Homeಕರ್ನಾಟಕಬರಗೂರು, ದೇವನೂರರ ಅವಮಾನ ಮಾಡಿದರೆ ಸಹಿಸಲ್ಲ: ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಎಚ್ಚರಿಕೆ

ಬರಗೂರು, ದೇವನೂರರ ಅವಮಾನ ಮಾಡಿದರೆ ಸಹಿಸಲ್ಲ: ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಎಚ್ಚರಿಕೆ

- Advertisement -
- Advertisement -

ಪಠ್ಯ ಪರಿಷ್ಕರಣೆ ವಿವಾದ ಮತ್ತಷ್ಟು ಭುಗಿಲೆದ್ದಿದ್ದು, ಮಂಗಳವಾರದಂದು ಪತ್ರಿಕಾ ಹೇಳಿಕೆ ನೀಡಿರುವ ನಾಡಿನ ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ಪಠ್ಯದಿಂದ ತನ್ನ ಬರಹಗಳನ್ನು ಕೈಬಿಡುವಂತೆ ಸರ್ಕಾರವನ್ನು ಕೇಳಿದ್ದಾರೆ. ಈ ಎಲ್ಲಾ ಬೆಳವಣಿಗೆಯ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣ ಗೌಡ ಟಿಎ ಅವರು, ದೇವನೂರು ಮಹದೇವ, ಬರಗೂರು ರಾಮಚಂದ್ರಪ್ಪ ಸೇರಿದಂತೆ ಕನ್ನಡದ ಹಿರಿಯ ಸಾಹಿತಿಗಳು ಕನ್ನಡದ ಆಸ್ತಿ, ಕನ್ನಡತನದ ಪ್ರತೀಕ, ಕನ್ನಡಿಗರ ಹೆಮ್ಮೆ ಎಂದು ಹೇಳಿದ್ದಾರೆ.

“ಸಾಹಿತಿಗಳಿಗೆ ಅಪಚಾರ, ಅಪಮಾನ ಎಸಗುವ ಯಾವ ಕೆಲಸವನ್ನೂ ಯಾರೂ ಮಾಡಬಾರದು. ಕರ್ನಾಟಕ ರಕ್ಷಣಾ‌ ವೇದಿಕೆ ಇದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕ್ಷಣಕಾಲವೂ ತಡಮಾಡದೆ ಮಧ್ಯೆ ಪ್ರವೇಶಿಸಿ ಬಿಕ್ಕಟ್ಟನ್ನು‌ ಬಗೆಹರಿಸಬೇಕು” ಎಂದು ಅವರು ಆಗ್ರಹಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರತಿಕ್ರಿಯಿಸಿರುವ ನಾರಾಯಣ ಗೌಡ ಅವರು, “ಕರ್ನಾಟಕದ, ಕನ್ನಡದ ಕೀರ್ತಿಶಿಖರಗಳಲ್ಲಿ ಒಬ್ಬರಾದ ಮೇರುಸಾಹಿತಿ ದೇವನೂರು ಮಹಾದೇವ ಅವರು ಹತ್ತನೇ ತರಗತಿಯ ಪಠ್ಯಕ್ಕೆ ನೀಡಿದ್ದ ‘ಎದೆಗೆ ಬಿದ್ದ ಅಕ್ಷರ’ ಲೇಖನ ಹಿಂದಕ್ಕೆ ಪಡೆದಿರುವುದನ್ನು ಕೇಳಿ ಆಘಾತವಾಯಿತು” ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕ್ಷಣಕಾಲವೂ ತಡಮಾಡದೆ ಮಧ್ಯೆ ಪ್ರವೇಶಿಸಿ ಬಿಕ್ಕಟ್ಟನ್ನು‌ ಬಗೆಹರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ‘ಸಚಿವ ಬಿಸಿ ನಾಗೇಶ್‌ ತಪ್ಪು ಮಾಹಿತಿ ನೀಡಿದ್ದಾರೆ’: ಪಠ್ಯಪುಸ್ತಕದ ಬಗ್ಗೆ ಬರಗೂರು ರಾಮಚಂದ್ರಪ್ಪ ಸ್ಪಷ್ಟನೆ

