Homeಕರ್ನಾಟಕಬರಗೂರು, ದೇವನೂರರ ಅವಮಾನ ಮಾಡಿದರೆ ಸಹಿಸಲ್ಲ: ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಎಚ್ಚರಿಕೆ

ಬರಗೂರು, ದೇವನೂರರ ಅವಮಾನ ಮಾಡಿದರೆ ಸಹಿಸಲ್ಲ: ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಎಚ್ಚರಿಕೆ

- Advertisement -
- Advertisement -

ಪಠ್ಯ ಪರಿಷ್ಕರಣೆ ವಿವಾದ ಮತ್ತಷ್ಟು ಭುಗಿಲೆದ್ದಿದ್ದು, ಮಂಗಳವಾರದಂದು ಪತ್ರಿಕಾ ಹೇಳಿಕೆ ನೀಡಿರುವ ನಾಡಿನ ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ಪಠ್ಯದಿಂದ ತನ್ನ ಬರಹಗಳನ್ನು ಕೈಬಿಡುವಂತೆ ಸರ್ಕಾರವನ್ನು ಕೇಳಿದ್ದಾರೆ. ಈ ಎಲ್ಲಾ ಬೆಳವಣಿಗೆಯ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣ ಗೌಡ ಟಿಎ ಅವರು, ದೇವನೂರು ಮಹದೇವ, ಬರಗೂರು ರಾಮಚಂದ್ರಪ್ಪ ಸೇರಿದಂತೆ ಕನ್ನಡದ ಹಿರಿಯ ಸಾಹಿತಿಗಳು ಕನ್ನಡದ ಆಸ್ತಿ, ಕನ್ನಡತನದ ಪ್ರತೀಕ, ಕನ್ನಡಿಗರ ಹೆಮ್ಮೆ ಎಂದು ಹೇಳಿದ್ದಾರೆ.

“ಸಾಹಿತಿಗಳಿಗೆ ಅಪಚಾರ, ಅಪಮಾನ ಎಸಗುವ ಯಾವ ಕೆಲಸವನ್ನೂ ಯಾರೂ ಮಾಡಬಾರದು. ಕರ್ನಾಟಕ ರಕ್ಷಣಾ‌ ವೇದಿಕೆ ಇದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕ್ಷಣಕಾಲವೂ ತಡಮಾಡದೆ ಮಧ್ಯೆ ಪ್ರವೇಶಿಸಿ ಬಿಕ್ಕಟ್ಟನ್ನು‌ ಬಗೆಹರಿಸಬೇಕು” ಎಂದು ಅವರು ಆಗ್ರಹಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರತಿಕ್ರಿಯಿಸಿರುವ ನಾರಾಯಣ ಗೌಡ ಅವರು, “ಕರ್ನಾಟಕದ, ಕನ್ನಡದ ಕೀರ್ತಿಶಿಖರಗಳಲ್ಲಿ ಒಬ್ಬರಾದ ಮೇರುಸಾಹಿತಿ ದೇವನೂರು ಮಹಾದೇವ ಅವರು ಹತ್ತನೇ ತರಗತಿಯ ಪಠ್ಯಕ್ಕೆ ನೀಡಿದ್ದ ‘ಎದೆಗೆ ಬಿದ್ದ ಅಕ್ಷರ’ ಲೇಖನ ಹಿಂದಕ್ಕೆ ಪಡೆದಿರುವುದನ್ನು ಕೇಳಿ ಆಘಾತವಾಯಿತು” ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕ್ಷಣಕಾಲವೂ ತಡಮಾಡದೆ ಮಧ್ಯೆ ಪ್ರವೇಶಿಸಿ ಬಿಕ್ಕಟ್ಟನ್ನು‌ ಬಗೆಹರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ‘ಸಚಿವ ಬಿಸಿ ನಾಗೇಶ್‌ ತಪ್ಪು ಮಾಹಿತಿ ನೀಡಿದ್ದಾರೆ’: ಪಠ್ಯಪುಸ್ತಕದ ಬಗ್ಗೆ ಬರಗೂರು ರಾಮಚಂದ್ರಪ್ಪ ಸ್ಪಷ್ಟನೆ

