Homeಮುಖಪುಟಕನ್ಯಾಕುಮಾರಿ: ಮಾತು ಕೊಟ್ಟಂತೆ ಬಾಲಕನಿಗೆ ಶೂ ಕಳುಹಿಸಿದ ರಾಹುಲ್ ಗಾಂಧಿ!

ಕನ್ಯಾಕುಮಾರಿ: ಮಾತು ಕೊಟ್ಟಂತೆ ಬಾಲಕನಿಗೆ ಶೂ ಕಳುಹಿಸಿದ ರಾಹುಲ್ ಗಾಂಧಿ!

- Advertisement -
- Advertisement -

ಕನ್ಯಾಕುಮಾರಿ ಭೇಟಿ ವೇಳೆ, 12 ವರ್ಷದ ಬಾಲಕನೊಬ್ಬ ಕೇಳಿದ್ದ ಅಥ್ಲೆಟಿಕ್ ಸ್ಪರ್ಧೆಯ ಶೂಗಳನ್ನು ಮಾತು ಕೊಟ್ಟಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಖರೀದಿಸಿ ಕಳುಹಿಸಿ ಕೊಟ್ಟಿರುವ ಘಟನೆ ಕನ್ಯಾಕುಮಾರಿಯಲ್ಲಿ ನಡೆದಿದೆ.

ರಾಹುಲ್ ಗಾಂಧಿ ಮಾರ್ಚ್ 1 ರಂದು ಕನ್ಯಾಕುಮಾರಿ ಜಿಲ್ಲೆಗೆ ಭೇಟಿ ನೀಡಿದ್ದರು. ಮುಲಕುಮುಡು ಶಾಲೆಗೆ ಹೋದಾಗ, ತಮ್ಮ ವಾಹನವನ್ನು ಪರೈಕೋಡುನಲ್ಲಿ ನಿಲ್ಲಿಸಿ ರಸ್ತೆ ಬದಿಯ ಬೇಕರಿಯೊಂದರ ಬಳಿ ನಡೆದುಕೊಂಡು ಹೋಗಿದ್ದರು. ಅಲ್ಲಿ ಆಂಥೋನಿ ಫಿಲಿಕ್ಸ್ ಎಂಬ ವಿದ್ಯಾರ್ಥಿಯನ್ನು ಮಾತನಾಡಿಸಿದ್ದರು.

ಏನಾಗಬೇಕು ಎಂದು ಕೇಳಿದ್ದಕ್ಕೆ ತಾನು ಅಥ್ಲೆಟಿಕ್ಸ್‌ನಲ್ಲಿ ಏನನ್ನಾದರೂ ಸಾಧಿಸಬೇಕು. ಆದರೆ ಅಥ್ಲೆಟಿಕ್ ತರಬೇತಿಗಾಗಿ ತಾನು ಶೂಗಳನ್ನು ಹೊಂದಿಲ್ಲ ಎಂದು ಬಾಲಕ ಆಂಥೋನಿ ಫಿಲಿಕ್ಸ್ ಹೇಳಿದ್ದರು. ತಕ್ಷಣ ತಾನು ಶೂ ಕೊಡಿಸುವುದಾಗಿ ರಾಹುಲ್ ಗಾಂಧಿ ಮಾತು ಕೊಟ್ಟಿದ್ದರು.

ಇದನ್ನೂ ಓದಿ: 50ನೇ ವರ್ಷದಲ್ಲಿಯೂ ಫಿಟ್ನೆಸ್ ತೋರಿಸಿದ ರಾಹುಲ್ ಗಾಂಧಿ: ಪುಷ್-ಅಪ್ ವಿಡಿಯೋ ವೈರಲ್

ಅದರಂತೆ ನಿನ್ನೆ ಕೊರಿಯರ್‌ ಮೂಲಕ ವಿದ್ಯಾರ್ಥಿ ಆಂಥೋನಿ ಫಿಲಿಕ್ಸ್ ಅವರ ಮನೆಗೆ 5,900 ರೂಪಾಯಿ ಬೆಲೆ ಬಾಳುವ ಶೂಗಳು ಬಂದಿವೆ. ಇದಕ್ಕೆ ಸಂತಸ ವ್ಯಕ್ತಪಡಿಸಿರುವ ಆಂಥೋನಿ ಫಿಲಿಕ್ಸ್ , “ನಾನು 5 ನೇ ತರಗತಿ ಓದುತ್ತಿದ್ದೇನೆ. ನನ್ನ ತಂದೆಯ ಹೊಲಿಗೆ ಅಂಗಡಿ ಇದೆ. 2017 ರಲ್ಲಿ, ತಿರುಚ್ಚಿಯಲ್ಲಿ ನಡೆದ ಬಾಲಕರ ಮ್ಯಾರಥಾನ್‌ನಲ್ಲಿ ನಾನು 51 ನೇ ಸ್ಥಾನ ಗಳಿಸಿದೆ. ಕಳೆದ ವರ್ಷದ ನಾಗರ್‌ಕೋಯಿಲ್‌ನಲ್ಲಿ ನಡೆದ ಮ್ಯಾರಥಾನ್‌ನಲ್ಲಿ ನಾನು 11 ನೇ ಸ್ಥಾನ ಪಡೆದಿದ್ದೇನೆ. ಇದನ್ನೆಲ್ಲ ಅಂದು ರಾಹುಲ್ ಗಾಂಧಿ ಅವರಿಗೆ ಹೇಳಿದೆ. ಅವರು ನನ್ನನ್ನು ಪ್ರೋತ್ಸಾಹಿಸಿ, ಶೂ ಕೊಡಿಸುವುದಾಗಿ ಮಾತು ನೀಡಿದ್ದರು. ಅವರು ಹೇಳಿದಂತೆ ಕೊರಿಯರ್ ಮೂಲಕ ಶೂ ಸಿಕ್ಕಿದೆ’ ಎಂದು ಧನ್ಯವಾದ ಸಲ್ಲಿಸಿದ್ದಾರೆ.

rahul-gandhu-bought-shoe-for-kumari-student
PC: hindutamil

’ಶೂ ತಲುಪಿದ ಮೇಲೆ ರಾಹುಲ್ ಗಾಂಧಿ ಅವರು ನನಗೆ ಕರೆ ಮಾಡಿ ಶೂ ಸೈಜ್ ಸರಿ ಇದೆಯೇ…? ಇಷ್ಟವಾಯಿತೇ? ಎಂದು ಕೇಳಿದರು. ಜೊತೆಗೆ ಶೀಘ್ರದಲ್ಲೇ ಕ್ರೀಡಾಪಟುಗಳಿಗೆ ತರಬೇತಿ ನೀಡಲು ಕೋಚ್‌ ಒಬ್ಬರನ್ನು ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಇದನ್ನು ನಾನು ನನ್ನ ಜೀವನದಲ್ಲಿ ಎಂದಿಗೂ ಮರೆಯುವುದಿಲ್ಲ’ ಎಂದು ಬಾಲಕ ಸಂತಸ ವ್ಯಕ್ತಪಡಿಸಿದ್ದಾನೆ.


ಇದನ್ನೂ ಓದಿ: ಪ್ರಧಾನಿಯನ್ನು ಪ್ರೀತಿ, ಅಹಿಂಸೆಯಿಂದ ಸೋಲಿಸುತ್ತೇವೆ: ಬಿಜೆಪಿ ವಿರುದ್ಧ ರಾಹುಲ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...