Homeಕರ್ನಾಟಕಬರಗೂರು, ದೇವನೂರರ ಅವಮಾನ ಮಾಡಿದರೆ ಸಹಿಸಲ್ಲ: ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಎಚ್ಚರಿಕೆ

ಬರಗೂರು, ದೇವನೂರರ ಅವಮಾನ ಮಾಡಿದರೆ ಸಹಿಸಲ್ಲ: ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಎಚ್ಚರಿಕೆ

- Advertisement -
- Advertisement -

ಪಠ್ಯ ಪರಿಷ್ಕರಣೆ ವಿವಾದ ಮತ್ತಷ್ಟು ಭುಗಿಲೆದ್ದಿದ್ದು, ಮಂಗಳವಾರದಂದು ಪತ್ರಿಕಾ ಹೇಳಿಕೆ ನೀಡಿರುವ ನಾಡಿನ ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ಪಠ್ಯದಿಂದ ತನ್ನ ಬರಹಗಳನ್ನು ಕೈಬಿಡುವಂತೆ ಸರ್ಕಾರವನ್ನು ಕೇಳಿದ್ದಾರೆ. ಈ ಎಲ್ಲಾ ಬೆಳವಣಿಗೆಯ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣ ಗೌಡ ಟಿಎ ಅವರು, ದೇವನೂರು ಮಹದೇವ, ಬರಗೂರು ರಾಮಚಂದ್ರಪ್ಪ ಸೇರಿದಂತೆ ಕನ್ನಡದ ಹಿರಿಯ ಸಾಹಿತಿಗಳು ಕನ್ನಡದ ಆಸ್ತಿ, ಕನ್ನಡತನದ ಪ್ರತೀಕ, ಕನ್ನಡಿಗರ ಹೆಮ್ಮೆ ಎಂದು ಹೇಳಿದ್ದಾರೆ.

“ಸಾಹಿತಿಗಳಿಗೆ ಅಪಚಾರ, ಅಪಮಾನ ಎಸಗುವ ಯಾವ ಕೆಲಸವನ್ನೂ ಯಾರೂ ಮಾಡಬಾರದು. ಕರ್ನಾಟಕ ರಕ್ಷಣಾ‌ ವೇದಿಕೆ ಇದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕ್ಷಣಕಾಲವೂ ತಡಮಾಡದೆ ಮಧ್ಯೆ ಪ್ರವೇಶಿಸಿ ಬಿಕ್ಕಟ್ಟನ್ನು‌ ಬಗೆಹರಿಸಬೇಕು” ಎಂದು ಅವರು ಆಗ್ರಹಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರತಿಕ್ರಿಯಿಸಿರುವ ನಾರಾಯಣ ಗೌಡ ಅವರು, “ಕರ್ನಾಟಕದ, ಕನ್ನಡದ ಕೀರ್ತಿಶಿಖರಗಳಲ್ಲಿ ಒಬ್ಬರಾದ ಮೇರುಸಾಹಿತಿ ದೇವನೂರು ಮಹಾದೇವ ಅವರು ಹತ್ತನೇ ತರಗತಿಯ ಪಠ್ಯಕ್ಕೆ ನೀಡಿದ್ದ ‘ಎದೆಗೆ ಬಿದ್ದ ಅಕ್ಷರ’ ಲೇಖನ ಹಿಂದಕ್ಕೆ ಪಡೆದಿರುವುದನ್ನು ಕೇಳಿ ಆಘಾತವಾಯಿತು” ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕ್ಷಣಕಾಲವೂ ತಡಮಾಡದೆ ಮಧ್ಯೆ ಪ್ರವೇಶಿಸಿ ಬಿಕ್ಕಟ್ಟನ್ನು‌ ಬಗೆಹರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ‘ಸಚಿವ ಬಿಸಿ ನಾಗೇಶ್‌ ತಪ್ಪು ಮಾಹಿತಿ ನೀಡಿದ್ದಾರೆ’: ಪಠ್ಯಪುಸ್ತಕದ ಬಗ್ಗೆ ಬರಗೂರು ರಾಮಚಂದ್ರಪ್ಪ ಸ್ಪಷ್ಟನೆ

