Homeಮುಖಪುಟ’ಗುಂಪು ಹತ್ಯೆ ನಡೆಸುವ ಪಡೆಯನ್ನು ನೇಮಿಸಿಕೊಳ್ಳುತ್ತಿರುವ ಕಪಿಲ್ ಮಿಶ್ರ’: ಆರೋಪ

’ಗುಂಪು ಹತ್ಯೆ ನಡೆಸುವ ಪಡೆಯನ್ನು ನೇಮಿಸಿಕೊಳ್ಳುತ್ತಿರುವ ಕಪಿಲ್ ಮಿಶ್ರ’: ಆರೋಪ

ದೆಹಲಿ ಗಲಭೆ ನಡೆಯಲು ಪ್ರಮುಖ ಕಾರಣಕರ್ತ ಎಂಬ ಆರೋಪ ಹೊತ್ತಿರುವ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ ಸಾಮಾಜಿಕ ಜಾಲತಾಣದಲ್ಲಿ ‘ಹಿಂದೂ ಎಕೋ ಸಿಸ್ಟಮ್‌’ ಎಂಬ ಗೂಗಲ್ ಫಾರ್ಮ್ ಒಂದನ್ನು ಪ್ರಸಾರ ಮಾಡುತ್ತಿದ್ದಾರೆ

- Advertisement -
- Advertisement -

ದೆಹಲಿ ಗಲಭೆ ನಡೆಯಲು ಪ್ರಮುಖ ಕಾರಣಕರ್ತ ಎಂಬ ಆರೋಪ ಹೊತ್ತಿರುವ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ ಸಾಮಾಜಿಕ ಜಾಲತಾಣದಲ್ಲಿ ‘ಹಿಂದೂ ಎಕೋ ಸಿಸ್ಟಮ್‌’ ಗೂಗಲ್ ಫಾರ್ಮ್ ಒಂದನ್ನು ಪ್ರಸಾರ ಮಾಡುತ್ತಿದ್ದು, ಹಲವಾರು ಜನರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಈಗಾಗಲೆ 18,000 ಜನರು ಇದಕ್ಕೆ ಸೈನ್ ಅಪ್ ಆಗಿದ್ದಾರೆ ಮತ್ತು ಎರಡು ದಿನಗಳ ನಂತರ ಅವರನ್ನು ಎಸ್ಎಂಎಸ್ ಮತ್ತು ಇಮೇಲ್ ಮೂಲಕ ಸಂಪರ್ಕಿಸಲಾಗುವುದು ಕಪಿಲ್ ಮಿಶ್ರಾ  ಹೇಳಿದ್ದಾರೆ. ಫಾರ್ಮ್ ಬಿಡುಗಡೆಯಾದ ಮೂರು ಗಂಟೆಗಳಲ್ಲಿ 5,000 ಜನರು ತಂಡವನ್ನು ಸೇರಿದ್ದಾರೆ ಎಂದು ಅವರು ಈ ಹಿಂದೆ ಹೇಳಿದ್ದರು.

ಈ ವಿವಾದಿತ ಗೂಗಲ್ ಫಾರ್ಮ್‌ನಲ್ಲಿರುವ ಒಂದು ಪ್ರಶ್ನೆ, “ಗೋರಕ್ಷ, ಗೋ ಸೇವಾ, ಲವ್ ಜಿಹಾದ್ ಹೋರಾಟ, ಘರ್ ವಾಪಸಿ, ಹಲಾಲ್, ಮಂದಿರ ನಿರ್ಮಲ್, ಹಿಂದೂ ಏಕ್ತಾ, ಸಾಮಾನ್ಯ ಸೇವೆ ಇವುಗಳಲ್ಲಿ ನೀವು ಯಾವ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದೀರಿ” ಎಂದು ಅದು ಕೇಳುತ್ತದೆ.

ಇದನ್ನೂ ಓದಿ: ದೆಹಲಿ ಗಲಭೆ: ಬಿಜೆಪಿ ನಾಯಕರ ವಿರುದ್ಧದ ದೂರುಗಳಿಗೆ ಕ್ರಮವಿಲ್ಲ- ಎನ್‌ಡಿಟಿವಿ ತನಿಖಾ ವರದಿ

ಫಾರ್ಮ್ ಪೂರ್ತಿಗೊಳಿಸುವವರು ಪೂರ್ಣ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ ಮತ್ತು ವೃತ್ತಿಯಂತಹ ವೈಯಕ್ತಿಕ ಮಾಹಿತಿಯನ್ನು ಭರ್ತಿ ಮಾಡಬೇಕಾಗುತ್ತದೆ. ಫಾರ್ಮ್‌ನ ಕೊನೆಯ ವಿಭಾದಲ್ಲಿ; “ಹೌದು ಕ್ಲಿಕ್ ಮಾಡುವ ಮೂಲಕ, ‘ಹಿಂದೂ ಎಕೋ ಸಿಸ್ಟಮ್’ ತಂಡವನ್ನು ಸೇರಲು ಬದ್ಧನಾಗಿರುತ್ತೇನೆ” ಎಂಬ ಘೋಷಣೆಯಿದೆ.

ಕಪಿಲ್ ಮಿಶ್ರ ಅವರ ಈ ಉಪಕ್ರಮದ ಬಗ್ಗೆ ಪಕ್ಷಕ್ಕೆ ಯಾವುದೆ ಅರಿವಿಲ್ಲ ಎಂದು ದೆಹಲಿ ಬಿಜೆಪಿ ಮಾಧ್ಯಮ ಸೆಲ್‌ ಮುಖ್ಯಸ್ಥ ನವೀನ್ ಕುಮಾರ್‌ ಹೇಳಿದ್ದಾರೆಂದು ದಿ ಪ್ರಿಂಟ್ ವರದಿ ಮಾಡಿದೆ.

