Homeಮುಖಪುಟಕಾರ್ಗಿಲ್ ಯೋಧನ ಕುಟುಂಬಕ್ಕೆ ಭಾರತೀಯ ಪೌರತ್ವ ಸಾಬೀತುಪಡಿಸಲು ಒತ್ತಾಯ: ವರದಿ

ಕಾರ್ಗಿಲ್ ಯೋಧನ ಕುಟುಂಬಕ್ಕೆ ಭಾರತೀಯ ಪೌರತ್ವ ಸಾಬೀತುಪಡಿಸಲು ಒತ್ತಾಯ: ವರದಿ

- Advertisement -
- Advertisement -

ಶನಿವಾರ ತಡರಾತ್ರಿ ಪೊಲೀಸರೊಂದಿಗೆ ಮನೆಗೆ ನುಗ್ಗಿದ 30 ರಿಂದ 40 ಜನರ ಗುಂಪು, ನಮ್ಮ ಭಾರತೀಯ ಪೌರತ್ವ ಸಾಬೀತು ಮಾಡುವಂತೆ ಒತ್ತಾಯಿಸಿದೆ ಎಂದು ಕಾರ್ಗಿಲ್ ಯುದ್ದದಲ್ಲಿ ಪಾಲ್ಗೊಂಡಿದ್ದ ಪುಣೆ ಮೂಲದ ನಿವೃತ್ತ ಹಿರಿಯ ಯೋಧನ ಕುಟುಂಬ ಆರೋಪಿಸಿದೆ.

ತಡರಾತ್ರಿ ಪುಣೆಯ ಚಂದನ್ ನಗರದ ನಮ್ಮ ಮನೆಗೆ ಏಕಾಏಕಿ ಮನೆಗ ನುಗ್ಗಿದ ಗುಂಪು, ನಮ್ಮ ಭಾರತೀಯ ಪೌರತ್ವದ ದಾಖಲೆಗಳನ್ನು ತೋರಿಸುವಂತೆ ಒತ್ತಾಯಿಸಿದೆ. ಅಲ್ಲದೆ, ನಮ್ಮನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು1999ರಲ್ಲಿ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದ ನಿವೃತ್ತ ಯೋಧ ಹಕೀಮುದ್ದೀನ್ ಶೇಖ್ ಅವರ ಕುಟುಂಬ ಮಂಗಳವಾರ ಹೇಳಿಕೊಂಡಿದೆ.

“ಬೆಳಿಗ್ಗೆ 3 ಗಂಟೆಯವರೆಗೆ ಕಾಯುತ್ತೇವೆ . ಅದರೊಳಗೆ ನೀವು ಪೌರತ್ವ ಸಾಬೀತು ಮಾಡಲು ವಿಫಲರಾದರೆ, ನಿಮ್ಮನ್ನು ಬಾಂಗ್ಲಾದೇಶಿಯರು ಅಥವಾ ರೋಹಿಂಗ್ಯಾಗಳು ಎಂಬುವುದಾಗಿ ಘೋಷಿಸುತ್ತೇವೆ” ಎಂದು ನಮಗೆ ಬೆದರಿಕೆ ಹಾಕಲಾಗಿದೆ ಎಂದು ಯೋಧನ ಕುಟುಂಬ ತಿಳಿಸಿದೆ.

“ಅಕ್ರಮ ವಲಸಿಗರು ಎಂಬ ಶಂಕೆಯ ಮೇಲೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ನಮ್ಮ ತಂಡ ದಾಖಲೆಗಳನ್ನು ಕೇಳಿತ್ತು. ಅವರು ಭಾರತೀಯರು ಎಂದು ಖಚಿತವಾದ ಬಳಿಕ, ಅವರನ್ನು ಬಿಟ್ಟು ಕಳಿಸಿದ್ದೇವೆ. ಪೊಲೀಸರ ತಂಡದೊಂದಿಗೆ ಹೊರಗಿನವರು ಯಾರು ಇರಲಿಲ್ಲ. ಈ ಬಗ್ಗೆ ವಿಡಿಯೋ ಇದೆ” ಎಂದು ಡಿಸಿಪಿ ಸೋಮೈ ಮುಂಡೆ ಹೆಳಿದ್ದಾರೆ.

