Homeಮುಖಪುಟಕನ್ಯಾಕುಮಾರಿ: ಮಾತು ಕೊಟ್ಟಂತೆ ಬಾಲಕನಿಗೆ ಶೂ ಕಳುಹಿಸಿದ ರಾಹುಲ್ ಗಾಂಧಿ!

ಕನ್ಯಾಕುಮಾರಿ: ಮಾತು ಕೊಟ್ಟಂತೆ ಬಾಲಕನಿಗೆ ಶೂ ಕಳುಹಿಸಿದ ರಾಹುಲ್ ಗಾಂಧಿ!

- Advertisement -
- Advertisement -

ಕನ್ಯಾಕುಮಾರಿ ಭೇಟಿ ವೇಳೆ, 12 ವರ್ಷದ ಬಾಲಕನೊಬ್ಬ ಕೇಳಿದ್ದ ಅಥ್ಲೆಟಿಕ್ ಸ್ಪರ್ಧೆಯ ಶೂಗಳನ್ನು ಮಾತು ಕೊಟ್ಟಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಖರೀದಿಸಿ ಕಳುಹಿಸಿ ಕೊಟ್ಟಿರುವ ಘಟನೆ ಕನ್ಯಾಕುಮಾರಿಯಲ್ಲಿ ನಡೆದಿದೆ.

ರಾಹುಲ್ ಗಾಂಧಿ ಮಾರ್ಚ್ 1 ರಂದು ಕನ್ಯಾಕುಮಾರಿ ಜಿಲ್ಲೆಗೆ ಭೇಟಿ ನೀಡಿದ್ದರು. ಮುಲಕುಮುಡು ಶಾಲೆಗೆ ಹೋದಾಗ, ತಮ್ಮ ವಾಹನವನ್ನು ಪರೈಕೋಡುನಲ್ಲಿ ನಿಲ್ಲಿಸಿ ರಸ್ತೆ ಬದಿಯ ಬೇಕರಿಯೊಂದರ ಬಳಿ ನಡೆದುಕೊಂಡು ಹೋಗಿದ್ದರು. ಅಲ್ಲಿ ಆಂಥೋನಿ ಫಿಲಿಕ್ಸ್ ಎಂಬ ವಿದ್ಯಾರ್ಥಿಯನ್ನು ಮಾತನಾಡಿಸಿದ್ದರು.

ಏನಾಗಬೇಕು ಎಂದು ಕೇಳಿದ್ದಕ್ಕೆ ತಾನು ಅಥ್ಲೆಟಿಕ್ಸ್‌ನಲ್ಲಿ ಏನನ್ನಾದರೂ ಸಾಧಿಸಬೇಕು. ಆದರೆ ಅಥ್ಲೆಟಿಕ್ ತರಬೇತಿಗಾಗಿ ತಾನು ಶೂಗಳನ್ನು ಹೊಂದಿಲ್ಲ ಎಂದು ಬಾಲಕ ಆಂಥೋನಿ ಫಿಲಿಕ್ಸ್ ಹೇಳಿದ್ದರು. ತಕ್ಷಣ ತಾನು ಶೂ ಕೊಡಿಸುವುದಾಗಿ ರಾಹುಲ್ ಗಾಂಧಿ ಮಾತು ಕೊಟ್ಟಿದ್ದರು.

ಇದನ್ನೂ ಓದಿ: 50ನೇ ವರ್ಷದಲ್ಲಿಯೂ ಫಿಟ್ನೆಸ್ ತೋರಿಸಿದ ರಾಹುಲ್ ಗಾಂಧಿ: ಪುಷ್-ಅಪ್ ವಿಡಿಯೋ ವೈರಲ್

ಅದರಂತೆ ನಿನ್ನೆ ಕೊರಿಯರ್‌ ಮೂಲಕ ವಿದ್ಯಾರ್ಥಿ ಆಂಥೋನಿ ಫಿಲಿಕ್ಸ್ ಅವರ ಮನೆಗೆ 5,900 ರೂಪಾಯಿ ಬೆಲೆ ಬಾಳುವ ಶೂಗಳು ಬಂದಿವೆ. ಇದಕ್ಕೆ ಸಂತಸ ವ್ಯಕ್ತಪಡಿಸಿರುವ ಆಂಥೋನಿ ಫಿಲಿಕ್ಸ್ , “ನಾನು 5 ನೇ ತರಗತಿ ಓದುತ್ತಿದ್ದೇನೆ. ನನ್ನ ತಂದೆಯ ಹೊಲಿಗೆ ಅಂಗಡಿ ಇದೆ. 2017 ರಲ್ಲಿ, ತಿರುಚ್ಚಿಯಲ್ಲಿ ನಡೆದ ಬಾಲಕರ ಮ್ಯಾರಥಾನ್‌ನಲ್ಲಿ ನಾನು 51 ನೇ ಸ್ಥಾನ ಗಳಿಸಿದೆ. ಕಳೆದ ವರ್ಷದ ನಾಗರ್‌ಕೋಯಿಲ್‌ನಲ್ಲಿ ನಡೆದ ಮ್ಯಾರಥಾನ್‌ನಲ್ಲಿ ನಾನು 11 ನೇ ಸ್ಥಾನ ಪಡೆದಿದ್ದೇನೆ. ಇದನ್ನೆಲ್ಲ ಅಂದು ರಾಹುಲ್ ಗಾಂಧಿ ಅವರಿಗೆ ಹೇಳಿದೆ. ಅವರು ನನ್ನನ್ನು ಪ್ರೋತ್ಸಾಹಿಸಿ, ಶೂ ಕೊಡಿಸುವುದಾಗಿ ಮಾತು ನೀಡಿದ್ದರು. ಅವರು ಹೇಳಿದಂತೆ ಕೊರಿಯರ್ ಮೂಲಕ ಶೂ ಸಿಕ್ಕಿದೆ’ ಎಂದು ಧನ್ಯವಾದ ಸಲ್ಲಿಸಿದ್ದಾರೆ.

rahul-gandhu-bought-shoe-for-kumari-student
PC: hindutamil

’ಶೂ ತಲುಪಿದ ಮೇಲೆ ರಾಹುಲ್ ಗಾಂಧಿ ಅವರು ನನಗೆ ಕರೆ ಮಾಡಿ ಶೂ ಸೈಜ್ ಸರಿ ಇದೆಯೇ…? ಇಷ್ಟವಾಯಿತೇ? ಎಂದು ಕೇಳಿದರು. ಜೊತೆಗೆ ಶೀಘ್ರದಲ್ಲೇ ಕ್ರೀಡಾಪಟುಗಳಿಗೆ ತರಬೇತಿ ನೀಡಲು ಕೋಚ್‌ ಒಬ್ಬರನ್ನು ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಇದನ್ನು ನಾನು ನನ್ನ ಜೀವನದಲ್ಲಿ ಎಂದಿಗೂ ಮರೆಯುವುದಿಲ್ಲ’ ಎಂದು ಬಾಲಕ ಸಂತಸ ವ್ಯಕ್ತಪಡಿಸಿದ್ದಾನೆ.


ಇದನ್ನೂ ಓದಿ: ಪ್ರಧಾನಿಯನ್ನು ಪ್ರೀತಿ, ಅಹಿಂಸೆಯಿಂದ ಸೋಲಿಸುತ್ತೇವೆ: ಬಿಜೆಪಿ ವಿರುದ್ಧ ರಾಹುಲ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...