Homeಮುಖಪುಟಕನ್ಯಾಕುಮಾರಿಯಲ್ಲಿ ಮೋದಿ ಧ್ಯಾನ: ನೀತಿ ಸಂಹಿತೆ ಉಲ್ಲಂಘನೆ ಬಗ್ಗೆ ಪ್ರತಿಪಕ್ಷಗಳಿಂದ ತರಾಟೆ

ಕನ್ಯಾಕುಮಾರಿಯಲ್ಲಿ ಮೋದಿ ಧ್ಯಾನ: ನೀತಿ ಸಂಹಿತೆ ಉಲ್ಲಂಘನೆ ಬಗ್ಗೆ ಪ್ರತಿಪಕ್ಷಗಳಿಂದ ತರಾಟೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಗುರುವಾರದಿಂದ ಕನ್ಯಾಕುಮಾರಿಯಲ್ಲಿ ಧ್ಯಾನವನ್ನು ಮಾಡುವುದಾಗಿ ಹೇಳಿಕೊಂಡಿದ್ದಾರೆ. ಕನ್ಯಾಕುಮಾರಿಯಲ್ಲಿ ಸ್ವಾಮಿ ವಿವೇಕಾನಂದರು ಈ ಹಿಂದೆ ಧ್ಯಾನ ಮಾಡಿದ್ದ ‘ಧ್ಯಾನ ಮಂಟಪಂ’ನಲ್ಲಿ ಲೋಕಸಭಾ ಚುನಾವಣಾ ಪ್ರಚಾರದ ನಂತರ ಮೋದಿ ಧ್ಯಾನ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿದೆ.

ಲೋಕಸಭೆ ಚುನಾವಣೆಯ 7ನೇ ಹಂತದ ಮತದಾನ ಜೂ.1ರಂದು ನಡೆಯಲಿದೆ. ಈ ಹಿನ್ನೆಲೆ ಮೇ 30ರಿಂದ ಮೌನ ಅವಧಿ ಆರಂಭವಾಗಲಿದೆ. ಆದರೆ ಇದೇ ಸಮಯದಲ್ಲಿ ಪ್ರಧಾನಿ ಮೇ 30ರ ಸಂಜೆಯಿಂದ ತಮ್ಮ ಧ್ಯಾನವನ್ನು ಪ್ರಾರಂಭಿಸುತ್ತಾರೆ. ಇದನ್ನು ಟಿವಿ ವಾಹಿನಿಗಳು ನೇರ ಪ್ರಸಾರ ಮಾಡಲಿದ್ದು, ಇದಕ್ಕೆ ಪ್ರತಿಪಕ್ಷಗಳು ವ್ಯಾಪಕವಾದ ವಿರೋಧವನ್ನು ವ್ಯಕ್ತಪಡಿಸಿದೆ.

