Homeಮುಖಪುಟ’ಗುಂಪು ಹತ್ಯೆ ನಡೆಸುವ ಪಡೆಯನ್ನು ನೇಮಿಸಿಕೊಳ್ಳುತ್ತಿರುವ ಕಪಿಲ್ ಮಿಶ್ರ’: ಆರೋಪ

’ಗುಂಪು ಹತ್ಯೆ ನಡೆಸುವ ಪಡೆಯನ್ನು ನೇಮಿಸಿಕೊಳ್ಳುತ್ತಿರುವ ಕಪಿಲ್ ಮಿಶ್ರ’: ಆರೋಪ

ದೆಹಲಿ ಗಲಭೆ ನಡೆಯಲು ಪ್ರಮುಖ ಕಾರಣಕರ್ತ ಎಂಬ ಆರೋಪ ಹೊತ್ತಿರುವ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ ಸಾಮಾಜಿಕ ಜಾಲತಾಣದಲ್ಲಿ ‘ಹಿಂದೂ ಎಕೋ ಸಿಸ್ಟಮ್‌’ ಎಂಬ ಗೂಗಲ್ ಫಾರ್ಮ್ ಒಂದನ್ನು ಪ್ರಸಾರ ಮಾಡುತ್ತಿದ್ದಾರೆ

- Advertisement -
- Advertisement -

ದೆಹಲಿ ಗಲಭೆ ನಡೆಯಲು ಪ್ರಮುಖ ಕಾರಣಕರ್ತ ಎಂಬ ಆರೋಪ ಹೊತ್ತಿರುವ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ ಸಾಮಾಜಿಕ ಜಾಲತಾಣದಲ್ಲಿ ‘ಹಿಂದೂ ಎಕೋ ಸಿಸ್ಟಮ್‌’ ಗೂಗಲ್ ಫಾರ್ಮ್ ಒಂದನ್ನು ಪ್ರಸಾರ ಮಾಡುತ್ತಿದ್ದು, ಹಲವಾರು ಜನರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಈಗಾಗಲೆ 18,000 ಜನರು ಇದಕ್ಕೆ ಸೈನ್ ಅಪ್ ಆಗಿದ್ದಾರೆ ಮತ್ತು ಎರಡು ದಿನಗಳ ನಂತರ ಅವರನ್ನು ಎಸ್ಎಂಎಸ್ ಮತ್ತು ಇಮೇಲ್ ಮೂಲಕ ಸಂಪರ್ಕಿಸಲಾಗುವುದು ಕಪಿಲ್ ಮಿಶ್ರಾ  ಹೇಳಿದ್ದಾರೆ. ಫಾರ್ಮ್ ಬಿಡುಗಡೆಯಾದ ಮೂರು ಗಂಟೆಗಳಲ್ಲಿ 5,000 ಜನರು ತಂಡವನ್ನು ಸೇರಿದ್ದಾರೆ ಎಂದು ಅವರು ಈ ಹಿಂದೆ ಹೇಳಿದ್ದರು.

ಈ ವಿವಾದಿತ ಗೂಗಲ್ ಫಾರ್ಮ್‌ನಲ್ಲಿರುವ ಒಂದು ಪ್ರಶ್ನೆ, “ಗೋರಕ್ಷ, ಗೋ ಸೇವಾ, ಲವ್ ಜಿಹಾದ್ ಹೋರಾಟ, ಘರ್ ವಾಪಸಿ, ಹಲಾಲ್, ಮಂದಿರ ನಿರ್ಮಲ್, ಹಿಂದೂ ಏಕ್ತಾ, ಸಾಮಾನ್ಯ ಸೇವೆ ಇವುಗಳಲ್ಲಿ ನೀವು ಯಾವ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದೀರಿ” ಎಂದು ಅದು ಕೇಳುತ್ತದೆ.

ಇದನ್ನೂ ಓದಿ: ದೆಹಲಿ ಗಲಭೆ: ಬಿಜೆಪಿ ನಾಯಕರ ವಿರುದ್ಧದ ದೂರುಗಳಿಗೆ ಕ್ರಮವಿಲ್ಲ- ಎನ್‌ಡಿಟಿವಿ ತನಿಖಾ ವರದಿ

ಫಾರ್ಮ್ ಪೂರ್ತಿಗೊಳಿಸುವವರು ಪೂರ್ಣ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ ಮತ್ತು ವೃತ್ತಿಯಂತಹ ವೈಯಕ್ತಿಕ ಮಾಹಿತಿಯನ್ನು ಭರ್ತಿ ಮಾಡಬೇಕಾಗುತ್ತದೆ. ಫಾರ್ಮ್‌ನ ಕೊನೆಯ ವಿಭಾದಲ್ಲಿ; “ಹೌದು ಕ್ಲಿಕ್ ಮಾಡುವ ಮೂಲಕ, ‘ಹಿಂದೂ ಎಕೋ ಸಿಸ್ಟಮ್’ ತಂಡವನ್ನು ಸೇರಲು ಬದ್ಧನಾಗಿರುತ್ತೇನೆ” ಎಂಬ ಘೋಷಣೆಯಿದೆ.

ಕಪಿಲ್ ಮಿಶ್ರ ಅವರ ಈ ಉಪಕ್ರಮದ ಬಗ್ಗೆ ಪಕ್ಷಕ್ಕೆ ಯಾವುದೆ ಅರಿವಿಲ್ಲ ಎಂದು ದೆಹಲಿ ಬಿಜೆಪಿ ಮಾಧ್ಯಮ ಸೆಲ್‌ ಮುಖ್ಯಸ್ಥ ನವೀನ್ ಕುಮಾರ್‌ ಹೇಳಿದ್ದಾರೆಂದು ದಿ ಪ್ರಿಂಟ್ ವರದಿ ಮಾಡಿದೆ.

