Homeಕರ್ನಾಟಕಕಾಪು ಮಾರಿಗುಡಿ ಜಾತ್ರೆ: ಸಂಘಪರಿವಾರದ ಬೆದರಿಕೆಗೆ ಸೊಪ್ಪು ಹಾಕದೆ ಮುಸ್ಲಿಮರೊಂದಿಗೆ ವ್ಯಾಪಾರ ಮಾಡಿದ ಭಕ್ತಾದಿಗಳು!

ಕಾಪು ಮಾರಿಗುಡಿ ಜಾತ್ರೆ: ಸಂಘಪರಿವಾರದ ಬೆದರಿಕೆಗೆ ಸೊಪ್ಪು ಹಾಕದೆ ಮುಸ್ಲಿಮರೊಂದಿಗೆ ವ್ಯಾಪಾರ ಮಾಡಿದ ಭಕ್ತಾದಿಗಳು!

ದೇವಸ್ಥಾನದ ಬಳಿ ಅಂಗಡಿಯಿಟ್ಟಿದ್ದ ಸಂಘಪರಿವಾರದ ಕಾರ್ಯಕತರಿಂದ ದುಪ್ಪಟ್ಟು ಬೆಲೆಗೆ ಕೋಳಿ & ಮಲ್ಲಿಗೆ ಮಾರಾಟ ಮಾಡಿ ಹಿಂದೂ ಭಕ್ತಾದಿಗಳಿಗೆ ವಂಚನೆ

- Advertisement -
- Advertisement -

➤ ಪರಂಪರೆಯಂತೆ ಮುಸ್ಲಿಂ ಸಮುದಾಯದ ವ್ಯಕ್ತಿಯಿಂದಲೇ ದೇವಿಯ ‘ವಾಲಗ ಚಾಕರಿ’
➤ ಪರಿಸ್ಥಿತಿಯ ಲಾಭ ಪಡೆದು ಕೆಜಿ.ಗೆ 250 ರೂ. ಇದ್ದ ನಾಟಿ ಕೋಳಿಯನ್ನು ಕೆಜಿ.ಗೆ 400 ರೂ.ಗೆ ಮಾರಾಟ ಮಾಡಿ ಭಕ್ತರನ್ನು ವಂಚಿಸಿದ ಸಂಘಪರಿವಾರದ ಕಾರ್ಯಕರ್ತರು: ಆರೋಪ

ಉಡುಪಿ ಜಿಲ್ಲೆಯ ಕಾಪು ಬಳಿಯ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ವಾರ್ಷಿಕವಾಗಿ ನಡೆಯುವ, ‘ಸುಗ್ಗಿ ಮಾರಿ ಪೂಜೆ’ ಜಾತ್ರೆಯು ಬಿಜೆಪಿ ಬೆಂಬಲಿತ ಸಂಘಪರಿವಾರದ ಸಂಘಟನೆಗಳ ಬೆದರಿಕೆಯ ನಡುವೆಯು ಸಾಂಗಾವಾಗಿ ನಡೆದು ಸಂಪನ್ನಗೊಂಡಿದೆ. ಈ ನಡುವೆ ದೇವಸ್ಥಾನದ ವಠಾರದಲ್ಲಿ ಅಂಗಡಿಯನ್ನು ಇಟ್ಟಿದ್ದ ಸಂಘಪರಿವಾದ ಕಾರ್ಯಕರ್ತರು ಮಾರುಕಟ್ಟೆ ಬೆಲೆಗಿಂತಲೂ ದುಪ್ಪಟ್ಟು ಬೆಲೆಗೆ ಕೋಳಿ ಮತ್ತು ಮಲ್ಲಿಗೆ ಹೂವುಗಳನ್ನು ಮಾರಿದ್ದು, ಭಕ್ತಾದಿಗಳನ್ನು ವಂಚಿಸಿದ್ದಾರೆ ಎಂದು ವರದಿಯಾಗಿದೆ.

