Homeಮುಖಪುಟ’ಗುಂಪು ಹತ್ಯೆ ನಡೆಸುವ ಪಡೆಯನ್ನು ನೇಮಿಸಿಕೊಳ್ಳುತ್ತಿರುವ ಕಪಿಲ್ ಮಿಶ್ರ’: ಆರೋಪ

’ಗುಂಪು ಹತ್ಯೆ ನಡೆಸುವ ಪಡೆಯನ್ನು ನೇಮಿಸಿಕೊಳ್ಳುತ್ತಿರುವ ಕಪಿಲ್ ಮಿಶ್ರ’: ಆರೋಪ

ದೆಹಲಿ ಗಲಭೆ ನಡೆಯಲು ಪ್ರಮುಖ ಕಾರಣಕರ್ತ ಎಂಬ ಆರೋಪ ಹೊತ್ತಿರುವ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ ಸಾಮಾಜಿಕ ಜಾಲತಾಣದಲ್ಲಿ ‘ಹಿಂದೂ ಎಕೋ ಸಿಸ್ಟಮ್‌’ ಎಂಬ ಗೂಗಲ್ ಫಾರ್ಮ್ ಒಂದನ್ನು ಪ್ರಸಾರ ಮಾಡುತ್ತಿದ್ದಾರೆ

- Advertisement -
- Advertisement -

ದೆಹಲಿ ಗಲಭೆ ನಡೆಯಲು ಪ್ರಮುಖ ಕಾರಣಕರ್ತ ಎಂಬ ಆರೋಪ ಹೊತ್ತಿರುವ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ ಸಾಮಾಜಿಕ ಜಾಲತಾಣದಲ್ಲಿ ‘ಹಿಂದೂ ಎಕೋ ಸಿಸ್ಟಮ್‌’ ಗೂಗಲ್ ಫಾರ್ಮ್ ಒಂದನ್ನು ಪ್ರಸಾರ ಮಾಡುತ್ತಿದ್ದು, ಹಲವಾರು ಜನರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಈಗಾಗಲೆ 18,000 ಜನರು ಇದಕ್ಕೆ ಸೈನ್ ಅಪ್ ಆಗಿದ್ದಾರೆ ಮತ್ತು ಎರಡು ದಿನಗಳ ನಂತರ ಅವರನ್ನು ಎಸ್ಎಂಎಸ್ ಮತ್ತು ಇಮೇಲ್ ಮೂಲಕ ಸಂಪರ್ಕಿಸಲಾಗುವುದು ಕಪಿಲ್ ಮಿಶ್ರಾ  ಹೇಳಿದ್ದಾರೆ. ಫಾರ್ಮ್ ಬಿಡುಗಡೆಯಾದ ಮೂರು ಗಂಟೆಗಳಲ್ಲಿ 5,000 ಜನರು ತಂಡವನ್ನು ಸೇರಿದ್ದಾರೆ ಎಂದು ಅವರು ಈ ಹಿಂದೆ ಹೇಳಿದ್ದರು.

ಈ ವಿವಾದಿತ ಗೂಗಲ್ ಫಾರ್ಮ್‌ನಲ್ಲಿರುವ ಒಂದು ಪ್ರಶ್ನೆ, “ಗೋರಕ್ಷ, ಗೋ ಸೇವಾ, ಲವ್ ಜಿಹಾದ್ ಹೋರಾಟ, ಘರ್ ವಾಪಸಿ, ಹಲಾಲ್, ಮಂದಿರ ನಿರ್ಮಲ್, ಹಿಂದೂ ಏಕ್ತಾ, ಸಾಮಾನ್ಯ ಸೇವೆ ಇವುಗಳಲ್ಲಿ ನೀವು ಯಾವ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದೀರಿ” ಎಂದು ಅದು ಕೇಳುತ್ತದೆ.

ಇದನ್ನೂ ಓದಿ: ದೆಹಲಿ ಗಲಭೆ: ಬಿಜೆಪಿ ನಾಯಕರ ವಿರುದ್ಧದ ದೂರುಗಳಿಗೆ ಕ್ರಮವಿಲ್ಲ- ಎನ್‌ಡಿಟಿವಿ ತನಿಖಾ ವರದಿ

ಫಾರ್ಮ್ ಪೂರ್ತಿಗೊಳಿಸುವವರು ಪೂರ್ಣ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ ಮತ್ತು ವೃತ್ತಿಯಂತಹ ವೈಯಕ್ತಿಕ ಮಾಹಿತಿಯನ್ನು ಭರ್ತಿ ಮಾಡಬೇಕಾಗುತ್ತದೆ. ಫಾರ್ಮ್‌ನ ಕೊನೆಯ ವಿಭಾದಲ್ಲಿ; “ಹೌದು ಕ್ಲಿಕ್ ಮಾಡುವ ಮೂಲಕ, ‘ಹಿಂದೂ ಎಕೋ ಸಿಸ್ಟಮ್’ ತಂಡವನ್ನು ಸೇರಲು ಬದ್ಧನಾಗಿರುತ್ತೇನೆ” ಎಂಬ ಘೋಷಣೆಯಿದೆ.

ಕಪಿಲ್ ಮಿಶ್ರ ಅವರ ಈ ಉಪಕ್ರಮದ ಬಗ್ಗೆ ಪಕ್ಷಕ್ಕೆ ಯಾವುದೆ ಅರಿವಿಲ್ಲ ಎಂದು ದೆಹಲಿ ಬಿಜೆಪಿ ಮಾಧ್ಯಮ ಸೆಲ್‌ ಮುಖ್ಯಸ್ಥ ನವೀನ್ ಕುಮಾರ್‌ ಹೇಳಿದ್ದಾರೆಂದು ದಿ ಪ್ರಿಂಟ್ ವರದಿ ಮಾಡಿದೆ.

