Homeಮುಖಪುಟರಾಜಸ್ಥಾನ ಉಪಚುನಾವಣೆ: ಪ್ರಭಾವಿ ಬಿಜೆಪಿ ಸಚಿವನಿಗೆ ಸೋಲುಣಿಸಿದ ಕಾಂಗ್ರೆಸ್ ಅಭ್ಯರ್ಥಿ

ರಾಜಸ್ಥಾನ ಉಪಚುನಾವಣೆ: ಪ್ರಭಾವಿ ಬಿಜೆಪಿ ಸಚಿವನಿಗೆ ಸೋಲುಣಿಸಿದ ಕಾಂಗ್ರೆಸ್ ಅಭ್ಯರ್ಥಿ

- Advertisement -
- Advertisement -

ರಾಜಸ್ಥಾನದ ಶ್ರೀಗಂಗಾನಗರ ಜಿಲ್ಲೆಯ ಕರಣ್‌ಪುರ ವಿಧಾನಸಭಾ ಕ್ಷೇತ್ರಕ್ಕೆ ಜನವರಿ 5ರಂದು ನಡೆದಿದ್ದ ಉಪ ಚುನಾವಣೆಯ ಫಲಿತಾಂಶ ನಿನ್ನೆ (ಜ.9) ಹೊರ ಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ರೂಪೇಂದರ್ ಸಿಂಗ್ ಕೂನರ್ ಜಯ ಗಳಿಸಿದ್ದಾರೆ.

ಕರಣ್‌ಪುರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ನಾಯಕ ಗುರುಮೀತ್ ಸಿಂಗ್ ಕೂನರ್ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆಯಾದ ಬಳಿಕ ಅಕಾಲಿಕ ಮರಣ ಹೊಂದಿದ್ದರು. ಇದರಿಂದ ಮುಂದೂಡಲಾಗಿದ್ದ ಚುನಾವಣೆಯನ್ನು ಜನವರಿ 5ರಂದು ನಡೆಸಲಾಗಿತ್ತು. ಕಾಂಗ್ರೆಸ್ ಅಭ್ಯರ್ಥಿಯಾಗಿ ಮೃತ ಗುರುಮೀತ್ ಸಿಂಗ್ ಅವರ ಮಗ ರೂಪೇಂದರ್ ಸಿಂಗ್ ಮತ್ತು ಬಿಜೆಪಿ ಅಭ್ಯರ್ಥಿಯಾಗಿ ಸಚಿವ ಸುರೇಂದರ್ ಪಾಲ್ ಸ್ಪರ್ಧಿಸಿದ್ದರು. ನಿನ್ನೆ(ಜ.8) ಫಲಿತಾಂಶ ಪ್ರಕಟಗೊಂಡಾಗ ಕಾಂಗ್ರೆಸ್ ಅಭ್ಯರ್ಥಿ ರೂಪೇಂದರ್ ಸಿಂಗ್ 12,570 ಮತಗಳ ಅಂತರದಿಂದ ಬಿಜೆಪಿ ಸಚಿವರನ್ನು ಸೋಲಿಸಿದ್ದಾರೆ.

ಅಭ್ಯರ್ಥಿಗೆ ಸಚಿವ ಸ್ಥಾನ ಕೊಟ್ಟಿತ್ತು ಬಿಜೆಪಿ ಸರ್ಕಾರ

ಉಪ ಚುನಾವಣೆಯಲ್ಲಿ ಸೋತ ಬಿಜೆಪಿ ಅಭ್ಯರ್ಥಿ ಸುರೇಂದ್ರ ಪಾಲ್‌ ಸಿಂಗ್‌ಗೆ ಮತದಾನದ ಕೆಲವೇ ದಿನಗಳ ಮೊದಲು ಸಚಿವ ಸ್ಥಾನ ಕೊಡಲಾಗಿತ್ತು. ಅಂದರೆ, ಜನವರಿ 5ರಂದು ಮತದಾನವಿತ್ತು, ಡಿಸೆಂಬರ್ 30ರಂದು ಅಭ್ಯರ್ಥಿಗೆ ಬಿಜೆಪಿ ಸರ್ಕಾರ ಸಚಿವ ಸ್ಥಾನ ಕೊಟ್ಟಿತ್ತು. ಇದರ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗ ಮೊರೆ ಹೋಗಿದ್ದರೂ, ಏನು ಪ್ರಯೋಜನ ಆಗಿರಲಿಲ್ಲ. ಆದರೆ, ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸೋಲುವ ಮೂಲಕ ಸರ್ಕಾರಕ್ಕೆ ತೀವ್ರ ಮುಖ ಭಂಗವಾಗಿದೆ.