ಫೆಬ್ರವರಿ ತಿಂಗಳಲ್ಲಿ ಈಶಾನ್ಯ ದೆಹಲಿಯ ಜಾಫ್ರಾಬಾದ್‌ನಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆಯ ಪರವಾಗಿ ನಡೆದ ರ್‍ಯಾಲಿಯಲ್ಲಿ ಕಪಿಲ್ ಮಿಶ್ರಾ “ಗೋಲಿ ಮಾರೊ ಸಾಲೋ ಕೋ’’ ಎಂಬ ದ್ವೇಷ ಪೂರಿತ ಘೋಷಣೆಯನ್ನು ಕೂಗಿದ್ದರು. ಇದಾಗಿ ಕೆಲವೇ ದಿನದಲ್ಲಿ ಗಲಭೆ ಭುಗಿಲೆದ್ದು 50 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು.

ಹಿಂದೂ ಎಕೊ ಸಿಸ್ಟಮ್‌ ತಂಡದ ಜವಾಬ್ದಾರಿಗಳು ಸ್ಪಷ್ಟವಾಗಿಲ್ಲವಾದರೂ, “ಪ್ರತಿಯೊಬ್ಬ ಸದಸ್ಯರು ಧರ್ಮದ ಹೆಸರಿನಲ್ಲಿ ನೇರವಾಗಿ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ನ್ಯಾಯಾಲಯಗಳಲ್ಲಿ ಕೆಲಸ ಮಾಡುತ್ತಾರೆ” ಎಂದು ಕಪಿಲ್ ಮಿಶ್ರಾ ಹೇಳಿದ್ದಾರೆ.

ಇದನ್ನು ಓದಿ: ಬಿಜೆಪಿ ಕೌನ್ಸಿಲರ್ ದೆಹಲಿ ಗಲಭೆಯನ್ನು ಮುನ್ನೆಡೆಸಿದ್ದರು: ಪ್ರತ್ಯಕ್ಷದರ್ಶಿಯ ದೂರು

ದೆಹಲಿ ಗಲಭೆ ನಡೆಯಲು ಪ್ರಮುಖ ಕಾರಣಕರ್ತ ಎನ್ನಲಾಗುತ್ತಿರುವ ಆರೋಪ ಹೊತ್ತಿರುವ ಕಪಿಲ್‌ ಮಿಶ್ರ ಅವರ ಈ ಉಪಕ್ರಮವನ್ನು ಹಲವಾರು ಜನರು ಟೀಕಿಸಿದ್ದಾರೆ. ಪ್ರಸಿದ್ದ ಕವಿ ಗೀತರಚನೆಕಾರ ಹುಸೈನ್ ಹೈದರಿ, “ದೇಶದಲ್ಲಿ ನಿರುದ್ಯೋಗ ಕಡಿಮೆ ಮಾಡಲು ಇಲ್ಲಿ ಹಲವಾರು ಉದ್ಯೋಗಗಳು ಸೃಷ್ಟಿಯಾಗಿವೆ, ದಯವಿಟ್ಟು ಅರ್ಜಿ ಸಲ್ಲಿಸಿ” ಎಂದು ವ್ಯಂಗ್ಯವಾಡಿದ್ದಾರೆ.

ಪತ್ರಕರ್ತೆ ಝೋಯಾ ರಸೂಲ್, “ದೆಹಲಿ ಹತ್ಯಾಕಾಂಡಗಳನ್ನು ನಡೆಸಲು ಕಪಿಲ್ ಮಿಶ್ರಾ ತನ್ನ ವಾಟ್ಸಾಪ್ ಗುಂಪುಗಳನ್ನು ನವೀಕರಿಸಲು ಪ್ರಯತ್ನಿಸುತ್ತಿದ್ದಾರೆ. ಈ ಸಮಯದಲ್ಲಿ ಪ್ರತಿಯೊಬ್ಬರು ವಿಶೇಷ ಹಿಂಸಾತ್ಮಕ ಕಾರಣಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಖಂಡಿತ ಇದು ಕಾನೂನುಬದ್ಧವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಗಲಭೆ ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ನಾಯಕರ ದ್ವೇಷ ಭಾಷಣಗಳು ನಾಪತ್ತೆ!

“ಅವರು ಗುಂಪು ಹತ್ಯೆ ನಡೆಸುವ ಪಡೆಯನ್ನು ‘ನೇಮಿಸಿಕೊಳ್ಳುತ್ತಿದ್ದಾರೆ’ ಅಷ್ಟೇ” ಎಂದು ಕಿರಣ್ ಎಂಬುವವರು ಅಭಿಪ್ರಾಯ ಪಟ್ಟಿದ್ದಾರೆ.

ಕಪಿಲ್ ಮಿಶ್ರಾ ಎಲ್ಲಾ ಮುಖವಾಡವನ್ನು ಕೈಬಿಟ್ಟು, ನಾಜಿ ನೇಮಕಾತಿ  ಮಾಡುತ್ತಿದ್ದಾರೆ ಎಂದು ಅನುರಾಧ ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿಎಎ ವಿರೋಧಿಗಳ ಬೇಟೆ: ದೆಹಲಿ ಗಲಭೆಗೆ ಉಮರ್‌ ಖಾಲಿದ್‌‌ರನ್ನು ಸಿಲುಕಿಸಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...