ಫೆಬ್ರವರಿ ತಿಂಗಳಲ್ಲಿ ಈಶಾನ್ಯ ದೆಹಲಿಯ ಜಾಫ್ರಾಬಾದ್‌ನಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆಯ ಪರವಾಗಿ ನಡೆದ ರ್‍ಯಾಲಿಯಲ್ಲಿ ಕಪಿಲ್ ಮಿಶ್ರಾ “ಗೋಲಿ ಮಾರೊ ಸಾಲೋ ಕೋ’’ ಎಂಬ ದ್ವೇಷ ಪೂರಿತ ಘೋಷಣೆಯನ್ನು ಕೂಗಿದ್ದರು. ಇದಾಗಿ ಕೆಲವೇ ದಿನದಲ್ಲಿ ಗಲಭೆ ಭುಗಿಲೆದ್ದು 50 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು.

ಹಿಂದೂ ಎಕೊ ಸಿಸ್ಟಮ್‌ ತಂಡದ ಜವಾಬ್ದಾರಿಗಳು ಸ್ಪಷ್ಟವಾಗಿಲ್ಲವಾದರೂ, “ಪ್ರತಿಯೊಬ್ಬ ಸದಸ್ಯರು ಧರ್ಮದ ಹೆಸರಿನಲ್ಲಿ ನೇರವಾಗಿ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ನ್ಯಾಯಾಲಯಗಳಲ್ಲಿ ಕೆಲಸ ಮಾಡುತ್ತಾರೆ” ಎಂದು ಕಪಿಲ್ ಮಿಶ್ರಾ ಹೇಳಿದ್ದಾರೆ.

ಇದನ್ನು ಓದಿ: ಬಿಜೆಪಿ ಕೌನ್ಸಿಲರ್ ದೆಹಲಿ ಗಲಭೆಯನ್ನು ಮುನ್ನೆಡೆಸಿದ್ದರು: ಪ್ರತ್ಯಕ್ಷದರ್ಶಿಯ ದೂರು

ದೆಹಲಿ ಗಲಭೆ ನಡೆಯಲು ಪ್ರಮುಖ ಕಾರಣಕರ್ತ ಎನ್ನಲಾಗುತ್ತಿರುವ ಆರೋಪ ಹೊತ್ತಿರುವ ಕಪಿಲ್‌ ಮಿಶ್ರ ಅವರ ಈ ಉಪಕ್ರಮವನ್ನು ಹಲವಾರು ಜನರು ಟೀಕಿಸಿದ್ದಾರೆ. ಪ್ರಸಿದ್ದ ಕವಿ ಗೀತರಚನೆಕಾರ ಹುಸೈನ್ ಹೈದರಿ, “ದೇಶದಲ್ಲಿ ನಿರುದ್ಯೋಗ ಕಡಿಮೆ ಮಾಡಲು ಇಲ್ಲಿ ಹಲವಾರು ಉದ್ಯೋಗಗಳು ಸೃಷ್ಟಿಯಾಗಿವೆ, ದಯವಿಟ್ಟು ಅರ್ಜಿ ಸಲ್ಲಿಸಿ” ಎಂದು ವ್ಯಂಗ್ಯವಾಡಿದ್ದಾರೆ.

ಪತ್ರಕರ್ತೆ ಝೋಯಾ ರಸೂಲ್, “ದೆಹಲಿ ಹತ್ಯಾಕಾಂಡಗಳನ್ನು ನಡೆಸಲು ಕಪಿಲ್ ಮಿಶ್ರಾ ತನ್ನ ವಾಟ್ಸಾಪ್ ಗುಂಪುಗಳನ್ನು ನವೀಕರಿಸಲು ಪ್ರಯತ್ನಿಸುತ್ತಿದ್ದಾರೆ. ಈ ಸಮಯದಲ್ಲಿ ಪ್ರತಿಯೊಬ್ಬರು ವಿಶೇಷ ಹಿಂಸಾತ್ಮಕ ಕಾರಣಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಖಂಡಿತ ಇದು ಕಾನೂನುಬದ್ಧವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಗಲಭೆ ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ನಾಯಕರ ದ್ವೇಷ ಭಾಷಣಗಳು ನಾಪತ್ತೆ!

“ಅವರು ಗುಂಪು ಹತ್ಯೆ ನಡೆಸುವ ಪಡೆಯನ್ನು ‘ನೇಮಿಸಿಕೊಳ್ಳುತ್ತಿದ್ದಾರೆ’ ಅಷ್ಟೇ” ಎಂದು ಕಿರಣ್ ಎಂಬುವವರು ಅಭಿಪ್ರಾಯ ಪಟ್ಟಿದ್ದಾರೆ.

ಕಪಿಲ್ ಮಿಶ್ರಾ ಎಲ್ಲಾ ಮುಖವಾಡವನ್ನು ಕೈಬಿಟ್ಟು, ನಾಜಿ ನೇಮಕಾತಿ  ಮಾಡುತ್ತಿದ್ದಾರೆ ಎಂದು ಅನುರಾಧ ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿಎಎ ವಿರೋಧಿಗಳ ಬೇಟೆ: ದೆಹಲಿ ಗಲಭೆಗೆ ಉಮರ್‌ ಖಾಲಿದ್‌‌ರನ್ನು ಸಿಲುಕಿಸಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...