟೆ ಬ್ರಾಂಡ್‌ನ ಶೋರೂಂನ ಹೊರ ಭಾಗದಲ್ಲಿ ಹಿಂದೂ ಧಾರ್ಮಿಕ ಸಂಘಟನೆಯೊಂದು ಪ್ರತಿಭಟನೆ ನಡೆಸಿದೆ.

ಹಿಂದೂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಆರೋಪಿಸಿದರುವ ಹಿಂದೂ ಜನಜಾಗೃತಿ ಸಮಿತಿಯ ಸದಸ್ಯರು, ನವಿ ಮುಂಬೈನ ವಾಶಿ ಪ್ರದೇಶದ ಮಳಿಗೆಯ ಹೊರಗೆ ಮಾನ್ಯವರ್ ಬಟ್ಟೆ ಬ್ರಾಂಡ್‌ನ ವೇದಾಂತ ಫ್ಯಾಶನ್ಸ್ ಲಿಮಿಟೆಡ್ ವಿರುದ್ಧ ಘೋಷಣೆಗಳನ್ನು ಕೂಗಿದರು.

ಇದನ್ನೂ ಓದಿ: ಭಾವುಕ ಅನುಭವ ನೀಡುವ ‘ಪುಕ್ಸಟ್ಟೆ ಲೈಫು, ಪುರ್‌ಸೊತ್ತೇ ಇಲ್ಲ’ ಸಿನಿಮಾ: ಪ್ರೀತಿ ನಾಗರಾಜ್

ಬಲಪಂಥೀಯ ಸಂಘಟನೆಯ ವಕ್ತಾರ ಡಾ.ಉದಯ್ ಧುರಿ ಅವರು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಕಂಪನಿಯ ಜಾಹೀರಾತಿನಲ್ಲಿ ಹಿಂದೂ ವಿವಾಹ ಸಮಾರಂಭಗಳಲ್ಲಿ ‘ಕನ್ಯಾದಾನ’ ಆಚರಣೆಯನ್ನು “ತಪ್ಪಾಗಿ ಚಿತ್ರಿಸಲಾಗಿದೆ” ಮತ್ತು ಆದ್ದರಿಂದ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದಿದ್ದಾರೆ.

ಮಾನ್ಯವರ್ ಬಟ್ಟೆ ಬ್ರಾಂಡ್‌ನ ವೇದಾಂತ ಫ್ಯಾಶನ್ಸ್ ಲಿಮಿಟೆಡ್ ಸಂಸ್ಥೆಯು ಬೇಷರತ್ ಕ್ಷಮೆ ಕೇಳಬೇಕು.  ಕ್ಷಣವೇ ಜಾಹೀರಾತನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿತ್ತು. ಸಂಸ್ಥೆಯು ಕ್ಷಮೆ ಯಾಚಿಸುವವರೆಗೆ ಮತ್ತು ಜಾಹೀರಾತನ್ನು ಹಿಂಪಡೆಯುವವರೆಗೂ ಬಟ್ಟೆ ಬ್ರಾಂಡ್ ಅನ್ನು ಬಹಿಷ್ಕರಿಸುವಂತೆ ಜನರಲ್ಲಿ ಮನವಿ ಮಾಡಿದೆ.

1.41 ನಿಮಿಷಗಳ ಜಾಹೀರಾತಿನಲ್ಲಿ, ಆಲಿಯಾ ಭಟ್, ‘ಮಂಟಪ’ದಲ್ಲಿ ಕುಳಿತುಕೊಂಡು ತಾನು ಮನೆಯಲ್ಲಿ ಹೇಗೆ ಬೆಳೆದೆ, ಮನೆಯವರ ಪ್ರೀತಿ ಹೇಗಿತ್ತು ಎನ್ನುತ್ತಾ…ತಾನು ಬೆಳೆಯುತ್ತಲೇ ಹೇಗೆ ಬೇರೆ ಮನೆಯ ಹೆಣ್ಣು, ಬೇರೆಯವರ ಆಸ್ತಿ, ಬೇರೆ ಮನೆಗೆ ಹಾರಿ ಹೋಗುವ, ಅಲ್ಲಿ ಅನ್ನಾಹಾರ ತಿನ್ನುವ ಚಿಡಿಯಾ (ಪಕ್ಷಿ) ಎಂಬುದನ್ನು ನೆನಪಿಸುತ್ತಿದ್ದರು ಎಂಬುದನ್ನು ಹೇಳುತ್ತಾರೆ.

