Homeಕರ್ನಾಟಕಕಾಪು ಮಾರಿಗುಡಿ ಜಾತ್ರೆ: ಸಂಘಪರಿವಾರದ ಬೆದರಿಕೆಗೆ ಸೊಪ್ಪು ಹಾಕದೆ ಮುಸ್ಲಿಮರೊಂದಿಗೆ ವ್ಯಾಪಾರ ಮಾಡಿದ ಭಕ್ತಾದಿಗಳು!

ಕಾಪು ಮಾರಿಗುಡಿ ಜಾತ್ರೆ: ಸಂಘಪರಿವಾರದ ಬೆದರಿಕೆಗೆ ಸೊಪ್ಪು ಹಾಕದೆ ಮುಸ್ಲಿಮರೊಂದಿಗೆ ವ್ಯಾಪಾರ ಮಾಡಿದ ಭಕ್ತಾದಿಗಳು!

ದೇವಸ್ಥಾನದ ಬಳಿ ಅಂಗಡಿಯಿಟ್ಟಿದ್ದ ಸಂಘಪರಿವಾರದ ಕಾರ್ಯಕತರಿಂದ ದುಪ್ಪಟ್ಟು ಬೆಲೆಗೆ ಕೋಳಿ & ಮಲ್ಲಿಗೆ ಮಾರಾಟ ಮಾಡಿ ಹಿಂದೂ ಭಕ್ತಾದಿಗಳಿಗೆ ವಂಚನೆ

- Advertisement -
- Advertisement -

➤ ಪರಂಪರೆಯಂತೆ ಮುಸ್ಲಿಂ ಸಮುದಾಯದ ವ್ಯಕ್ತಿಯಿಂದಲೇ ದೇವಿಯ ‘ವಾಲಗ ಚಾಕರಿ’
➤ ಪರಿಸ್ಥಿತಿಯ ಲಾಭ ಪಡೆದು ಕೆಜಿ.ಗೆ 250 ರೂ. ಇದ್ದ ನಾಟಿ ಕೋಳಿಯನ್ನು ಕೆಜಿ.ಗೆ 400 ರೂ.ಗೆ ಮಾರಾಟ ಮಾಡಿ ಭಕ್ತರನ್ನು ವಂಚಿಸಿದ ಸಂಘಪರಿವಾರದ ಕಾರ್ಯಕರ್ತರು: ಆರೋಪ

ಉಡುಪಿ ಜಿಲ್ಲೆಯ ಕಾಪು ಬಳಿಯ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ವಾರ್ಷಿಕವಾಗಿ ನಡೆಯುವ, ‘ಸುಗ್ಗಿ ಮಾರಿ ಪೂಜೆ’ ಜಾತ್ರೆಯು ಬಿಜೆಪಿ ಬೆಂಬಲಿತ ಸಂಘಪರಿವಾರದ ಸಂಘಟನೆಗಳ ಬೆದರಿಕೆಯ ನಡುವೆಯು ಸಾಂಗಾವಾಗಿ ನಡೆದು ಸಂಪನ್ನಗೊಂಡಿದೆ. ಈ ನಡುವೆ ದೇವಸ್ಥಾನದ ವಠಾರದಲ್ಲಿ ಅಂಗಡಿಯನ್ನು ಇಟ್ಟಿದ್ದ ಸಂಘಪರಿವಾದ ಕಾರ್ಯಕರ್ತರು ಮಾರುಕಟ್ಟೆ ಬೆಲೆಗಿಂತಲೂ ದುಪ್ಪಟ್ಟು ಬೆಲೆಗೆ ಕೋಳಿ ಮತ್ತು ಮಲ್ಲಿಗೆ ಹೂವುಗಳನ್ನು ಮಾರಿದ್ದು, ಭಕ್ತಾದಿಗಳನ್ನು ವಂಚಿಸಿದ್ದಾರೆ ಎಂದು ವರದಿಯಾಗಿದೆ.

