Homeಚಳವಳಿರೈತರಿಗೆ ಬೆಂಬಲ: ಕನ್ಯಾಕುಮಾರಿಯಿಂದ ಕಾಶ್ಮಿರದವರೆಗೆ ಯುವಜನರ ಸೈಕಲ್ ಜಾಥಾ

ರೈತರಿಗೆ ಬೆಂಬಲ: ಕನ್ಯಾಕುಮಾರಿಯಿಂದ ಕಾಶ್ಮಿರದವರೆಗೆ ಯುವಜನರ ಸೈಕಲ್ ಜಾಥಾ

ಮಾರ್ಚ್ 12 ರಂದು ಕನ್ಯಾಕುಮಾರಿಯಲ್ಲಿ ಈ ಜಾಥಾಕ್ಕೆ ಚಾಲನೆ ಸಿಗಲಿದೆ. ಸುಮಾರು ಐದು ತಿಂಗಳು ಈ ಜಾಥಾ ನಡೆಯಲಿದ್ದು, ದೇಶದ ಹಲವು ಭಾಗಗಳ ಜನರು ಇದರಲ್ಲಿ ಸೇರಿಕೊಳ್ಳಲಿದ್ದಾರೆ.

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ದೇಶದ ರೈತರು ನಡೆಸುತ್ತಿರುವ ರೈತ ಹೋರಾಟಕ್ಕೆ ವಿಶ್ವದಾದ್ಯಂತ ಬೆಂಬಲ ಹರಿದುಬಂದಿದೆ. ಈಗಲೂ ಬರುತ್ತಲೇ ಇದೆ. ಇದರ ಜೊತೆಗೆ ಆಂದೋಲನದ ಬಗ್ಗೆ ದೇಶದ ಜನರಿಗೆ ಮತ್ತಷ್ಟು ಅರಿವು ಮೂಡಿಸಲು ಯುವಕರ ತಂಡವೊಂದು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸೈಕಲ್ ಜಾಥಾ ನಡೆಸಲು ಸಿದ್ದವಾಗಿದೆ.

ಪಶ್ಚಿಮ ಉತ್ತರಪ್ರದೇಶದ ಮತ್‌ನೌಲಿ ಗ್ರಾಮದ ಸಾಮಾಜಿಕ ಕಾರ್ಯಕರ್ತ ವಿಕಾಸ್ ಎನ್ನುವವರು ಈ ಸೈಕಲ್ ಜಾಥಕ್ಕೆ ಕರೆ ನೀಡಿದ್ದಾರೆ. ರೈತ ಹೋರಾಟದ ಬಗ್ಗೆ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ದೇಶದ ಹಳ್ಳಿ ಹಳ್ಳಿಗೂ ಹೋಗಿ ವಿವಾದಿತ ಕಾನೂನುಗಳ ಬಗ್ಗೆ, ರೈತ ಹೋರಾಟ, ಎಂಎಸ್‌ಪಿ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಈ ತಂಡ ರೆಡಿಯಾಗಿದೆ.

ಮಾರ್ಚ್ 12 ರಂದು ಕನ್ಯಾಕುಮಾರಿಯಲ್ಲಿ ಈ ಜಾಥಕ್ಕೆ ಚಾಲನೆ ಸಿಗಲಿದೆ. ಸುಮಾರು ಐದು ತಿಂಗಳು ಈ ಜಾಥಾ ನಡೆಯಲಿದ್ದು, ದೇಶದ ಹಲವು ಭಾಗಗಳ ಜನರು ಇದರಲ್ಲಿ ಸೇರಿಕೊಳ್ಳಲಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸರ್ಕಾರದ ವೈಫಲ್ಯಗಳ ಪ್ರಚಾರ: 100 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ನಿಂದ ’ಜನಧ್ವನಿ’ ಜಾಥಾ

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸೈಕಲ್ ಜಾಥದ ಸಂಯೋಜಕ ವಿಕಾಸ್, ’ರೈತ ಹೋರಾಟ ಆರಂಭದಿಂದ ನಾನು ರೈತರಿಗೆ ಬೆಂಬಲ ನೀಡಿದ್ದೇನೆ. ಸದ್ಯ ನಾನೀಗ ರೈತ ಪ್ರತಿಭಟನೆಯ ಟಿಕ್ರಿ ಗಡಿ ಭಾಗದಲ್ಲಿ ರೈತರೊಂದಿಗೆ ಹೋರಾಟ ನಡೆಸುತ್ತಿದ್ದೇನೆ. ಜನರಲ್ಲಿ ಈ ಹೋರಾಟದ ಬಗ್ಗೆ, ಎಂಎಸ್‌ಪಿ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ ಅದಕ್ಕೆ ಈ ಸೈಕಲ್ ಜಾಥಾ ಮಾಡಲಾಗುತ್ತಿದೆ’ ಎಂದರು.