58 ವರ್ಷದ ನಿವೃತ್ತ ಯೋಧ ಹಕೀಮುದ್ದೀನ್ ಅವರು, 1984ರಿಂದ 2000ವರೆಗೆ ಭಾರತೀಯ ಸೇನೆಯ 269ನೇ ಇಂಜಿನಿಯರ್ ರೆಜೆಮೆಂಟ್‌ನಲ್ಲಿ 16 ವರ್ಷದ ಸೇವೆ ಸಲ್ಲಿಸಿದವರು. “ಕಾರ್ಗಿಲ್ ಯುದ್ದದಲ್ಲಿ ನಾನು ಈ ದೇಶಕ್ಕೋಸ್ಕರ ಹೋರಾಡಿದವನು. ನನ್ನ ಇಡೀ ಕುಟುಂಬ ಈ ದೇಶಕ್ಕೆ ಸಮರ್ಪಿತವಾಗಿದೆ. ನಮ್ಮನ್ನೇಕೆ ಪೌರತ್ವ ಸಾಬೀತುಪಡಿಸಲು ಕೇಳಿದ್ದು? ಎಂದು ಹಕೀಮುದ್ದೀನ್ ಪ್ರಶ್ನಿಸಿದ್ದಾರೆ.

ಹಕೀಮುದ್ದೀನ್ ಅವರ ಕುಟುಂಬಸ್ಥರು ಮೂಲತಃ ಉತ್ತರ ಪ್ರದೇಶದ ಪ್ರತಾಪ್‌ಘಡದವರು, 1960ರಿಂದ ಪುಣೆಯಲ್ಲಿ ವಾಸಿಸುತ್ತಿದ್ದಾರೆ. ಹಕೀಮುದ್ದೀನ್ 2013ರಲ್ಲಿ ತನ್ನ ಸ್ವಗ್ರಾಮಕ್ಕೆ ಹಿಂದಿರುಗಿದ್ದಾರೆ. ಅವರ ಸಹೋದರ,ಇತರ ಕುಟುಂಬಸ್ಥರು ಮತ್ತು ಸಂಬಂಧಿಕರು ಪುಣೆಯಲ್ಲೇ ಇದ್ದಾರೆ.

ಅಪರಿಚಿತ ಪುರುಷರ ಗುಂಪೊಂದು ಘೋಷಣೆಗಳನ್ನು ಕೂಗುತ್ತಾ ನಮ್ಮ ಮನೆ ಬಳಿಗೆ ಬಂತು. ಬಾಗಿಲಿಗೆ ಒದ್ದು ಏಕಾಏಕಿ ಮನೆಯೊಳಗೆ ನುಗ್ಗಿತು. ದಾಖಲೆಗಳನ್ನು ನೀಡುವಂತೆ ಒತ್ತಾಯಿಸಿತು. ಸಿವಿಲ್ ಡ್ರೆಸ್‌ನಲ್ಲಿದ್ದ ಅಧಿಕಾರಿಯೊಬ್ಬರು ಅವರನ್ನು ಶಾಂತಗೊಳಿಸಲು ಪ್ರಯತ್ನಿಸಿದರು. ಪೊಲೀಸ್ ವ್ಯಾನ್ ರಸ್ತೆಯಲ್ಲಿ ಕಾಯುತ್ತಿತ್ತು” ಎಂದು ಹಕೀಮುದ್ದೀನ್ ಅವರ ಸಹೋದರ ಇರ್ಷಾದ್ ಶೇಖ್ ಹೇಳಿದ್ದಾರೆ.

