Homeಮುಖಪುಟ’ಗುಂಪು ಹತ್ಯೆ ನಡೆಸುವ ಪಡೆಯನ್ನು ನೇಮಿಸಿಕೊಳ್ಳುತ್ತಿರುವ ಕಪಿಲ್ ಮಿಶ್ರ’: ಆರೋಪ

’ಗುಂಪು ಹತ್ಯೆ ನಡೆಸುವ ಪಡೆಯನ್ನು ನೇಮಿಸಿಕೊಳ್ಳುತ್ತಿರುವ ಕಪಿಲ್ ಮಿಶ್ರ’: ಆರೋಪ

ದೆಹಲಿ ಗಲಭೆ ನಡೆಯಲು ಪ್ರಮುಖ ಕಾರಣಕರ್ತ ಎಂಬ ಆರೋಪ ಹೊತ್ತಿರುವ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ ಸಾಮಾಜಿಕ ಜಾಲತಾಣದಲ್ಲಿ ‘ಹಿಂದೂ ಎಕೋ ಸಿಸ್ಟಮ್‌’ ಎಂಬ ಗೂಗಲ್ ಫಾರ್ಮ್ ಒಂದನ್ನು ಪ್ರಸಾರ ಮಾಡುತ್ತಿದ್ದಾರೆ

- Advertisement -
- Advertisement -

ದೆಹಲಿ ಗಲಭೆ ನಡೆಯಲು ಪ್ರಮುಖ ಕಾರಣಕರ್ತ ಎಂಬ ಆರೋಪ ಹೊತ್ತಿರುವ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ ಸಾಮಾಜಿಕ ಜಾಲತಾಣದಲ್ಲಿ ‘ಹಿಂದೂ ಎಕೋ ಸಿಸ್ಟಮ್‌’ ಗೂಗಲ್ ಫಾರ್ಮ್ ಒಂದನ್ನು ಪ್ರಸಾರ ಮಾಡುತ್ತಿದ್ದು, ಹಲವಾರು ಜನರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಈಗಾಗಲೆ 18,000 ಜನರು ಇದಕ್ಕೆ ಸೈನ್ ಅಪ್ ಆಗಿದ್ದಾರೆ ಮತ್ತು ಎರಡು ದಿನಗಳ ನಂತರ ಅವರನ್ನು ಎಸ್ಎಂಎಸ್ ಮತ್ತು ಇಮೇಲ್ ಮೂಲಕ ಸಂಪರ್ಕಿಸಲಾಗುವುದು ಕಪಿಲ್ ಮಿಶ್ರಾ  ಹೇಳಿದ್ದಾರೆ. ಫಾರ್ಮ್ ಬಿಡುಗಡೆಯಾದ ಮೂರು ಗಂಟೆಗಳಲ್ಲಿ 5,000 ಜನರು ತಂಡವನ್ನು ಸೇರಿದ್ದಾರೆ ಎಂದು ಅವರು ಈ ಹಿಂದೆ ಹೇಳಿದ್ದರು.

ಈ ವಿವಾದಿತ ಗೂಗಲ್ ಫಾರ್ಮ್‌ನಲ್ಲಿರುವ ಒಂದು ಪ್ರಶ್ನೆ, “ಗೋರಕ್ಷ, ಗೋ ಸೇವಾ, ಲವ್ ಜಿಹಾದ್ ಹೋರಾಟ, ಘರ್ ವಾಪಸಿ, ಹಲಾಲ್, ಮಂದಿರ ನಿರ್ಮಲ್, ಹಿಂದೂ ಏಕ್ತಾ, ಸಾಮಾನ್ಯ ಸೇವೆ ಇವುಗಳಲ್ಲಿ ನೀವು ಯಾವ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದೀರಿ” ಎಂದು ಅದು ಕೇಳುತ್ತದೆ.

ಇದನ್ನೂ ಓದಿ: ದೆಹಲಿ ಗಲಭೆ: ಬಿಜೆಪಿ ನಾಯಕರ ವಿರುದ್ಧದ ದೂರುಗಳಿಗೆ ಕ್ರಮವಿಲ್ಲ- ಎನ್‌ಡಿಟಿವಿ ತನಿಖಾ ವರದಿ

ಫಾರ್ಮ್ ಪೂರ್ತಿಗೊಳಿಸುವವರು ಪೂರ್ಣ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ ಮತ್ತು ವೃತ್ತಿಯಂತಹ ವೈಯಕ್ತಿಕ ಮಾಹಿತಿಯನ್ನು ಭರ್ತಿ ಮಾಡಬೇಕಾಗುತ್ತದೆ. ಫಾರ್ಮ್‌ನ ಕೊನೆಯ ವಿಭಾದಲ್ಲಿ; “ಹೌದು ಕ್ಲಿಕ್ ಮಾಡುವ ಮೂಲಕ, ‘ಹಿಂದೂ ಎಕೋ ಸಿಸ್ಟಮ್’ ತಂಡವನ್ನು ಸೇರಲು ಬದ್ಧನಾಗಿರುತ್ತೇನೆ” ಎಂಬ ಘೋಷಣೆಯಿದೆ.

ಕಪಿಲ್ ಮಿಶ್ರ ಅವರ ಈ ಉಪಕ್ರಮದ ಬಗ್ಗೆ ಪಕ್ಷಕ್ಕೆ ಯಾವುದೆ ಅರಿವಿಲ್ಲ ಎಂದು ದೆಹಲಿ ಬಿಜೆಪಿ ಮಾಧ್ಯಮ ಸೆಲ್‌ ಮುಖ್ಯಸ್ಥ ನವೀನ್ ಕುಮಾರ್‌ ಹೇಳಿದ್ದಾರೆಂದು ದಿ ಪ್ರಿಂಟ್ ವರದಿ ಮಾಡಿದೆ.