“ತಮ್ಮ ಪಠ್ಯವನ್ನು ಹಿಂದಕ್ಕೆ ಪಡೆದ ಘಟನೆ ಕರ್ನಾಟಕದ ಇತಿಹಾಸದಲ್ಲಿ ಮೊದಲಬಾರಿ ಘಟಿಸಿದೆ. ಕರ್ನಾಟಕ ಸರ್ಕಾರಕ್ಕೆ ಇದು ಶೋಭೆ ತರುವ ವಿಷಯವಲ್ಲ‌. ಇಂಥ ನಿರ್ಧಾರ ಕೈಗೊಳ್ಳುವ ಹಿನ್ನೆಲೆಯಲ್ಲಿ ದೇವನೂರು ಅವರು ಅನುಭವಿಸಿರುವ ಮಾನಸಿಕ ಯಾತನೆಯನ್ನು ಮುಖ್ಯಮಂತ್ರಿಗಳು ಅರ್ಥ ಮಾಡಿಕೊಳ್ಳಬೇಕು. ಇದು ನಾಡಿನ ದೃಷ್ಟಿಯಲ್ಲಿ ಒಳ್ಳೆಯ ಬೆಳವಣಿಗೆಯಲ್ಲ” ಎಂದು ಅವರು ಹೇಳಿದ್ದಾರೆ.

“ಪಠ್ಯಪುಸ್ತಕ ಪುನರ್ ಪರಿಶೀಲನೆಗಾಗಿ ಸಮಿತಿ ನೇಮಕ ಮಾಡಿದಾಗಲೇ ಸರ್ಕಾರ ಎಡವಿದೆ. ಸಮಿತಿಗೆ ನೇಮಕ ಮಾಡಲು ಬಲಪಂಥೀಯ ವಿದ್ವಾಂಸರು, ಶಿಕ್ಷಣ ತಜ್ಞರೇ ಬೇಕು ಎಂದಿದ್ದರೆ ಹಲವಾರು ಮಂದಿ ಸಜ್ಜನರು, ಎದೆಯಲ್ಲಿ ನಂಜು ಇಟ್ಟುಕೊಳ್ಳದೆ ಕಾರ್ಯ ನಿರ್ವಹಿಸುವವರು ಲಭ್ಯವಿದ್ದರು. ಆದರೆ ಸರ್ಕಾರ ಇಂಥವರನ್ನು ನೇಮಕ ಮಾಡದೆ ತಪ್ಪೆಸಗಿದೆ” ಎಂದು ಅವರು ಹೇಳಿದ್ದಾರೆ.

