Homeಚಳವಳಿರೈತರಿಗೆ ಬೆಂಬಲ: ಕನ್ಯಾಕುಮಾರಿಯಿಂದ ಕಾಶ್ಮಿರದವರೆಗೆ ಯುವಜನರ ಸೈಕಲ್ ಜಾಥಾ

ರೈತರಿಗೆ ಬೆಂಬಲ: ಕನ್ಯಾಕುಮಾರಿಯಿಂದ ಕಾಶ್ಮಿರದವರೆಗೆ ಯುವಜನರ ಸೈಕಲ್ ಜಾಥಾ

ಮಾರ್ಚ್ 12 ರಂದು ಕನ್ಯಾಕುಮಾರಿಯಲ್ಲಿ ಈ ಜಾಥಾಕ್ಕೆ ಚಾಲನೆ ಸಿಗಲಿದೆ. ಸುಮಾರು ಐದು ತಿಂಗಳು ಈ ಜಾಥಾ ನಡೆಯಲಿದ್ದು, ದೇಶದ ಹಲವು ಭಾಗಗಳ ಜನರು ಇದರಲ್ಲಿ ಸೇರಿಕೊಳ್ಳಲಿದ್ದಾರೆ.

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ದೇಶದ ರೈತರು ನಡೆಸುತ್ತಿರುವ ರೈತ ಹೋರಾಟಕ್ಕೆ ವಿಶ್ವದಾದ್ಯಂತ ಬೆಂಬಲ ಹರಿದುಬಂದಿದೆ. ಈಗಲೂ ಬರುತ್ತಲೇ ಇದೆ. ಇದರ ಜೊತೆಗೆ ಆಂದೋಲನದ ಬಗ್ಗೆ ದೇಶದ ಜನರಿಗೆ ಮತ್ತಷ್ಟು ಅರಿವು ಮೂಡಿಸಲು ಯುವಕರ ತಂಡವೊಂದು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸೈಕಲ್ ಜಾಥಾ ನಡೆಸಲು ಸಿದ್ದವಾಗಿದೆ.

ಪಶ್ಚಿಮ ಉತ್ತರಪ್ರದೇಶದ ಮತ್‌ನೌಲಿ ಗ್ರಾಮದ ಸಾಮಾಜಿಕ ಕಾರ್ಯಕರ್ತ ವಿಕಾಸ್ ಎನ್ನುವವರು ಈ ಸೈಕಲ್ ಜಾಥಕ್ಕೆ ಕರೆ ನೀಡಿದ್ದಾರೆ. ರೈತ ಹೋರಾಟದ ಬಗ್ಗೆ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ದೇಶದ ಹಳ್ಳಿ ಹಳ್ಳಿಗೂ ಹೋಗಿ ವಿವಾದಿತ ಕಾನೂನುಗಳ ಬಗ್ಗೆ, ರೈತ ಹೋರಾಟ, ಎಂಎಸ್‌ಪಿ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಈ ತಂಡ ರೆಡಿಯಾಗಿದೆ.

ಮಾರ್ಚ್ 12 ರಂದು ಕನ್ಯಾಕುಮಾರಿಯಲ್ಲಿ ಈ ಜಾಥಕ್ಕೆ ಚಾಲನೆ ಸಿಗಲಿದೆ. ಸುಮಾರು ಐದು ತಿಂಗಳು ಈ ಜಾಥಾ ನಡೆಯಲಿದ್ದು, ದೇಶದ ಹಲವು ಭಾಗಗಳ ಜನರು ಇದರಲ್ಲಿ ಸೇರಿಕೊಳ್ಳಲಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸರ್ಕಾರದ ವೈಫಲ್ಯಗಳ ಪ್ರಚಾರ: 100 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ನಿಂದ ’ಜನಧ್ವನಿ’ ಜಾಥಾ

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸೈಕಲ್ ಜಾಥದ ಸಂಯೋಜಕ ವಿಕಾಸ್, ’ರೈತ ಹೋರಾಟ ಆರಂಭದಿಂದ ನಾನು ರೈತರಿಗೆ ಬೆಂಬಲ ನೀಡಿದ್ದೇನೆ. ಸದ್ಯ ನಾನೀಗ ರೈತ ಪ್ರತಿಭಟನೆಯ ಟಿಕ್ರಿ ಗಡಿ ಭಾಗದಲ್ಲಿ ರೈತರೊಂದಿಗೆ ಹೋರಾಟ ನಡೆಸುತ್ತಿದ್ದೇನೆ. ಜನರಲ್ಲಿ ಈ ಹೋರಾಟದ ಬಗ್ಗೆ, ಎಂಎಸ್‌ಪಿ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ ಅದಕ್ಕೆ ಈ ಸೈಕಲ್ ಜಾಥಾ ಮಾಡಲಾಗುತ್ತಿದೆ’ ಎಂದರು.

