Homeಕರ್ನಾಟಕಬರಗೂರು, ದೇವನೂರರ ಅವಮಾನ ಮಾಡಿದರೆ ಸಹಿಸಲ್ಲ: ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಎಚ್ಚರಿಕೆ

ಬರಗೂರು, ದೇವನೂರರ ಅವಮಾನ ಮಾಡಿದರೆ ಸಹಿಸಲ್ಲ: ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಎಚ್ಚರಿಕೆ

- Advertisement -
- Advertisement -

ಪಠ್ಯ ಪರಿಷ್ಕರಣೆ ವಿವಾದ ಮತ್ತಷ್ಟು ಭುಗಿಲೆದ್ದಿದ್ದು, ಮಂಗಳವಾರದಂದು ಪತ್ರಿಕಾ ಹೇಳಿಕೆ ನೀಡಿರುವ ನಾಡಿನ ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ಪಠ್ಯದಿಂದ ತನ್ನ ಬರಹಗಳನ್ನು ಕೈಬಿಡುವಂತೆ ಸರ್ಕಾರವನ್ನು ಕೇಳಿದ್ದಾರೆ. ಈ ಎಲ್ಲಾ ಬೆಳವಣಿಗೆಯ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣ ಗೌಡ ಟಿಎ ಅವರು, ದೇವನೂರು ಮಹದೇವ, ಬರಗೂರು ರಾಮಚಂದ್ರಪ್ಪ ಸೇರಿದಂತೆ ಕನ್ನಡದ ಹಿರಿಯ ಸಾಹಿತಿಗಳು ಕನ್ನಡದ ಆಸ್ತಿ, ಕನ್ನಡತನದ ಪ್ರತೀಕ, ಕನ್ನಡಿಗರ ಹೆಮ್ಮೆ ಎಂದು ಹೇಳಿದ್ದಾರೆ.

“ಸಾಹಿತಿಗಳಿಗೆ ಅಪಚಾರ, ಅಪಮಾನ ಎಸಗುವ ಯಾವ ಕೆಲಸವನ್ನೂ ಯಾರೂ ಮಾಡಬಾರದು. ಕರ್ನಾಟಕ ರಕ್ಷಣಾ‌ ವೇದಿಕೆ ಇದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕ್ಷಣಕಾಲವೂ ತಡಮಾಡದೆ ಮಧ್ಯೆ ಪ್ರವೇಶಿಸಿ ಬಿಕ್ಕಟ್ಟನ್ನು‌ ಬಗೆಹರಿಸಬೇಕು” ಎಂದು ಅವರು ಆಗ್ರಹಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರತಿಕ್ರಿಯಿಸಿರುವ ನಾರಾಯಣ ಗೌಡ ಅವರು, “ಕರ್ನಾಟಕದ, ಕನ್ನಡದ ಕೀರ್ತಿಶಿಖರಗಳಲ್ಲಿ ಒಬ್ಬರಾದ ಮೇರುಸಾಹಿತಿ ದೇವನೂರು ಮಹಾದೇವ ಅವರು ಹತ್ತನೇ ತರಗತಿಯ ಪಠ್ಯಕ್ಕೆ ನೀಡಿದ್ದ ‘ಎದೆಗೆ ಬಿದ್ದ ಅಕ್ಷರ’ ಲೇಖನ ಹಿಂದಕ್ಕೆ ಪಡೆದಿರುವುದನ್ನು ಕೇಳಿ ಆಘಾತವಾಯಿತು” ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕ್ಷಣಕಾಲವೂ ತಡಮಾಡದೆ ಮಧ್ಯೆ ಪ್ರವೇಶಿಸಿ ಬಿಕ್ಕಟ್ಟನ್ನು‌ ಬಗೆಹರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ‘ಸಚಿವ ಬಿಸಿ ನಾಗೇಶ್‌ ತಪ್ಪು ಮಾಹಿತಿ ನೀಡಿದ್ದಾರೆ’: ಪಠ್ಯಪುಸ್ತಕದ ಬಗ್ಗೆ ಬರಗೂರು ರಾಮಚಂದ್ರಪ್ಪ ಸ್ಪಷ್ಟನೆ