ಫೆಬ್ರವರಿ ತಿಂಗಳಲ್ಲಿ ಈಶಾನ್ಯ ದೆಹಲಿಯ ಜಾಫ್ರಾಬಾದ್‌ನಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆಯ ಪರವಾಗಿ ನಡೆದ ರ್‍ಯಾಲಿಯಲ್ಲಿ ಕಪಿಲ್ ಮಿಶ್ರಾ “ಗೋಲಿ ಮಾರೊ ಸಾಲೋ ಕೋ’’ ಎಂಬ ದ್ವೇಷ ಪೂರಿತ ಘೋಷಣೆಯನ್ನು ಕೂಗಿದ್ದರು. ಇದಾಗಿ ಕೆಲವೇ ದಿನದಲ್ಲಿ ಗಲಭೆ ಭುಗಿಲೆದ್ದು 50 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು.

ಹಿಂದೂ ಎಕೊ ಸಿಸ್ಟಮ್‌ ತಂಡದ ಜವಾಬ್ದಾರಿಗಳು ಸ್ಪಷ್ಟವಾಗಿಲ್ಲವಾದರೂ, “ಪ್ರತಿಯೊಬ್ಬ ಸದಸ್ಯರು ಧರ್ಮದ ಹೆಸರಿನಲ್ಲಿ ನೇರವಾಗಿ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ನ್ಯಾಯಾಲಯಗಳಲ್ಲಿ ಕೆಲಸ ಮಾಡುತ್ತಾರೆ” ಎಂದು ಕಪಿಲ್ ಮಿಶ್ರಾ ಹೇಳಿದ್ದಾರೆ.

ಇದನ್ನು ಓದಿ: ಬಿಜೆಪಿ ಕೌನ್ಸಿಲರ್ ದೆಹಲಿ ಗಲಭೆಯನ್ನು ಮುನ್ನೆಡೆಸಿದ್ದರು: ಪ್ರತ್ಯಕ್ಷದರ್ಶಿಯ ದೂರು

ದೆಹಲಿ ಗಲಭೆ ನಡೆಯಲು ಪ್ರಮುಖ ಕಾರಣಕರ್ತ ಎನ್ನಲಾಗುತ್ತಿರುವ ಆರೋಪ ಹೊತ್ತಿರುವ ಕಪಿಲ್‌ ಮಿಶ್ರ ಅವರ ಈ ಉಪಕ್ರಮವನ್ನು ಹಲವಾರು ಜನರು ಟೀಕಿಸಿದ್ದಾರೆ. ಪ್ರಸಿದ್ದ ಕವಿ ಗೀತರಚನೆಕಾರ ಹುಸೈನ್ ಹೈದರಿ, “ದೇಶದಲ್ಲಿ ನಿರುದ್ಯೋಗ ಕಡಿಮೆ ಮಾಡಲು ಇಲ್ಲಿ ಹಲವಾರು ಉದ್ಯೋಗಗಳು ಸೃಷ್ಟಿಯಾಗಿವೆ, ದಯವಿಟ್ಟು ಅರ್ಜಿ ಸಲ್ಲಿಸಿ” ಎಂದು ವ್ಯಂಗ್ಯವಾಡಿದ್ದಾರೆ.

ಪತ್ರಕರ್ತೆ ಝೋಯಾ ರಸೂಲ್, “ದೆಹಲಿ ಹತ್ಯಾಕಾಂಡಗಳನ್ನು ನಡೆಸಲು ಕಪಿಲ್ ಮಿಶ್ರಾ ತನ್ನ ವಾಟ್ಸಾಪ್ ಗುಂಪುಗಳನ್ನು ನವೀಕರಿಸಲು ಪ್ರಯತ್ನಿಸುತ್ತಿದ್ದಾರೆ. ಈ ಸಮಯದಲ್ಲಿ ಪ್ರತಿಯೊಬ್ಬರು ವಿಶೇಷ ಹಿಂಸಾತ್ಮಕ ಕಾರಣಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಖಂಡಿತ ಇದು ಕಾನೂನುಬದ್ಧವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಗಲಭೆ ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ನಾಯಕರ ದ್ವೇಷ ಭಾಷಣಗಳು ನಾಪತ್ತೆ!

“ಅವರು ಗುಂಪು ಹತ್ಯೆ ನಡೆಸುವ ಪಡೆಯನ್ನು ‘ನೇಮಿಸಿಕೊಳ್ಳುತ್ತಿದ್ದಾರೆ’ ಅಷ್ಟೇ” ಎಂದು ಕಿರಣ್ ಎಂಬುವವರು ಅಭಿಪ್ರಾಯ ಪಟ್ಟಿದ್ದಾರೆ.

ಕಪಿಲ್ ಮಿಶ್ರಾ ಎಲ್ಲಾ ಮುಖವಾಡವನ್ನು ಕೈಬಿಟ್ಟು, ನಾಜಿ ನೇಮಕಾತಿ  ಮಾಡುತ್ತಿದ್ದಾರೆ ಎಂದು ಅನುರಾಧ ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿಎಎ ವಿರೋಧಿಗಳ ಬೇಟೆ: ದೆಹಲಿ ಗಲಭೆಗೆ ಉಮರ್‌ ಖಾಲಿದ್‌‌ರನ್ನು ಸಿಲುಕಿಸಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...