“ತಮ್ಮ ಪಠ್ಯವನ್ನು ಹಿಂದಕ್ಕೆ ಪಡೆದ ಘಟನೆ ಕರ್ನಾಟಕದ ಇತಿಹಾಸದಲ್ಲಿ ಮೊದಲಬಾರಿ ಘಟಿಸಿದೆ. ಕರ್ನಾಟಕ ಸರ್ಕಾರಕ್ಕೆ ಇದು ಶೋಭೆ ತರುವ ವಿಷಯವಲ್ಲ‌. ಇಂಥ ನಿರ್ಧಾರ ಕೈಗೊಳ್ಳುವ ಹಿನ್ನೆಲೆಯಲ್ಲಿ ದೇವನೂರು ಅವರು ಅನುಭವಿಸಿರುವ ಮಾನಸಿಕ ಯಾತನೆಯನ್ನು ಮುಖ್ಯಮಂತ್ರಿಗಳು ಅರ್ಥ ಮಾಡಿಕೊಳ್ಳಬೇಕು. ಇದು ನಾಡಿನ ದೃಷ್ಟಿಯಲ್ಲಿ ಒಳ್ಳೆಯ ಬೆಳವಣಿಗೆಯಲ್ಲ” ಎಂದು ಅವರು ಹೇಳಿದ್ದಾರೆ.

“ಪಠ್ಯಪುಸ್ತಕ ಪುನರ್ ಪರಿಶೀಲನೆಗಾಗಿ ಸಮಿತಿ ನೇಮಕ ಮಾಡಿದಾಗಲೇ ಸರ್ಕಾರ ಎಡವಿದೆ. ಸಮಿತಿಗೆ ನೇಮಕ ಮಾಡಲು ಬಲಪಂಥೀಯ ವಿದ್ವಾಂಸರು, ಶಿಕ್ಷಣ ತಜ್ಞರೇ ಬೇಕು ಎಂದಿದ್ದರೆ ಹಲವಾರು ಮಂದಿ ಸಜ್ಜನರು, ಎದೆಯಲ್ಲಿ ನಂಜು ಇಟ್ಟುಕೊಳ್ಳದೆ ಕಾರ್ಯ ನಿರ್ವಹಿಸುವವರು ಲಭ್ಯವಿದ್ದರು. ಆದರೆ ಸರ್ಕಾರ ಇಂಥವರನ್ನು ನೇಮಕ ಮಾಡದೆ ತಪ್ಪೆಸಗಿದೆ” ಎಂದು ಅವರು ಹೇಳಿದ್ದಾರೆ.

