Homeಅಂತರಾಷ್ಟ್ರೀಯಕರಾಚಿ: 99 ಪ್ರಯಾಣಿಕರು ಹಾಗೂ 8 ಸಿಬ್ಬಂದಿಗಳಿದ್ದ ವಿಮಾನ ಪತನ

ಕರಾಚಿ: 99 ಪ್ರಯಾಣಿಕರು ಹಾಗೂ 8 ಸಿಬ್ಬಂದಿಗಳಿದ್ದ ವಿಮಾನ ಪತನ

- Advertisement -
- Advertisement -

ಲಾಹೋರ್ ನಿಂದ ಕರಾಚಿಗೆ ಹೊರಟಿದ್ದ 99  ಪ್ರಯಾಣಿಕರು ಹಾಗೂ 8 ಸಿಬ್ಬಂದಿಗಳಿದ್ದ ಪಾಕಿಸ್ತಾನ್ ಇಂಟರ್ ನ್ಯಾಶನಲ್ ಏರ್ ಲೈನ್ಸ್ ವಿಮಾನವೊಂದು ಭೂಸ್ಪರ್ಶಕ್ಕೆ ನಿಮಿಷಗಳಿರುವಾಗ ಪತನಗೊಂಡಿದೆ ಎಂದು ವರದಿಯಾಗಿದೆ.

ಪಾಕಿಸ್ತಾನ್ ಇಂಟರ್ ನ್ಯಾಶನಲ್ ಏರ್ ಲೈನ್ಸ್ ಇದರ ‘ಏರ್‌ ಬಸ್ ಎ320’ ಲಾಹೋರ್ ನಿಂದ ಕರಾಚಿಗೆ ತೆರಳುತ್ತಿತ್ತು ಎನ್ನಲಾಗಿದೆ. ಕರಾಚಿಯ ವಿಮಾನ ನಿಲ್ದಾಣದ ಸನಿಹದಲ್ಲೇ ಇರುವ ವಸತಿ ಪ್ರದೇಶದಲ್ಲಿ ವಿಮಾನ ಪತನಗೊಂಡಿದೆ ಎನ್ನಲಾಗಿದೆ. ಈ ಪ್ರದೇಶ ತುಂಬಾ ದಟ್ಟ ಹೊಗೆ ತುಂಬಿರುವುದನ್ನು ಸ್ಥಳೀಯ ಸುದ್ದಿವಾಹಿನಿಗಳು ಪ್ರಸಾರ ಮಾಡಿವೆ.

ಅಫಘಾತದಲ್ಲಿ ಬದುಕುಳಿದವರ ಬಗ್ಗೆ ಇನ್ನೂ ಯಾವುದೇ ವರದಿಗಳಿಲ್ಲ. ವಿಮಾನವು ಜಿನ್ನಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹತ್ತಿರದ ಜನನಿಬಿಡ ವಸತಿ ಪ್ರದೇಶಕ್ಕೆ ಬಿದ್ದಿದೆ ಎನ್ನಲಾಗಿದೆ. ಈ ಪ್ರದೇಶದಲ್ಲಿ ಭಗ್ನಾವಶೇಷ ಮತ್ತು ಹಲವಾರು ಮನೆಗಳಿಗೆ ಬೆಂಕಿ ತಗುಳಿರುವುದನ್ನು ಪಾಕಿಸ್ತಾನ ಮಾಧ್ಯಮಗಳ ದೃಶ್ಯಗಳು ತೋರಿಸಿವೆ.

“ಕರಾಚಿಯಲ್ಲಿ ವಿಮಾನ ಅಪಘಾತಕ್ಕೀಡಾಗಿದೆ. 99 ಪ್ರಯಾಣಿಕರು ಮತ್ತು ಎಂಟು ಸಿಬ್ಬಂದಿ ಇದ್ದರು ನಾವು ಪ್ರಯಾಣಿಕರ ಸಂಖ್ಯೆಯನ್ನು ಖಚಿತಪಡಿಸಲು ಪ್ರಯತ್ನಿಸುತ್ತಿದ್ದೇವೆ” ಎಂದು ದೇಶದ ವಾಯುಯಾನ ಪ್ರಾಧಿಕಾರದ ವಕ್ತಾರ ಅಬ್ದುಲ್ ಸತ್ತಾರ್ ಖೋಖರ್ ಹೇಳಿದ್ದಾರೆ.

ಕರಾಚಿಯ ಎಲ್ಲಾ ಪ್ರಮುಖ ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ಸ್ಥಳೀಯ ವರದಿಗಳು ತಿಳಿಸಿವೆ. ಪಾಕಿಸ್ತಾನದ ನಾಗರಿಕ ವಿಮಾನಯಾನ ಪ್ರಾಧಿಕಾರದ ಮೂಲಗಳನ್ನು ಉಲ್ಲೇಖಿಸಿದ ಸುದ್ದಿ ಸಂಸ್ಥೆ ಪಿಟಿಐ ವಿಮಾನ ಇಳಿಯಲು ಒಂದು ನಿಮಿಷ ಮೊದಲು ಸಂಪರ್ಕ ಕಡಿತಗೊಂಡಿತ್ತು ಎಂದು ಹೇಳಿದೆ.

ಪರಿಹಾರ ಮತ್ತು ರಕ್ಷಣಾ ಕಾರ್ಯಗಳಿಗೆ ಸಹಾಯ ಮಾಡಲು ಪಾಕ್ ಆರ್ಮಿ ಕ್ವಿಕ್ ರಿಯಾಕ್ಷನ್ ಫೋರ್ಸ್ ಮತ್ತು ಪಾಕಿಸ್ತಾನ ರೇಂಜರ್ಸ್ ಅಪಘಾತದ ಸ್ಥಳದಲ್ಲಿದೆ ಎಂದು ಪಾಕಿಸ್ತಾನ ಮಾಧ್ಯಮಗಳು ವರದಿ ಮಾಡಿದೆ.

ಕೊರೋನ ವೈರಸ್ ಸಾಂಕ್ರಾಮಿಕ ರೋಗದ ಬಿಕ್ಕಟ್ಟಿನ ನಂತರ ಲಾಕ್ ಡೌನ್ ನಂತರ ವಾಣಿಜ್ಯ ವಿಮಾನಗಳನ್ನು ಪುನರಾರಂಭಿಸಲು ಪಾಕಿಸ್ತಾನ ಅನುಮತಿಸಿದ ಕೆಲವೇ ದಿನಗಳಲ್ಲಿ ಈ ಅಪಘಾತ ಸಂಭವಿಸಿದೆ.

2016 ರಲ್ಲಿ ಪಾಕಿಸ್ತಾನ ಇಂಟರ್ನ್ಯಾಷನಲ್ ಏರ್ಲೈನ್ಸ್ ವಿಮಾನವೊಂದು ಇಸ್ಲಾಮಾಬಾದ್ ಗೆ ಹಾರಾಟ ನಡೆಸುತ್ತಿದ್ದಾಗ ಪತನಗೊಂಡದ್ದರಿಂದ 40 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು.


ಓದಿ: ‘ಡಬ್ಬಲ್ ಸ್ಟಾಂಡರ್ಡ್’ ಪ್ರಧಾನಿ: ಪಶ್ಚಿಮ ಬಂಗಾಳದ ಭೇಟಿಯ ಬಗ್ಗೆ ಕರ್ನಾಟಕ ಕಾಂಗ್ರೆಸ್ ಟೀಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...