Homeಚಳವಳಿರೈತರಿಗೆ ಬೆಂಬಲ: ಕನ್ಯಾಕುಮಾರಿಯಿಂದ ಕಾಶ್ಮಿರದವರೆಗೆ ಯುವಜನರ ಸೈಕಲ್ ಜಾಥಾ

ರೈತರಿಗೆ ಬೆಂಬಲ: ಕನ್ಯಾಕುಮಾರಿಯಿಂದ ಕಾಶ್ಮಿರದವರೆಗೆ ಯುವಜನರ ಸೈಕಲ್ ಜಾಥಾ

ಮಾರ್ಚ್ 12 ರಂದು ಕನ್ಯಾಕುಮಾರಿಯಲ್ಲಿ ಈ ಜಾಥಾಕ್ಕೆ ಚಾಲನೆ ಸಿಗಲಿದೆ. ಸುಮಾರು ಐದು ತಿಂಗಳು ಈ ಜಾಥಾ ನಡೆಯಲಿದ್ದು, ದೇಶದ ಹಲವು ಭಾಗಗಳ ಜನರು ಇದರಲ್ಲಿ ಸೇರಿಕೊಳ್ಳಲಿದ್ದಾರೆ.

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ದೇಶದ ರೈತರು ನಡೆಸುತ್ತಿರುವ ರೈತ ಹೋರಾಟಕ್ಕೆ ವಿಶ್ವದಾದ್ಯಂತ ಬೆಂಬಲ ಹರಿದುಬಂದಿದೆ. ಈಗಲೂ ಬರುತ್ತಲೇ ಇದೆ. ಇದರ ಜೊತೆಗೆ ಆಂದೋಲನದ ಬಗ್ಗೆ ದೇಶದ ಜನರಿಗೆ ಮತ್ತಷ್ಟು ಅರಿವು ಮೂಡಿಸಲು ಯುವಕರ ತಂಡವೊಂದು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸೈಕಲ್ ಜಾಥಾ ನಡೆಸಲು ಸಿದ್ದವಾಗಿದೆ.

ಪಶ್ಚಿಮ ಉತ್ತರಪ್ರದೇಶದ ಮತ್‌ನೌಲಿ ಗ್ರಾಮದ ಸಾಮಾಜಿಕ ಕಾರ್ಯಕರ್ತ ವಿಕಾಸ್ ಎನ್ನುವವರು ಈ ಸೈಕಲ್ ಜಾಥಕ್ಕೆ ಕರೆ ನೀಡಿದ್ದಾರೆ. ರೈತ ಹೋರಾಟದ ಬಗ್ಗೆ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ದೇಶದ ಹಳ್ಳಿ ಹಳ್ಳಿಗೂ ಹೋಗಿ ವಿವಾದಿತ ಕಾನೂನುಗಳ ಬಗ್ಗೆ, ರೈತ ಹೋರಾಟ, ಎಂಎಸ್‌ಪಿ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಈ ತಂಡ ರೆಡಿಯಾಗಿದೆ.

ಮಾರ್ಚ್ 12 ರಂದು ಕನ್ಯಾಕುಮಾರಿಯಲ್ಲಿ ಈ ಜಾಥಕ್ಕೆ ಚಾಲನೆ ಸಿಗಲಿದೆ. ಸುಮಾರು ಐದು ತಿಂಗಳು ಈ ಜಾಥಾ ನಡೆಯಲಿದ್ದು, ದೇಶದ ಹಲವು ಭಾಗಗಳ ಜನರು ಇದರಲ್ಲಿ ಸೇರಿಕೊಳ್ಳಲಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸರ್ಕಾರದ ವೈಫಲ್ಯಗಳ ಪ್ರಚಾರ: 100 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ನಿಂದ ’ಜನಧ್ವನಿ’ ಜಾಥಾ

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸೈಕಲ್ ಜಾಥದ ಸಂಯೋಜಕ ವಿಕಾಸ್, ’ರೈತ ಹೋರಾಟ ಆರಂಭದಿಂದ ನಾನು ರೈತರಿಗೆ ಬೆಂಬಲ ನೀಡಿದ್ದೇನೆ. ಸದ್ಯ ನಾನೀಗ ರೈತ ಪ್ರತಿಭಟನೆಯ ಟಿಕ್ರಿ ಗಡಿ ಭಾಗದಲ್ಲಿ ರೈತರೊಂದಿಗೆ ಹೋರಾಟ ನಡೆಸುತ್ತಿದ್ದೇನೆ. ಜನರಲ್ಲಿ ಈ ಹೋರಾಟದ ಬಗ್ಗೆ, ಎಂಎಸ್‌ಪಿ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ ಅದಕ್ಕೆ ಈ ಸೈಕಲ್ ಜಾಥಾ ಮಾಡಲಾಗುತ್ತಿದೆ’ ಎಂದರು.

