Homeಚಳವಳಿರೈತರಿಗೆ ಬೆಂಬಲ: ಕನ್ಯಾಕುಮಾರಿಯಿಂದ ಕಾಶ್ಮಿರದವರೆಗೆ ಯುವಜನರ ಸೈಕಲ್ ಜಾಥಾ

ರೈತರಿಗೆ ಬೆಂಬಲ: ಕನ್ಯಾಕುಮಾರಿಯಿಂದ ಕಾಶ್ಮಿರದವರೆಗೆ ಯುವಜನರ ಸೈಕಲ್ ಜಾಥಾ

ಮಾರ್ಚ್ 12 ರಂದು ಕನ್ಯಾಕುಮಾರಿಯಲ್ಲಿ ಈ ಜಾಥಾಕ್ಕೆ ಚಾಲನೆ ಸಿಗಲಿದೆ. ಸುಮಾರು ಐದು ತಿಂಗಳು ಈ ಜಾಥಾ ನಡೆಯಲಿದ್ದು, ದೇಶದ ಹಲವು ಭಾಗಗಳ ಜನರು ಇದರಲ್ಲಿ ಸೇರಿಕೊಳ್ಳಲಿದ್ದಾರೆ.

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ದೇಶದ ರೈತರು ನಡೆಸುತ್ತಿರುವ ರೈತ ಹೋರಾಟಕ್ಕೆ ವಿಶ್ವದಾದ್ಯಂತ ಬೆಂಬಲ ಹರಿದುಬಂದಿದೆ. ಈಗಲೂ ಬರುತ್ತಲೇ ಇದೆ. ಇದರ ಜೊತೆಗೆ ಆಂದೋಲನದ ಬಗ್ಗೆ ದೇಶದ ಜನರಿಗೆ ಮತ್ತಷ್ಟು ಅರಿವು ಮೂಡಿಸಲು ಯುವಕರ ತಂಡವೊಂದು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸೈಕಲ್ ಜಾಥಾ ನಡೆಸಲು ಸಿದ್ದವಾಗಿದೆ.

ಪಶ್ಚಿಮ ಉತ್ತರಪ್ರದೇಶದ ಮತ್‌ನೌಲಿ ಗ್ರಾಮದ ಸಾಮಾಜಿಕ ಕಾರ್ಯಕರ್ತ ವಿಕಾಸ್ ಎನ್ನುವವರು ಈ ಸೈಕಲ್ ಜಾಥಕ್ಕೆ ಕರೆ ನೀಡಿದ್ದಾರೆ. ರೈತ ಹೋರಾಟದ ಬಗ್ಗೆ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ದೇಶದ ಹಳ್ಳಿ ಹಳ್ಳಿಗೂ ಹೋಗಿ ವಿವಾದಿತ ಕಾನೂನುಗಳ ಬಗ್ಗೆ, ರೈತ ಹೋರಾಟ, ಎಂಎಸ್‌ಪಿ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಈ ತಂಡ ರೆಡಿಯಾಗಿದೆ.

ಮಾರ್ಚ್ 12 ರಂದು ಕನ್ಯಾಕುಮಾರಿಯಲ್ಲಿ ಈ ಜಾಥಕ್ಕೆ ಚಾಲನೆ ಸಿಗಲಿದೆ. ಸುಮಾರು ಐದು ತಿಂಗಳು ಈ ಜಾಥಾ ನಡೆಯಲಿದ್ದು, ದೇಶದ ಹಲವು ಭಾಗಗಳ ಜನರು ಇದರಲ್ಲಿ ಸೇರಿಕೊಳ್ಳಲಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸರ್ಕಾರದ ವೈಫಲ್ಯಗಳ ಪ್ರಚಾರ: 100 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ನಿಂದ ’ಜನಧ್ವನಿ’ ಜಾಥಾ

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸೈಕಲ್ ಜಾಥದ ಸಂಯೋಜಕ ವಿಕಾಸ್, ’ರೈತ ಹೋರಾಟ ಆರಂಭದಿಂದ ನಾನು ರೈತರಿಗೆ ಬೆಂಬಲ ನೀಡಿದ್ದೇನೆ. ಸದ್ಯ ನಾನೀಗ ರೈತ ಪ್ರತಿಭಟನೆಯ ಟಿಕ್ರಿ ಗಡಿ ಭಾಗದಲ್ಲಿ ರೈತರೊಂದಿಗೆ ಹೋರಾಟ ನಡೆಸುತ್ತಿದ್ದೇನೆ. ಜನರಲ್ಲಿ ಈ ಹೋರಾಟದ ಬಗ್ಗೆ, ಎಂಎಸ್‌ಪಿ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ ಅದಕ್ಕೆ ಈ ಸೈಕಲ್ ಜಾಥಾ ಮಾಡಲಾಗುತ್ತಿದೆ’ ಎಂದರು.