ಚುನಾವಣೆಗೂ ಮೊದಲೇ ಅಭ್ಯರ್ಥಿಗೆ ಸಚಿವ ಸ್ಥಾನ ಕೊಟ್ಟಿದ್ದು ಕಾಂಗ್ರೆಸ್ ಸೇರಿದಂತೆ ಅನೇಕರಿಗೆ ಚುನಾವಣೆಯ ವಿಶ್ವಾಸಾರ್ಹತೆಯ ಮೇಲೆ ಅನುಮಾನ ಮೂಡುವಂತೆ ಮಾಡಿತ್ತು. ಚುನಾವಣೆಗೂ ಮುನ್ನವೇ ಸಚಿವ ಸ್ಥಾನ ನೀಡುವುದಾದರೆ ಅಭ್ಯರ್ಥಿ ಗೆಲ್ಲುವುದೇ ಖಚಿತವೇ? ಅವರು ಗೆಲ್ಲುತ್ತಾರೆಂದು ಬಿಜೆಪಿಗೆ ಹೇಗೆ ಅಷ್ಟೊಂದು ವಿಶ್ವಾಸ? ಇತ್ಯಾದಿ ಪ್ರಶ್ನೆಗಳು ಮೂಡಿತ್ತು. ಎಲ್ಲದಕ್ಕೂ ಚುನಾವಣೆ ಫಲಿತಾಂಶ ಉತ್ತರ ಕೊಟ್ಟಿದೆ.

ಒಂದು ಸೀಟ್‌ನಿಂದ ಸರ್ಕಾರ ಕಾಂಗ್ರೆಸ್‌ಗೇನು ಲಾಭ?

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿರುವ ಬಿಜೆಪಿ ಸರ್ಕಾರ ರಚಿಸಿದೆ. ಕಳೆದ ಐದು ವರ್ಷ ಆಡಳಿತ ನಡೆಸಿದ್ದ ಬಿಜೆಪಿ ಸೋತಿದೆ. ಹಾಗಿರುವಾಗ ಕೇವಲ ಒಂದು ಸ್ಥಾನ ಗೆಲ್ಲುವ ಮೂಲಕ ಸರ್ಕಾರ ರಚಿಸಲು ಕಾಂಗ್ರೆಸ್‌ಗೆ ಸಾಧ್ಯವೇ? ಇಲ್ಲ ಎಂದು ಗೊತ್ತಿದ್ದರೂ ಒಂದು ಸ್ಥಾನಕ್ಕೆ ಯಾಕಿಷ್ಟು ಪ್ರತಿಷ್ಠೆ ಎಂಬ ಪ್ರಶ್ನೆ ಮೂಡಬಹುದು. ಯಾಕೆಂದರೆ, ಕಾಂಗ್ರೆಸ್ ಅಭ್ಯರ್ಥಿ ಜಯಗಳಿಸಿರುವುದು ಸಾಮಾನ್ಯ ಅಭ್ಯರ್ಥಿಯ ಮುಂದೆಯಲ್ಲ, ಬಲಿಷ್ಠ ಬಿಜೆಪಿ ಸರ್ಕಾರದ ಪ್ರಭಾವಿ ಸಚಿವನ ಮುಂದೆಯಾಗಿದೆ. ಅಲ್ಲದೆ, ಕಾಂಗ್ರೆಸ್ ಅಭ್ಯರ್ಥಿ ಹೊಸ ಮುಖವಾಗಿದೆ. ಈ ಎಲ್ಲಾ ಕಾರಣಗಳಿಂದ ಕರಣ್‌ಪುರ ಕ್ಷೇತ್ರ ಜಿದ್ದಾಜಿದ್ದಿನ ಕಣವಾಗಿತ್ತು. ವಿಧಾನಸಭಾ ಚುನಾವಣೆಯಲ್ಲಿ ಸೋತು ಮಂಕಾಗಿದ್ದ ಕಾಂಗ್ರೆಸ್‌ಗೆ ಕರಣ್‌ಪುರ ಗೆಲುವು ಹೊಸ ಉತ್ಸಾಹ ಮೂಡಿಸಿದೆ.

ಉಪಚುನಾವಣೆಯ ಗೆಲುವಿನ ಬಳಿಕ ರಾಜಸ್ಥಾನ ವಿಧಾನಸಭೆಯಲ್ಲಿ ಬಿಜೆಪಿ ಶಾಸಕರ ಸಂಖ್ಯೆ 115 ಮತ್ತು ಕಾಂಗ್ರೆಸ್ ಶಾಸಕರ ಸಂಖ್ಯೆ 70 ಆಗಿದೆ.

ಇದನ್ನೂ ಓದಿ : ಮಾಧ್ಯಮ ಸಂಸ್ಥೆಗಳ ಮಾಲೀಕತ್ವ ನಿಯಂತ್ರಣ ಕಾನೂನು ಜಾರಿಗೆ ತರಬೇಕು: ಶಶಿ ತರೂರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...