Homeಕರ್ನಾಟಕಕನ್ನಡಿಗರಿಗೆ ಹಿಂದಿ ದಿವಸ ಬೇಕಾಗಿಲ್ಲ; ರಾಜ್ಯಾದ್ಯಂತ ಪ್ರತಿಭಟನೆಗೆ ಕರವೇ ಸಜ್ಜು: ನಾರಾಯಣಗೌಡ

ಕನ್ನಡಿಗರಿಗೆ ಹಿಂದಿ ದಿವಸ ಬೇಕಾಗಿಲ್ಲ; ರಾಜ್ಯಾದ್ಯಂತ ಪ್ರತಿಭಟನೆಗೆ ಕರವೇ ಸಜ್ಜು: ನಾರಾಯಣಗೌಡ

- Advertisement -
- Advertisement -

ಸೆಪ್ಟೆಂಬರ್ 14ರಂದು ಭಾರತ ಒಕ್ಕೂಟ ಸರ್ಕಾರ ನಡೆಸುವ ಹಿಂದಿ ದಿವಸ ಆಚರಣೆಗೆ ಕರ್ನಾಟಕ ರಕ್ಷಣಾ ವೇದಿಕೆ ತೀವ್ರವಾಗಿ ವಿರೋಧಿಸುತ್ತದೆ. ಆ ದಿನದಂದು ರಾಜ್ಯದ ಎಲ್ಲ ಭಾಗಗಳಲ್ಲೂ ರಾಷ್ಟ್ರೀಕೃತ ಮತ್ತು ಗ್ರಾಮೀಣ ಬ್ಯಾಂಕ್ ಗಳ ಮುಂಭಾಗ  ಪ್ರತಿಭಟನೆಗಳನ್ನು ನಡೆಸಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ಕನ್ನಡಿಗರ ತೆರಿಗೆ ಹಣದಲ್ಲಿ ನಡೆಸಲಾಗುವ ಹಿಂದಿ ದಿವಸ ಆಚರಣೆ ಕನ್ನಡಿಗರಿಗೆ ಬೇಕಾಗಿಲ್ಲ. ಭಾಷಾ ವೈವಿಧ್ಯದ ಭಾರತದಲ್ಲಿ ಒಂದು ಭಾಷೆಯನ್ನು ಹೊತ್ತು ಮೆರೆಸುವುದರ ಅಗತ್ಯವಿಲ್ಲ. ಭಾರತೀಯ ಭಾಷೆಗಳಲ್ಲಿ ಹಿಂದಿಯೂ ಒಂದು, ಅದಕ್ಕೆ ವಿಶೇಷ ಮಹತ್ವ, ಪ್ರೋತ್ಸಾಹ ನೀಡುವುದು ಅನ್ಯಾಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ಭಾರತದ ಸಂವಿಧಾನದ ಹದಿನಾಲ್ಕನೇ ಪರಿಚ್ಛೇದವು ಪ್ರತಿಯೊಬ್ಬ ಭಾರತೀಯನಿಗೂ ಸಮಾನತೆಯ ಹಕ್ಕನ್ನು ನೀಡುತ್ತದೆ. ಹಿಂದಿ ದಿವಸ ಆಚರಣೆಯ ಮೂಲಕ ಇತರ ಭಾರತೀಯ ಭಾಷೆಗಳನ್ನು ಕಡೆಗಣಿಸಿ, ಇತರ ಭಾಷಿಕರನ್ನು ಎರಡನೇ ದರ್ಜೆ ಪ್ರಜೆಗಳನ್ನಾಗಿಸುವುದು ಅಕ್ಷಮ್ಯ. ಇದು ಇನ್ನು ಮೇಲಾದರೂ ನಿಲ್ಲಬೇಕಿದೆ ಎಂದು ಆಗ್ರಹಿಸಿದ್ದಾರೆ.

ಹಿಂದಿನುಡಿಯೊಂದನ್ನು ಇಡೀ ದೇಶದಲ್ಲಿ ಬೆಳೆಸುವ ಪ್ರಮುಖ ಉದ್ದೇಶ, ಹಿಂದಿ ಭಾಷಿಕರಿಗೆ ಎಲ್ಲ ರಾಜ್ಯಗಳಲ್ಲೂ ಅಗತ್ಯ ಸೇವೆಗಳನ್ನು ಕಲ್ಪಿಸುವುದೇ ಆಗಿದೆ. ಇದರ ಮೂಲಕ ಇತರ ಭಾಷಿಕರಿಗೆ ಇಲ್ಲದ ಸೌಲಭ್ಯ ಹಿಂದಿ ಭಾಷಿಕರಿಗೆ ಒದಗಿಸಲಾಗುತ್ತಿದೆ. ಇದು ಸಂವಿಧಾನದ ಸಮಾನತೆಯ ಆಶಯಗಳಿಗೆ ವಿರುದ್ಧವಾಗಿದೆ ಎಂದು ತಿಳಿಸಿದ್ದಾರೆ.