’ಹೋರಾಟವನ್ನು ದೇಶದ ಒಂದೊಂದು ಊರು, ಹಳ್ಳಿ, ಮನೆ-ಮನೆಗೂ ತೆಗೆದುಕೊಂಡು ಹೋಗಬೇಕು. ಎಂಎಸ್‌ಪಿ ಕಾಯ್ದೆ ಬಗ್ಗೆ ಅತಿ ಹೆಚ್ಚು ಜಾಗೃತಿ ಮೂಡಿಸಬೇಕಾಗಿದೆ. ಮಾರ್ಚ್ 12 ರಂದು ಕನ್ಯಾಕುಮಾರಿಯಿಂದ ಜಾಥಾ ಆರಂಭವಾಗಲಿದೆ. ಈಗಾಗಲೇ 50 ಮಂದಿ ಜೊತೆಯಾಗಿದ್ದಾರೆ. ಆದರೆ ಜಾಥಾಕ್ಕೆ ಬರುವವರ ಸಂಖ್ಯೆ ಹೆಚ್ಚಾಗಬಹುದು ಅಥವಾ ಕಡಿಮೆಯಾಗಬಹುದು. ಆಯಾ ರಾಜ್ಯದಲ್ಲಿ ಜನ ಸೇರಿಕೊಳ್ಳಬಹುದು. 5 ತಿಂಗಳಿಗಿಂತ ಹೆಚ್ಚು ಕಾಲ ಈ ಜಾಥಾ ನಡೆಯಲಿದೆ’ ಎಂದು ವಿಕಾಸ್ ಮಾಹಿತಿ ನೀಡಿದ್ದಾರೆ.

ಕಳೆದ ತಿಂಗಳು 5 ದಿನಗಳ ಕಾಲ ರೈತ ಹೋರಾಟದಲ್ಲಿ ಭಾಗಿಯಾಗಿ ರೈತರಿಗೆ ಬೆಂಬಲ ನೀಡಿದ್ದ ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ರಾಜ್ಯ ಸಂಚಾಲಕ ಸರೋವರ್ ಬೆಂಕಿಕೆರೆ ತಮ್ಮ ತಂಡದೊಂದಿಗೆ ಈ ಸೈಕಲ್ ಜಾಥಾದ ಭಾಗವಾಗಲಿದ್ದಾರೆ.

ಇದನ್ನೂ ಓದಿ: ಇದು ಇಡೀ ದೇಶದ ರೈತ ಹೋರಾಟ: ಟಿಕ್ರಿ ಗಡಿಯಲ್ಲಿ ದಕ್ಷಿಣ ಭಾರತದ ಕಾರ್ಯಕರ್ತರ ಘೋಷಣೆ

’ಮಾರ್ಚ್ 12 ರಂದು ನಾವು ಕನ್ಯಾಕುಮಾರಿಗೆ ಜಾಥಾ ಆರಂಭದ ದಿನವೇ ಅವರನ್ನು ಸೇರಿಕೊಳ್ಳಲಿದ್ದೇವೆ. ಸೈಕಲ್ ಮೂಲಕ ಅಲ್ಲಿಗೆ ತಲುಪುತ್ತೇವೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಮಹಾಪಂಚಾಯತ್‌ ನಡೆಯುವ ದಿನಗಳಂದು ಅಲ್ಲಿಗೆ ಸೇರಿಕೊಳ್ಳುವ ಪ್ರಯತ್ನ ಮಾಡಲಾಗುತ್ತದೆ. ಕನ್ಯಾಕುಮಾರಿಯಿಂದ ಕರ್ನಾಟಕಕ್ಕೆ ಬರುವವರೆಗೂ ರ್‍ಯಾಲಿಯ ಭಾಗವಾಗಿ ಅವರ ಜೊತೆಗೆ ಇರುತ್ತೇವೆ. ರಾಜ್ಯದಲ್ಲಿ ನಡೆಯುವ ಮಹಾ ಪಂಚಾಯತ್‌ನಲ್ಲಿ, ಹಳ್ಳಿ ಹಳ್ಳಿಗಳಿಗೆ ಜಾಥಾದ ಜೊತೆಗೆ ಹೋಗಲಿದ್ದೇವೆ. ಸೈಕಲ್ ಜಾಥಾ ರಾಜ್ಯಕ್ಕೆ ಬಂದ ದಿನ ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ನಾನುಗೌರಿ.ಕಾಂಗೆ ಸರೋವರ ಬೆಂಕಿಕೆರೆ ಮಾಹಿತಿ ನೀಡಿದ್ದಾರೆ.

ಈ ಹಿಂದೆ ರಾಜ್ಯದಲ್ಲಿ, ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಾತ್ಮಕ ಕೃಷಿ ಕಾಯ್ದೆಗಳ ಕುರಿತು ಕರ್ನಾಟಕದ ರೈತರಿಗೆ ಮನವರಿಕೆ ಮಾಡಿಕೊಡಲು ದೇಶಪ್ರೇಮಿ ಯುವಾಂದೋಲನ ಮತ್ತು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸದಸ್ಯರು ಸೈಕಲ್ ಜಾಥಾ ನಡೆಸಿದ್ದರು.  ‘ಹಳ್ಳಿಗಳಿಗೆ ಹೋಗೋಣ’ ಹೆಸರಿನಲ್ಲಿ ಹೈದರಾಬಾದ್ ಕರ್ನಾಟಕ, ಮಧ್ಯ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕದ 8 ಜಿಲ್ಲೆಗಳಲ್ಲಿ ಸೈಕಲ್ ಜಾಥಾ ನಡೆದಿತ್ತು.


ಇದನ್ನೂ ಓದಿ: ಬಿಸಿಲಿಗೂ ಬಗ್ಗುವುದಿಲ್ಲ: ಹೋರಾಟನಿರತ ರೈತರ ಟ್ಯ್ರಾಲಿ, ಟೆಂಟ್‌ಗಳಿಗೆ ಬಂದ ಎಸಿ, ಕೂಲರ್‌ಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...