ಜಾತ್ರೆಯಲ್ಲಿ ಮುಸ್ಲಿಮರು ವ್ಯಾಪಾರ ಮಾಡಬಾರದು ಎಂದು ಸಂಘಪರಿವಾರ ಮುಸ್ಲಿಮರ ವಿರುದ್ಧ ದ್ವೇಷ ಹರಡಿ, ಕೋಮು ಸೌಹಾರ್ದವನ್ನು ಹಾಳುಗೆಡವಿತ್ತು. ಆದರೆ ಜಾತ್ರೆಗೆ ಬಂದಿದ್ದ ಭಕ್ತಾದಿಗಳು ಸಂಘಪರಿವಾದ ಬೆದರಿಕೆಗಳಿಗೆ ಸೊಪ್ಪು ಹಾಕದೆ ಮುಸ್ಲಿಂ ವ್ಯಾಪಾರಿಗಳೊಂದಿಗೆ ವ್ಯಾಪಾರ ಮಾಡಿದ್ದು, ಜಾತ್ರೆಯ ‘ವಾಲಗ ಚಾಕರಿ’ಯನ್ನು ಸಂಪ್ರದಾಯದಂತೆ ಮುಸ್ಲಿಂ ಸಮುದಾಯದ ವ್ಯಕ್ತಿಗಳೆ ಎರಡು ದಿನದ ವಾಲಗ ಊದಿ ‘ತುಳುನಾಡಿನ ಪರಂಪರೆ’ಯನ್ನು ಎತ್ತಿಹಿಡಿದಿದ್ದಾರೆ.

ಇದನ್ನೂ ಓದಿ: ಉಡುಪಿ: ಕಾಪು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿದ ದೇವಸ್ಥಾನ ಸಮಿತಿ; ‘ಸಹಬಾಳ್ವೆ ಉಡುಪಿ’ ವಿರೋಧ

ಮಾರಿಗುಡಿ ವಾರ್ಷಿಕ ಜಾತ್ರೆಯಲ್ಲಿ ವ್ಯಾಪಾರ ಮಾಡಲು ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡಬಾರದು ಎಂದು ಸಂಘಪರಿವಾರವು ದೇವಸ್ಥಾನದ ಆಡಳಿತ ಮಂಡಳಿ ಮತ್ತು ಪುರಸಭೆಗೆ ಒತ್ತಡ ಹೇರಿತ್ತು. ದೇವಸ್ಥಾನದ ಆಡಳಿತ ಮಂಡಳಿ ಸಂಘಪರಿವಾರದ ಬೆದರಿಕೆಗಳಿಗೆ ಜಗ್ಗಿ ದೇವಸ್ಥಾನದ ವಠಾರದಲ್ಲಿ ಮುಸ್ಲಿಮರಿಗೆ ಯಾವುದೆ ಅಂಗಡಿ ಮುಂಗ್ಗಟ್ಟುಗಳನ್ನು ನೀಡಿರಲಿಲ್ಲ. ಆದರೆ ಕಾಪು ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವಡ ಅವರು, “ಭಾರತ ಜಾತ್ಯತೀತ ರಾಷ್ಟ್ರವಾಗಿರುವುದರಿಂದ ಎಲ್ಲ ಸಮುದಾಯದ ವರ್ತಕರು ಅಂಗಡಿಗಳನ್ನು ತೆರೆಯಬಹುದಾಗಿದೆ” ಎಂದು ಹೇಳಿದ್ದರು.

ಅದರಂತೆ ದೇವಸ್ಥಾನದ ವಠಾರದಲ್ಲಿ ಅವಕಾಶ ನೀಡದ್ದರಿಂದ ಅಲ್ಲಿ ಯಾವುದೆ ಮುಸ್ಲಿಮರ ಅಂಗಡಿಗಳು ಇರಲಿಲ್ಲ. ಆದರೆ ಹೊರಗಡೆಯ ಸಾವರ್ಜನಿಕ ಸ್ಥಳಗಳಲ್ಲಿ ಮುಸ್ಲಿಮರು ತಮ್ಮ ಅಂಗಡಿಗಳಲ್ಲಿ ಕೋಳಿ ಮತ್ತು ಇತರ ವಸ್ತುಗಳನ್ನು ಇಟ್ಟು ಮಾರಾಟ ಮಾಡಿದ್ದರು. ಅವರೊಂದಿಗೆ ಜಾತ್ರೆಗೆ ಆಗಮಿಸಿದ್ದ ಭಕ್ತರು ವ್ಯಾಪಾರವನ್ನೂ ಮಾಡಿದ್ದರು.

ಆದರೆ, ದೇವಸ್ಥಾನದ ಬಳಿಯಲ್ಲಿ ಕೋಳಿ ಮತ್ತು ಮಲ್ಲಿಗೆ ಅಂಗಡಿಗಳನ್ನು ಇಟ್ಟಿದ್ದ ಸಂಘಪರಿವಾರದ ಕಾರ್ಯಕರ್ತರು ಪರಿಸ್ಥಿತಿಯ ಲಾಭವನ್ನು ಪಡೆದು ಭಕ್ತಾದಿಗಳನ್ನು ವಂಚಿಸಿದ್ದಾರೆ ಎಂದು ಆರೋಪಗಳು ಎದ್ದಿದೆ.