Alia Bhatt faces severe backlash on latest Manyavar ad

ಜೊತೆಗೆ ಇಷ್ಟು ಪ್ರೀತಿಸುತ್ತಿದ್ದವರು ಕೂಡ ನಾನು ಬೇರೆ ಮನೆಯ ಆಸ್ತಿಯಲ್ಲ ಎಂಬುದನ್ನು ಹೇಳಲಿಲ್ಲ. ಯಾಕೆ ಯಾವಗಲೂ ಕನ್ಯಾದಾನ್ ಆಗುತ್ತದೆ…? ನಾನು ದಾನ ಮಾಡುವ ವಸ್ತುವೇ ಎಂದು ಪ್ರಶ್ನಿಸುತ್ತಾರೆ. ಬಳಿಕ ಆಚರಣೆಯಲ್ಲಿ ವರನ ಕಡೆಯವರು ಕನ್ಯಾದಾನ್ ತೆಗೆದುಕೊಳ್ಳುವ ಬದಲು ತಮ್ಮ ಮಗನನ್ನು ದಾನ ನೀಡುವ ರೀತಿ ಚಿತ್ರಿಸಿದ್ದಾರೆ. ಇಲ್ಲಿ ಆಲಿಯಾ ಭಟ್ ಕನ್ಯಾದಾನ್ ಅಲ್ಲ…ಕನ್ಯಾಮಾನ್…ಹೊಸ ಐಡಿಯಾ ಎನ್ನುತ್ತಾರೆ.

ಇತ್ತ ಬಾಲಿವುಡ್ ನಟಿ ಕಂಗನಾ ರಣಾವತ್ ಕೂಡ ಆಲಿಯಾ ಬಟ್ ಜಾಹೀರಾತಿಗೆ ಕಟುವಾಗಿ ಟೀಕಿಸಿದ್ದರು. ‘ಎಲ್ಲಾ ಬ್ರಾಂಡ್‌ಗಳಿಗೆ ವಿನಂತಿ … ನಿಮ್ಮ ವಸ್ತುಗಳನ್ನು ಮಾರಾಟ ಮಾಡಲು ಧರ್ಮವನ್ನು ಬಳಸುವುದನ್ನು ನಿಲ್ಲಿಸಿ, ಅಲ್ಪಸಂಖ್ಯಾತರು ಮತ್ತು ಹಿಂದೂ ದ್ವೇಷಿಗಳನ್ನು ಮೆಚ್ಚಿಸಲು ಪ್ರಯತ್ನಿಸುವ ಹಿಂದೂಫೋಬಿಕ್ ಜಾಹೀರಾತುಗಳನ್ನು ನಿಲ್ಲಿಸಿ. ದಾನದ ಅರ್ಥ ತಿಳಿದುಕೊಳ್ಳಿ’ ಎಂದಿದ್ದಾರೆ.

ಈ ಜಾಹೀರಾತಿಗೆ ಮೆಚ್ಚುಗೆ , ವಿಮರ್ಶೆ, ಕಟು ವಿಮರ್ಶೆ ಕೂಡ ವ್ಯಕ್ತವಾಗಿದೆ. ಹಿಂದೂ ಸಂಪ್ರದಾಯವನ್ನು ಬಾಲಿವುಡ್ ಮತ್ತು ಜಾಹೀರಾತು ಕಂಪನಿ ಸರಿಯಾಗಿ ಅರ್ಥಮಾಡಿಕೊಂಡಿಲ್ಲ. ಕನ್ಯಾದಾನ ಎಂದರೆ ಹೆಣ್ಣನ್ನು ದಾನವಾಗಿ ನೀಡುವುದಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟೀಕಿಸಲಾಗಿದೆ.


ಇದನ್ನೂ ಓದಿ: ಕನ್ನಡದ ಮೊದಲ ಲೆಸ್ಬಿಯನ್ ಚಿತ್ರ ’ನಾನು ಲೇಡಿಸ್’ ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವಕ್ಕೆ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...