ಜಾತ್ರೆಯಲ್ಲಿ ಮುಸ್ಲಿಮರು ವ್ಯಾಪಾರ ಮಾಡಬಾರದು ಎಂದು ಸಂಘಪರಿವಾರ ಮುಸ್ಲಿಮರ ವಿರುದ್ಧ ದ್ವೇಷ ಹರಡಿ, ಕೋಮು ಸೌಹಾರ್ದವನ್ನು ಹಾಳುಗೆಡವಿತ್ತು. ಆದರೆ ಜಾತ್ರೆಗೆ ಬಂದಿದ್ದ ಭಕ್ತಾದಿಗಳು ಸಂಘಪರಿವಾದ ಬೆದರಿಕೆಗಳಿಗೆ ಸೊಪ್ಪು ಹಾಕದೆ ಮುಸ್ಲಿಂ ವ್ಯಾಪಾರಿಗಳೊಂದಿಗೆ ವ್ಯಾಪಾರ ಮಾಡಿದ್ದು, ಜಾತ್ರೆಯ ‘ವಾಲಗ ಚಾಕರಿ’ಯನ್ನು ಸಂಪ್ರದಾಯದಂತೆ ಮುಸ್ಲಿಂ ಸಮುದಾಯದ ವ್ಯಕ್ತಿಗಳೆ ಎರಡು ದಿನದ ವಾಲಗ ಊದಿ ‘ತುಳುನಾಡಿನ ಪರಂಪರೆ’ಯನ್ನು ಎತ್ತಿಹಿಡಿದಿದ್ದಾರೆ.

ಇದನ್ನೂ ಓದಿ: ಉಡುಪಿ: ಕಾಪು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿದ ದೇವಸ್ಥಾನ ಸಮಿತಿ; ‘ಸಹಬಾಳ್ವೆ ಉಡುಪಿ’ ವಿರೋಧ

ಮಾರಿಗುಡಿ ವಾರ್ಷಿಕ ಜಾತ್ರೆಯಲ್ಲಿ ವ್ಯಾಪಾರ ಮಾಡಲು ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡಬಾರದು ಎಂದು ಸಂಘಪರಿವಾರವು ದೇವಸ್ಥಾನದ ಆಡಳಿತ ಮಂಡಳಿ ಮತ್ತು ಪುರಸಭೆಗೆ ಒತ್ತಡ ಹೇರಿತ್ತು. ದೇವಸ್ಥಾನದ ಆಡಳಿತ ಮಂಡಳಿ ಸಂಘಪರಿವಾರದ ಬೆದರಿಕೆಗಳಿಗೆ ಜಗ್ಗಿ ದೇವಸ್ಥಾನದ ವಠಾರದಲ್ಲಿ ಮುಸ್ಲಿಮರಿಗೆ ಯಾವುದೆ ಅಂಗಡಿ ಮುಂಗ್ಗಟ್ಟುಗಳನ್ನು ನೀಡಿರಲಿಲ್ಲ. ಆದರೆ ಕಾಪು ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವಡ ಅವರು, “ಭಾರತ ಜಾತ್ಯತೀತ ರಾಷ್ಟ್ರವಾಗಿರುವುದರಿಂದ ಎಲ್ಲ ಸಮುದಾಯದ ವರ್ತಕರು ಅಂಗಡಿಗಳನ್ನು ತೆರೆಯಬಹುದಾಗಿದೆ” ಎಂದು ಹೇಳಿದ್ದರು.

ಅದರಂತೆ ದೇವಸ್ಥಾನದ ವಠಾರದಲ್ಲಿ ಅವಕಾಶ ನೀಡದ್ದರಿಂದ ಅಲ್ಲಿ ಯಾವುದೆ ಮುಸ್ಲಿಮರ ಅಂಗಡಿಗಳು ಇರಲಿಲ್ಲ. ಆದರೆ ಹೊರಗಡೆಯ ಸಾವರ್ಜನಿಕ ಸ್ಥಳಗಳಲ್ಲಿ ಮುಸ್ಲಿಮರು ತಮ್ಮ ಅಂಗಡಿಗಳಲ್ಲಿ ಕೋಳಿ ಮತ್ತು ಇತರ ವಸ್ತುಗಳನ್ನು ಇಟ್ಟು ಮಾರಾಟ ಮಾಡಿದ್ದರು. ಅವರೊಂದಿಗೆ ಜಾತ್ರೆಗೆ ಆಗಮಿಸಿದ್ದ ಭಕ್ತರು ವ್ಯಾಪಾರವನ್ನೂ ಮಾಡಿದ್ದರು.

ಆದರೆ, ದೇವಸ್ಥಾನದ ಬಳಿಯಲ್ಲಿ ಕೋಳಿ ಮತ್ತು ಮಲ್ಲಿಗೆ ಅಂಗಡಿಗಳನ್ನು ಇಟ್ಟಿದ್ದ ಸಂಘಪರಿವಾರದ ಕಾರ್ಯಕರ್ತರು ಪರಿಸ್ಥಿತಿಯ ಲಾಭವನ್ನು ಪಡೆದು ಭಕ್ತಾದಿಗಳನ್ನು ವಂಚಿಸಿದ್ದಾರೆ ಎಂದು ಆರೋಪಗಳು ಎದ್ದಿದೆ.