ಇದನ್ನೂ ಓದಿ:RSS ಹೊರತುಪಡಿಸಿ ಹಿಂದೂ, ಮುಸ್ಲಿಂ, ಸಿಖ್, ಕ್ರೈಸ್ತ, ಜೈನ, ಬೌದ್ಧ ಎಲ್ಲರೂ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದಾರೆ: ತೇಜಸ್ವಿ ಯಾದವ್ 

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸ್ಥಳೀಯ ಪತ್ರಕರ್ತರೊಬ್ಬರು, “ಮಾರಿ ಪೂಜೆಗೆ ಕೋಳಿ ಮತ್ತು ಮಲ್ಲಿಗೆ ಬಹಳ ಮುಖ್ಯವಾಗಿ ಬೇಕಾದ ವಸ್ತುಗಳಾಗಿವೆ. ಸಂಘಪರಿವಾರವು ಪರಿಸ್ಥಿಯನ್ನು ಬಿಗಡಾಯಿಸುವಂತೆ ಮಾಡಿ ಅದನ್ನು ಲಾಭ ಮಾಡಿಕೊಂಡು ಭಕ್ತಾದಿಗಳನ್ನು ವಂಚಿಸಿದೆ. ಈ ವಂಚನೆಯ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿಗೆ ದೂರು ನೀಡಲಾಗಿದೆ” ಎಂದು ಅವರು ಹೇಳಿದ್ದಾರೆ.

“ನಾನು ಪೂಜೆಗೆ ಹೋದಾಗ ದೇವಸ್ಥಾನದ ಬಳಿಯ ಸಂಘಪರಿವಾರದ ಕಾರ್ಯಕರ್ತರ ಅಂಗಡಿಗಳಲ್ಲಿ ನಾಟಿ ಕೋಳಿಗೆ ಒಂದು ಕೆ.ಜಿ.ಗೆ 400 ರೂ.ಗಳಿಗೆ ಮಾರುತ್ತಿದ್ದರು. ಆದರೆ ಮುಸ್ಲಿಮರ ಅಂಗಡಿಗಳಲ್ಲಿ 1 ಕೆ.ಜಿ. ನಾಟಿ ಕೋಳಿಗೆ 250 ರೂ.ಗಳು ಇತ್ತು. ಅಲ್ಲದೆ ಅದನ್ನು ಕೊಯ್ದು ಕೊಡಲು ಸಂಘಪರಿವಾದ ಅಂಗಡಿಗಳಲ್ಲಿ ಹೆಚ್ಚುವರಿಯಾಗಿ 50 ರಿಂದ 75 ರೂ.ಗಳ ವರೆಗೆ ಪಾವತಿಸಬೇಕಾಗಿತ್ತು. ಆದರೆ ಮುಸ್ಲಿಮರ ಅಂಗಡಿಗಳಲ್ಲಿ ಇದಕ್ಕೆ ಯಾವುದೆ ಹೆಚ್ಚುವರಿ ಹಣವನ್ನು ಪಡೆದುಕೊಳ್ಳುತ್ತಿರಲಿಲ್ಲ” ಎಂದು ಹೇಳಿದ್ದಾರೆ.

ಮಲ್ಲಿಗೆ ವ್ಯಾಪಾರದ ವಿಚಾರದಲ್ಲೂ ಸಂಘಪರಿವಾರದ ಕಾರ್ಯಕರ್ತರು ಹೀಗೆ ನಡೆದುಕೊಂಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಮುಸ್ಲಿಮರ ಜೊತೆಗೆ ವ್ಯಾಪಾರ ಮಾಡಬಾರದು ಎಂದು ಭಕ್ತಾದಿಗಳನ್ನು ಉದ್ರಿಕ್ತಗೊಳಿಸಲು ಸಂಘಪರಿವಾರವು ಪ್ರಯತ್ನಿಸಿದರೂ, ಭಕ್ತಾದಿಗಳು ಅದಕ್ಕೆ ಯಾವುದೆ ಸೊಪ್ಪು ಹಾಕಿಲ್ಲ. ದೇವಸ್ಥಾನದ ಹೊರಗಡೆ ಇದರ ಯಾವುದೆ ಪರಿವೆ ಇಲ್ಲದೆ ಭಕ್ತಾದಿಗಳು ಎಲ್ಲರೊಂದಿಗೂ ವ್ಯಾಪಾರದಲ್ಲಿ ತೊಡಗಿದ್ದರು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣದ ಸಾಂವಿಧಾನಿಕ ಹಕ್ಕು ಮತ್ತು ಕರ್ನಾಟಕ ಸರ್ಕಾರದ ವೈಫಲ್ಯ

