Homeಮುಖಪುಟಕನ್ಯಾಕುಮಾರಿಯಲ್ಲಿ ಮೋದಿ ಧ್ಯಾನ: ನೀತಿ ಸಂಹಿತೆ ಉಲ್ಲಂಘನೆ ಬಗ್ಗೆ ಪ್ರತಿಪಕ್ಷಗಳಿಂದ ತರಾಟೆ

ಕನ್ಯಾಕುಮಾರಿಯಲ್ಲಿ ಮೋದಿ ಧ್ಯಾನ: ನೀತಿ ಸಂಹಿತೆ ಉಲ್ಲಂಘನೆ ಬಗ್ಗೆ ಪ್ರತಿಪಕ್ಷಗಳಿಂದ ತರಾಟೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಗುರುವಾರದಿಂದ ಕನ್ಯಾಕುಮಾರಿಯಲ್ಲಿ ಧ್ಯಾನವನ್ನು ಮಾಡುವುದಾಗಿ ಹೇಳಿಕೊಂಡಿದ್ದಾರೆ. ಕನ್ಯಾಕುಮಾರಿಯಲ್ಲಿ ಸ್ವಾಮಿ ವಿವೇಕಾನಂದರು ಈ ಹಿಂದೆ ಧ್ಯಾನ ಮಾಡಿದ್ದ ‘ಧ್ಯಾನ ಮಂಟಪಂ’ನಲ್ಲಿ ಲೋಕಸಭಾ ಚುನಾವಣಾ ಪ್ರಚಾರದ ನಂತರ ಮೋದಿ ಧ್ಯಾನ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿದೆ.

ಲೋಕಸಭೆ ಚುನಾವಣೆಯ 7ನೇ ಹಂತದ ಮತದಾನ ಜೂ.1ರಂದು ನಡೆಯಲಿದೆ. ಈ ಹಿನ್ನೆಲೆ ಮೇ 30ರಿಂದ ಮೌನ ಅವಧಿ ಆರಂಭವಾಗಲಿದೆ. ಆದರೆ ಇದೇ ಸಮಯದಲ್ಲಿ ಪ್ರಧಾನಿ ಮೇ 30ರ ಸಂಜೆಯಿಂದ ತಮ್ಮ ಧ್ಯಾನವನ್ನು ಪ್ರಾರಂಭಿಸುತ್ತಾರೆ. ಇದನ್ನು ಟಿವಿ ವಾಹಿನಿಗಳು ನೇರ ಪ್ರಸಾರ ಮಾಡಲಿದ್ದು, ಇದಕ್ಕೆ ಪ್ರತಿಪಕ್ಷಗಳು ವ್ಯಾಪಕವಾದ ವಿರೋಧವನ್ನು ವ್ಯಕ್ತಪಡಿಸಿದೆ.