ಇದನ್ನೂ ಓದಿ:RSS ಹೊರತುಪಡಿಸಿ ಹಿಂದೂ, ಮುಸ್ಲಿಂ, ಸಿಖ್, ಕ್ರೈಸ್ತ, ಜೈನ, ಬೌದ್ಧ ಎಲ್ಲರೂ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದಾರೆ: ತೇಜಸ್ವಿ ಯಾದವ್ 

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸ್ಥಳೀಯ ಪತ್ರಕರ್ತರೊಬ್ಬರು, “ಮಾರಿ ಪೂಜೆಗೆ ಕೋಳಿ ಮತ್ತು ಮಲ್ಲಿಗೆ ಬಹಳ ಮುಖ್ಯವಾಗಿ ಬೇಕಾದ ವಸ್ತುಗಳಾಗಿವೆ. ಸಂಘಪರಿವಾರವು ಪರಿಸ್ಥಿಯನ್ನು ಬಿಗಡಾಯಿಸುವಂತೆ ಮಾಡಿ ಅದನ್ನು ಲಾಭ ಮಾಡಿಕೊಂಡು ಭಕ್ತಾದಿಗಳನ್ನು ವಂಚಿಸಿದೆ. ಈ ವಂಚನೆಯ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿಗೆ ದೂರು ನೀಡಲಾಗಿದೆ” ಎಂದು ಅವರು ಹೇಳಿದ್ದಾರೆ.

“ನಾನು ಪೂಜೆಗೆ ಹೋದಾಗ ದೇವಸ್ಥಾನದ ಬಳಿಯ ಸಂಘಪರಿವಾರದ ಕಾರ್ಯಕರ್ತರ ಅಂಗಡಿಗಳಲ್ಲಿ ನಾಟಿ ಕೋಳಿಗೆ ಒಂದು ಕೆ.ಜಿ.ಗೆ 400 ರೂ.ಗಳಿಗೆ ಮಾರುತ್ತಿದ್ದರು. ಆದರೆ ಮುಸ್ಲಿಮರ ಅಂಗಡಿಗಳಲ್ಲಿ 1 ಕೆ.ಜಿ. ನಾಟಿ ಕೋಳಿಗೆ 250 ರೂ.ಗಳು ಇತ್ತು. ಅಲ್ಲದೆ ಅದನ್ನು ಕೊಯ್ದು ಕೊಡಲು ಸಂಘಪರಿವಾದ ಅಂಗಡಿಗಳಲ್ಲಿ ಹೆಚ್ಚುವರಿಯಾಗಿ 50 ರಿಂದ 75 ರೂ.ಗಳ ವರೆಗೆ ಪಾವತಿಸಬೇಕಾಗಿತ್ತು. ಆದರೆ ಮುಸ್ಲಿಮರ ಅಂಗಡಿಗಳಲ್ಲಿ ಇದಕ್ಕೆ ಯಾವುದೆ ಹೆಚ್ಚುವರಿ ಹಣವನ್ನು ಪಡೆದುಕೊಳ್ಳುತ್ತಿರಲಿಲ್ಲ” ಎಂದು ಹೇಳಿದ್ದಾರೆ.

ಮಲ್ಲಿಗೆ ವ್ಯಾಪಾರದ ವಿಚಾರದಲ್ಲೂ ಸಂಘಪರಿವಾರದ ಕಾರ್ಯಕರ್ತರು ಹೀಗೆ ನಡೆದುಕೊಂಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಮುಸ್ಲಿಮರ ಜೊತೆಗೆ ವ್ಯಾಪಾರ ಮಾಡಬಾರದು ಎಂದು ಭಕ್ತಾದಿಗಳನ್ನು ಉದ್ರಿಕ್ತಗೊಳಿಸಲು ಸಂಘಪರಿವಾರವು ಪ್ರಯತ್ನಿಸಿದರೂ, ಭಕ್ತಾದಿಗಳು ಅದಕ್ಕೆ ಯಾವುದೆ ಸೊಪ್ಪು ಹಾಕಿಲ್ಲ. ದೇವಸ್ಥಾನದ ಹೊರಗಡೆ ಇದರ ಯಾವುದೆ ಪರಿವೆ ಇಲ್ಲದೆ ಭಕ್ತಾದಿಗಳು ಎಲ್ಲರೊಂದಿಗೂ ವ್ಯಾಪಾರದಲ್ಲಿ ತೊಡಗಿದ್ದರು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣದ ಸಾಂವಿಧಾನಿಕ ಹಕ್ಕು ಮತ್ತು ಕರ್ನಾಟಕ ಸರ್ಕಾರದ ವೈಫಲ್ಯ