ಈ ಮಧ್ಯೆ ಸಾವಿರಾರು ವರ್ಷಗಳ ಸಂಪ್ರದಾಯದಂತೆ ಮಾರಿ ಗುಡಿಯ ಜಾತ್ರೆಯ ಎರಡು ದಿನಗಳಲ್ಲೂ ವಾಲಗವನ್ನು ಮುಸ್ಲಿಂ ಸಮುದಾಯದ ವ್ಯಕ್ತಿಗಳೇ ಊದಿದ್ದಾರೆ ಎಂದು ವರದಿಯಾಗಿದೆ. ಕಾಪು ಹೊಸ ಮಾರಿಗುಡಿ, ಮೂರನೇ ಮಾರಿಗುಡಿ ಮತ್ತು ಜನಾರ್ಧನ ದೇವಸ್ಥಾನದಲ್ಲಿ ತಲತಲಾಂತರದಿಂದ ವಾಲಗ ಊದುವ ‘ಚಾಕರಿ’ ಮಾಡಿಕೊಂಡು ಬರುತ್ತಿರುವ ಮುಸ್ಲಿಂ ಕುಟುಂಬದ ಜಲೀಲ್ ಸಾಹೇಬ್ ಅವರು ಮಾರಿಗುಡಿಯ ಈ ಬಾರಿಯ ಜಾತ್ರೆಯಲ್ಲಿ ವಾಲಗ ಊದಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಜಲೀಲ್ ಸಾಹೇಬ್‌, “ನಾವು ‘ಜನಾರ್ದನ ದೇವಸ್ಥಾನ’, ‘ಮೂರನೇ ಮಾರಿಗುಡಿ’ ಮತ್ತು ‘ಹೊಸ ಮಾರಿಗುಡಿ’ ದೇವಸ್ಥಾನಗಳಿಗೂ ತಲತಲಾಂತರದಿಂದಲೂ ವಾಲಗ ಚಾಕರಿ ಮಾಡಿಕೊಂಡು ಬರುತ್ತಿದ್ದೇವೆ. ನಮ್ಮದು ಸಾವಿರಾರು ವರ್ಷಗಳ ಪರಂಪರೆ, ನನ್ನ ತಂದೆ, ಅಜ್ಜ, ಅವರ ಅಜ್ಜ ಹೀಗೆ…ವಾಲಗ ಚಾಕರಿ ಮಾಡುತ್ತಲೆ ಬರುತ್ತಿದ್ದೇವೆ. ಈ ವರ್ಷ ಕೂಡಾ ವಾಲಗ ಊದಿ ಚಾಕರಿ ಮಾಡಿದ್ದೇವೆ. ನಮ್ಮನ್ನು ಯಾರೂ ಬರಬೇಡಿ ಎಂದು ಹೇಳಿಲ್ಲ” ಎಂದು ಹೇಳಿದ್ದಾರೆ.

ಕೋವಿಡ್-19 ನಿರ್ಬಂಧಗಳಿಂದಾಗಿ ಕಳೆದ ಎರಡು ವರ್ಷಗಳಿಂದ ಮೂರು ದೇವಸ್ಥಾನಗಳಲ್ಲಿ ವಾರ್ಷಿಕ ಜಾತ್ರೆ ನಡೆದಿರಲಿಲ್ಲ ಮತ್ತು ಹರಾಜು ಕೂಡ ನಡೆದಿರಲಿಲ್ಲ. ಈ ಹಿಂದೆ ದೇವಸ್ಥಾನದ ವಠಾರದಲ್ಲಿ ಜಾತ್ರೆಯ ಸಂತೆ ಇಡಲು ಸ್ಥಳಗಳನ್ನು ಮುಸ್ಲಿಮರು ಕೂಡಾ ಪಡೆಯುತ್ತಿದ್ದರು.

ಇದನ್ನೂ ಓದಿ: ಮೈಸೂರು: ಸರ್ಕಾರಿ ಶಾಲೆಯ ಅಭಿವೃದ್ಧಿಗೆ 2.5 ಎಕರೆ ಜಮೀನು ದಾನ ಮಾಡಿದ ಮುಸ್ಲಿಂ ಕುಟುಂಬ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Very good. Very appreciated the act of all beloved Hindus for uplifting the value of Democracy and secularism. Fundamentalist may try to destroy harmony and peace in the name of religion but common people irrespective of any religion don’t care about them. Thanks to Nanu Gauri. Com for revealing the truth in midst of untruth and fantasy of other media

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...