’ಹೋರಾಟವನ್ನು ದೇಶದ ಒಂದೊಂದು ಊರು, ಹಳ್ಳಿ, ಮನೆ-ಮನೆಗೂ ತೆಗೆದುಕೊಂಡು ಹೋಗಬೇಕು. ಎಂಎಸ್‌ಪಿ ಕಾಯ್ದೆ ಬಗ್ಗೆ ಅತಿ ಹೆಚ್ಚು ಜಾಗೃತಿ ಮೂಡಿಸಬೇಕಾಗಿದೆ. ಮಾರ್ಚ್ 12 ರಂದು ಕನ್ಯಾಕುಮಾರಿಯಿಂದ ಜಾಥಾ ಆರಂಭವಾಗಲಿದೆ. ಈಗಾಗಲೇ 50 ಮಂದಿ ಜೊತೆಯಾಗಿದ್ದಾರೆ. ಆದರೆ ಜಾಥಾಕ್ಕೆ ಬರುವವರ ಸಂಖ್ಯೆ ಹೆಚ್ಚಾಗಬಹುದು ಅಥವಾ ಕಡಿಮೆಯಾಗಬಹುದು. ಆಯಾ ರಾಜ್ಯದಲ್ಲಿ ಜನ ಸೇರಿಕೊಳ್ಳಬಹುದು. 5 ತಿಂಗಳಿಗಿಂತ ಹೆಚ್ಚು ಕಾಲ ಈ ಜಾಥಾ ನಡೆಯಲಿದೆ’ ಎಂದು ವಿಕಾಸ್ ಮಾಹಿತಿ ನೀಡಿದ್ದಾರೆ.

ಕಳೆದ ತಿಂಗಳು 5 ದಿನಗಳ ಕಾಲ ರೈತ ಹೋರಾಟದಲ್ಲಿ ಭಾಗಿಯಾಗಿ ರೈತರಿಗೆ ಬೆಂಬಲ ನೀಡಿದ್ದ ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ರಾಜ್ಯ ಸಂಚಾಲಕ ಸರೋವರ್ ಬೆಂಕಿಕೆರೆ ತಮ್ಮ ತಂಡದೊಂದಿಗೆ ಈ ಸೈಕಲ್ ಜಾಥಾದ ಭಾಗವಾಗಲಿದ್ದಾರೆ.

ಇದನ್ನೂ ಓದಿ: ಇದು ಇಡೀ ದೇಶದ ರೈತ ಹೋರಾಟ: ಟಿಕ್ರಿ ಗಡಿಯಲ್ಲಿ ದಕ್ಷಿಣ ಭಾರತದ ಕಾರ್ಯಕರ್ತರ ಘೋಷಣೆ

’ಮಾರ್ಚ್ 12 ರಂದು ನಾವು ಕನ್ಯಾಕುಮಾರಿಗೆ ಜಾಥಾ ಆರಂಭದ ದಿನವೇ ಅವರನ್ನು ಸೇರಿಕೊಳ್ಳಲಿದ್ದೇವೆ. ಸೈಕಲ್ ಮೂಲಕ ಅಲ್ಲಿಗೆ ತಲುಪುತ್ತೇವೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಮಹಾಪಂಚಾಯತ್‌ ನಡೆಯುವ ದಿನಗಳಂದು ಅಲ್ಲಿಗೆ ಸೇರಿಕೊಳ್ಳುವ ಪ್ರಯತ್ನ ಮಾಡಲಾಗುತ್ತದೆ. ಕನ್ಯಾಕುಮಾರಿಯಿಂದ ಕರ್ನಾಟಕಕ್ಕೆ ಬರುವವರೆಗೂ ರ್‍ಯಾಲಿಯ ಭಾಗವಾಗಿ ಅವರ ಜೊತೆಗೆ ಇರುತ್ತೇವೆ. ರಾಜ್ಯದಲ್ಲಿ ನಡೆಯುವ ಮಹಾ ಪಂಚಾಯತ್‌ನಲ್ಲಿ, ಹಳ್ಳಿ ಹಳ್ಳಿಗಳಿಗೆ ಜಾಥಾದ ಜೊತೆಗೆ ಹೋಗಲಿದ್ದೇವೆ. ಸೈಕಲ್ ಜಾಥಾ ರಾಜ್ಯಕ್ಕೆ ಬಂದ ದಿನ ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ನಾನುಗೌರಿ.ಕಾಂಗೆ ಸರೋವರ ಬೆಂಕಿಕೆರೆ ಮಾಹಿತಿ ನೀಡಿದ್ದಾರೆ.

ಈ ಹಿಂದೆ ರಾಜ್ಯದಲ್ಲಿ, ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಾತ್ಮಕ ಕೃಷಿ ಕಾಯ್ದೆಗಳ ಕುರಿತು ಕರ್ನಾಟಕದ ರೈತರಿಗೆ ಮನವರಿಕೆ ಮಾಡಿಕೊಡಲು ದೇಶಪ್ರೇಮಿ ಯುವಾಂದೋಲನ ಮತ್ತು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸದಸ್ಯರು ಸೈಕಲ್ ಜಾಥಾ ನಡೆಸಿದ್ದರು.  ‘ಹಳ್ಳಿಗಳಿಗೆ ಹೋಗೋಣ’ ಹೆಸರಿನಲ್ಲಿ ಹೈದರಾಬಾದ್ ಕರ್ನಾಟಕ, ಮಧ್ಯ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕದ 8 ಜಿಲ್ಲೆಗಳಲ್ಲಿ ಸೈಕಲ್ ಜಾಥಾ ನಡೆದಿತ್ತು.


ಇದನ್ನೂ ಓದಿ: ಬಿಸಿಲಿಗೂ ಬಗ್ಗುವುದಿಲ್ಲ: ಹೋರಾಟನಿರತ ರೈತರ ಟ್ಯ್ರಾಲಿ, ಟೆಂಟ್‌ಗಳಿಗೆ ಬಂದ ಎಸಿ, ಕೂಲರ್‌ಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...