ಈ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್‌ ನಾಯಕ ಅಭಿಷೇಕ್ ಮನು ಸಿಂಘ್ವಿ, ಪ್ರಧಾನಿ ಮೇ 30ರ ಸಂಜೆಯಿಂದ ತಮ್ಮ ಧ್ಯಾನವನ್ನು ಪ್ರಾರಂಭಿಸುತ್ತಾರೆ ಮತ್ತು ನಾವು ಅದರ ಬಗ್ಗೆ ದೂರು ನೀಡಿದ್ದೇವೆ. ಜೂ.1ರಂದು ಮತದಾನ ಇರುವ ಹಿನ್ನೆಲೆ ಮೇ 30ರಿಂದ ಮೌನ ಅವಧಿ ಪ್ರಾರಂಭವಾಗಲಿದೆ ಎಂದು ನಮಗೆಲ್ಲರಿಗೂ ತಿಳಿದಿದೆ. ಮೋದಿಯ ಈ ಘೋಷಣೆ ಚುನಾವಣೆಯ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ಜೂನ್ 1ರ ಸಂಜೆಯಿಂದ ಪ್ರಧಾನಿ 24-48 ಗಂಟೆಗಳ ನಂತರ ತನ್ನ ಧ್ಯಾನವನ್ನು ಪ್ರಾರಂಭಿಸಬಹುದು. ಅವರು ಮೇ 30ರಿಂದ ಧ್ಯಾನ ಮಾಡಲು ಬಯಸಿದರೆ, ನಂತರ ಅದನ್ನು ಟಿವಿ ಅಥವಾ ಮುದ್ರಣ ಮಾಧ್ಯಮವು ಪ್ರಸಾರ ಮಾಡದಂತೆ ಚುನಾವಣಾ ಆಯೋಗ ನಿರ್ಬಂಧಿಸಬೇಕು ಎಂದು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್‌ ನಾಯಕ ಕಪಿಲ್‌ ಸಿಬಲ್‌, ಮೋದಿ ‘ಪ್ರಾಯಶ್ಚಿತ್ತ’ಕ್ಕಾಗಿ ಕನ್ಯಾಕುಮಾರಿಗೆ ಹೋಗುವುದು ಒಳ್ಳೆಯದು. ವಿವೇಕದ ಬಗ್ಗೆ ಅರ್ಥ ಗೊತ್ತಿಲ್ಲದ ಅವರು ಏನು ‘ಧ್ಯಾನ’ ಮಾಡುತ್ತಾರೆ’. ಸ್ವಾಮಿ ವಿವೇಕಾನಂದರ ಬರಹಗಳು ಮತ್ತು ಭಾಷಣಗಳಿಂದ ಸ್ಫೂರ್ತಿ ಪಡೆಯಲು ಹೊರಟರೆ ಒಳ್ಳೆಯದು. ‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ತನ್ನ ಸಾಧನೆಗಳ ಬಗ್ಗೆ ಮಾತನಾಡುವುದಿಲ್ಲ. ಕಳೆದ 10 ವರ್ಷಗಳಿಂದ ಮೋದಿ ಏನು ಮಾಡಿದ್ದಾರೆ? ಏನು ಮಾಡಿದ್ದಾರೆಂದು ಪ್ರಧಾನಿ ತಮ್ಮ ಭಾಷಣಗಳಲ್ಲಿ ಹೇಳಿದ್ದಾರೆಯೇ? ಅವರ ಸಾಧನೆಗಳೇನು? ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ಅವರು ಸಂಪೂರ್ಣ ವಿಫಲವಾಗಿದ್ದಾರೆ ಎಂದು ಕಪಿಲ್‌ ಸಿಬಲ್‌ ಟೀಕಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಪ.ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ,ಯಾರಾದರೂ ಹೋಗಿ ಧ್ಯಾನ ಮಾಡಬಹುದು… ಆದರೆ, ಧ್ಯಾನ ಮಾಡುವಾಗ ಯಾರಾದರೂ ಕ್ಯಾಮೆರಾ ತೆಗೆದುಕೊಳ್ಳುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ. ಕನ್ಯಾಕುಮಾರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಧ್ಯಾನವನ್ನು ದೂರದರ್ಶನದಲ್ಲಿ ಪ್ರಸಾರ ಮಾಡಿದರೆ ಅದು ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘನೆಯಾಗುತ್ತದೆ ಎಂದು ಹೇಳಿದ ಮಮತಾ ಬ್ಯಾನರ್ಜಿ ಈ ಬಗ್ಗೆ ಭಾರತೀಯ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ಹೇಳಿದ್ದಾರೆ.

ಇಂತಹ ಪರೋಕ್ಷ ಪ್ರಚಾರಕ್ಕೆ ಚುನಾವಣಾ ಆಯೋಗ ಅನುಮತಿ ನೀಡಬಾರದು ಎಂದು ಕಾಂಗ್ರೆಸ್ ತಮಿಳುನಾಡು ಘಟಕದ ಮುಖ್ಯಸ್ಥ ಕೆ ಸೆಲ್ವಪೆರುಂತಗೈ ಹೇಳಿದ್ದಾರೆ. ಚುನಾವಣಾ ಆಯೋಗವು ಪ್ರಧಾನಿಯವರ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಬೇಕು, ಇದು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತದೆ. ಅಧಿಕೃತ ಪ್ರಚಾರದ ಅವಧಿ ಮುಗಿದ ನಂತರ ಇದು ಸೂಚಿತ ಪ್ರಚಾರದ ಪ್ರಯತ್ನವಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಮಧ್ಯಪ್ರದೇಶ: ಬುಡಕಟ್ಟು ಸಮುದಾಯದ ವ್ಯಕ್ತಿಯೋರ್ವನಿಗೆ ಥಳಿಸಿ ಮೂತ್ರ ಕುಡಿಯುವಂತೆ ಬಲವಂತ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...