’ಹೋರಾಟವನ್ನು ದೇಶದ ಒಂದೊಂದು ಊರು, ಹಳ್ಳಿ, ಮನೆ-ಮನೆಗೂ ತೆಗೆದುಕೊಂಡು ಹೋಗಬೇಕು. ಎಂಎಸ್‌ಪಿ ಕಾಯ್ದೆ ಬಗ್ಗೆ ಅತಿ ಹೆಚ್ಚು ಜಾಗೃತಿ ಮೂಡಿಸಬೇಕಾಗಿದೆ. ಮಾರ್ಚ್ 12 ರಂದು ಕನ್ಯಾಕುಮಾರಿಯಿಂದ ಜಾಥಾ ಆರಂಭವಾಗಲಿದೆ. ಈಗಾಗಲೇ 50 ಮಂದಿ ಜೊತೆಯಾಗಿದ್ದಾರೆ. ಆದರೆ ಜಾಥಾಕ್ಕೆ ಬರುವವರ ಸಂಖ್ಯೆ ಹೆಚ್ಚಾಗಬಹುದು ಅಥವಾ ಕಡಿಮೆಯಾಗಬಹುದು. ಆಯಾ ರಾಜ್ಯದಲ್ಲಿ ಜನ ಸೇರಿಕೊಳ್ಳಬಹುದು. 5 ತಿಂಗಳಿಗಿಂತ ಹೆಚ್ಚು ಕಾಲ ಈ ಜಾಥಾ ನಡೆಯಲಿದೆ’ ಎಂದು ವಿಕಾಸ್ ಮಾಹಿತಿ ನೀಡಿದ್ದಾರೆ.

ಕಳೆದ ತಿಂಗಳು 5 ದಿನಗಳ ಕಾಲ ರೈತ ಹೋರಾಟದಲ್ಲಿ ಭಾಗಿಯಾಗಿ ರೈತರಿಗೆ ಬೆಂಬಲ ನೀಡಿದ್ದ ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ರಾಜ್ಯ ಸಂಚಾಲಕ ಸರೋವರ್ ಬೆಂಕಿಕೆರೆ ತಮ್ಮ ತಂಡದೊಂದಿಗೆ ಈ ಸೈಕಲ್ ಜಾಥಾದ ಭಾಗವಾಗಲಿದ್ದಾರೆ.

ಇದನ್ನೂ ಓದಿ: ಇದು ಇಡೀ ದೇಶದ ರೈತ ಹೋರಾಟ: ಟಿಕ್ರಿ ಗಡಿಯಲ್ಲಿ ದಕ್ಷಿಣ ಭಾರತದ ಕಾರ್ಯಕರ್ತರ ಘೋಷಣೆ

’ಮಾರ್ಚ್ 12 ರಂದು ನಾವು ಕನ್ಯಾಕುಮಾರಿಗೆ ಜಾಥಾ ಆರಂಭದ ದಿನವೇ ಅವರನ್ನು ಸೇರಿಕೊಳ್ಳಲಿದ್ದೇವೆ. ಸೈಕಲ್ ಮೂಲಕ ಅಲ್ಲಿಗೆ ತಲುಪುತ್ತೇವೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಮಹಾಪಂಚಾಯತ್‌ ನಡೆಯುವ ದಿನಗಳಂದು ಅಲ್ಲಿಗೆ ಸೇರಿಕೊಳ್ಳುವ ಪ್ರಯತ್ನ ಮಾಡಲಾಗುತ್ತದೆ. ಕನ್ಯಾಕುಮಾರಿಯಿಂದ ಕರ್ನಾಟಕಕ್ಕೆ ಬರುವವರೆಗೂ ರ್‍ಯಾಲಿಯ ಭಾಗವಾಗಿ ಅವರ ಜೊತೆಗೆ ಇರುತ್ತೇವೆ. ರಾಜ್ಯದಲ್ಲಿ ನಡೆಯುವ ಮಹಾ ಪಂಚಾಯತ್‌ನಲ್ಲಿ, ಹಳ್ಳಿ ಹಳ್ಳಿಗಳಿಗೆ ಜಾಥಾದ ಜೊತೆಗೆ ಹೋಗಲಿದ್ದೇವೆ. ಸೈಕಲ್ ಜಾಥಾ ರಾಜ್ಯಕ್ಕೆ ಬಂದ ದಿನ ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ನಾನುಗೌರಿ.ಕಾಂಗೆ ಸರೋವರ ಬೆಂಕಿಕೆರೆ ಮಾಹಿತಿ ನೀಡಿದ್ದಾರೆ.

ಈ ಹಿಂದೆ ರಾಜ್ಯದಲ್ಲಿ, ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಾತ್ಮಕ ಕೃಷಿ ಕಾಯ್ದೆಗಳ ಕುರಿತು ಕರ್ನಾಟಕದ ರೈತರಿಗೆ ಮನವರಿಕೆ ಮಾಡಿಕೊಡಲು ದೇಶಪ್ರೇಮಿ ಯುವಾಂದೋಲನ ಮತ್ತು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸದಸ್ಯರು ಸೈಕಲ್ ಜಾಥಾ ನಡೆಸಿದ್ದರು.  ‘ಹಳ್ಳಿಗಳಿಗೆ ಹೋಗೋಣ’ ಹೆಸರಿನಲ್ಲಿ ಹೈದರಾಬಾದ್ ಕರ್ನಾಟಕ, ಮಧ್ಯ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕದ 8 ಜಿಲ್ಲೆಗಳಲ್ಲಿ ಸೈಕಲ್ ಜಾಥಾ ನಡೆದಿತ್ತು.


ಇದನ್ನೂ ಓದಿ: ಬಿಸಿಲಿಗೂ ಬಗ್ಗುವುದಿಲ್ಲ: ಹೋರಾಟನಿರತ ರೈತರ ಟ್ಯ್ರಾಲಿ, ಟೆಂಟ್‌ಗಳಿಗೆ ಬಂದ ಎಸಿ, ಕೂಲರ್‌ಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...