“ತಮ್ಮ ಪಠ್ಯವನ್ನು ಹಿಂದಕ್ಕೆ ಪಡೆದ ಘಟನೆ ಕರ್ನಾಟಕದ ಇತಿಹಾಸದಲ್ಲಿ ಮೊದಲಬಾರಿ ಘಟಿಸಿದೆ. ಕರ್ನಾಟಕ ಸರ್ಕಾರಕ್ಕೆ ಇದು ಶೋಭೆ ತರುವ ವಿಷಯವಲ್ಲ‌. ಇಂಥ ನಿರ್ಧಾರ ಕೈಗೊಳ್ಳುವ ಹಿನ್ನೆಲೆಯಲ್ಲಿ ದೇವನೂರು ಅವರು ಅನುಭವಿಸಿರುವ ಮಾನಸಿಕ ಯಾತನೆಯನ್ನು ಮುಖ್ಯಮಂತ್ರಿಗಳು ಅರ್ಥ ಮಾಡಿಕೊಳ್ಳಬೇಕು. ಇದು ನಾಡಿನ ದೃಷ್ಟಿಯಲ್ಲಿ ಒಳ್ಳೆಯ ಬೆಳವಣಿಗೆಯಲ್ಲ” ಎಂದು ಅವರು ಹೇಳಿದ್ದಾರೆ.

“ಪಠ್ಯಪುಸ್ತಕ ಪುನರ್ ಪರಿಶೀಲನೆಗಾಗಿ ಸಮಿತಿ ನೇಮಕ ಮಾಡಿದಾಗಲೇ ಸರ್ಕಾರ ಎಡವಿದೆ. ಸಮಿತಿಗೆ ನೇಮಕ ಮಾಡಲು ಬಲಪಂಥೀಯ ವಿದ್ವಾಂಸರು, ಶಿಕ್ಷಣ ತಜ್ಞರೇ ಬೇಕು ಎಂದಿದ್ದರೆ ಹಲವಾರು ಮಂದಿ ಸಜ್ಜನರು, ಎದೆಯಲ್ಲಿ ನಂಜು ಇಟ್ಟುಕೊಳ್ಳದೆ ಕಾರ್ಯ ನಿರ್ವಹಿಸುವವರು ಲಭ್ಯವಿದ್ದರು. ಆದರೆ ಸರ್ಕಾರ ಇಂಥವರನ್ನು ನೇಮಕ ಮಾಡದೆ ತಪ್ಪೆಸಗಿದೆ” ಎಂದು ಅವರು ಹೇಳಿದ್ದಾರೆ.