ಈ ಮಧ್ಯೆ ಸಾವಿರಾರು ವರ್ಷಗಳ ಸಂಪ್ರದಾಯದಂತೆ ಮಾರಿ ಗುಡಿಯ ಜಾತ್ರೆಯ ಎರಡು ದಿನಗಳಲ್ಲೂ ವಾಲಗವನ್ನು ಮುಸ್ಲಿಂ ಸಮುದಾಯದ ವ್ಯಕ್ತಿಗಳೇ ಊದಿದ್ದಾರೆ ಎಂದು ವರದಿಯಾಗಿದೆ. ಕಾಪು ಹೊಸ ಮಾರಿಗುಡಿ, ಮೂರನೇ ಮಾರಿಗುಡಿ ಮತ್ತು ಜನಾರ್ಧನ ದೇವಸ್ಥಾನದಲ್ಲಿ ತಲತಲಾಂತರದಿಂದ ವಾಲಗ ಊದುವ ‘ಚಾಕರಿ’ ಮಾಡಿಕೊಂಡು ಬರುತ್ತಿರುವ ಮುಸ್ಲಿಂ ಕುಟುಂಬದ ಜಲೀಲ್ ಸಾಹೇಬ್ ಅವರು ಮಾರಿಗುಡಿಯ ಈ ಬಾರಿಯ ಜಾತ್ರೆಯಲ್ಲಿ ವಾಲಗ ಊದಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಜಲೀಲ್ ಸಾಹೇಬ್‌, “ನಾವು ‘ಜನಾರ್ದನ ದೇವಸ್ಥಾನ’, ‘ಮೂರನೇ ಮಾರಿಗುಡಿ’ ಮತ್ತು ‘ಹೊಸ ಮಾರಿಗುಡಿ’ ದೇವಸ್ಥಾನಗಳಿಗೂ ತಲತಲಾಂತರದಿಂದಲೂ ವಾಲಗ ಚಾಕರಿ ಮಾಡಿಕೊಂಡು ಬರುತ್ತಿದ್ದೇವೆ. ನಮ್ಮದು ಸಾವಿರಾರು ವರ್ಷಗಳ ಪರಂಪರೆ, ನನ್ನ ತಂದೆ, ಅಜ್ಜ, ಅವರ ಅಜ್ಜ ಹೀಗೆ…ವಾಲಗ ಚಾಕರಿ ಮಾಡುತ್ತಲೆ ಬರುತ್ತಿದ್ದೇವೆ. ಈ ವರ್ಷ ಕೂಡಾ ವಾಲಗ ಊದಿ ಚಾಕರಿ ಮಾಡಿದ್ದೇವೆ. ನಮ್ಮನ್ನು ಯಾರೂ ಬರಬೇಡಿ ಎಂದು ಹೇಳಿಲ್ಲ” ಎಂದು ಹೇಳಿದ್ದಾರೆ.

ಕೋವಿಡ್-19 ನಿರ್ಬಂಧಗಳಿಂದಾಗಿ ಕಳೆದ ಎರಡು ವರ್ಷಗಳಿಂದ ಮೂರು ದೇವಸ್ಥಾನಗಳಲ್ಲಿ ವಾರ್ಷಿಕ ಜಾತ್ರೆ ನಡೆದಿರಲಿಲ್ಲ ಮತ್ತು ಹರಾಜು ಕೂಡ ನಡೆದಿರಲಿಲ್ಲ. ಈ ಹಿಂದೆ ದೇವಸ್ಥಾನದ ವಠಾರದಲ್ಲಿ ಜಾತ್ರೆಯ ಸಂತೆ ಇಡಲು ಸ್ಥಳಗಳನ್ನು ಮುಸ್ಲಿಮರು ಕೂಡಾ ಪಡೆಯುತ್ತಿದ್ದರು.

ಇದನ್ನೂ ಓದಿ: ಮೈಸೂರು: ಸರ್ಕಾರಿ ಶಾಲೆಯ ಅಭಿವೃದ್ಧಿಗೆ 2.5 ಎಕರೆ ಜಮೀನು ದಾನ ಮಾಡಿದ ಮುಸ್ಲಿಂ ಕುಟುಂಬ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Very good. Very appreciated the act of all beloved Hindus for uplifting the value of Democracy and secularism. Fundamentalist may try to destroy harmony and peace in the name of religion but common people irrespective of any religion don’t care about them. Thanks to Nanu Gauri. Com for revealing the truth in midst of untruth and fantasy of other media

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...