Homeಕರ್ನಾಟಕಕನ್ನಡಿಗರಿಗೆ ಹಿಂದಿ ದಿವಸ ಬೇಕಾಗಿಲ್ಲ; ರಾಜ್ಯಾದ್ಯಂತ ಪ್ರತಿಭಟನೆಗೆ ಕರವೇ ಸಜ್ಜು: ನಾರಾಯಣಗೌಡ

ಕನ್ನಡಿಗರಿಗೆ ಹಿಂದಿ ದಿವಸ ಬೇಕಾಗಿಲ್ಲ; ರಾಜ್ಯಾದ್ಯಂತ ಪ್ರತಿಭಟನೆಗೆ ಕರವೇ ಸಜ್ಜು: ನಾರಾಯಣಗೌಡ

- Advertisement -
- Advertisement -

ಸೆಪ್ಟೆಂಬರ್ 14ರಂದು ಭಾರತ ಒಕ್ಕೂಟ ಸರ್ಕಾರ ನಡೆಸುವ ಹಿಂದಿ ದಿವಸ ಆಚರಣೆಗೆ ಕರ್ನಾಟಕ ರಕ್ಷಣಾ ವೇದಿಕೆ ತೀವ್ರವಾಗಿ ವಿರೋಧಿಸುತ್ತದೆ. ಆ ದಿನದಂದು ರಾಜ್ಯದ ಎಲ್ಲ ಭಾಗಗಳಲ್ಲೂ ರಾಷ್ಟ್ರೀಕೃತ ಮತ್ತು ಗ್ರಾಮೀಣ ಬ್ಯಾಂಕ್ ಗಳ ಮುಂಭಾಗ  ಪ್ರತಿಭಟನೆಗಳನ್ನು ನಡೆಸಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ಕನ್ನಡಿಗರ ತೆರಿಗೆ ಹಣದಲ್ಲಿ ನಡೆಸಲಾಗುವ ಹಿಂದಿ ದಿವಸ ಆಚರಣೆ ಕನ್ನಡಿಗರಿಗೆ ಬೇಕಾಗಿಲ್ಲ. ಭಾಷಾ ವೈವಿಧ್ಯದ ಭಾರತದಲ್ಲಿ ಒಂದು ಭಾಷೆಯನ್ನು ಹೊತ್ತು ಮೆರೆಸುವುದರ ಅಗತ್ಯವಿಲ್ಲ. ಭಾರತೀಯ ಭಾಷೆಗಳಲ್ಲಿ ಹಿಂದಿಯೂ ಒಂದು, ಅದಕ್ಕೆ ವಿಶೇಷ ಮಹತ್ವ, ಪ್ರೋತ್ಸಾಹ ನೀಡುವುದು ಅನ್ಯಾಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ಭಾರತದ ಸಂವಿಧಾನದ ಹದಿನಾಲ್ಕನೇ ಪರಿಚ್ಛೇದವು ಪ್ರತಿಯೊಬ್ಬ ಭಾರತೀಯನಿಗೂ ಸಮಾನತೆಯ ಹಕ್ಕನ್ನು ನೀಡುತ್ತದೆ. ಹಿಂದಿ ದಿವಸ ಆಚರಣೆಯ ಮೂಲಕ ಇತರ ಭಾರತೀಯ ಭಾಷೆಗಳನ್ನು ಕಡೆಗಣಿಸಿ, ಇತರ ಭಾಷಿಕರನ್ನು ಎರಡನೇ ದರ್ಜೆ ಪ್ರಜೆಗಳನ್ನಾಗಿಸುವುದು ಅಕ್ಷಮ್ಯ. ಇದು ಇನ್ನು ಮೇಲಾದರೂ ನಿಲ್ಲಬೇಕಿದೆ ಎಂದು ಆಗ್ರಹಿಸಿದ್ದಾರೆ.

ಹಿಂದಿನುಡಿಯೊಂದನ್ನು ಇಡೀ ದೇಶದಲ್ಲಿ ಬೆಳೆಸುವ ಪ್ರಮುಖ ಉದ್ದೇಶ, ಹಿಂದಿ ಭಾಷಿಕರಿಗೆ ಎಲ್ಲ ರಾಜ್ಯಗಳಲ್ಲೂ ಅಗತ್ಯ ಸೇವೆಗಳನ್ನು ಕಲ್ಪಿಸುವುದೇ ಆಗಿದೆ. ಇದರ ಮೂಲಕ ಇತರ ಭಾಷಿಕರಿಗೆ ಇಲ್ಲದ ಸೌಲಭ್ಯ ಹಿಂದಿ ಭಾಷಿಕರಿಗೆ ಒದಗಿಸಲಾಗುತ್ತಿದೆ. ಇದು ಸಂವಿಧಾನದ ಸಮಾನತೆಯ ಆಶಯಗಳಿಗೆ ವಿರುದ್ಧವಾಗಿದೆ ಎಂದು ತಿಳಿಸಿದ್ದಾರೆ.