“ತಮ್ಮ ಪಠ್ಯವನ್ನು ಹಿಂದಕ್ಕೆ ಪಡೆದ ಘಟನೆ ಕರ್ನಾಟಕದ ಇತಿಹಾಸದಲ್ಲಿ ಮೊದಲಬಾರಿ ಘಟಿಸಿದೆ. ಕರ್ನಾಟಕ ಸರ್ಕಾರಕ್ಕೆ ಇದು ಶೋಭೆ ತರುವ ವಿಷಯವಲ್ಲ‌. ಇಂಥ ನಿರ್ಧಾರ ಕೈಗೊಳ್ಳುವ ಹಿನ್ನೆಲೆಯಲ್ಲಿ ದೇವನೂರು ಅವರು ಅನುಭವಿಸಿರುವ ಮಾನಸಿಕ ಯಾತನೆಯನ್ನು ಮುಖ್ಯಮಂತ್ರಿಗಳು ಅರ್ಥ ಮಾಡಿಕೊಳ್ಳಬೇಕು. ಇದು ನಾಡಿನ ದೃಷ್ಟಿಯಲ್ಲಿ ಒಳ್ಳೆಯ ಬೆಳವಣಿಗೆಯಲ್ಲ” ಎಂದು ಅವರು ಹೇಳಿದ್ದಾರೆ.

“ಪಠ್ಯಪುಸ್ತಕ ಪುನರ್ ಪರಿಶೀಲನೆಗಾಗಿ ಸಮಿತಿ ನೇಮಕ ಮಾಡಿದಾಗಲೇ ಸರ್ಕಾರ ಎಡವಿದೆ. ಸಮಿತಿಗೆ ನೇಮಕ ಮಾಡಲು ಬಲಪಂಥೀಯ ವಿದ್ವಾಂಸರು, ಶಿಕ್ಷಣ ತಜ್ಞರೇ ಬೇಕು ಎಂದಿದ್ದರೆ ಹಲವಾರು ಮಂದಿ ಸಜ್ಜನರು, ಎದೆಯಲ್ಲಿ ನಂಜು ಇಟ್ಟುಕೊಳ್ಳದೆ ಕಾರ್ಯ ನಿರ್ವಹಿಸುವವರು ಲಭ್ಯವಿದ್ದರು. ಆದರೆ ಸರ್ಕಾರ ಇಂಥವರನ್ನು ನೇಮಕ ಮಾಡದೆ ತಪ್ಪೆಸಗಿದೆ” ಎಂದು ಅವರು ಹೇಳಿದ್ದಾರೆ.