ಒಕ್ಕೂಟ ಸರ್ಕಾರದ ನೇತೃತ್ವವನ್ನು ಯಾವುದೇ ರಾಜಕೀಯ ಪಕ್ಷ ಹಿಡಿದರೂ ಹಿಂದಿ ಹೇರಿಕೆಯನ್ನು ಎಗ್ಗಿಲ್ಲದೆ ನಡೆಸಲಾಗುತ್ತಿದೆ. ಕಳೆದ ಇಪ್ಪತ್ತು ವರ್ಷಗಳಿಂದಲೂ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿವರ್ಷ ಹಿಂದಿ ದಿವಸ ಆಚರಣೆಯನ್ನು ವಿರೋಧಿಸುತ್ತ ಬಂದಿದೆ. ಭಾರತದ ಎಲ್ಲ ಭಾಷೆಗಳಿಗೂ ಸಮಾನ ಸ್ಥಾನಮಾನ ದೊರೆಯುವವರೆಗೆ ಈ ಪ್ರತಿರೋಧ ಮುಂದುವರೆಯಲಿದೆ ಎಂದು ಎಚ್ಚರಿಸಿದ್ದಾರೆ.

ಭಾರತ ಒಕ್ಕೂಟ ಸರ್ಕಾರ ಸಂವಿಧಾನದ 343ರಿಂದ 351ವರೆಗಿನ ಪರಿಚ್ಛೇದಗಳಿಗೆ ತಿದ್ದುಪಡಿ ತಂದು, ಹಿಂದಿ ಭಾಷೆಗೆ ನೀಡಲಾಗಿರುವ ವಿಶೇಷ ಅವಕಾಶಗಳನ್ನು ಕಿತ್ತುಹಾಕಬೇಕು. ಈ ಪರಿಚ್ಛೇದಗಳನ್ನು ತೆಗೆದುಹಾಕದ ಹೊರತು ಭಾರತೀಯರೆಲ್ಲರೂ ಸಮಾನರಾಗಲು ಸಾಧ್ಯವೇ ಇಲ್ಲ. ಭಾಷೆಯ ಹೆಸರಿನ ತಾರತಮ್ಯ ಕೊನೆಗೊಳ್ಳಲೇಬೇಕಾಗಿದೆ. ಹಿಂದಿ ಹೇರಿಕೆಯ ಪರಿಣಾಮವಾಗಿ ಕೇಂದ್ರ ಸರ್ಕಾರದ ಉದ್ಯೋಗಗಳು ಹಿಂದಿ ಭಾಷಿಕರ ಪಾಲಾಗುತ್ತಿವೆ. ಕನ್ನಡದ ಮಕ್ಕಳು ನಿರುದ್ಯೋಗದ ಸಮಸ್ಯೆ ಎದುರಿಸುವಂತಾಗಿದೆ. ಕರ್ನಾಟಕಕ್ಕೆ ಉತ್ತರದ ರಾಜ್ಯಗಳಿಂದ ವಲಸೆ ವಿಪರೀತವಾಗಿದ್ದು, ಕನ್ನಡಿಗರ ಅಸ್ಮಿತೆ, ಸಂಸ್ಕೃತಿ, ಪರಂಪರೆ ಮತ್ತು ಬದುಕು ಅಪಾಯಕ್ಕೆ ಸಿಲುಕಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ತಂತ್ರಜ್ಞಾನ ಮುಂದುವರೆದಿರುವುದರಿಂದ ಭಾರತದಲ್ಲಿ ಬಹುಭಾಷೆಗಳನ್ನು ಆಡಳಿತ ಭಾಷೆಗಳನ್ನಾಗಿ ಹೊಂದುವುದಕ್ಕೆ ಅವಕಾಶವಿದೆ. ಹಿಂದಿ, ಇಂಗ್ಲಿಷ್ ಮಾತ್ರವಲ್ಲದೆ ದೇಶದ ಎಲ್ಲ ಭಾಷೆಗಳನ್ನೂ ಆಡಳಿತ ಭಾಷೆಗಳನ್ನಾಗಿ ಮಾಡಬೇಕು. ಹಿಂದಿಯನ್ನರು ಶ್ರೇಷ್ಠ, ಉಳಿದವರು ಕನಿಷ್ಠ ಎಂಬ ಧೋರಣೆ ತೊಲಗಬೇಕು‌. ಈ ಎಲ್ಲ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸೆಪ್ಟೆಂಬರ್ 14ರಂದು ರಾಜ್ಯದಾದ್ಯಂತ ಎಲ್ಲ ರಾಷ್ಟ್ರೀಕೃತ, ಗ್ರಾಮೀಣ ಬ್ಯಾಂಕ್ ಗಳ ಮುಂಭಾಗ ಬೆಳಿಗ್ಗೆಯಿಂದ ಸಂಜೆಯವರೆಗೆ ವಿಭಿನ್ನ ರೀತಿಯ ಪ್ರತಿಭಟನೆಗಳನ್ನು ಹಮ್ಮಿಕೊಂಡಿದೆ. ಹಿಂದಿ ದಿವಸ ಆಚರಣೆ ಹೆಸರಿನ‌ ಮೋಸ, ದಬ್ಬಾಳಿಕೆಯನ್ನು ಕರವೇ ತೀವ್ರವಾಗಿ ವಿರೋಧಿಸಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ’ನಿಮ್ಮ ದುರಹಂಕಾರದ ನೆತ್ತಿಯ ಮೇಲೆ ಕಾಲಿಟ್ಟು ನಡೆಯುತ್ತೇವೆ’: ಕರವೇ ಅಭಿಯಾನಕ್ಕೆ ವ್ಯಾಪಕ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕರ್ನಾಟಕ ರಕ್ಷಣಾ ವೇದಿಕೆಯ ಈ ನಿರ್ದಾರ ಸ್ವಾಗತಾರ್ಹ. ಕನ್ನಡಿಗರೂ ಈ ನಿರ್ಧಾರವನ್ನು ಬೆಂಬಲಿಸಬೇಕು.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...