ಒಕ್ಕೂಟ ಸರ್ಕಾರದ ನೇತೃತ್ವವನ್ನು ಯಾವುದೇ ರಾಜಕೀಯ ಪಕ್ಷ ಹಿಡಿದರೂ ಹಿಂದಿ ಹೇರಿಕೆಯನ್ನು ಎಗ್ಗಿಲ್ಲದೆ ನಡೆಸಲಾಗುತ್ತಿದೆ. ಕಳೆದ ಇಪ್ಪತ್ತು ವರ್ಷಗಳಿಂದಲೂ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿವರ್ಷ ಹಿಂದಿ ದಿವಸ ಆಚರಣೆಯನ್ನು ವಿರೋಧಿಸುತ್ತ ಬಂದಿದೆ. ಭಾರತದ ಎಲ್ಲ ಭಾಷೆಗಳಿಗೂ ಸಮಾನ ಸ್ಥಾನಮಾನ ದೊರೆಯುವವರೆಗೆ ಈ ಪ್ರತಿರೋಧ ಮುಂದುವರೆಯಲಿದೆ ಎಂದು ಎಚ್ಚರಿಸಿದ್ದಾರೆ.

ಭಾರತ ಒಕ್ಕೂಟ ಸರ್ಕಾರ ಸಂವಿಧಾನದ 343ರಿಂದ 351ವರೆಗಿನ ಪರಿಚ್ಛೇದಗಳಿಗೆ ತಿದ್ದುಪಡಿ ತಂದು, ಹಿಂದಿ ಭಾಷೆಗೆ ನೀಡಲಾಗಿರುವ ವಿಶೇಷ ಅವಕಾಶಗಳನ್ನು ಕಿತ್ತುಹಾಕಬೇಕು. ಈ ಪರಿಚ್ಛೇದಗಳನ್ನು ತೆಗೆದುಹಾಕದ ಹೊರತು ಭಾರತೀಯರೆಲ್ಲರೂ ಸಮಾನರಾಗಲು ಸಾಧ್ಯವೇ ಇಲ್ಲ. ಭಾಷೆಯ ಹೆಸರಿನ ತಾರತಮ್ಯ ಕೊನೆಗೊಳ್ಳಲೇಬೇಕಾಗಿದೆ. ಹಿಂದಿ ಹೇರಿಕೆಯ ಪರಿಣಾಮವಾಗಿ ಕೇಂದ್ರ ಸರ್ಕಾರದ ಉದ್ಯೋಗಗಳು ಹಿಂದಿ ಭಾಷಿಕರ ಪಾಲಾಗುತ್ತಿವೆ. ಕನ್ನಡದ ಮಕ್ಕಳು ನಿರುದ್ಯೋಗದ ಸಮಸ್ಯೆ ಎದುರಿಸುವಂತಾಗಿದೆ. ಕರ್ನಾಟಕಕ್ಕೆ ಉತ್ತರದ ರಾಜ್ಯಗಳಿಂದ ವಲಸೆ ವಿಪರೀತವಾಗಿದ್ದು, ಕನ್ನಡಿಗರ ಅಸ್ಮಿತೆ, ಸಂಸ್ಕೃತಿ, ಪರಂಪರೆ ಮತ್ತು ಬದುಕು ಅಪಾಯಕ್ಕೆ ಸಿಲುಕಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ತಂತ್ರಜ್ಞಾನ ಮುಂದುವರೆದಿರುವುದರಿಂದ ಭಾರತದಲ್ಲಿ ಬಹುಭಾಷೆಗಳನ್ನು ಆಡಳಿತ ಭಾಷೆಗಳನ್ನಾಗಿ ಹೊಂದುವುದಕ್ಕೆ ಅವಕಾಶವಿದೆ. ಹಿಂದಿ, ಇಂಗ್ಲಿಷ್ ಮಾತ್ರವಲ್ಲದೆ ದೇಶದ ಎಲ್ಲ ಭಾಷೆಗಳನ್ನೂ ಆಡಳಿತ ಭಾಷೆಗಳನ್ನಾಗಿ ಮಾಡಬೇಕು. ಹಿಂದಿಯನ್ನರು ಶ್ರೇಷ್ಠ, ಉಳಿದವರು ಕನಿಷ್ಠ ಎಂಬ ಧೋರಣೆ ತೊಲಗಬೇಕು‌. ಈ ಎಲ್ಲ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸೆಪ್ಟೆಂಬರ್ 14ರಂದು ರಾಜ್ಯದಾದ್ಯಂತ ಎಲ್ಲ ರಾಷ್ಟ್ರೀಕೃತ, ಗ್ರಾಮೀಣ ಬ್ಯಾಂಕ್ ಗಳ ಮುಂಭಾಗ ಬೆಳಿಗ್ಗೆಯಿಂದ ಸಂಜೆಯವರೆಗೆ ವಿಭಿನ್ನ ರೀತಿಯ ಪ್ರತಿಭಟನೆಗಳನ್ನು ಹಮ್ಮಿಕೊಂಡಿದೆ. ಹಿಂದಿ ದಿವಸ ಆಚರಣೆ ಹೆಸರಿನ‌ ಮೋಸ, ದಬ್ಬಾಳಿಕೆಯನ್ನು ಕರವೇ ತೀವ್ರವಾಗಿ ವಿರೋಧಿಸಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ’ನಿಮ್ಮ ದುರಹಂಕಾರದ ನೆತ್ತಿಯ ಮೇಲೆ ಕಾಲಿಟ್ಟು ನಡೆಯುತ್ತೇವೆ’: ಕರವೇ ಅಭಿಯಾನಕ್ಕೆ ವ್ಯಾಪಕ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕರ್ನಾಟಕ ರಕ್ಷಣಾ ವೇದಿಕೆಯ ಈ ನಿರ್ದಾರ ಸ್ವಾಗತಾರ್ಹ. ಕನ್ನಡಿಗರೂ ಈ ನಿರ್ಧಾರವನ್ನು ಬೆಂಬಲಿಸಬೇಕು.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....