Homeಮುಖಪುಟ'ಕರಾಚಿ ಸ್ವೀಟ್ಸ್'‌ ಅಂಗಡಿ ಹೆಸರು ಬದಲಿಸುವಂತೆ ಶಿವಸೇನೆ ಮುಖಂಡನ ಧಮಕಿ!

‘ಕರಾಚಿ ಸ್ವೀಟ್ಸ್’‌ ಅಂಗಡಿ ಹೆಸರು ಬದಲಿಸುವಂತೆ ಶಿವಸೇನೆ ಮುಖಂಡನ ಧಮಕಿ!

ಘಟನೆ ನಡೆದ ಬಳಿಕ ಬೆದರಿಕೆ ಮಣಿದ ಅಂಗಡಿ ಮಾಲೀಕ 'ಕರಾಚಿ' ಎನ್ನುವ ಅಕ್ಷರಗಳು ಕಾಣಿಸದಂತೆ ಪೇಪರ್‌ನಿಂದ ಮುಚ್ಚಿದ್ದಾರೆ.

- Advertisement -
- Advertisement -

‘ಕರಾಚಿ ಸ್ವೀಟ್ಸ್‌ ಅಂಗಡಿ’ಯ ಹೆಸರನ್ನು ಬದಲಾಯಿಸುವಂತೆ ಶಿವಸೇನೆಯ ಮುಖಂಡ ನಿತಿನ್ ನಂದಗಾಂವ್ಕರ್ ಅಂಗಡಿ ಮಾಲೀಕನನ್ನು ಒತ್ತಾಯಿಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಕರಾಚಿ ಎನ್ನುವುದು ಪಾಕಿಸ್ತಾನದ ಒಂದು ಸ್ಥಳದ ಹೆಸರಾಗಿದೆ. ಹಾಗಾಗಿ ಇದನ್ನು ಬದಲಾಯಿಸಿ, ಮರಾಠಿಯಲ್ಲಿ ಯಾವುದಾದರೂ ಹೆಸರಿಡುವಂತೆ ಶಿವಸೇನೆ ಮುಖಂಡ ಒತ್ತಾಯಿಸುತ್ತಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಎಎನ್‌ಐ, “ಶಿವಸೇನೆಯ ಮುಖಂಡ ನಿತಿನ್ ನಂದಗಾಂವ್ಕರ್ ಅವರ ವೀಡಿಯೋ ವೈರಲ್ ಆಗುತ್ತಿದ್ದು, ಇದರಲ್ಲಿ ಕರಾಚಿ ಎನ್ನುವ ಪದವನ್ನು ಬದಲಾಯಿಸುವಂತೆ ಪಶ್ಚಿಮ ಬಾಂದ್ರಾದಲ್ಲಿರುವ ಸ್ವೀಟ್ಸ್‌ ಅಂಗಡಿಯ ಮಾಲೀಕರನ್ನು ಒತ್ತಾಯಿಸುತ್ತಿದ್ದಾರೆ. ‘ನೀವು ಇದನ್ನು ಮಾಡಲೆಬೇಕು. ನಾವು ನಿಮಗೆ ಕಾಲಾವಕಾಶ ನೀಡುತ್ತೇವೆ. ‘ಕರಾಚಿ’ಗೆ ಬದಲಾಗಿ ಮರಾಠಿಯಲ್ಲಿ ಬೇರೆ ಯಾವುದಾದರೂ ಹೆಸರಿಡಿ’ ಎಂದು ನಿತಿನ್ ವೀಡಿಯೋದಲ್ಲಿ ಹೇಳುತ್ತಿರುವುದು ದಾಖಲಾಗಿದೆ” ಎಂದು ವರದಿ ಮಾಡಿದೆ.

ಇದನ್ನೂ ಓದಿ: ಡಿಸೆಂಬರ್ 7 ರಿಂದ 15 ರವರೆಗೆ ಚಳಿಗಾಲದ ಅಧಿವೇಶನ; ಈ ಬಾರಿಯೂ ರಾಜಧಾನಿಯಲ್ಲೇ ನಡೆಸಲು…


ಈ ಕುರಿತು ಮುಂಬೈ ಮಿರರ್ ವರದಿ ಮಾಡಿ ಈ ವೀಡಿಯೋವನ್ನು ಹಂಚಿಕೊಂಡಿದ್ದು, ಇದರಲ್ಲಿ “ನಿಮಗೆ ಬೇಕಾದ ಹೆಸರಿಗೆ ಅದನ್ನು ಬದಲಾಯಿಸಿ, ಆದರೆ ಅದರಿಂದ ‘ಕರಾಚಿ’ ಪದವನ್ನು ತೆಗೆದುಹಾಕಿ. ನಾನು ಆ ಪದವನ್ನು ದ್ವೇಷಿಸುತ್ತೇನೆ ಮತ್ತು ಪಾಕಿಸ್ತಾನಕ್ಕೆ ಸಂಬಂಧಿಸಿದ ಯಾವುದೇ ಹೆಸರನ್ನು ಮುಂಬೈನಲ್ಲಿ ಬಳಸಲು ಅನುಮತಿಸುವುದಿಲ್ಲ. ಏಕೆಂದರೆ ಅದು ಭಯೋತ್ಪಾದನೆಯನ್ನು ಉತ್ತೇಜಿಸುವ ದೇಶ” ಎಂದು ನಂದಗಾಂವ್ಕರ್ ಹೇಳುವುದನ್ನು ಕೇಳಬಹುದು.

ಘಟನೆ ನಡೆದ ಬಳಿಕ ಬೆದರಿಕೆ ಮಣಿದ ಅಂಗಡಿ ಮಾಲೀಕ ‘ಕರಾಚಿ’ ಎನ್ನುವ ಅಕ್ಷರಗಳು ಕಾಣಿಸದಂತೆ ಪೇಪರ್‌ನಿಂದ ಮುಚ್ಚಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ. ಪಾಕ್ ಹೆಸರುಗಳನ್ನು ದ್ವೇಷಿಸುವ ಪರಿಪಾಠ ಆರಂಭವಾಗಿರುವುದರಿ ಸೂಚನೆ ಇದಾಗಿದೆ. ಪ್ರಸಿದ್ದ ತಿನಿಸು ಮೈಸೂರ್ ಪಾಕ್‌ ನಲ್ಲಿಯೂ ಸಹ ಸದ್ಯದಲ್ಲಿಯೇ ಪಾಕ್ ತೆಗೆಸಲಿದ್ದಾರೆ ಎಂದು ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿದ್ದನ್ನು ನಾವಿಲ್ಲ ಸ್ಮರಿಸಬಹುದು.


ಇದನ್ನೂ ಓದಿ: 10 ಕೊಟಿ ದಂಡ ಪಾವತಿಸಿದ ಜಯಲಲಿತ ಆಪ್ತೆ ಶಶಿಕಲಾ; ಜನವರಿಯಲ್ಲಿ ಬಿಡುಗಡೆ ಸಾಧ್ಯತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...