ಈ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್‌ ನಾಯಕ ಅಭಿಷೇಕ್ ಮನು ಸಿಂಘ್ವಿ, ಪ್ರಧಾನಿ ಮೇ 30ರ ಸಂಜೆಯಿಂದ ತಮ್ಮ ಧ್ಯಾನವನ್ನು ಪ್ರಾರಂಭಿಸುತ್ತಾರೆ ಮತ್ತು ನಾವು ಅದರ ಬಗ್ಗೆ ದೂರು ನೀಡಿದ್ದೇವೆ. ಜೂ.1ರಂದು ಮತದಾನ ಇರುವ ಹಿನ್ನೆಲೆ ಮೇ 30ರಿಂದ ಮೌನ ಅವಧಿ ಪ್ರಾರಂಭವಾಗಲಿದೆ ಎಂದು ನಮಗೆಲ್ಲರಿಗೂ ತಿಳಿದಿದೆ. ಮೋದಿಯ ಈ ಘೋಷಣೆ ಚುನಾವಣೆಯ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ಜೂನ್ 1ರ ಸಂಜೆಯಿಂದ ಪ್ರಧಾನಿ 24-48 ಗಂಟೆಗಳ ನಂತರ ತನ್ನ ಧ್ಯಾನವನ್ನು ಪ್ರಾರಂಭಿಸಬಹುದು. ಅವರು ಮೇ 30ರಿಂದ ಧ್ಯಾನ ಮಾಡಲು ಬಯಸಿದರೆ, ನಂತರ ಅದನ್ನು ಟಿವಿ ಅಥವಾ ಮುದ್ರಣ ಮಾಧ್ಯಮವು ಪ್ರಸಾರ ಮಾಡದಂತೆ ಚುನಾವಣಾ ಆಯೋಗ ನಿರ್ಬಂಧಿಸಬೇಕು ಎಂದು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್‌ ನಾಯಕ ಕಪಿಲ್‌ ಸಿಬಲ್‌, ಮೋದಿ ‘ಪ್ರಾಯಶ್ಚಿತ್ತ’ಕ್ಕಾಗಿ ಕನ್ಯಾಕುಮಾರಿಗೆ ಹೋಗುವುದು ಒಳ್ಳೆಯದು. ವಿವೇಕದ ಬಗ್ಗೆ ಅರ್ಥ ಗೊತ್ತಿಲ್ಲದ ಅವರು ಏನು ‘ಧ್ಯಾನ’ ಮಾಡುತ್ತಾರೆ’. ಸ್ವಾಮಿ ವಿವೇಕಾನಂದರ ಬರಹಗಳು ಮತ್ತು ಭಾಷಣಗಳಿಂದ ಸ್ಫೂರ್ತಿ ಪಡೆಯಲು ಹೊರಟರೆ ಒಳ್ಳೆಯದು. ‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ತನ್ನ ಸಾಧನೆಗಳ ಬಗ್ಗೆ ಮಾತನಾಡುವುದಿಲ್ಲ. ಕಳೆದ 10 ವರ್ಷಗಳಿಂದ ಮೋದಿ ಏನು ಮಾಡಿದ್ದಾರೆ? ಏನು ಮಾಡಿದ್ದಾರೆಂದು ಪ್ರಧಾನಿ ತಮ್ಮ ಭಾಷಣಗಳಲ್ಲಿ ಹೇಳಿದ್ದಾರೆಯೇ? ಅವರ ಸಾಧನೆಗಳೇನು? ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ಅವರು ಸಂಪೂರ್ಣ ವಿಫಲವಾಗಿದ್ದಾರೆ ಎಂದು ಕಪಿಲ್‌ ಸಿಬಲ್‌ ಟೀಕಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಪ.ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ,ಯಾರಾದರೂ ಹೋಗಿ ಧ್ಯಾನ ಮಾಡಬಹುದು… ಆದರೆ, ಧ್ಯಾನ ಮಾಡುವಾಗ ಯಾರಾದರೂ ಕ್ಯಾಮೆರಾ ತೆಗೆದುಕೊಳ್ಳುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ. ಕನ್ಯಾಕುಮಾರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಧ್ಯಾನವನ್ನು ದೂರದರ್ಶನದಲ್ಲಿ ಪ್ರಸಾರ ಮಾಡಿದರೆ ಅದು ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘನೆಯಾಗುತ್ತದೆ ಎಂದು ಹೇಳಿದ ಮಮತಾ ಬ್ಯಾನರ್ಜಿ ಈ ಬಗ್ಗೆ ಭಾರತೀಯ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ಹೇಳಿದ್ದಾರೆ.

ಇಂತಹ ಪರೋಕ್ಷ ಪ್ರಚಾರಕ್ಕೆ ಚುನಾವಣಾ ಆಯೋಗ ಅನುಮತಿ ನೀಡಬಾರದು ಎಂದು ಕಾಂಗ್ರೆಸ್ ತಮಿಳುನಾಡು ಘಟಕದ ಮುಖ್ಯಸ್ಥ ಕೆ ಸೆಲ್ವಪೆರುಂತಗೈ ಹೇಳಿದ್ದಾರೆ. ಚುನಾವಣಾ ಆಯೋಗವು ಪ್ರಧಾನಿಯವರ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಬೇಕು, ಇದು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತದೆ. ಅಧಿಕೃತ ಪ್ರಚಾರದ ಅವಧಿ ಮುಗಿದ ನಂತರ ಇದು ಸೂಚಿತ ಪ್ರಚಾರದ ಪ್ರಯತ್ನವಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಮಧ್ಯಪ್ರದೇಶ: ಬುಡಕಟ್ಟು ಸಮುದಾಯದ ವ್ಯಕ್ತಿಯೋರ್ವನಿಗೆ ಥಳಿಸಿ ಮೂತ್ರ ಕುಡಿಯುವಂತೆ ಬಲವಂತ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...