’ಹೋರಾಟವನ್ನು ದೇಶದ ಒಂದೊಂದು ಊರು, ಹಳ್ಳಿ, ಮನೆ-ಮನೆಗೂ ತೆಗೆದುಕೊಂಡು ಹೋಗಬೇಕು. ಎಂಎಸ್‌ಪಿ ಕಾಯ್ದೆ ಬಗ್ಗೆ ಅತಿ ಹೆಚ್ಚು ಜಾಗೃತಿ ಮೂಡಿಸಬೇಕಾಗಿದೆ. ಮಾರ್ಚ್ 12 ರಂದು ಕನ್ಯಾಕುಮಾರಿಯಿಂದ ಜಾಥಾ ಆರಂಭವಾಗಲಿದೆ. ಈಗಾಗಲೇ 50 ಮಂದಿ ಜೊತೆಯಾಗಿದ್ದಾರೆ. ಆದರೆ ಜಾಥಾಕ್ಕೆ ಬರುವವರ ಸಂಖ್ಯೆ ಹೆಚ್ಚಾಗಬಹುದು ಅಥವಾ ಕಡಿಮೆಯಾಗಬಹುದು. ಆಯಾ ರಾಜ್ಯದಲ್ಲಿ ಜನ ಸೇರಿಕೊಳ್ಳಬಹುದು. 5 ತಿಂಗಳಿಗಿಂತ ಹೆಚ್ಚು ಕಾಲ ಈ ಜಾಥಾ ನಡೆಯಲಿದೆ’ ಎಂದು ವಿಕಾಸ್ ಮಾಹಿತಿ ನೀಡಿದ್ದಾರೆ.

ಕಳೆದ ತಿಂಗಳು 5 ದಿನಗಳ ಕಾಲ ರೈತ ಹೋರಾಟದಲ್ಲಿ ಭಾಗಿಯಾಗಿ ರೈತರಿಗೆ ಬೆಂಬಲ ನೀಡಿದ್ದ ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ರಾಜ್ಯ ಸಂಚಾಲಕ ಸರೋವರ್ ಬೆಂಕಿಕೆರೆ ತಮ್ಮ ತಂಡದೊಂದಿಗೆ ಈ ಸೈಕಲ್ ಜಾಥಾದ ಭಾಗವಾಗಲಿದ್ದಾರೆ.

ಇದನ್ನೂ ಓದಿ: ಇದು ಇಡೀ ದೇಶದ ರೈತ ಹೋರಾಟ: ಟಿಕ್ರಿ ಗಡಿಯಲ್ಲಿ ದಕ್ಷಿಣ ಭಾರತದ ಕಾರ್ಯಕರ್ತರ ಘೋಷಣೆ

’ಮಾರ್ಚ್ 12 ರಂದು ನಾವು ಕನ್ಯಾಕುಮಾರಿಗೆ ಜಾಥಾ ಆರಂಭದ ದಿನವೇ ಅವರನ್ನು ಸೇರಿಕೊಳ್ಳಲಿದ್ದೇವೆ. ಸೈಕಲ್ ಮೂಲಕ ಅಲ್ಲಿಗೆ ತಲುಪುತ್ತೇವೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಮಹಾಪಂಚಾಯತ್‌ ನಡೆಯುವ ದಿನಗಳಂದು ಅಲ್ಲಿಗೆ ಸೇರಿಕೊಳ್ಳುವ ಪ್ರಯತ್ನ ಮಾಡಲಾಗುತ್ತದೆ. ಕನ್ಯಾಕುಮಾರಿಯಿಂದ ಕರ್ನಾಟಕಕ್ಕೆ ಬರುವವರೆಗೂ ರ್‍ಯಾಲಿಯ ಭಾಗವಾಗಿ ಅವರ ಜೊತೆಗೆ ಇರುತ್ತೇವೆ. ರಾಜ್ಯದಲ್ಲಿ ನಡೆಯುವ ಮಹಾ ಪಂಚಾಯತ್‌ನಲ್ಲಿ, ಹಳ್ಳಿ ಹಳ್ಳಿಗಳಿಗೆ ಜಾಥಾದ ಜೊತೆಗೆ ಹೋಗಲಿದ್ದೇವೆ. ಸೈಕಲ್ ಜಾಥಾ ರಾಜ್ಯಕ್ಕೆ ಬಂದ ದಿನ ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ನಾನುಗೌರಿ.ಕಾಂಗೆ ಸರೋವರ ಬೆಂಕಿಕೆರೆ ಮಾಹಿತಿ ನೀಡಿದ್ದಾರೆ.

ಈ ಹಿಂದೆ ರಾಜ್ಯದಲ್ಲಿ, ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಾತ್ಮಕ ಕೃಷಿ ಕಾಯ್ದೆಗಳ ಕುರಿತು ಕರ್ನಾಟಕದ ರೈತರಿಗೆ ಮನವರಿಕೆ ಮಾಡಿಕೊಡಲು ದೇಶಪ್ರೇಮಿ ಯುವಾಂದೋಲನ ಮತ್ತು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸದಸ್ಯರು ಸೈಕಲ್ ಜಾಥಾ ನಡೆಸಿದ್ದರು.  ‘ಹಳ್ಳಿಗಳಿಗೆ ಹೋಗೋಣ’ ಹೆಸರಿನಲ್ಲಿ ಹೈದರಾಬಾದ್ ಕರ್ನಾಟಕ, ಮಧ್ಯ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕದ 8 ಜಿಲ್ಲೆಗಳಲ್ಲಿ ಸೈಕಲ್ ಜಾಥಾ ನಡೆದಿತ್ತು.


ಇದನ್ನೂ ಓದಿ: ಬಿಸಿಲಿಗೂ ಬಗ್ಗುವುದಿಲ್ಲ: ಹೋರಾಟನಿರತ ರೈತರ ಟ್ಯ್ರಾಲಿ, ಟೆಂಟ್‌ಗಳಿಗೆ ಬಂದ ಎಸಿ, ಕೂಲರ್‌ಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...