“ಶಿಕ್ಷಣ ತಜ್ಞನಲ್ಲದ, ಕನ್ನಡ ಸಾಹಿತಿಗಳ ಕುರಿತು ಅಗೌರವ ಹೊಂದಿರುವ, ರಾಷ್ಟ್ರಕವಿ ಕುವೆಂಪು ಅವರನ್ನು ನಿಂದಿಸಿ ಲೇಖನ ಬರೆದ, ನಾಡಗೀತೆಯನ್ನು ಅತ್ಯಂತ‌ ಕೊಳಕಾಗಿ ಪರಿಷ್ಕರಿಸಿ ಬರೆದ, ಕನ್ನಡಿಗರ ಅಸ್ಮಿತೆಯ ಪ್ರತೀಕವಾದ ಕನ್ನಡ ಧ್ವಜವನ್ನು ತನ್ನ ಒಳಚೆಡ್ಡಿಗೆ ಹೋಲಿಸಿದ ವ್ಯಕ್ತಿಯನ್ನು ಪಠ್ಯ ಪುಸ್ತಕ ಸಮಿತಿಗೆ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ್ದೇ ಮೊದಲ ತಪ್ಪು” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಸಾಮಾಜಿಕ ಜಾಲತಾಣಗಳಲ್ಲಿ ಸದಾ ಕನ್ನಡದ್ರೋಹದ ಕೆಲಸವನ್ನೇ ಮಾಡಿಕೊಂಡು ಬಂದ ವ್ಯಕ್ತಿಯನ್ನು ಪಠ್ಯಪುಸ್ತಕ ಪರಿಶೀಲನೆಗೆ ಬಿಟ್ಟರೆ ಏನಾಗಬಹುದು ಎಂಬುದನ್ನು ಇಂದು ನಾವು ನೋಡುತ್ತಿದ್ದೇವೆ. ಕನ್ನಡದ ಸಾರಸ್ವತ ಲೋಕ ಎದ್ದು ನಿಂತು ಪ್ರತಿಭಟಿಸುತ್ತಿದೆ. ಮಕ್ಕಳ ಪಠ್ಯದಲ್ಲಿ ನಂಜು ತುಂಬುವ ಇಂಥವರ ವಿರುದ್ಧ ಶೈಕ್ಷಣಿಕ, ಬುದ್ಧಿಜೀವಿ ವಲಯ ಧ್ವನಿ ಎತ್ತಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: RSS, ಬಿಜೆಪಿಯ ಪಠ್ಯ ಪರಿಷ್ಕರಣೆಗೆ ವಿರೋಧ: ತನ್ನ ಪಠ್ಯ ಕೈಬಿಡಲು ದೇವನೂರ ಮಹಾದೇವ ಪತ್ರ

“ಸರ್ಕಾರ ಕೂಡಲೇ ಪರಿಷ್ಕರಣಾ ಸಮಿತಿಯ ಎಲ್ಲ ಪರಿಷ್ಕರಣೆಯನ್ನೂ ತಿರಸ್ಕರಿಸಬೇಕು. ಈಗಾಗಲೇ ಮುದ್ರಿಸಿರುವ ಹಳೆಯ ಪಠ್ಯಪುಸ್ತಕಗಳನ್ನೇ ಶಾಲೆಗಳಿಗೆ ನೀಡಬೇಕು. ಶಾಲೆಗಳು ಈಗಾಗಲೇ ಆರಂಭವಾಗಿರುವುದರಿಂದ ವಿದ್ಯಾರ್ಥಿಗಳಿಗೆ ಅನಾನುಕೂಲವಾಗದಂತೆ ಕೂಡಲೇ ಹಳೆಯ ಪಠ್ಯ ಪುಸ್ತಕಗಳನ್ನೇ ಒದಗಿಸಬೇಕು. ಇಷ್ಟೆಲ್ಲ ಅವಾಂತರಕ್ಕೆ ಕಾರಣವಾದ ಸಮಿತಿಯನ್ನು ಈ ಕೂಡಲೇ ವಿಸರ್ಜಿಸಬೇಕು” ಎಂದು ನಾರಾಯಣ ಗೌಡ ಅವರು ಒತ್ತಾಯಿಸಿದ್ದಾರೆ.

“ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರರು ಸಾಮಾಜಿಕ, ಸಾಂಸ್ಕೃತಿಕ ವಿಷಯಗಳಲ್ಲಿ ಎಚ್ಚರ‌ ಮತ್ತು ಪ್ರಜ್ಞೆ ಉಳ್ಳವರು. ಅವರು ಯಾವುದೇ ರೀತಿಯ ಬಾಹ್ಯ ಒತ್ತಡಕ್ಕೆ ಒಳಗಾಗದೆ ನಾಯಕತ್ವದ ಗುಣವನ್ನು ಪ್ರದರ್ಶಿಸಬೇಕು. ಕೂಡಲೇ ಮಧ್ಯಪ್ರವೇಶಿಸಿ ವಿವಾದವನ್ನು‌ ಬಗೆಹರಿಸಬೇಕು” ಎಂದು ನಾರಾಯಣ ಗೌಡ ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...