“ಶಿಕ್ಷಣ ತಜ್ಞನಲ್ಲದ, ಕನ್ನಡ ಸಾಹಿತಿಗಳ ಕುರಿತು ಅಗೌರವ ಹೊಂದಿರುವ, ರಾಷ್ಟ್ರಕವಿ ಕುವೆಂಪು ಅವರನ್ನು ನಿಂದಿಸಿ ಲೇಖನ ಬರೆದ, ನಾಡಗೀತೆಯನ್ನು ಅತ್ಯಂತ‌ ಕೊಳಕಾಗಿ ಪರಿಷ್ಕರಿಸಿ ಬರೆದ, ಕನ್ನಡಿಗರ ಅಸ್ಮಿತೆಯ ಪ್ರತೀಕವಾದ ಕನ್ನಡ ಧ್ವಜವನ್ನು ತನ್ನ ಒಳಚೆಡ್ಡಿಗೆ ಹೋಲಿಸಿದ ವ್ಯಕ್ತಿಯನ್ನು ಪಠ್ಯ ಪುಸ್ತಕ ಸಮಿತಿಗೆ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ್ದೇ ಮೊದಲ ತಪ್ಪು” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಸಾಮಾಜಿಕ ಜಾಲತಾಣಗಳಲ್ಲಿ ಸದಾ ಕನ್ನಡದ್ರೋಹದ ಕೆಲಸವನ್ನೇ ಮಾಡಿಕೊಂಡು ಬಂದ ವ್ಯಕ್ತಿಯನ್ನು ಪಠ್ಯಪುಸ್ತಕ ಪರಿಶೀಲನೆಗೆ ಬಿಟ್ಟರೆ ಏನಾಗಬಹುದು ಎಂಬುದನ್ನು ಇಂದು ನಾವು ನೋಡುತ್ತಿದ್ದೇವೆ. ಕನ್ನಡದ ಸಾರಸ್ವತ ಲೋಕ ಎದ್ದು ನಿಂತು ಪ್ರತಿಭಟಿಸುತ್ತಿದೆ. ಮಕ್ಕಳ ಪಠ್ಯದಲ್ಲಿ ನಂಜು ತುಂಬುವ ಇಂಥವರ ವಿರುದ್ಧ ಶೈಕ್ಷಣಿಕ, ಬುದ್ಧಿಜೀವಿ ವಲಯ ಧ್ವನಿ ಎತ್ತಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: RSS, ಬಿಜೆಪಿಯ ಪಠ್ಯ ಪರಿಷ್ಕರಣೆಗೆ ವಿರೋಧ: ತನ್ನ ಪಠ್ಯ ಕೈಬಿಡಲು ದೇವನೂರ ಮಹಾದೇವ ಪತ್ರ

“ಸರ್ಕಾರ ಕೂಡಲೇ ಪರಿಷ್ಕರಣಾ ಸಮಿತಿಯ ಎಲ್ಲ ಪರಿಷ್ಕರಣೆಯನ್ನೂ ತಿರಸ್ಕರಿಸಬೇಕು. ಈಗಾಗಲೇ ಮುದ್ರಿಸಿರುವ ಹಳೆಯ ಪಠ್ಯಪುಸ್ತಕಗಳನ್ನೇ ಶಾಲೆಗಳಿಗೆ ನೀಡಬೇಕು. ಶಾಲೆಗಳು ಈಗಾಗಲೇ ಆರಂಭವಾಗಿರುವುದರಿಂದ ವಿದ್ಯಾರ್ಥಿಗಳಿಗೆ ಅನಾನುಕೂಲವಾಗದಂತೆ ಕೂಡಲೇ ಹಳೆಯ ಪಠ್ಯ ಪುಸ್ತಕಗಳನ್ನೇ ಒದಗಿಸಬೇಕು. ಇಷ್ಟೆಲ್ಲ ಅವಾಂತರಕ್ಕೆ ಕಾರಣವಾದ ಸಮಿತಿಯನ್ನು ಈ ಕೂಡಲೇ ವಿಸರ್ಜಿಸಬೇಕು” ಎಂದು ನಾರಾಯಣ ಗೌಡ ಅವರು ಒತ್ತಾಯಿಸಿದ್ದಾರೆ.

“ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರರು ಸಾಮಾಜಿಕ, ಸಾಂಸ್ಕೃತಿಕ ವಿಷಯಗಳಲ್ಲಿ ಎಚ್ಚರ‌ ಮತ್ತು ಪ್ರಜ್ಞೆ ಉಳ್ಳವರು. ಅವರು ಯಾವುದೇ ರೀತಿಯ ಬಾಹ್ಯ ಒತ್ತಡಕ್ಕೆ ಒಳಗಾಗದೆ ನಾಯಕತ್ವದ ಗುಣವನ್ನು ಪ್ರದರ್ಶಿಸಬೇಕು. ಕೂಡಲೇ ಮಧ್ಯಪ್ರವೇಶಿಸಿ ವಿವಾದವನ್ನು‌ ಬಗೆಹರಿಸಬೇಕು” ಎಂದು ನಾರಾಯಣ ಗೌಡ ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...