Homeಮುಖಪುಟಡ್ರಗ್ ಕೇಸ್: ನಿರ್ದೇಶಕ, ನಿರ್ಮಾಪಕ ಕರಣ್ ಜೋಹರ್​ಗೆ ಎನ್​ಸಿಬಿ ನೋಟಿಸ್

ಡ್ರಗ್ ಕೇಸ್: ನಿರ್ದೇಶಕ, ನಿರ್ಮಾಪಕ ಕರಣ್ ಜೋಹರ್​ಗೆ ಎನ್​ಸಿಬಿ ನೋಟಿಸ್

ನಟ ಅರ್ಜುನ್ ರಾಂಪಾಲ್‌ಗೂ ಎನ್‌ಸಿಬಿ ನೋಟಿಸ್ ನೀಡಿದ್ದು, ಅರ್ಜುನ್ ರಾಂಪಾಲ್ ಮುಂಬೈನ ಏಜೆನ್ಸಿಯ ಮುಂದೆ ಹಾಜರಾಗಲು ಒಂದು ವಾರ ಕಾಲಾವಕಾಶ ಕೋರಿದ್ದಾರೆ.

- Advertisement -
- Advertisement -

ಬಾಲಿವುಡ್ ಡ್ರಗ್​ ಲಿಂಕ್​ ಕೇಸ್ ಸಂಬಂಧಿಸಿದಂತೆ ನಿರ್ದೇಶಕ, ನಿರ್ಮಾಪಕ ಕರಣ್ ಜೋಹರ್​ಗೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್​ಸಿಬಿ) ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.

ಹಿಂದಿ ಚಲನಚಿತ್ರೋದ್ಯಮದಲ್ಲಿ ಮಾದಕವಸ್ತು ಜಾಲ ಹರಡುವಿಕೆಯ ಬಗ್ಗೆ ಎನ್‌ಸಿಬಿ ಪ್ರಮುಖ ಮಾಹಿತಿಯನ್ನು ಪಡೆಯುತ್ತಿದೆ ಈ ಹಿನ್ನಲೆಯಲ್ಲಿ ವಿಚಾರಣೆಗಾಗಿ ನಿರ್ಮಾಪಕ ಕರಣ್ ಜೋಹರ್​ಗೆ ನೋಟಿಸ್ ನೀಡಲಾಗಿದೆ.

ನಟ ಸುಶಾಂತ್ ಸಿಂಗ್ ಅಸಹಜ ಸಾವು ಪ್ರಕರಣದಿಂದಾಗಿ ಬಾಲಿವುಡ್​ನಲ್ಲಿ ಡ್ರಗ್ಸ್​ ದಂಧೆ ನಡೆಯುತ್ತಿದೆ ಎನ್ನುವ ಮಾಹಿತಿ ಬಂದಿತ್ತು ಈ ವೇಳೆ ಅನೇಕರ ಮೇಲೆ ಡ್ರಗ್ಸ್ ಸರಬರಾಜು ಮಾಡುವ ಆರೋಪ ಕೂಡ ಕೇಳಿ ಬಂದಿತ್ತು. ಈ ಸಂಬಂಧ ಪ್ರಕರಣವನ್ನ ದಾಖಲಿಸಿಕೊಂಡು ಎನ್​ಸಿಬಿ ಅಧಿಕಾರಿಗಳು ತನಿಖೆಗೆ ನಡೆಸುತ್ತಿದ್ದಾರೆ. ಈಗ ಕರಣ್ ಜೋಹರ್​ಗೆ ಎನ್​ಸಿಬಿ ಅಧಿಕಾರಿಗಳು ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದಾರೆ.

ಇದನ್ನೂ ಓದಿ: ಡ್ರಗ್ಸ್‌ ಪ್ರಕರಣ: ನಟಿ ಸಂಜನಾಗೆ ಷರತ್ತುಬದ್ದ ಜಾಮೀನು ನೀಡಿದ ಹೈಕೋರ್ಟ್

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ 47 ವರ್ಷದ ನಟ ಅರ್ಜುನ್ ರಾಂಪಾಲ್‌ಗೂ ಎರಡನೇ ಬಾರಿ ನೋಟೀಸ್ ನೀಡಿ ವಿಚಾರಣೆಗೆ ಹಾಜರಾಗಲು ತಿಳಿಸಿತ್ತು. ಆದರೆ, ಅರ್ಜುನ್ ರಾಂಪಾಲ್ ಮುಂಬೈನ ಏಜೆನ್ಸಿಯ ಮುಂದೆ ಹಾಜರಾಗಲು ಒಂದು ವಾರ ಕಾಲಾವಕಾಶ ಕೋರಿದ್ದಾರೆ.

ನವೆಂಬರ್ 13 ರಂದು ಮೊದಲ ವಿಚಾರಣೆಯಲ್ಲಿ ಎನ್‌ಸಿಬಿ ಸುಮಾರು ಏಳು ಗಂಟೆಗಳ ಕಾಲ ನಟ ರಾಂಪಾಲ್ ಅವರನ್ನು ವಿಚಾರಣೆ ನಡೆಸಿತ್ತು. ನಟನ ಆಸ್ಟ್ರೇಲಿಯಾದ ಸ್ನೇಹಿತ ಪಾಲ್ ಬಾರ್ಟೆಲ್ ಅವರನ್ನು ಮಾದಕವಸ್ತು ಸಂಬಂಧಿತ ಪ್ರಕರಣದಲ್ಲಿ ಬಂಧಿಸಿದ ನಂತರ ಇವರನ್ನು ಪ್ರಶ್ನಿಸಲಾಗಿತ್ತು.

ಇದೇ ಪ್ರಕರಣದಲ್ಲಿ ಖ್ಯಾತ ಹಾಸ್ಯಗಾರ್ತಿ ಭಾರತಿ ಸಿಂಗ್ ಮತ್ತು ಅವರ ಪತಿಯನ್ನು ಎನ್‌ಸಿಬಿ ವಿಚಾರಣೆ ನಡೆಸಿ ಬಂಧಿಸಲಾಗಿತ್ತು. ನಂತರ ಬಾಂಬೆ ಹೈಕೋರ್ಟ್ ಜಾಮೀನು ನೀಡಿತ್ತು.


ಇದನ್ನೂ ಓದಿ: ಡ್ರಗ್ಸ್‌ ಪ್ರಕರಣ: ಹಾಸ್ಯ ಕಲಾವಿದೆ ಭಾರತಿ ಸಿಂಗ್ ದಂಪತಿಗೆ ಜಾಮೀನು!‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...