“ಶಿಕ್ಷಣ ತಜ್ಞನಲ್ಲದ, ಕನ್ನಡ ಸಾಹಿತಿಗಳ ಕುರಿತು ಅಗೌರವ ಹೊಂದಿರುವ, ರಾಷ್ಟ್ರಕವಿ ಕುವೆಂಪು ಅವರನ್ನು ನಿಂದಿಸಿ ಲೇಖನ ಬರೆದ, ನಾಡಗೀತೆಯನ್ನು ಅತ್ಯಂತ‌ ಕೊಳಕಾಗಿ ಪರಿಷ್ಕರಿಸಿ ಬರೆದ, ಕನ್ನಡಿಗರ ಅಸ್ಮಿತೆಯ ಪ್ರತೀಕವಾದ ಕನ್ನಡ ಧ್ವಜವನ್ನು ತನ್ನ ಒಳಚೆಡ್ಡಿಗೆ ಹೋಲಿಸಿದ ವ್ಯಕ್ತಿಯನ್ನು ಪಠ್ಯ ಪುಸ್ತಕ ಸಮಿತಿಗೆ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ್ದೇ ಮೊದಲ ತಪ್ಪು” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಸಾಮಾಜಿಕ ಜಾಲತಾಣಗಳಲ್ಲಿ ಸದಾ ಕನ್ನಡದ್ರೋಹದ ಕೆಲಸವನ್ನೇ ಮಾಡಿಕೊಂಡು ಬಂದ ವ್ಯಕ್ತಿಯನ್ನು ಪಠ್ಯಪುಸ್ತಕ ಪರಿಶೀಲನೆಗೆ ಬಿಟ್ಟರೆ ಏನಾಗಬಹುದು ಎಂಬುದನ್ನು ಇಂದು ನಾವು ನೋಡುತ್ತಿದ್ದೇವೆ. ಕನ್ನಡದ ಸಾರಸ್ವತ ಲೋಕ ಎದ್ದು ನಿಂತು ಪ್ರತಿಭಟಿಸುತ್ತಿದೆ. ಮಕ್ಕಳ ಪಠ್ಯದಲ್ಲಿ ನಂಜು ತುಂಬುವ ಇಂಥವರ ವಿರುದ್ಧ ಶೈಕ್ಷಣಿಕ, ಬುದ್ಧಿಜೀವಿ ವಲಯ ಧ್ವನಿ ಎತ್ತಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: RSS, ಬಿಜೆಪಿಯ ಪಠ್ಯ ಪರಿಷ್ಕರಣೆಗೆ ವಿರೋಧ: ತನ್ನ ಪಠ್ಯ ಕೈಬಿಡಲು ದೇವನೂರ ಮಹಾದೇವ ಪತ್ರ

“ಸರ್ಕಾರ ಕೂಡಲೇ ಪರಿಷ್ಕರಣಾ ಸಮಿತಿಯ ಎಲ್ಲ ಪರಿಷ್ಕರಣೆಯನ್ನೂ ತಿರಸ್ಕರಿಸಬೇಕು. ಈಗಾಗಲೇ ಮುದ್ರಿಸಿರುವ ಹಳೆಯ ಪಠ್ಯಪುಸ್ತಕಗಳನ್ನೇ ಶಾಲೆಗಳಿಗೆ ನೀಡಬೇಕು. ಶಾಲೆಗಳು ಈಗಾಗಲೇ ಆರಂಭವಾಗಿರುವುದರಿಂದ ವಿದ್ಯಾರ್ಥಿಗಳಿಗೆ ಅನಾನುಕೂಲವಾಗದಂತೆ ಕೂಡಲೇ ಹಳೆಯ ಪಠ್ಯ ಪುಸ್ತಕಗಳನ್ನೇ ಒದಗಿಸಬೇಕು. ಇಷ್ಟೆಲ್ಲ ಅವಾಂತರಕ್ಕೆ ಕಾರಣವಾದ ಸಮಿತಿಯನ್ನು ಈ ಕೂಡಲೇ ವಿಸರ್ಜಿಸಬೇಕು” ಎಂದು ನಾರಾಯಣ ಗೌಡ ಅವರು ಒತ್ತಾಯಿಸಿದ್ದಾರೆ.

“ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರರು ಸಾಮಾಜಿಕ, ಸಾಂಸ್ಕೃತಿಕ ವಿಷಯಗಳಲ್ಲಿ ಎಚ್ಚರ‌ ಮತ್ತು ಪ್ರಜ್ಞೆ ಉಳ್ಳವರು. ಅವರು ಯಾವುದೇ ರೀತಿಯ ಬಾಹ್ಯ ಒತ್ತಡಕ್ಕೆ ಒಳಗಾಗದೆ ನಾಯಕತ್ವದ ಗುಣವನ್ನು ಪ್ರದರ್ಶಿಸಬೇಕು. ಕೂಡಲೇ ಮಧ್ಯಪ್ರವೇಶಿಸಿ ವಿವಾದವನ್ನು‌ ಬಗೆಹರಿಸಬೇಕು” ಎಂದು ನಾರಾಯಣ ಗೌಡ ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...