ಹಕೀಮುದ್ದೀನ್ ಮಾತ್ರವಲ್ಲದೆ ನಮ್ಮ ಕುಟುಂಬದಲ್ಲಿ ಶೇಖ್ ನಯೀಮುದ್ದೀನ್ ಮತ್ತು ಶೇಖ್ ಮೊಹಮ್ಮದ್ ಸಲೀಂ ಎಂಬ ಇನ್ನಿಬ್ಬರು ನಿವೃತ್ತ ಯೋಧರಿದ್ದಾರೆ. ಅವರು 1965 ಮತ್ತು 1971ರ ಯುದ್ಧಗಳಲ್ಲಿ ದೇಶಕ್ಕಾಗಿ ಹೋರಾಡಿವದರು. “ಸೈನಿಕರ ಕುಟುಂಬಗಳನ್ನು ಹೀಗೆ ನಡೆಸಿಕೊಳ್ಳುತ್ತಾರಾ? ಎಂದು ಇರ್ಷಾದ್ ಪ್ರಶ್ನಿಸಿದ್ದಾರೆ. ಸಿಕ್ಕ ಸಿಕ್ಕವರು ಬಾಗಿಲು ತಟ್ಟಿದಾಗಲೆಲ್ಲಾ ನಮ್ಮ ಪೌರತ್ವ ಸಾಬೀತುಪಡಿಸಬೇಕಾದರೆ ನಾವು ಭಾರತೀಯರಾಗಿರುವುದರ ಅರ್ಥವೇನು? ಎಂದಿದ್ದಾರೆ.

ಮನೆಗೆ ನುಗ್ಗಿದ ಗುಂಪು ದಾಖಲೆಗಳನ್ನು ತೋರಿಸಿದರೂ ಅದನ್ನು ನಿರಾಕರಿಸಿದೆ ಎಂದು ಆರೋಪಿಸಲಾಗಿದೆ. ನಾವು ಆಧಾರ್ ಕಾರ್ಡ್ ತೋರಿಸಿದರೂ, ಅದು ನಕಲಿ ಎಂದು ಗುಂಪು ಅಪಹಾಸ್ಯ ಮಾಡಿತು ಎಂದು ಯೋಧ ಹಕೀಮುದ್ದೀನ್ ಅವರ ಸೋದರಳಿಯರಾದ ನೌಶಾದ್ ಮತ್ತು ನವಾಬ್ ಶೇಖ್ ಹೇಳಿದ್ದಾರೆ. ಅವರು ಗೂಂಡಾಗಳಂತೆ ವರ್ತಿಸಿದ್ದಾರೆ ಎಂದು ನೌಶಾದ್ ಆರೋಪಿಸಿದ್ದು, ಅವರು ಬಾಗಿಲಿಗೆ ಒದ್ದರು, ಮಹಿಳೆಯರ ಮುಂದೆ ದಾಖಲೆ ತೋರಿಸುವಂತೆ ಅಬ್ಬರಿಸಿದರು ಎಂದು ಹೇಳಿದ್ದಾರೆ.

ಭಾನುವಾರ ಕೂಡ ನಮ್ಮನ್ನು ಪೊಲೀಸ್ ಠಾಣೆಗೆ ಕರೆಸಲಾಗಿತ್ತು. ಅಲ್ಲಿ ನಮ್ಮ ದಾಖಲೆಗಳನ್ನು ಪಡೆದು ಎರಡು ಗಂಟೆ ಕಾಯಿಸಿದರು. ನಂತರ ಇನ್‌ಸ್ಪೆಕ್ಟರ್ ಬರಲ್ಲ ಎಂದು ಕಳಿಸಿದರು. ನಮ್ಮ ದಾಖಲೆಗಳು ಈಗಲೂ ಅವರ ಬಳಿಯಿದೆ ಎಂದು ಮತ್ತೊಬ್ಬರು ಶಂಶಾದ್ ಶೇಖ್ ತಿಳಿಸಿದ್ದಾರೆ.

ಈ ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ಹೇಳಿದ್ದು, “ನಿರ್ಲಕ್ಷ್ಯ ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು. ಪ್ರಾಥಮಿಕ ಮಾಹಿತಿ ಪ್ರಕಾರ ಪೊಲೀಸರು ಬಲವಂತವಾಗಿ ಮನೆಗೆ ಪ್ರವೇಶಿಸಿಲ್ಲ” ಎಂದಿದ್ದಾರೆ.

Courtesy: timesofindia.indiatimes.com

ಅಸ್ಸಾಂನ ಗೋಲಾಘಾಟ್‌ನಲ್ಲಿ ಬೃಹತ್ ತೆರವು ಕಾರ್ಯಾಚರಣೆ: ನೆಲೆ ಕಳೆದುಕೊಳ್ಳಲಿರುವ 1,500ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...