ಫೆಬ್ರವರಿ ತಿಂಗಳಲ್ಲಿ ಈಶಾನ್ಯ ದೆಹಲಿಯ ಜಾಫ್ರಾಬಾದ್‌ನಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆಯ ಪರವಾಗಿ ನಡೆದ ರ್‍ಯಾಲಿಯಲ್ಲಿ ಕಪಿಲ್ ಮಿಶ್ರಾ “ಗೋಲಿ ಮಾರೊ ಸಾಲೋ ಕೋ’’ ಎಂಬ ದ್ವೇಷ ಪೂರಿತ ಘೋಷಣೆಯನ್ನು ಕೂಗಿದ್ದರು. ಇದಾಗಿ ಕೆಲವೇ ದಿನದಲ್ಲಿ ಗಲಭೆ ಭುಗಿಲೆದ್ದು 50 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು.

ಹಿಂದೂ ಎಕೊ ಸಿಸ್ಟಮ್‌ ತಂಡದ ಜವಾಬ್ದಾರಿಗಳು ಸ್ಪಷ್ಟವಾಗಿಲ್ಲವಾದರೂ, “ಪ್ರತಿಯೊಬ್ಬ ಸದಸ್ಯರು ಧರ್ಮದ ಹೆಸರಿನಲ್ಲಿ ನೇರವಾಗಿ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ನ್ಯಾಯಾಲಯಗಳಲ್ಲಿ ಕೆಲಸ ಮಾಡುತ್ತಾರೆ” ಎಂದು ಕಪಿಲ್ ಮಿಶ್ರಾ ಹೇಳಿದ್ದಾರೆ.

ಇದನ್ನು ಓದಿ: ಬಿಜೆಪಿ ಕೌನ್ಸಿಲರ್ ದೆಹಲಿ ಗಲಭೆಯನ್ನು ಮುನ್ನೆಡೆಸಿದ್ದರು: ಪ್ರತ್ಯಕ್ಷದರ್ಶಿಯ ದೂರು

ದೆಹಲಿ ಗಲಭೆ ನಡೆಯಲು ಪ್ರಮುಖ ಕಾರಣಕರ್ತ ಎನ್ನಲಾಗುತ್ತಿರುವ ಆರೋಪ ಹೊತ್ತಿರುವ ಕಪಿಲ್‌ ಮಿಶ್ರ ಅವರ ಈ ಉಪಕ್ರಮವನ್ನು ಹಲವಾರು ಜನರು ಟೀಕಿಸಿದ್ದಾರೆ. ಪ್ರಸಿದ್ದ ಕವಿ ಗೀತರಚನೆಕಾರ ಹುಸೈನ್ ಹೈದರಿ, “ದೇಶದಲ್ಲಿ ನಿರುದ್ಯೋಗ ಕಡಿಮೆ ಮಾಡಲು ಇಲ್ಲಿ ಹಲವಾರು ಉದ್ಯೋಗಗಳು ಸೃಷ್ಟಿಯಾಗಿವೆ, ದಯವಿಟ್ಟು ಅರ್ಜಿ ಸಲ್ಲಿಸಿ” ಎಂದು ವ್ಯಂಗ್ಯವಾಡಿದ್ದಾರೆ.

ಪತ್ರಕರ್ತೆ ಝೋಯಾ ರಸೂಲ್, “ದೆಹಲಿ ಹತ್ಯಾಕಾಂಡಗಳನ್ನು ನಡೆಸಲು ಕಪಿಲ್ ಮಿಶ್ರಾ ತನ್ನ ವಾಟ್ಸಾಪ್ ಗುಂಪುಗಳನ್ನು ನವೀಕರಿಸಲು ಪ್ರಯತ್ನಿಸುತ್ತಿದ್ದಾರೆ. ಈ ಸಮಯದಲ್ಲಿ ಪ್ರತಿಯೊಬ್ಬರು ವಿಶೇಷ ಹಿಂಸಾತ್ಮಕ ಕಾರಣಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಖಂಡಿತ ಇದು ಕಾನೂನುಬದ್ಧವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಗಲಭೆ ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ನಾಯಕರ ದ್ವೇಷ ಭಾಷಣಗಳು ನಾಪತ್ತೆ!

“ಅವರು ಗುಂಪು ಹತ್ಯೆ ನಡೆಸುವ ಪಡೆಯನ್ನು ‘ನೇಮಿಸಿಕೊಳ್ಳುತ್ತಿದ್ದಾರೆ’ ಅಷ್ಟೇ” ಎಂದು ಕಿರಣ್ ಎಂಬುವವರು ಅಭಿಪ್ರಾಯ ಪಟ್ಟಿದ್ದಾರೆ.

ಕಪಿಲ್ ಮಿಶ್ರಾ ಎಲ್ಲಾ ಮುಖವಾಡವನ್ನು ಕೈಬಿಟ್ಟು, ನಾಜಿ ನೇಮಕಾತಿ  ಮಾಡುತ್ತಿದ್ದಾರೆ ಎಂದು ಅನುರಾಧ ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿಎಎ ವಿರೋಧಿಗಳ ಬೇಟೆ: ದೆಹಲಿ ಗಲಭೆಗೆ ಉಮರ್‌ ಖಾಲಿದ್‌‌ರನ್ನು ಸಿಲುಕಿಸಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...