Homeಮುಖಪುಟಕನ್ಯಾಕುಮಾರಿ: ಮಾತು ಕೊಟ್ಟಂತೆ ಬಾಲಕನಿಗೆ ಶೂ ಕಳುಹಿಸಿದ ರಾಹುಲ್ ಗಾಂಧಿ!

ಕನ್ಯಾಕುಮಾರಿ: ಮಾತು ಕೊಟ್ಟಂತೆ ಬಾಲಕನಿಗೆ ಶೂ ಕಳುಹಿಸಿದ ರಾಹುಲ್ ಗಾಂಧಿ!

- Advertisement -
- Advertisement -

ಕನ್ಯಾಕುಮಾರಿ ಭೇಟಿ ವೇಳೆ, 12 ವರ್ಷದ ಬಾಲಕನೊಬ್ಬ ಕೇಳಿದ್ದ ಅಥ್ಲೆಟಿಕ್ ಸ್ಪರ್ಧೆಯ ಶೂಗಳನ್ನು ಮಾತು ಕೊಟ್ಟಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಖರೀದಿಸಿ ಕಳುಹಿಸಿ ಕೊಟ್ಟಿರುವ ಘಟನೆ ಕನ್ಯಾಕುಮಾರಿಯಲ್ಲಿ ನಡೆದಿದೆ.

ರಾಹುಲ್ ಗಾಂಧಿ ಮಾರ್ಚ್ 1 ರಂದು ಕನ್ಯಾಕುಮಾರಿ ಜಿಲ್ಲೆಗೆ ಭೇಟಿ ನೀಡಿದ್ದರು. ಮುಲಕುಮುಡು ಶಾಲೆಗೆ ಹೋದಾಗ, ತಮ್ಮ ವಾಹನವನ್ನು ಪರೈಕೋಡುನಲ್ಲಿ ನಿಲ್ಲಿಸಿ ರಸ್ತೆ ಬದಿಯ ಬೇಕರಿಯೊಂದರ ಬಳಿ ನಡೆದುಕೊಂಡು ಹೋಗಿದ್ದರು. ಅಲ್ಲಿ ಆಂಥೋನಿ ಫಿಲಿಕ್ಸ್ ಎಂಬ ವಿದ್ಯಾರ್ಥಿಯನ್ನು ಮಾತನಾಡಿಸಿದ್ದರು.

ಏನಾಗಬೇಕು ಎಂದು ಕೇಳಿದ್ದಕ್ಕೆ ತಾನು ಅಥ್ಲೆಟಿಕ್ಸ್‌ನಲ್ಲಿ ಏನನ್ನಾದರೂ ಸಾಧಿಸಬೇಕು. ಆದರೆ ಅಥ್ಲೆಟಿಕ್ ತರಬೇತಿಗಾಗಿ ತಾನು ಶೂಗಳನ್ನು ಹೊಂದಿಲ್ಲ ಎಂದು ಬಾಲಕ ಆಂಥೋನಿ ಫಿಲಿಕ್ಸ್ ಹೇಳಿದ್ದರು. ತಕ್ಷಣ ತಾನು ಶೂ ಕೊಡಿಸುವುದಾಗಿ ರಾಹುಲ್ ಗಾಂಧಿ ಮಾತು ಕೊಟ್ಟಿದ್ದರು.

ಇದನ್ನೂ ಓದಿ: 50ನೇ ವರ್ಷದಲ್ಲಿಯೂ ಫಿಟ್ನೆಸ್ ತೋರಿಸಿದ ರಾಹುಲ್ ಗಾಂಧಿ: ಪುಷ್-ಅಪ್ ವಿಡಿಯೋ ವೈರಲ್

ಅದರಂತೆ ನಿನ್ನೆ ಕೊರಿಯರ್‌ ಮೂಲಕ ವಿದ್ಯಾರ್ಥಿ ಆಂಥೋನಿ ಫಿಲಿಕ್ಸ್ ಅವರ ಮನೆಗೆ 5,900 ರೂಪಾಯಿ ಬೆಲೆ ಬಾಳುವ ಶೂಗಳು ಬಂದಿವೆ. ಇದಕ್ಕೆ ಸಂತಸ ವ್ಯಕ್ತಪಡಿಸಿರುವ ಆಂಥೋನಿ ಫಿಲಿಕ್ಸ್ , “ನಾನು 5 ನೇ ತರಗತಿ ಓದುತ್ತಿದ್ದೇನೆ. ನನ್ನ ತಂದೆಯ ಹೊಲಿಗೆ ಅಂಗಡಿ ಇದೆ. 2017 ರಲ್ಲಿ, ತಿರುಚ್ಚಿಯಲ್ಲಿ ನಡೆದ ಬಾಲಕರ ಮ್ಯಾರಥಾನ್‌ನಲ್ಲಿ ನಾನು 51 ನೇ ಸ್ಥಾನ ಗಳಿಸಿದೆ. ಕಳೆದ ವರ್ಷದ ನಾಗರ್‌ಕೋಯಿಲ್‌ನಲ್ಲಿ ನಡೆದ ಮ್ಯಾರಥಾನ್‌ನಲ್ಲಿ ನಾನು 11 ನೇ ಸ್ಥಾನ ಪಡೆದಿದ್ದೇನೆ. ಇದನ್ನೆಲ್ಲ ಅಂದು ರಾಹುಲ್ ಗಾಂಧಿ ಅವರಿಗೆ ಹೇಳಿದೆ. ಅವರು ನನ್ನನ್ನು ಪ್ರೋತ್ಸಾಹಿಸಿ, ಶೂ ಕೊಡಿಸುವುದಾಗಿ ಮಾತು ನೀಡಿದ್ದರು. ಅವರು ಹೇಳಿದಂತೆ ಕೊರಿಯರ್ ಮೂಲಕ ಶೂ ಸಿಕ್ಕಿದೆ’ ಎಂದು ಧನ್ಯವಾದ ಸಲ್ಲಿಸಿದ್ದಾರೆ.

rahul-gandhu-bought-shoe-for-kumari-student
PC: hindutamil

’ಶೂ ತಲುಪಿದ ಮೇಲೆ ರಾಹುಲ್ ಗಾಂಧಿ ಅವರು ನನಗೆ ಕರೆ ಮಾಡಿ ಶೂ ಸೈಜ್ ಸರಿ ಇದೆಯೇ…? ಇಷ್ಟವಾಯಿತೇ? ಎಂದು ಕೇಳಿದರು. ಜೊತೆಗೆ ಶೀಘ್ರದಲ್ಲೇ ಕ್ರೀಡಾಪಟುಗಳಿಗೆ ತರಬೇತಿ ನೀಡಲು ಕೋಚ್‌ ಒಬ್ಬರನ್ನು ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಇದನ್ನು ನಾನು ನನ್ನ ಜೀವನದಲ್ಲಿ ಎಂದಿಗೂ ಮರೆಯುವುದಿಲ್ಲ’ ಎಂದು ಬಾಲಕ ಸಂತಸ ವ್ಯಕ್ತಪಡಿಸಿದ್ದಾನೆ.


ಇದನ್ನೂ ಓದಿ: ಪ್ರಧಾನಿಯನ್ನು ಪ್ರೀತಿ, ಅಹಿಂಸೆಯಿಂದ ಸೋಲಿಸುತ್ತೇವೆ: ಬಿಜೆಪಿ ವಿರುದ್ಧ ರಾಹುಲ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...