“ಶಿಕ್ಷಣ ತಜ್ಞನಲ್ಲದ, ಕನ್ನಡ ಸಾಹಿತಿಗಳ ಕುರಿತು ಅಗೌರವ ಹೊಂದಿರುವ, ರಾಷ್ಟ್ರಕವಿ ಕುವೆಂಪು ಅವರನ್ನು ನಿಂದಿಸಿ ಲೇಖನ ಬರೆದ, ನಾಡಗೀತೆಯನ್ನು ಅತ್ಯಂತ‌ ಕೊಳಕಾಗಿ ಪರಿಷ್ಕರಿಸಿ ಬರೆದ, ಕನ್ನಡಿಗರ ಅಸ್ಮಿತೆಯ ಪ್ರತೀಕವಾದ ಕನ್ನಡ ಧ್ವಜವನ್ನು ತನ್ನ ಒಳಚೆಡ್ಡಿಗೆ ಹೋಲಿಸಿದ ವ್ಯಕ್ತಿಯನ್ನು ಪಠ್ಯ ಪುಸ್ತಕ ಸಮಿತಿಗೆ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ್ದೇ ಮೊದಲ ತಪ್ಪು” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಸಾಮಾಜಿಕ ಜಾಲತಾಣಗಳಲ್ಲಿ ಸದಾ ಕನ್ನಡದ್ರೋಹದ ಕೆಲಸವನ್ನೇ ಮಾಡಿಕೊಂಡು ಬಂದ ವ್ಯಕ್ತಿಯನ್ನು ಪಠ್ಯಪುಸ್ತಕ ಪರಿಶೀಲನೆಗೆ ಬಿಟ್ಟರೆ ಏನಾಗಬಹುದು ಎಂಬುದನ್ನು ಇಂದು ನಾವು ನೋಡುತ್ತಿದ್ದೇವೆ. ಕನ್ನಡದ ಸಾರಸ್ವತ ಲೋಕ ಎದ್ದು ನಿಂತು ಪ್ರತಿಭಟಿಸುತ್ತಿದೆ. ಮಕ್ಕಳ ಪಠ್ಯದಲ್ಲಿ ನಂಜು ತುಂಬುವ ಇಂಥವರ ವಿರುದ್ಧ ಶೈಕ್ಷಣಿಕ, ಬುದ್ಧಿಜೀವಿ ವಲಯ ಧ್ವನಿ ಎತ್ತಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: RSS, ಬಿಜೆಪಿಯ ಪಠ್ಯ ಪರಿಷ್ಕರಣೆಗೆ ವಿರೋಧ: ತನ್ನ ಪಠ್ಯ ಕೈಬಿಡಲು ದೇವನೂರ ಮಹಾದೇವ ಪತ್ರ

“ಸರ್ಕಾರ ಕೂಡಲೇ ಪರಿಷ್ಕರಣಾ ಸಮಿತಿಯ ಎಲ್ಲ ಪರಿಷ್ಕರಣೆಯನ್ನೂ ತಿರಸ್ಕರಿಸಬೇಕು. ಈಗಾಗಲೇ ಮುದ್ರಿಸಿರುವ ಹಳೆಯ ಪಠ್ಯಪುಸ್ತಕಗಳನ್ನೇ ಶಾಲೆಗಳಿಗೆ ನೀಡಬೇಕು. ಶಾಲೆಗಳು ಈಗಾಗಲೇ ಆರಂಭವಾಗಿರುವುದರಿಂದ ವಿದ್ಯಾರ್ಥಿಗಳಿಗೆ ಅನಾನುಕೂಲವಾಗದಂತೆ ಕೂಡಲೇ ಹಳೆಯ ಪಠ್ಯ ಪುಸ್ತಕಗಳನ್ನೇ ಒದಗಿಸಬೇಕು. ಇಷ್ಟೆಲ್ಲ ಅವಾಂತರಕ್ಕೆ ಕಾರಣವಾದ ಸಮಿತಿಯನ್ನು ಈ ಕೂಡಲೇ ವಿಸರ್ಜಿಸಬೇಕು” ಎಂದು ನಾರಾಯಣ ಗೌಡ ಅವರು ಒತ್ತಾಯಿಸಿದ್ದಾರೆ.

“ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರರು ಸಾಮಾಜಿಕ, ಸಾಂಸ್ಕೃತಿಕ ವಿಷಯಗಳಲ್ಲಿ ಎಚ್ಚರ‌ ಮತ್ತು ಪ್ರಜ್ಞೆ ಉಳ್ಳವರು. ಅವರು ಯಾವುದೇ ರೀತಿಯ ಬಾಹ್ಯ ಒತ್ತಡಕ್ಕೆ ಒಳಗಾಗದೆ ನಾಯಕತ್ವದ ಗುಣವನ್ನು ಪ್ರದರ್ಶಿಸಬೇಕು. ಕೂಡಲೇ ಮಧ್ಯಪ್ರವೇಶಿಸಿ ವಿವಾದವನ್ನು‌ ಬಗೆಹರಿಸಬೇಕು” ಎಂದು ನಾರಾಯಣ ಗೌಡ ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...